Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: NAYAKANAHATTI ಯಲ್ಲಿ ಕೆರೆ ಗಂಗಮ್ಮ ಸಂಭ್ರಮಾಚರಣೆ | ಸಮೃದ್ಧ ಮಳೆ, ಬೆಳೆಗೆ ಪ್ರಾರ್ಥನೆ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > NAYAKANAHATTI ಯಲ್ಲಿ ಕೆರೆ ಗಂಗಮ್ಮ ಸಂಭ್ರಮಾಚರಣೆ | ಸಮೃದ್ಧ ಮಳೆ, ಬೆಳೆಗೆ ಪ್ರಾರ್ಥನೆ
ಇಂದಿನ ಸುದ್ದಿ

NAYAKANAHATTI ಯಲ್ಲಿ ಕೆರೆ ಗಂಗಮ್ಮ ಸಂಭ್ರಮಾಚರಣೆ | ಸಮೃದ್ಧ ಮಳೆ, ಬೆಳೆಗೆ ಪ್ರಾರ್ಥನೆ

Nammajana Sub Editor
Last updated: 21 August 2025 5:17 PM
By Nammajana Sub Editor 2 Min Read
Share
SHARE

Chitradurga news | nammajana.com | 21-08-2025

ನಮ್ಮಜನ.ಕಾಂ,ನಾಯಕನಹಟ್ಟಿ: ಸಮೀಪದ (NAYAKANAHATTI) ಹಿರೇಕೆರೆ ಏರಿ ಅಂಗಳದಲ್ಲಿ ಗುರುವಾರ ಕೆರೆಗಂಗಮ್ಮ ಆಚರಿಸಿ ಹಟ್ಟಿ ಜನರು ಸಮೃದ್ಧ ಮಳೆ, ಬೆಳೆ ಆಗಲೆಂದು ದೇವರಲ್ಲಿ ಪ್ರಾರ್ಥಿಸಿಕೊಂಡರು. ಊರಿನ ಹಿರಿಯರು ಸಾಂಪ್ರದಾಯಿಕ ಕೆರೆಗಂಗಮ್ಮ ಉತ್ಸವ ಆಚರಿಸಿದರು. ಕೆರೆ ಗಂಗಮ್ಮ ಉತ್ಸವ ಕೃಷಿ ಪ್ರಧಾನ ಆಚರಣೆ ಆಗಿದ್ದು, ಗಳಿಗೆ ಕೆರೆಯ ನೀರಿನಿಂದ 108 ಅಭಿಷೇಕ ಕೊಡಗಳಿಂದ ಮಾಡಲಾಗುತ್ತದೆ.

ಇದನ್ನೂ ಓದಿ: ವಿಧಾನ ಪರಿಷತ್ ನಲ್ಲಿ ಹಾಸ್ಟೆಲ್ ವಿದ್ಯಾರ್ಥಿ ವರ್ಷಿತಾ ಹತ್ಯೆ ಕುರಿತು ಪ್ರತಿಧ್ವನಿ

ಉತ್ತರ ಹಾಗೂ ದಕ್ಷಿಣ ದಿಕ್ಕಿನಲ್ಲಿ ಇರುವ ಕೆರೆಯ ಕೋಡಿ ಸ್ಥಳದಲ್ಲಿ ಎಡೆ ಇಟ್ಟು ವಿಶೇಷ ಪೂಜೆ ನಡೆಸುವ ಧಾರ್ಮಿಕ ಉತ್ಸವ ಆಗಿದೆ. ಹಿರೇಕೆರೆಯಲ್ಲಿ ನೀರು ಸಂಗ್ರಹಗೊಂಡರೆ ಈ ಉತ್ಸವಕ್ಕೆ ಮೆರುಗು ಕೂಡ ಹೆಚ್ಚುತ್ತದೆ.

ಗುರುವಾರ ಶ್ರೀಗುರು ತಿಪ್ಪೇರುದ್ರಸ್ವಾಮಿ ಒಳಮಠದಿಂದ ಮಠದ ಗೂಳಿಯನ್ನು (ಬಸವಣ್ಣ) ಪಟ್ಟಪೀತಾಂಬರದಿಂದ ಅಲಂಕರಿಸಲಾಗಿತ್ತು. ಬಸವಣ್ಣನ ಜತೆಗೆ ಕುಂಭಹೊತ್ತ ಮಹಿಳೆಯರು, ಊರ ಜನರು ಹಟ್ಟಿಯಿಂದ 6ಕಿ.ಮೀ. ದೂರದ ಹಿರೇಕೆರೆಯತ್ತ ಹೆಜ್ಜೆ ಹಾಕಿದರು.

