Chitradurga news | nammajana.com | 22-08-2025
ನಮ್ಮಜನ.ಕಾಂ, ಚಳ್ಳಕೆರೆ: ಬೆಂಗಳೂರು(Power cut) ವಿದ್ಯುತ್ ಸರಬರಾಜು ಕಂಪನಿ ಚಳ್ಳಕೆರೆ ಉಪವಿಭಾಗ ವ್ಯಾಪ್ತಿಯ 11 ಕೆ.ವಿ. ಸ್ಟೇಷನ್ನಲ್ಲಿ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಪರಶುರಾಮಪುರ ವ್ಯಾಪ್ತಿಯಲ್ಲಿ ಆ.22ರ ಶುಕ್ರವಾರ ಬೆಳಗ್ಗೆ 10ರಿಂದ ಸಂಜೆ 5ರ ತನಕ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು ಎಂದು ಎಇಇ ಜೆ. ಶಿವಪ್ರಸಾದ್ ತಿಳಿಸಿದ್ದಾರೆ.
ಇದನ್ನೂ ಓದಿ: ಭೂಮಾಪಕ ನಾಗರಾಜ್ ಲೋಕಾಯುಕ್ತ ಬಲೆಗೆ

ಈ ಬಗ್ಗೆ ಮಾಹಿತಿ ನೀಡಿ ಬೆಳಗೆರೆ, ದೊಡ್ಡಬೀರನಹಳ್ಳಿ ಗ್ರಾಪಂ ವ್ಯಾಪ್ತಿ ಹಾಗೂ ಸಾಣೀಕೆರೆ ಶಾಖೆಗೆ ಸಂಬಂಧಪಟ್ಟ ಸುತ್ತಮುತ್ತಲ ಗ್ರಾಮಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 5ರ ತನಕ ವಿದ್ಯುತ್ ಸರಬರಾಜು ಸ್ಥಗಿಗೊಳಿಸಲಾಗುವುದು ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.
