Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಟೈಮ್ ವೆಸ್ಟ್ ಮಾಡಬೇಡಿ ಸ್ವಾಮಿ, ಒಳ‌ ಮೀಸಲಾತಿ ಜಾರಿ ಮಾಡಿ: ಮೋಹನ್ ಆಗ್ರಹ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಟೈಮ್ ವೆಸ್ಟ್ ಮಾಡಬೇಡಿ ಸ್ವಾಮಿ, ಒಳ‌ ಮೀಸಲಾತಿ ಜಾರಿ ಮಾಡಿ: ಮೋಹನ್ ಆಗ್ರಹ
ಇಂದಿನ ಸುದ್ದಿ

ಟೈಮ್ ವೆಸ್ಟ್ ಮಾಡಬೇಡಿ ಸ್ವಾಮಿ, ಒಳ‌ ಮೀಸಲಾತಿ ಜಾರಿ ಮಾಡಿ: ಮೋಹನ್ ಆಗ್ರಹ

Editor Nammajana
Last updated: 17 August 2025 6:30 PM
By Editor Nammajana 3 Min Read
Share
SHARE

Chitradurga news|Nammajana.com|17-8-2025

ನಮ್ಮಜನ.ಕಾಂ, ಚಿತ್ರದುರ್ಗ: ಸಿದ್ದರಾಮಯ್ಯನವರು ಒಳ ಮೀಸಲಾತಿ ಜಾರಿ ಸಂಬಂಧ ಈ ಕಾಲಾಹರಣದ ನೀತಿಯನ್ನು ಪಕ್ಕಕ್ಕೆ ಇಟ್ಟು ತಕ್ಷಣ ಜಾರಿ ಮಾಡಬೇಕು ಎಂದು ಸ್ವಾಭಿಮಾನಿ ಮಾದಿಗರ ಮಹಾ ಸಭಾ ಸಂಚಾಲಕ ಮೋಹನ್ ಒತ್ತಾಯಿಸಿದ್ದಾರೆ.

ಚಿತ್ರದುರ್ಗ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿ ಆಗಸ್ಟ್ 19ರಂದು ಅಂತಿಮ ನಿರ್ಧಾರ ಪ್ರಕಟಿಸಿ ಒಳ ಮೀಸಲಾತಿ ಘೋಷಿಸಬೇಕು.

ರಾಜ್ಯದಾದ್ಯಂತ ತಮಟೆ ಚಳುವಳಿ

ಸರ್ಕಾರವನ್ನು ಎಚ್ಚರಿಸಲು ರಾಜ್ಯದೆಲ್ಲೆಡೆ ತಮಟೆ ಚಳವಳಿ ನಡೆಯಲಿದೆ. ಇಷ್ಟಾಗಿಯೂ ಆ 19ರ ಸಂಪುಟ ಸಭೆಯಲ್ಲಿ ಮತ್ತೊಂದು ಸಮಿತಿ ರಚಿಸಲು ಮುಂದಾದರೆ ಉಗ್ರ ಹೋರಾಟಕ್ಕೆ ಇಳಿಯಬೇಕಾತ್ತದೆ ಎಂದು ಸರ್ಕಾರಕ್ಕೆ ಈ ಮೂಲಕ ಎಚ್ಚರಿಕೆಯನ್ನು ಸ್ವಾಭಿಮಾನಿ ಮಾದಿಗರ ಮಹಾ ಸಭಾ ನೀಡಿದೆ.

ನ್ಯಾ ನಾಗಮೋಹನ್ ದಾಸ್ ವರದಿ ಸಲ್ಲಿಸಿದ ತರುವಾಯ ಕರೆದಿದ್ದ ವಿಶೇಷ ಸಚಿವ ಸಂಪುಟ ಸಭೆಯನ್ನು ಆಗಸ್ಟ್ 19ಕ್ಕೆ ಮುಂದೂಡಿರುವುದು ಒಳ ಮೀಸಲಾತಿ ವಿರೋಧಿ ಸರ್ಕಾರ ಎಂದು ಬಿಂಬಿಸುತ್ತಿದೆ.