ಡೋಲು, ಡಮರುಗ, ಶಹ ನಾಯಿ, ನಂದಿಕೋಲು ಸಹಿತ ಹಟ್ಟಿ ಜನರು ಹಿರೆಕೆರೆಯಲ್ಲಿ ವಿವಿಧ ಧಾರ್ಮಿಕ ಕೈಂಕರ್ಯ ನಡೆಸಿದರು. ನಂತರ ಜನರಿಗೆ ಅನ್ನಪ್ರಸಾದ ವಿತರಣೆ ಮಾಡಲಾಯಿತು. ವ್ಯಾಪ್ತಿಯಲ್ಲಿ ಸಮೃದ್ಧ ಮಳೆ, ಬೆಳೆ ಆಗಲೆಂದು ಹಟ್ಟಿ ಜನರು ದೇವರಲ್ಲಿ ಪ್ರಾರ್ಥಿಸಿಕೊಂಡರು.

ಹಿರಿಯ ಮುಖಂಡ ಕಾವಲಪರ ತಿಪ್ಪೇರುದ್ರಪ್ಪ ಮಾತನಾಡಿ, ಶ್ರಾವಣ ಮಾಸದಲ್ಲಿ ಕೆರೆಗಂಗಮ್ಮ ಉತ್ಸವವನ್ನು ನಮ್ಮ ಪೂರ್ವಜನರು ನಡೆಸಿಕೊಂಡು ಬಂದಿದ್ದಾರೆ. ಅವರ ಹಾದಿಯಲ್ಲಿ ಈಗಿನ ಹಟ್ಟಿ ಜನರು ಕೆರೆ ಉತ್ಸವ ಹಮ್ಮಿಕೊಂಡು ಆಚರಿಸುತ್ತಿದ್ದಾರೆ. ಬಸವಮೂರ್ತಿಗಳ ಜತೆಗೆ ಕೆರೆಪೂಜೆ ಇಲ್ಲಿ ಪ್ರಧಾನ ಆಗಿರುತ್ತದೆ ಎಂದರು.

ಇದನ್ನೂ ಓದಿ: ವರ್ಷಿತಾ ಕೊಲೆ | ಹತ್ಯೆಗೂ ಮೊದಲು ಪ್ರಿಯಕರ ಚೇತನ್ ಜೊತೆ ವರ್ಷಿತಾ ಜೊತೆಯಾಗಿದ್ದೇಲಿ, ಚೇತನ್ ಪ್ಲಾನ್ ಹೇಗಿತ್ತು!

ಪಟ್ಟಣ ಪಂಚಾಯತಿ(NAYAKANAHATTI) ಸದಸ್ಯ ಜೆ.ಆರ್. ರವಿಕುಮಾರ್ ಮಾತನಾಡಿ, ಮಾಡಿದ್ದಷ್ಟು ನೀಡು ಎನ್ನುವ ಕಾಯಕದ ತತ್ವವನ್ನು ಸಾರಿದ ಪವಾಡ ಪುರುಷ ಶ್ರೀ ಗುರು ತಿಪ್ಪೇರುದ್ರಸ್ವಾಮಿ ನಿರ್ಮಿಸಿದ ಹಿರೆಕೆರೆ ಮತ್ತು ಚಿಕ್ಕಕೆರೆ ಐತಿಹಾಸಿಕ ಪ್ರಸಿದ್ಧವಾದದ್ದು, ಕಳೆದ ನಾಲ್ಕು ವರ್ಷಗಳಿಂದ ಈ ಭಾಗದಲ್ಲಿ ಉತ್ತಮ ಮಳೆಯಾಗುತ್ತಿರುವ ಕಾರಣ ಕೆರೆಗೆ ನೀರು ಹರಿದು ಬರುತ್ತಿವೆ. ನಮ್ಮ ಪೂರ್ವಿಕರು ಹಿಂದಿನಿಂನದಲೂ ಕೆರೆ ಗಂಗಮ್ಮ ಕಾರ್ಯಕ್ರಮವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಿದ್ದೇವೆ, ಶ್ರಾವಣ ಮಾಸದ ನಾಲ್ಕನೇ ಗುರುವಾರದಂದು ದೇವಸ್ಥಾನ ಸಮಿತಿ ಹಾಗೂ ಗ್ರಾಮಸ್ಥರು ಸೇರಿ ಹಿರೇಕೆರೆ ವಿಶೇಷ ಪೂಜೆ ಸಲ್ಲಿಸಲಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಎಚ್. ಗಂಗಾಧರಪ್ಪ, ನಾಯಕನಹಟ್ಟಿ ಗ್ರಾಮದ ದೈವಸ್ಥರಾದ ದೊರೆ ತಿಪ್ಪೇಸ್ವಾಮಿ, ಪಟ್ಟಣ ಪಂಚಾಯತಿ ಸದಸ್ಯ ಅಬಕಾರಿ ತಿಪ್ಪೇಸ್ವಾಮಿ, ಎನ್‌.ಪಿ. ರುದ್ರಯ್ಯ, ಗಿರಿಯಜ್ಜ, ಬಿ.ಜಿ. ರಾಜಶೇಖರ್, ಎನ್‌.ಬಿ. ತಿಪ್ಪೇಸ್ವಾಮಿ, ಉಮೇಶ್ ಬಿ ಎಂ ನಟರಾಜ್ ಸೇರಿದಂತೆ ಸಮಸ್ತ ನಾಯಕನಹಟ್ಟಿ ದೈವಸ್ಥರು ಭಕ್ತಾದಿಗಳು ಇದ್ದರು.

