Chitradurga News | Nammajana.com | 24-08-2025
ನಮ್ಮಜನ ನ್ಯೂಸ್ ಕಾಂ, ಚಿತ್ರದುರ್ಗ: ಒಳಮೀಸಲಾತಿ (internal reservation) ವಿಷಯದಲ್ಲಿ ಸಿದ್ದರಾಮಯ್ಯ ನುಡಿದಂತೆ ನಡೆದು ಮಾದಿಗರ ಹೃದಯ ಗೆದ್ದಿದ್ದಾರೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು.
ಇದನ್ನೂ ಓದಿ: ಆಗಸ್ಟ್ 28 ರವರೆಗೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ED ವಶಕ್ಕೆ

ನಗರದ ಒನೆಕ ಓಬವ್ವ ವೃತ್ತದಲ್ಲಿ ಭಾನುವಾರ ಆಯೋಜಿಸಿದ್ದ ಮಾದಿಗರ ವಿಜಯೋತ್ಸವ ಹಾಗೂ ಸಿಎಂ ಸಿದ್ದರಾಮಯ್ಯಗೆ ಕೃತಜ್ಞತೆ ಕಾಯಕ್ರಮದಲ್ಲಿ ಮಾತನಾಡಿದರು.
ಒಳಮೀಸಲಾತಿ ಹೋರಾಟ ಸುಧೀರ್ಘ 35 ವರ್ಷ ಹಾದಿ ಸವಿಸಿದೆ. ಸಹಸ್ರಾರು ಮಂದಿ ಮನೆ ತೊರೆದು ಚಳವಳಿ ನಡೆಸಿದ್ದಾರೆ. ಅನೇಕರು ಜೀವತೆತ್ತಿದ್ದಾರೆ. ಎಲ್ಲ ಪಕ್ಷಗಳ ಮುಖಂಡರು, ಇತರೆ ಸಮುದಾಯದವರು ಮಾದಿಗರ ಕುರಿತು ಮಮತೆ ತೋರಿದ್ದಾರೆ. ಪರಿಣಾಮ ಆಗಸ್ಟ್ 19ರಂದು ಮಾದಿಗರಿಗೆ ನೈಜ ಸ್ವತಂತ್ರವನ್ನು ಸಿದ್ದರಾಮಯ್ಯ ನೀಡಿದ್ದಾರೆ ಎಂದರು.
ಬಸವ ಅನುಯಾಯಿಗಳಾದ ನಾವು ಶಾಂತಿ-ಸೌಹಾರ್ದತೆಯಿಂದ 35 ವರ್ಷ ಎಲ್ಲ ರೀತಿ ಹೋರಾಟ ನಡೆಸಿದ್ದೇವು. ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಒಳಮೀಸಲಾತಿ ಪರವಿದ್ದವು. ಆದರೆ, ಅದನ್ನು ಜಾರಿಗೊಳಿಸುವ ಅವಕಾಶ ಅವರಿಗೆ ದೊರೆಯಲಿಲ್ಲ. ಆದರೆ, ಭಾಗ್ಯಗಳ ಸರದಾರ ಸಿದ್ದರಾಮಯ್ಯ ಅವರಿಗೆ ಮಾದಿಗರಿಗೆ ನ್ಯಾಯ ಕಲ್ಪಿಸುವ ಸೌಭಾಗ್ಯ ದೊರೆಯಿತು. ಅದನ್ನು ಸಮರ್ಥವಾಗಿ ನಿರ್ವಹಿಸಿದರು ಎಂದು ಶ್ಲಾಘೀಸಿದರು.
ಇದನ್ನೂ ಓದಿ: ಪ್ರವಾಸೋದ್ಯಮ ಇಲಾಖೆಯಿಂದ ತರಬೇತಿಗೆ ಅರ್ಜಿ ಆಹ್ವಾನ
ಎಂದೂ ಮಾದಿಗರು ಪರಿಶಿಷ್ಟ ಜಾತಿಯಲ್ಲಿ ಶೇ.1ರಷ್ಟು ಮೀಸಲಾತಿ ಪಡೆಯಲು ಸಾಧ್ಯವಾಗಿಲ್ಲ. ಆದರೆ, ಈಗ ಸಾಮಾಜಿಕ ನ್ಯಾಯದ ಹರಿಕಾರ ಸಿದ್ದರಾಮಯ್ಯ ಶೇ.6ರಷ್ಟು ಮೀಸಲಾತಿ ನೀಡಿ ನಮ್ಮ ಪ್ರಗತಿಗೆ ಸಹಕರಿಸಿದ್ದಾರೆ. ಕೊಟ್ಟ ಅವಕಾಶವನ್ನು ನಾವು ಸಮರ್ಥವಾಗಿ ಸದ್ಬಳಕೆ ಮಾಡಿಕೊಂಡು ಮುಖ್ಯವಾಹಿನಿಗೆ ಬರಬೇಕು. ಉನ್ನತ ಶಿಕ್ಷಣ, ಉದ್ಯೋಗ, ಆರ್ಥಿಕ ನೆರವು ಪಡದು ಅಭಿವೃದ್ಧಿ ಸಾಧಿಸಬೇಕೆಂದು ತಿಳಿಸಿದರು.
