Chitradurga News | Nammajana.com | 24-08-2025
ನಮ್ಮಜನ ನ್ಯೂಸ್ ಕಾಂ,ಚಿತ್ರದುರ್ಗ: ಪ್ರವಾಸೋದ್ಯಮ (Department of Tourism) ಇಲಾಖೆ ವತಿಯಿಂದ ಪ್ರವಾಸೋದ್ಯಮ ಹಾಗೂ ಆತಿಥ್ಯ ಕ್ಷೇತ್ರದಲ್ಲಿ ಕೌಶಲಾಭಿವೃದ್ಧಿ ತರಬೇತಿ ನೀಡಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಂದ ಮರು ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ED : ಸಿಕ್ಕಿಂನ ಗ್ಯಾಂಗ್ಟಾಕ್ನಲ್ಲಿ ಶಾಸಕ ಕೆ. ಸಿ. ವೀರೇಂದ್ರ ಪಪ್ಪಿ ಬಂಧನ

12 ತರಗತಿ ಉತ್ತೀರ್ಣರಾದವರಿಗೆ ಸ್ವಾಗತಗಾರರು, 10ನೇ ತರಗತಿ ಉತ್ತೀರ್ಣರಾದವರಿಗೆ ಆಹಾರ ಮತ್ತು ಪಾನೀಯಗಳ ವಿತರಣೆ, 8ನೇ ತರಗತಿ ಉತ್ತೀರ್ಣರಾದವರಿಗೆ ವಿವಿಧ ಆಹಾರ ತಯಾರಿಕೆ ಹಾಗೂ 5ನೇ ತರಗತಿ ಉತ್ತೀರ್ಣರಾದವರಿಗೆ ಕೊಠಡಿ ನಿರ್ವಹಣೆ ತರಬೇತಿ ನೀಡಲಾಗುವದು.
ಕೇಂದ್ರ ಹಾಗೂ ರಾಜ್ಯ ಸರ್ಕಾರ ಆತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಐಹೆಚ್ಎ (ಇನ್ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜಮೆಂಟ್) ಮತ್ತು ಎಫ್.ಸಿ.ಐ (ಫುಡ್ ಕ್ರಾಫ್ಟ್ ಇನ್ಸ್ಟಿಟ್ಯೂಟ್) ಮೂಲಕ ಬೆಂಗಳೂರು ಹಾಗೂ ಮೈಸೂರಿನಲ್ಲಿ ತರಬೇತಿ ನೀಡಲಾಗುವುದು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 20 ರಿಂದ 45 ವರ್ಷದೊಳಗಿರಬೇಕು. ತರಬೇತಿಯು ಸೆಪ್ಟೆಂಬರ್ 01 ರಂದು ಪ್ರಾರಂಭವಾಗುತ್ತಿರುವುದರಿಂದ ಅರ್ಜಿಯನ್ನು ಆಗಸ್ಟ್ 22 ರಿಂದ ಸಹಾಯಕ ನಿರ್ದೇಶಕರು ಕಚೇರಿ, ಪ್ರವಾಸೋದ್ಯಮ ಇಲಾಖೆ, ಕೋಟೆ ಮುಂಭಾಗ, ಚಿತ್ರದುರ್ಗ ರವರ ಕಚೇರಿಯಿಂದ ಅರ್ಜಿಗಳನ್ನು ವಿತರಿಸಲಾಗುವುದು. ಸೇವಾ ಸಿಂಧೂ ವೆಬ್ಸೈಟ್ sevasindhu.karnataka.gov.in ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ: ಸ್ಪೃಶ್ಯ ಪದ ಕಡತದಿಂದ ತಗೆದು ವಿಮುಕ್ತ ಸಮುದಾಯಗಳೆಂದು ಗುರುತಿಸಿ | ಇಮ್ಮಡಿ ಸಿದ್ಧರಾಮೇಶ್ವರ ಶ್ರೀ
ತರಬೇತಿ ಪಡೆಯಲು ಆಸಕ್ತ(Department of Tourism) ಇರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ದ್ವಿ-ಪ್ರತಿಯಲ್ಲಿ ಸಹಾಯಕ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ಕೋಟೆ ಮುಂಭಾಗ, ಚಿತ್ರದುರ್ಗ ಕಚೇರಿಗೆ ಸಲ್ಲಿಸಿ, ಮೂಲ ದಾಖಲೆಗಳನ್ನು ಕಚೇರಿಯ ಸಮಯದಲ್ಲಿ (ರಜೆ ದಿನಗಳನ್ನು) ಹೊರತುಪಡಿಸಿ ಪರಿಶೀಲಿಸಿಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರ ಕಛೇರಿ ದೂರವಾಣಿ ಸಂಖ್ಯೆ 08194-234466 ಕರೆ ಮಾಡುವಂತೆ ಪ್ರಕಟಣೆ ತಿಳಿಸಿದೆ.