 

 

You Might Also Like

Lokayukta trap | ಭೂಮಾಪಕ ನಾಗರಾಜ್‌ ಲೋಕಾಯುಕ್ತ ಬಲೆಗೆ

Adike Rate : ಅಡಿಕೆ ಧಾರಣೆ | 21 ಆಗಸ್ಟ್ 2025 | ರಾಶಿ ಅಡಿಕೆ ಬೆಲೆ ಎಷ್ಟಿದೆ?

HOSDURGA | ಜಿಲ್ಲಾ ಮಟ್ಟದ ಕವಿಗೋಷ್ಠಿ ಕವನಗಳಿಗೆ ಆಹ್ವಾನ

ಸಚಿವ ಡಿ.ಸುಧಾಕರ್ ಗೆ ಸಹಕಾರ ರತ್ನ ಪ್ರಶಸ್ತಿ ಪ್ರದಾನ | Cooperative Ratna Award

ವಾಣಿವಿಲಾಸ ಸಾಗರ ನೀರಿನ‌ ಮಟ್ಟ ಭರ್ಜರಿ ಏರಿಕೆ | Vani Vilasa Sagara Dam

TAGGED:CelebrationChitradurgaChitradurga NewscropKannada NewsLake GangammaNammajana.comNayakanahattirainSri Guru Tipperudraswamyಕನ್ನಡ ನ್ಯೂಸ್ಕನ್ನಡ ಸುದ್ದಿಕೆರೆ ಗಂಗಮ್ಮಚಿತ್ರದುರ್ಗಚಿತ್ರದುರ್ಗ ನ್ಯೂಸ್ನಮ್ಮಜನ.ಕಾಂನಾಯಕನಹಟ್ಟಿಬೆಳೆಮಳೆಶ್ರೀ ಗುರು ತಿಪ್ಪೇರುದ್ರಸ್ವಾಮಿಸಂಭ್ರಮಾಚರಣೆ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ವಾಣಿವಿಲಾಸ ಸಾಗರ ನೀರಿನ‌ ಮಟ್ಟ ಭರ್ಜರಿ ಏರಿಕೆ | Vani Vilasa Sagara Dam
Next Article ಸಚಿವ ಡಿ.ಸುಧಾಕರ್ ಗೆ ಸಹಕಾರ ರತ್ನ ಪ್ರಶಸ್ತಿ ಪ್ರದಾನ | Cooperative Ratna Award
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

ವಿಧಾನ ಪರಿಷತ್ ನಲ್ಲಿ ಹಾಸ್ಟೆಲ್ ವಿದ್ಯಾರ್ಥಿ ವರ್ಷಿತಾ ಹತ್ಯೆ ಕುರಿತು ಪ್ರತಿಧ್ವನಿ
ಕ್ರೈಂ ಸುದ್ದಿ
EX MLA ಹಿರಿಯೂರು | ಮಾಜಿ ಶಾಸಕ ಆರ್.ರಾಮಯ್ಯ ಇನ್ನಿಲ್ಲ
Blog
ವರ್ಷಿತಾ ಕೊಲೆ | ಹತ್ಯೆಗೂ ಮೊದಲು ಪ್ರಿಯಕರ ಚೇತನ್ ಜೊತೆ ವರ್ಷಿತಾ ಜೊತೆಯಾಗಿದ್ದೇಲಿ, ಚೇತನ್ ಪ್ಲಾನ್ ಹೇಗಿತ್ತು!
ಕ್ರೈಂ ಸುದ್ದಿ
Today Gold Rate | ಚಿನ್ನದ ಬೆಲೆಯಲ್ಲಿ ಏರಿಕೆ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?