Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಸಾಧನೆಗೆ ಬದ್ಧತೆ ಮತ್ತು ಕಠಿಣ ಪರಿಶ್ರಮ ಅತ್ಯಗತ್ಯ: MC ರಘುಚಂದನ್
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಸಾಧನೆಗೆ ಬದ್ಧತೆ ಮತ್ತು ಕಠಿಣ ಪರಿಶ್ರಮ ಅತ್ಯಗತ್ಯ: MC ರಘುಚಂದನ್
ಇಂದಿನ ಸುದ್ದಿ

ಸಾಧನೆಗೆ ಬದ್ಧತೆ ಮತ್ತು ಕಠಿಣ ಪರಿಶ್ರಮ ಅತ್ಯಗತ್ಯ: MC ರಘುಚಂದನ್

Nammajana Sub Editor
Last updated: 27 July 2025 7:49 PM
By Nammajana Sub Editor 2 Min Read
Share
SHARE
Telegram Group Join Now
WhatsApp Group Join Now

Chitradurga news | nammajana.com | 27-07-2025

ನಮ್ಮಜನ.ಕಾಂ, ಹೊಳಲ್ಕೆರೆ: ಜೀವನದಲ್ಲಿ (achievement) ಏನಾದರೂ ಸಾಧನೆ ಮಾಡಬೇಕಾದರೆ ಬದ್ದತೆ ಮತ್ತು ಕಠಿಣ ಪರಿಶ್ರಮವಿರಬೇಕೆಂದು ಚಿತ್ರದುರ್ಗದ ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಸಿ.ರಘುಚಂದನ್ ಹೇಳಿದರು.

nammajana

ಇದನ್ನೂ ಓದಿ: ವಾಣಿ ವಿಲಾಸ ಸಾಗರ ಹೊರ ಹರಿವು ಹೆಚ್ಚಳ

ಪಟ್ಟಣದ ಸಂವಿಧಾನ ಸೌಧದಲ್ಲಿ ಕುವೆಂಪು ಟ್ರಸ್ಟ್ ಶಿವಗಂಗ ವತಿಯಿಂದ ಭಾನುವಾರ ಹಮ್ಮಿಕೊಳ್ಳಲಾಗಿದ್ದ ನೋಟ್‍ಬುಕ್, ಇತರೆ ಸಲಕರಣೆಗಳ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ. ಟೈಲರಿಂಗ್ ತರಬೇತಿ ಪಡೆದವರಿಗೆ ಪ್ರಶಸ್ತಿ ಪ್ರಮಾಣ ಪತ್ರ ವಿತರಣಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಕಳೆದ 24 ವರ್ಷಗಳಿಂದಲೂ(achievement) ಕುವೆಂಪು ಟ್ರಸ್ಟ್ ಮಕ್ಕಳ ಏಳಿಗೆಗಾಗಿ ನಿರಂತರವಾಗಿ ಶ್ರಮಿಸುತ್ತಿರುವುದು ಕಮ್ಮಿ ಸಾಧನೆಯಲ್ಲ. ಜೀವನದಲ್ಲಿ ಜಯ-ಅಪಜಯ, ಟೀಕೆಗಳನ್ನು ಸಮಾನವಾಗಿ ಯಾರು ಸ್ವೀಕರಿಸುತ್ತಾರೋ ಅಂತಹವರಿಂದ ಮಾತ್ರ ಇಂತಹ ಸಮಾಜ ಸೇವೆ ಮಾಡಲು ಸಾಧ್ಯ.