ಯಾರೇ ಅನುಕೂಲ ಮಾಡಿದರೂ ಅದಕ್ಕೆ ಪ್ರತಿಯಾಗಿ ಕೃತಜ್ಞತೆ ಸಲ್ಲಿಸುವ ಹುಟ್ಟುಗುಣ ಮಾದಿಗರದ್ದಾಗಿದೆ. ಈ ಕಾರಣಕ್ಕೆ ಅನೇಕ ಅಡೆತಡೆಗಳ ಮಧ್ಯೆ ಮೊದಲಿನಿಂದಲೂ ಭರವಸೆ ನೀಡಿದಂತೆ ಶೇ.6 ಮೀಸಲಾತಿ ಸಿದ್ದರಾಮಯ್ಯ ನೀಡಿದ್ದಾರೆ. ಅವರಿಗೆ ಸಮಾಜ ಸದಾ ಕೃತಜ್ಞರಾಗಿರುತ್ತದೆ. ಇನ್ನಷ್ಟು ಬೇಡಿಕೆಗಳಿದ್ದು, ಅವುಗಳನ್ನು ಈಡೇರಿಸಿಕೊಳ್ಳುವತ್ತ ನಾವುಗಳು ಒಗ್ಗಟ್ಟಿನಿಂದ ಹೆಜ್ಜೆ ಹಾಕಬೇಕಿದೆ ಎಂದರು.
ರಾಯಚೂರಿನಲ್ಲಿ ಶಕ್ತಿಪ್ರದರ್ಶನ:
ಮಾದಿಗರ ಹೋರಾಟ ಈಗ ಆರಂಭವಾಗಿದೆ. ಒಳಮೀಸಲಾತಿ ಜಾರಿಗೊಂಡಿತು ಎಂದು ನಾವೆಲ್ಲರೂ ನಿದ್ರೆಗೆ ಜಾರುವಂತಿಲ್ಲ. ಇನ್ನಷ್ಟು ಬೇಡಿಕೆಗಳಿಗಾಗಿ ಹೋರಾಟ ನಡೆಸಬೇಕು. ರಾಯಚೂರಿನಲ್ಲಿ ಬೃಹತ್ ಸಮಾವೇಶ ಆಯೋಜಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸನ್ಮಾನಿಸಿ ಅವರಿಗೆ ಬೇಡಿಕೆಗಳ ಪಟ್ಟಿ ಸಲ್ಲಿಸಲಾಗುವುದು.
ಇದನ್ನೂ ಓದಿ: ಗಣೇಶ ವಿಸರ್ಜಿಸಲು ತಾತ್ಕಾಲಿಕ ನೀರಿನ ತೊಟ್ಟಿ ವ್ಯವಸ್ಥೆ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬರಲು(internal reservation), ಸಿದ್ದರಾಮಯ್ಯ ಸಿಎಂ ಆಗಲು ಮಾದಿಗರ ಕೊಡುಗೆ ಇದೆ. ಅದೇ ರೀತಿ ನಮ್ಮ ಸಮಾಜಕ್ಕೆ ಹೆಚ್ಚು ಅನುಕೂಲ ಮಾಡಿಕೊಟ್ಟಿದ್ದಾರೆ. ಆದ್ದರಿಂದ ಅವರನ್ನು ಗೌರವಿಸುವುದು, ಕೃತಜ್ಞತೆ ಸಲ್ಲಿಸುವುದು ನಮ್ಮ ಕರ್ತವ್ಯ ಎಂದು ಆಂಜನೇಯ ಹೇಳಿದರು.