ನಾಗಮೋಹನ್ ದಾಸ್ ಆಯೋಗದ ಶಿಫಾರಸ್ಸಿನಲ್ಲಿ ಆದಿಕರ್ನಾಟಕ (ಜನಸಂಖ್ಯೆ:1.47.199).ಆದಿದ್ರಾವಿಡ (ಜನಸಂಖ್ಯೆ: 3.20.641).ಆದಿಆಂಧ್ರ (ಜನಸಂಖ್ಯೆ: 7,114) ಇದನ್ನು ‘ಇ’ ಪ್ರವರ್ಗದಲ್ಲಿ ಗುರುತಿಸಲಾಗಿದೆ. ಈಗ ‘ಅ’ ಗುಂಪಿಗೆ ಇಡಿಯಾಗಿ ‘ಇ’ ಗುಂಪಿಗೆ ಸೇರಿಸುವ ಹುನ್ನಾರ ನೆಡದಿದೆ. ‘ಇ’ ಗುಂಪಿನಲ್ಲಿ ಮೂಲ ಜಾತಿಹೇಳದೆ ಆದಿದ್ರಾವಿಡ ಎಂದು ಗುರುತಿಸಿಕೊಂಡವರು 3.20.641 ಜನ ಇದ್ದಾರೆ. ಇವರಲ್ಲಿ ಬಹುತೇಕ ಜನ ಪೌರಕಾರ್ಮಿಕ ವೃತ್ತಿಯಲ್ಲಿ ಇದ್ದು ಮಾದಿಗ ಸಂಬಂಧಿತ ಜಾತಿಗಳವರಾಗಿದ್ದಾರೆ. ಈ ಬಗ್ಗೆ ಸರ್ಕಾರ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕೆಂಬುದು ನಮ್ಮ ಆಗ್ರಹವಾಗಿದೆ ಎಂದರು.

ಒಳ ಮೀಸಲಾತಿ ವಿಳಂಬದಿಂದ ಇತರೆ ಸಮುದಾಯಕ್ಕೂ ಬಿಸಿ 

ಒಳಮೀಸಲಾತಿ ಜಾರಿ ಆಗುವವರೆಗೆ ಉದ್ಯೋಗ ಅವಕಾಶಗಳು ಬಂದ್ ಆಗಿರುವುದರಿಂದ ಎಸ್ಸಿ ಅಲ್ಲದ ಸಮಾಜಗಳೂ ಸಿದ್ಧರಾಮಯ್ಯನ ವಿಳಂಬ ಧೋರಣೆಯ ಬಗ್ಗೆ ರೋಸಿ ಹೋಗಿದ್ದಾರೆ. ಉದ್ಯೋಗ ಅವಕಾಶಗಳನ್ನು ನಿಲ್ಲಿಸಿ, ಎಲ್ಲ ಮೂರು ಗುಂಪಿನ ದಲಿತರನ್ನು ಬೀದಿಗೆ ಬರುವಂತೆ ಮಾಡಿರುವುದು ಸಿದ್ದರಾಮಯ್ಯನವರ ಸಾಧನೆಯಾಗಿದೆ. ಸಿದ್ದರಾಮಯ್ಯನವರು ಆಗಸ್ಟ್ 19ರಂದು ಅಂತಿಮ ನಿರ್ಧಾರ ಪ್ರಕಟಿಸಿ ಒಳಮೀಸಲಾತಿ ಘೋಷಿಸಬೇಕು. ಇಷ್ಟಾಗಿಯೂ ಆ 19ರ ಸಂಪುಟ ಸಭೆಯಲ್ಲಿ ಮತ್ತೊಂದು ಸಮಿತಿ ರಚಿಸಲು ಮುಂದಾದರೆ ಉಗ್ರ ಹೋರಾಟಕ್ಕೆ ಇಳಿಯಬೇಕಾತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆಯನ್ನು ನೀಡಲಾಯಿತು.