ಇದನ್ನೂ ಓದಿ: ಸಮೃದ್ಧಿ ಮಳೆ, ಬೆಳೆಗಳಿಗೆ ಬೇಕಾದ ಯೂರಿಯಾ ಇಲ್ಲ, ಸರ್ಕಾರದ ವಿರುದ್ದ ರೈತರ ಅಕ್ರೋಶ

ನನ್ನದೊಂದು ಫೌಂಡೇಷನ್ ಇದೆ. ಅದರಲ್ಲಿ ಬರುವ ಆದಾಯದಲ್ಲಿ ಪ್ರತಿ ವರ್ಷವೂ ಶೇ.40 ರಷ್ಟು ಹಣವನ್ನು ಕ್ಯಾನ್ಸರ್ ರೋಗಿಗಳ ಚಿಕಿತ್ಸೆಗಾಗಿ ನೀಡುತ್ತಿದ್ದೇನೆ. ರಘುಚಂದನ್ ಫೌಂಡೇಶನ್‍ನಿಂದ ರಾಜ್ಯದಲ್ಲಿ 25 ಬಡ ಮಕ್ಕಳು ಅತಿ ಹೆಚ್ಚಿನ ಅಂಕಗಳನ್ನು ಗಳಿಸಿರುವವರು ಯಾವ ಕಾಲೇಜಿನಲ್ಲಿ ಓದುತ್ತಾರೋ ಅಲ್ಲಿ ಓದಿಸುತ್ತೇವೆ.

ಗ್ರಾಮೀಣ ಪ್ರದೇಶದ ಆರು, ಏಳು, ಎಂಟನೆ ಕ್ಲಾಸ್‍ನಲ್ಲಿ ಶೇ.80 ಕ್ಕಿಂತ ಅಧಿಕ ಅಂಕಗಳನ್ನು ಪಡೆದಿರುವ ಬಡ ಮಕ್ಕಳ ಶಿಕ್ಷಣಕ್ಕೆ ಆರ್ಥಿಕ ನೆರವು ನೀಡಲಾಗುವುದು. ಚಳ್ಳಕೆರೆ, ಹೊಸದುರ್ಗ, ಹಿರಿಯೂರು, ಚಿತ್ರದುರ್ಗದ ಮಕ್ಕಳು ಹೆಚ್ಚಿನ ಪ್ರಯೋಜನ ಪಡೆದುಕೊಂಡಿದ್ದಾರೆ.

ಮುಂದಿನ ವರ್ಷ ಕುವೆಂಪು(achievement) ಟ್ರಸ್ಟ್‍ಗೆ ರಘುಚಂದನ್ ಫೌಂಡೇಶನ್‍ನಿಂದ ಐವತ್ತು ಸಾವಿರ ರೂ.ಗಳನ್ನು ನೀಡುತ್ತೇನೆ. ಮಕ್ಕಳ ಶಿಕ್ಷಣಕ್ಕೆ ಬಳಸಿಕೊಳ್ಳಲಿ ಎಂದು ತಿಳಿಸಿದರು.

ಇದನ್ನೂ ಓದಿ: ರಾಜ್ಯ ಮಟ್ಟದ ಟೇಕ್ವಾಂಡೋ ವಿಜೇತರಿಗೆ ಸನ್ಮಾನಿಸಿದ ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ

ಶಿವಗಂಗ ಕುವೆಂಪು ಟ್ರಸ್ಟ್ ಅಧ್ಯಕ್ಷ ಡಿ.ವಿ.ಪ್ರಕಾಶ್, ಹೊಳಲ್ಕೆರೆ ಬಿಜೆಪಿ. ಮಂಡಲ ಅಧ್ಯಕ್ಷ ವಸಂತಕುಮಾರ್, ಪುರಸಭೆ ಅಧ್ಯಕ್ಷ ವಿಜಯಸಿಂಹ ಕಾಟ್ರೋತ್, ಉಪಾಧ್ಯಕ್ಷೆ ನಾಗರತ್ನ ವೇದಮೂರ್ತಿ, ಎ.ಜಯಪ್ಪ, ಡಾ. ಮಂಜುಳಗೌಡ, ಪ್ರಸನ್ನಕುಮಾರಿ, ರಶ್ಮಿ, ಸತೀಶ್, ಬಸವರಾಜ್, ಚಂದ್ರಪ್ಪ, ಮಂಜುಳ, ಶಿವಮೂರ್ತಿ, ಶಿವಲಿಂಗಪ್ಪ, ವೀರಕೆಂಚಪ್ಪ ಹಾಗೂ ಕುವೆಂಪು ಟ್ರಸ್ಟ್‍ನ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.