ಇಡೀ ಸಚಿವ ಸಂಪುಟ, ಕಾಂಗ್ರೆಸ್ ಪಕ್ಷ ಒಳಮೀಸಲಾತಿ ವಿಷಯದಲ್ಲಿ ಒಗ್ಗಟ್ಟು ಪ್ರದರ್ಶಿಸಿ ಜಾರಿಗೊಳಿಸುವಲ್ಲಿ ಶ್ರಮಿಸಿದೆ. ಜೊತೆಗೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರು, ಹೋರಾಟಗಾರರು ಹೀಗೆ ನಮಗೆ ಸಹಕರಿಸಿ ಎಲ್ಲರಿಗೂ ಧನ್ಯವಾದಗಳನ್ನು ಇಲ್ಲಿಂದಲೇ ಅರ್ಪಣೆ ಎಂದರು.
ಶೋಷಿತರ ಪರ ಕಾಂಗ್ರೆಸ್ ಪಕ್ಷ ಸದಾ ನೊಂದವರ ಪರ ನಿರ್ಧಾರ ಕೈಗೊಳ್ಳುತ್ತದೆ ಎಂಬುದಕ್ಕೆ ಒಳಮೀಸಲಾತಿ ಜಾರಿ ವಿಷಯವೇ ಸಾಕ್ಷಿ. ಈ ವಿಷಯದಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿ ಎಲ್ಲರೂ ಬದ್ಧತೆ ಪ್ರದರ್ಶಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.
ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಮಾತನಾಡಿ, 1993ರಿಂದಲೂ ಒಳಮೀಸಲಾತಿ ಹೋರಾಟದಲ್ಲಿ ಆಂಜನೇಯ, ಕೆ.ಎಚ್.ಮುನಿಯಿಪ್ಪ ಮುಂಚೂಣಿಯಲಿದ್ದು, ಸುಪ್ರೀಂ ಕೋರ್ಟ್ ತೀರ್ಪು ಬಳಿಕ ಬೀದಿ ಬೀದಿ ಸುತ್ತಿದ್ದಾರೆ, ಸಿಎಂ ಅವರ ಮೇಲೆ ನಿರಂತರ ಒತ್ತಡ ತಂದಿದ್ದಾರೆ. ಜೊತೆಗೆ ಅನೇಕ ಸಂಘಠನೆಗಳ ನಾಯಕರು, ಮುಖಂಡರ ಸೇವೆ ಸ್ಮರಣೀಯ ಎಂದು ತಿಳಿಸಿದರು.
ಇದನ್ನೂ ಓದಿ: ED : ಸಿಕ್ಕಿಂನ ಗ್ಯಾಂಗ್ಟಾಕ್ನಲ್ಲಿ ಶಾಸಕ ಕೆ. ಸಿ. ವೀರೇಂದ್ರ ಪಪ್ಪಿ ಬಂಧನ
1947ರಲ್ಲಿ ದೇಶಕ್ಕೆ, 2025ರಲ್ಲಿ ಮಾದಿಗರಿಗೆ ಸ್ವತಂತ್ರ ಸಿಕ್ಕಿದೆ. ಇದಕ್ಕೆ ಮುಖ್ಯ ಕಾರಣಕರ್ತರು ಸಿದ್ದರಾಮಯ್ಯ. ಸಮುದಾಯವನ್ನು ದಾಸದಿಂದ ಮುಕ್ತಿಗೊಂಸಿರುವ ಅವರ ಬದ್ಧತೆಗೆ ನಾವೆಲ್ಲರೂ ಕೃತಜ್ಞರಾಗಿರಬೇಕು ಎಂದರು.
ಡಾ.ಬಿ.ತಿಪ್ಪೇಸ್ವಾಮಿ ಜೆಜೆ ಹಟ್ಟಿ, ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಸ್.ಮಂಜುನಾಥ್ ಮಾತನಾಡಿದರು.