ಇದನ್ನೂ ಓದಿ: Adike Rate : ಅಡಕೆ ಧಾರಣೆ | 17 ಆಗಸ್ಟ್‌ 2025 | ಇಂದಿನ ಅಡಿಕೆ ರೇಟ್ ಎಷ್ಟಿದೆ

ಚಿತ್ರದುರ್ಗ ತಾ.ಪಂ. ಮಾಜಿ ಅಧ್ಯಕ್ಷರಾದ ಜಯ್ಯಪ್ಪ ಮಾತನಾಡಿ, ಸರ್ಕಾರದ ವಿಳಂಬ ನೀತಿಯ ಸಮಾಯಾವಕಾಶ ಬಳಸಿಕೊಂಡು ನಮ್ಮ ಸೋದರ ಗುಂಪಿನವರು ಬಲಾಬಲಾ ಪ್ರದರ್ಶನಕ್ಕೆ ಇಳಿದಿರುವು ಒಳ್ಳೆಯ ಬೆಳವಣಿಗೆಯಲ್ಲ, ಸರ್ಕಾರದಲ್ಲಿ ಪ್ರಭಾವಿ ಸಚಿವರೂ ತಮ್ಮವರೇ ಇದ್ದರೂ ಅನಗತ್ಯವಾಗಿ ಬೀದಿಗಿಳಿದು ದ್ವೇಷ ಭಾಷಣ ಮಾಡುವುದು ಪರಸ್ಪರ ಅಂತರ ಹೆಚ್ಚು ಮಾಡುತ್ತದೆ.ಈ ಬೆಳವಣಿಗೆಗಳ ಹಿಂದೆ ಇದ್ದಾರೆಂಬ ಮಾಹಿತಿಗಳು ಬಂದಿದೆ.

ಸಿದ್ದರಾಮಯ್ಯನವರು 2013 ರಿಂದ 2018ರ ವರೆಗೆ ಮುಖ್ಯಮಂತ್ರಿ ಆದಾಗಲೂ ಇದೇ ಏಳಂಬ ದ್ರೋಹದ ಚಾಳಿ ನಡೆಸಿದ್ದರು. ಈಗಲೂ ಅದನ್ನೇ ಮುಂದುವರಿಸಿದ್ದಾರೆ. ಸಿದ್ಧರಾಮಯ್ಯನವರು ಮೂರು ಸಚಿವರ ಕೈಗೊಂಬೆಯಾಗಿದ್ದಾರೆ ಎಂಬುದು ಸಿದ್ಧರಾಮಯ್ಯನವರು ಸ್ವತಂತ್ರವಾಗಿ ಒಂದು ಸಚಿವ ಸಂಪುಟ ಸಭೆ ನೆಡೆಸುವಷ್ಟೂ ಧೈರ್ಯ. ಹಿಡಿತ ಉಳಿಸಿಕೊಂಡಿಲ್ಲ.

ಆಗಸ್ಟ್ 1ಕ್ಕೆ ಸುಪ್ರೀಂಕೋರ್ಟ್ ತೀರ್ಪು ಬಂದು ವರ್ಷ ಕಳೆಯಿತು ಒಂದು ಹೆಜ್ಜೆಯೂ ಮುಂದೆ ಹಾಕದೆ ಯಾರದೋ ಆಣತಿಗೆ ತಕ್ಕಂತೆ ಸಿದ್ಧರಾಮಯ್ಯ ನಿರ್ಧಾರ  ತೆಗೆದುಕೊಳ್ಳುತ್ತಿ ರುವುದನ್ನು ನೋಡಿದರೆ ನ್ಯಾ ನಾಗಮೋಹನ್ ದಾಸ್ ವರದಿಗೂ, ನ್ಯಾ. ಕಾಂತರಾಜ್ ವರದಿಗೆ ಆದ ಗತಿಯೇ ಆಗುತ್ತವೆಯೇನೊ ಎಂಬ ಆತಂಕ ನಮ್ಮದು ಎಂದಿದ್ದಾರೆ.

 ಸುದ್ದಿ ಗೋಷ್ಟಿಯಲ್ಲಿ ಮಾಜಿ ಅಧ್ಯಕ್ಷ ಜಯ್ಯಪ್ಪ, ಹೆಚ್. ಮಹಾಂತೇಶ, ಚನ್ನಗಾನಹಳ್ಳಿ ಮಲ್ಲೇಶ್, ರುದ್ರಮುನಿ, ಪ್ರಹ್ಲಾದ್ ಬಸಣ್ಣ, ತಿಪ್ಪೇಸ್ವಾಮಿ, ಪರಶುರಾಮ್, ಕೃಷ್ಣಮೂರ್ತಿ, ಮಲ್ಲಿಕಾರ್ಜನ್, ರವಿಕುಮಾರ್, ಬಸಮ್ಮ, ಕೆಂಚಪ್ಪ, ಕಲ್ಲೇಶ್, ಮಂಜುನಾಥ್, ಗೀರೀಶ್ ನರಸಿಂಹಪ್ಪ ಸೇರಿದಂತೆ ಇತರರು ಭಾಗವಹಿಸಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ನಮ್ಮಜನ.ಕಾಂ gmail:  nammajananews@gmail.com