 

 

 

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ನಮ್ಮಜನ.ಕಾಂ gmail:  nammajananews@gmail.com

» Whatsapp Number-9686622252

You Might Also Like

internal reservation: ಒಳಮೀಸಲಾತಿ ಜಾರಿ ಖಚಿತ : ಮಾಜಿ ಸಚಿವ ಎಚ್.ಆಂಜನೇಯ

creative activities: ಪಠ್ಯದ ಜತೆಗೆ ಸೃಜನಶೀಲ ಚಟುವಟಿಕೆಗಳಲ್ಲಿಯೂ ಪಾಲ್ಗೊಳ್ಳಿ: ಬಿ.ವಿ.ತುಕಾರಾಂರಾವ್

Akka Cafe: ಜಿಲ್ಲಾ ಪಂಚಾಯತ್ ಆವರಣದಲ್ಲಿ ಅಕ್ಕ ಕೆಫೆ ಪ್ರಾರಂಭ

mining: ಗಣಿ ಮಾಫಿಯ ನಿಲ್ಲಿಸಿ ಪರಿಸರ ರಕ್ಷಿಸಿ | ಆ.16ರಂದು ಬಳ್ಳಾರಿಯಲ್ಲಿ ರಾಜ್ಯ ಸಮಾವೇಶ

ಆಗಸ್ಟ್ 1 ರಿಂದ ಹೊಸ UPI ನಿಯಮಗಳು ಜಾರಿ | ಏನೆಲ್ಲ ರೂಲ್ಸ್ ಇವೆ?

TAGGED:AchievementChitradurgaChitradurga NewsEducationholalkereKannada Newskannada suddiNammajana.comRaghuchandanಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ಸುದ್ದಿನಮ್ಮಜನ.ಕಾಂರಘುಚಂದನ್ಶಿಕ್ಷಣಸಾಧನೆಹೊಳಲ್ಕೆರೆ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ವಾಣಿ ವಿಲಾಸ ಸಾಗರ ಹೊರ ಹರಿವು ಹೆಚ್ಚಳ | Vani Vilasa Sagara
Next Article State government: ರಾಜ್ಯ ಸರ್ಕಾರ ರೈತರಿಗೆ ಯೂರಿಯಾ ಗೊಬ್ಬರ ನೀಡದೇ ಅಭಾವ ಸೃಷ್ಟಿಸಿದೆ : ಕೆ.ಎಸ್. ನವೀನ್ ಆರೋಪ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

FIR ದಾಖಲು ಮಾಡಿದರು ತೆಂಗಿನ ಸಸಿ ನಾಟಿ
ಇಂದಿನ ಸುದ್ದಿ
ಹೊಳಲ್ಕೆರೆ: ಇಂದಿನಿಂದ 3 ದಿನ ವಿದ್ಯುತ್ ವ್ಯತ್ಯಯ : Power cut
ಇಂದಿನ ಸುದ್ದಿ
ಹಿಂಬಾಕಿ ನೀಡದಿದ್ದರೆ ಆ.5 ರಿಂದ KSRTC ಬಸ್ ಓಡಾಟ ಬಂದ್
ಇಂದಿನ ಸುದ್ದಿ
ಜಡೆಕುಂಟೆ ಮಂಜುನಾಥ್ ಅವರ ‘ಕಾಡು ಕಾಯುವ ಮರ’ ಕೃತಿ ಲೋಕಾರ್ಪಣೆ ನಾಳೆ
ವಿಶೇಷ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?