Chitradurga news | nammajana.com | 01-08-2025
ನಮ್ಮಜನ.ಕಾಂ, ಚಿತ್ರದುರ್ಗ: ರಾಜ್ಯ ಮಟ್ಟದ(Agriculture Award) ಕೃಷಿ ಪ್ರಶಸ್ತಿ ಕಾರ್ಯಕ್ರಮದಡಿ ಮುಂಗಾರು ಹಂಗಾಮಿನ ಬೆಳೆ ಸ್ಪರ್ಧೆಗೆ ಆನ್ ಲೈನ್ ಮೂಲಕ ಜಿಲ್ಲೆಯ ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಗಸ್ಟ್ 30 ಅರ್ಜಿ ಸಲ್ಲಿಸಲು ಕೊನೆಯ ದಿನ.
ಇದನ್ನೂ ಓದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ

ಕೆ-ಕಿಸಾನ್ ಪೋರ್ಟ್ ಅಡಿ ರೈತ ಸಂಪರ್ಕ ಕೇಂದ್ರದ ಲಾಗಿನ್ ಅಥವಾ ಸಿಟಿಜನ್ ಲಾಗಿನ್ ಬಳಸಿ ಆಸಕ್ತ ರೈತ ಮತ್ತು ರೈತ ಮಹಿಳೆಯರು ಎಫ್.ಐ.ಡಿ ಸೇರಿದಂತೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವಿಕೆ ಹಾಗೂ ಅಗತ್ಯ(Agriculture Award) ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಭೇಟಿ ನೀಡಿ, ಮಾಹಿತಿ ಪಡೆದು ಅರ್ಜಿಯನ್ನು ನೋಂದಾಯಿಸಬೇಕು ಎಂದು ಜಂಟಿ ಕೃಷಿ ನಿರ್ದೇಶಕರಾದ ಬಿ.ಮಂಜುನಾಥ್ ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252