» Whatsapp Number-9686622252

You Might Also Like

Today Gold Rate | ಚಿನ್ನದ ಬೆಲೆಯಲ್ಲಿ ಏರಿಕೆ

ಗೌರಿ – ಗಣೇಶ ಹಬ್ಬ, ಚಿತ್ರದುರ್ಗ ಜಿಲ್ಲಾಧಿಕಾರಿಯಿಂದ 13 ಪಾಯಿಂಟ್‌ನ ಪ್ರಮುಖ ಆದೇಶ, ಏನೇನದು? | Gauri Ganesha

Power cut : ಇಂದು ವಿದ್ಯುತ್‌ ವ್ಯತ್ಯಯ | ಎಲ್ಲೆಲ್ಲಿ ಕರೆಂಟ್ ಇರಲ್ಲ?

Dina Bhavishya | ದಿನ ಭವಿಷ್ಯ | 21 ಆಗಸ್ಟ್ 2025 | ರಾಶಿಗಳ ಯೋಗ ಹೇಗಿದೆ

Chitradurga ವರ್ಷಿತಾ ಮರ್ಡರ್ | ಆರೋಪಿ ಚೇತನ್ ವರ್ಷಿತಾ ಕೊಲೆಗೆ ಕಾರಣ ಕೊಟ್ಟಿದ್ದೇನು? ಕೇಳಿದರೆ ನೀವು ಶಾಕ್

TAGGED:August 19ChitradurgaChitradurga Newsdemand for implementationInternal reservationKannada Newskannada suddiNammajana.comSwabhimani Mahasabhaಆಗಸ್ಟ್ 19ಒಳ ಮೀಸಲಾತಿಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಜಾರಿಗೆ ಒತ್ತಾಯನಮ್ಮಜನ.ಕಾಂಸ್ವಾಭಿಮಾನಿ ಮಹಾಸಭಾ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink1
Previous Article Adike Rate : ಅಡಕೆ ಧಾರಣೆ | 17 ಆಗಸ್ಟ್‌ 2025 | ಇಂದಿನ ಅಡಿಕೆ ರೇಟ್ ಎಷ್ಟಿದೆ
Next Article ನಾಯಕನಹಟ್ಟಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಮಠಕ್ಕೆ ಸಚಿವ ಡಿ.ಸುಧಾಕರ್ ಭೇಟಿ: Sri Guru Thipperudraswamy
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

CM Siddaramaiah ಗೆ ಖುದ್ದು ಕೃತಜ್ಞತೆ ಸಲ್ಲಿಸಿದ ಮಾದಿಗರು : ಅಲೆಮಾರಿಗಳನ್ನು ಕೈಬಿಡದಂತೆ ಆಂಜನೇಯ ಆಗ್ರಹ
Blog ಇಂದಿನ ಸುದ್ದಿ
ಚಿತ್ರದುರ್ಗ | ವರ್ಷಿತಾ ಅಮ್ಮನ‌ ಬಳಿ ಮಾತಾಡಿದ್ದು ಕೊನೆಯಾದಾಗಿ ಯಾವಾಗ? ತಾಯಿ ಏನ್ ಹೇಳಿದರು | Varshita Murder Case
ಕ್ರೈಂ ಸುದ್ದಿ
ಚಿತ್ರದುರ್ಗ Varshita murder | ವರ್ಷಿತಾಳ ಕೊಲೆ ಕೇಸ್, ಸಚಿವ ಡಿ.ಸುಧಾಕರ್ ಹೇಳಿದ್ದೇನು | 5 ಲಕ್ಷ ಪರಿಹಾರ ಘೋಷಣೆ
ಇಂದಿನ ಸುದ್ದಿ
today Adike Rate : ಅಡಕೆ ಧಾರಣೆ | 20 ಆಗಸ್ಟ್‌ 2025 | ಚನ್ನಗಿರಿ, ಶಿವಮೊಗ್ಗ ಮಾರುಕಟ್ಟೆಯಲ್ಲಿ 61 ಸಾವಿರ ದಾಟಿದ ಅಡಿಕೆ
ಅಡಿಕೆ ಧಾರಣೆ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?