ಲಿಡ್ಕರ್ ಮಾಜಿ ಅಧ್ಯಕ್ಷ ಓ.ಶಂಕರ್, ಜಿಪಂ ಮಾಜಿ ಸದಸ್ಯ ಆರ್.ನರಸಿಂಹರಾಜು, ಐನಹಳ್ಳಿ ಗ್ರಾಪಂ ಅಧ್ಯಕ್ಷ ಆರ್.ಉಮೇಶ್, ಮುಖಂಡರಾದ ಕುಂಚಿಗನಾಳ್ ಮಹಾಲಿಂಗಪ್ಪ, ಕೆ.ಮಲ್ಲೇಶ್, ಕೆ.ಟಿ.ಶಿವಕುಮಾರ್, ಕೆಂಗುಂಟೆ ಜಯ್ಯಪ್ಪ, ಡಿ.ಶಿವಣ್ಣ ಜೆಜೆ ಹಟ್ಟಿ, ಬೀರಾವರ ಪ್ರಕಾಶ್, ರಮೇಶ್ ಕೋಟಿ, ಪ್ರಸನ್ನ ಜಯಣ್ಣ, ಕಣ್ಮೇಶ್, ಎಂ.ಆರ್.ಶಿವರಾಜ್, ಅನಿಲ್ ಕೋಟಿ, ಚೇತನ್ ಬೋರೇನಹಳ್ಳಿ, ರವೀಂದ್ರ, ತಿಪ್ಪೇಸ್ವಾಮಿ, ಮಲ್ಲಿಕಾರ್ಜುನ್, ರುದ್ರಮುನಿ, ಚಿದಾನಂದ, ಯಶವಂತ ಇತರರಿದ್ದರು.
ಹಾಲಿನಾಭಿಷೇಕ:
ಅಂಬೇಡ್ಕರ್ ಪ್ರತಿಮೆ, ಸಿದ್ದರಾಮಯ್ಯ ಭಾವಚಿತ್ರಕ್ಕೆ ಹಾಲಿನಾಭಿಷೇಕ, ಹೂವಿನ ಸುರಿಮಳೆ ಸುರಿಸುವ ಮೂಲಕ ಮಾದಿಗ ಸಮುದಾಯದವರು ಸಂಭ್ರಮಿಸಿದರು. ಜೈ ಜೈ ಮಾದಿಗ, ಜೈ ಅಂಬೇಡ್ಕರ್, ಜೈ ಸಿದ್ದರಾಮಯ್ಯ, ಜೈ ಆಂಜನೇಯ ಘೋಷಣೆಗಳು ಮೊಳಗಿದವು.
ಚಳ್ಳಕೆರೆ ಗೇಟ್ನಿಂದ ಒನಕೆ ಓಬವ್ವ ವೃತ್ತದವರೆಗೆ ಮೆರವಣಿಗೆ ನಡೆಸಲಾಯಿತು.
ಇದನ್ನೂ ಓದಿ: ಸ್ಪೃಶ್ಯ ಪದ ಕಡತದಿಂದ ತಗೆದು ವಿಮುಕ್ತ ಸಮುದಾಯಗಳೆಂದು ಗುರುತಿಸಿ | ಇಮ್ಮಡಿ ಸಿದ್ಧರಾಮೇಶ್ವರ ಶ್ರೀ
ಮದಕರಿ ನಾಯಕ ಪ್ರತಿಮೆಗೆ ಮಾಲಾರ್ಪಣೆ ಮೂಲಕ ಗೌರವ ಸಲ್ಲಿಸಲಾಯಿತು. ದಾರಿಯುದ್ದಕ್ಕೂ ಸಮುದಾಯದ ನಾಯಕರ ಮೇಲೆ ಹೂವಿನ ಸುರಿಮಳೆ ಸುರಿಸಿದರು. ತಮಟೆ, ಕಲಾತಂಡಗಳು ಗಮನಸೆಳೆದವು.
ಜನ್ಮದಿನ ಆಚರಣೆ:
ಒಳಮೀಸಲಾತಿ ಜಾರಿಗೊಳ್ಳುವವರೆಗೂ(internal reservation) ಹಬ್ಬ-ಹರಿದಿನ, ಜನ್ಮದಿನ ಆಚರಿಸಿಕೊಳ್ಳುವುದಿಲ್ಲವೆಂದು ಪ್ರತಿಜ್ಞೆ ಮಾಡಿದ್ದ ಆಂಜನೇಯ ತಮ್ಮ ಜನ್ಮದಿನ ಆಚರಿಸಿಕೊಂಡಿರಲಿಲ್ಲ. ಆದ್ದರಿಂದ ಅವರ ಅಭಿಮಾನಿಗಳು ಬೃಹತ್ ಕೇಕ್ ಕತ್ತರಿಸಿ, ದೊಡ್ಡ ಹಾರ ಅರ್ಪಿಸಿ ವಿಜಯೋತ್ಸವದಲ್ಲಿ ಜನ್ಮದಿನ ಆಚರಿಸಿ ಸಂಭ್ರಮಿಸಿದರು.
