Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಚಿತ್ರದುರ್ಗ: ಈ ಬಾರಿ ಹಿಂದೂ ಮಹಾಗಣಪತಿಗೆ ಡಿಜೆ ಮೆರವಣಿಗೆ ಡೌಟ್
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಚಿತ್ರದುರ್ಗ: ಈ ಬಾರಿ ಹಿಂದೂ ಮಹಾಗಣಪತಿಗೆ ಡಿಜೆ ಮೆರವಣಿಗೆ ಡೌಟ್
ಇಂದಿನ ಸುದ್ದಿ

ಚಿತ್ರದುರ್ಗ: ಈ ಬಾರಿ ಹಿಂದೂ ಮಹಾಗಣಪತಿಗೆ ಡಿಜೆ ಮೆರವಣಿಗೆ ಡೌಟ್

Editor Nammajana
Last updated: 25 August 2025 1:13 PM
By Editor Nammajana 2 Min Read
Share
SHARE
Telegram Group Join Now
WhatsApp Group Join Now

Chitradurga news|Nammajana.com|25-8-2025

ನಮ್ಮಜನ.ಕಾಂ, ಚಿತ್ರದುರ್ಗ: ಗೌರಿ– ಹಿಂದೂ ಮಹಾಗಣಪತಿ, ಗಣೇಶ ಹಬ್ಬ, ಈದ್ ಮಿಲಾದ್‌ ಮೆರವಣಿಗೆ ಮತ್ತು ಸಾರ್ವಜನಿಕ ಸಮಾರಂಭದಲ್ಲಿ ಡಿಜೆ (DJ) ಹಾಗೂ ಸೌಂಡ್ ಸಿಸ್ಟಂ ಬಳಕೆ ನಿರ್ಬಂಧಿಸಿ ಆದೇಶ ಹಿನ್ನೆಲೆ ಈ ಬಾರಿ ಐತಿಹಾಸಿ ಹಿಂದೂ ಮಹಾಗಣಪತಿ ಶೋಭಯಾತ್ರೆ ಮೆರವಣಿಗೆಗೆ ಡಿಜೆ ಅನುಮತಿ ಇಲ್ಲ ಎಂದು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ತಿಳಿಸಿದ್ದಾರೆ‌.

ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆ, ವಿಸರ್ಜನಾ ಮೆರವಣಿಗೆ ಹಾಗೂ ಈದ್ ಮಿಲಾದ್ ಮೆರವಣಿಗೆಗೆ ಡಿ.ಜೆ. ಬಳಸಲು ಅನುಮತಿ ನೀಡಲಾಗುವುದಿಲ್ಲ ಎಂದುರು.
ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಹಬ್ಬಗಳ ಆಚರಣೆ ಕುರಿತು ಪೊಲೀಸ್ ಇಲಾಖೆ ಚಿತ್ರದುರ್ಗ ಭಾನುವಾರ ಆಯೋಜಿಸಿದ್ದ ಶಾಂತಿ ಸಭೆಯಲ್ಲಿ ಮಾತನಾಡಿದರು
ಮೆರವಣಿಗೆಯಲ್ಲಿ ನಿಗದಿತ ಡೆಸಿಬಲ್ ಗಿಂತ ಹೆಚ್ಚಿನ ಶಬ್ದ ಉಂಟುಮಾಡುವ ಧ್ವನಿವರ್ಧಕ ಸೇರಿ ಶಬ್ದಮಾಲಿನ್ಯ ಉಂಟಾಗುವ ಎಲೆಕ್ಟ್ರಾನಿಕ್ ಡಿವೈಸ್ ಗಳನ್ನು ಬಳಸುವಂತಿಲ್ಲ. ಅಲ್ಲದೆ, ದ್ವಿಚಕ್ರ ವಾಹನಗಳಲ್ಲಿ ಬೃಹತ್ ಬಾವುಟ ಪ್ರದರ್ಶಿಸಲು ಮುಂದಾಗಿ ಮನ ಬಂದಂತೆ ವಾಹನ ಚಲಾಯಿಸುವಂತಿಲ್ಲ. ಅನ್ಯ ಧರ್ಮವನ್ನು ಅವಮಾನಿಸು ವಂತಿಲ್ಲ. ಈ ಬಗ್ಗೆ ಸಮುದಾಯಗಳ ಮುಖಂಡರು ಎಚ್ಚರವಹಿಸಿ ಎಂದು ಸೂಚಿಸಿದರು.
ಜಿಲ್ಲಾದ್ಯಂತ ಗೌರಿ-ಗಣೇಶೋತ್ಸವ ಹಾಗೂ ಈದ್ ಮಿಲಾದ್ ಹಬ್ಬವನ್ನು ಎರಡೂ ಧರ್ಮಿಯರೂ ಸೌಹಾರ್ದತೆಯಿಂದ ಆಚರಿಸಿ. ಪರಸ್ಪರ ಪಾಲ್ಗೊಳ್ಳುವ ಮೂಲಕ ಮತ್ತಷ್ಟು ಬಾಂಧವ್ಯ ವೃದ್ಧಿಸಿಕೊಳ್ಳಿ ಮೆರವಣಿಗೆ, ಶೋಭಾಯಾತ್ರೆಯಲ್ಲಿ ಶಾಂತಿ ಕದಡುವ ಪ್ರಯತ್ನಕ್ಕೆ ಯಾರೂ ಮುಂದಾಗಬೇಡಿ. ಇದಕ್ಕೆ ಅಗತ್ಯ ಸಹಕಾರ ನೀಡುವ ಮೂಲಕ ಇಲಾಖೆಯೊಂದಿಗೆ ಎಲ್ಲರೂ ಕೈಜೋಡಿಸಿ ಎಂದು ಹೇಳಿದರು.

ಈ ಬಾರಿ ಡಿಜೆ ಸದ್ದು ದುರ್ಗದಲ್ಲಿ ಡೌಟ್

ಕೋಟೆನಾಡು ಚಿತ್ರದುರ್ಗದ ಗಣೇಶೋತ್ಸವ ನಾಡಿನ ಗಮನ ಸೆಳೆದಿದೆ. ವಿಶ್ವಹಿಂದೂ ಪರಿಷತ್ ಮತ್ತು ಭಜರಂಗದಳ ನೇತೃತ್ವದಲ್ಲಿ ನಡೆಯಲಿದ್ದು  ಈ ಮೆರವಣಿಗೆಗೆ ಯುವಕ, ಯುವತಿಯರು, ಮಕ್ಕಳು, ಹಿರಿಯರು ಹೀಗೆ ಎಲ್ಲರೂ ಭವ್ಯ ಮೆರವಣಿಗೆಗೆ ಸಾಕ್ಷಿಯಾಗುತ್ತಿದ್ದರು‌.
ವಿಶೇಷವಾಗಿ ಚಿತ್ರದುರ್ಗ ಹಿಂದೂ ಮಹಾಗಣಪತಿ ಶೋಭ ಯಾತ್ರೆ ಇತೀಚಿನ 5 ವರ್ಷಗಳಲ್ಲಿ ಭಾರೀ ಪ್ರಸಿದ್ದಿ ಜೊತೆಗೆ ದೇಶದಲ್ಲಿ ಹೆಸರುವಾಸಿಯಾಗಿತ್ತು. ಆದರೆ ಈ ಬಾರಿ ಡಿಜೆ ಬಳಕೆಗೆ ಅನುಮತಿ ನೀಡುವುದಿಲ್ಲ ಎಂದು ಹೇಳಿರುವ ಇಲಾಖೆ ಯುವಕ, ಯುವತಿಯರಿಗೆ ನಿರಾಸೆಯಾಗಿರುವುದು ಅಂತೂ ಸತ್ಯ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ

ಡಿಜೆ ಮೆರವಣಿಗೆಗೆ ಕುಣಿಯಲೇಂದು ತಯಾರಿ ನಡೆಸಿದ್ದ ಯುವಕರಿಗೆ ಗುಡ್ ನ್ಯೂಸ್ ಇಲ್ಲವಾದರೂ ಮುಂದೆ ಸಮಯವಿದ್ದು ಇಲಾಖೆ ಯಾವ ರೀತಿ ಅನುಮತಿ ನೀಡುತ್ತದೆ ಎಂದು ಕಾದು ನೋಡಬೇಕಿದೆ‌.
Telegram Group Join Now
WhatsApp Group Join Now

You Might Also Like

Applications: ವಿಕಲಚೇತನರಿಂದ ಅರ್ಜಿ ಆಹ್ವಾನ

Today Adike Rate : ಅಡಿಕೆ ಧಾರಣೆ | 25 ಆಗಸ್ಟ್ 2025 | ಇಂದಿನ ಅಡಿಕೆ ಬೆಲೆಯಲ್ಲಿ ಇಳಿಕೆ

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ

ಶ್ರೀ ಕೃಷ್ಣ ಜಯಂತಿ | ಅದ್ದೂರಿ ಮೆರವಣಿಗೆಗೆ ಶಾಸಕ ಟಿ.ರಘುಮೂರ್ತಿ ಚಾಲನೆ : Krishna Jayanti

Dina Bhavishya | ದಿನ ಭವಿಷ್ಯ | 25 ಆಗಸ್ಟ್ 2025 | ಇಂದಿನ ರಾಶಿ ಭವಿಷ್ಯ, ಯಾರಿಗೆ ಶುಭ

TAGGED:2025ChitradurgaDJ not allowedDJ ProcessionDoubtHindu MahaganpatiNammajana.comPolice DepartmentShobha YatraSP clarificationಎಸ್ಪಿ ಸ್ಪಷ್ಟನೆಚಿತ್ರದುರ್ಗಡಿಜೆ ಮೆರವಣಿಗೆಡಿಜೆಗೆ ಅನುಮತಿ ಇಲ್ಲಡೌಟ್ನಮ್ಮಜನ.ಕಾಂಪೋಲಿಸ್ ಇಲಾಖೆಶೋಭ ಯಾತ್ರೆಹಿಂದೂ ಮಹಾಗಣಪತಿ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ
Next Article Today Adike Rate : ಅಡಿಕೆ ಧಾರಣೆ | 25 ಆಗಸ್ಟ್ 2025 | ಇಂದಿನ ಅಡಿಕೆ ಬೆಲೆಯಲ್ಲಿ ಇಳಿಕೆ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

ಒಳ ಮೀಸಲಾತಿ ಜಾರಿ ಹಿನ್ನಲೆ ಕೋಟೆನಾಡು ಚಿತ್ರದುರ್ಗದಲ್ಲಿ ವಿಜಯೋತ್ಸವ ಆಚರಣೆ : internal reservation
ಇಂದಿನ ಸುದ್ದಿ
ಆಗಸ್ಟ್ 28 ರವರೆಗೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ED ವಶಕ್ಕೆ
ಇಂದಿನ ಸುದ್ದಿ
ಪ್ರವಾಸೋದ್ಯಮ ಇಲಾಖೆಯಿಂದ ತರಬೇತಿಗೆ ಅರ್ಜಿ ಆಹ್ವಾನ : Department of Tourism
ಇಂದಿನ ಸುದ್ದಿ
ಗಣೇಶ ವಿಸರ್ಜಿಸಲು ತಾತ್ಕಾಲಿಕ ನೀರಿನ ತೊಟ್ಟಿ ವ್ಯವಸ್ಥೆ : Ganesha Festival
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

More

  • About Us!
  • Blog
  • Contact Us
  • Customize Interests
  • Disclaimer
  • Kannada News- NammaJana
  • My Bookmarks
  • ಶ್ರೀ ಅಹೋಬಲ ಟಿವಿಎಸ್

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?