Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: District Hospital: ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆ | ಹೊರಗುತ್ತಿಗೆ ಆಧಾರದ ಮೇಲೆ ನೇಮಕಕ್ಕೆ ಡಿಸಿ ಸೂಚನೆ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > District Hospital: ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆ | ಹೊರಗುತ್ತಿಗೆ ಆಧಾರದ ಮೇಲೆ ನೇಮಕಕ್ಕೆ ಡಿಸಿ ಸೂಚನೆ
ಇಂದಿನ ಸುದ್ದಿ

District Hospital: ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆ | ಹೊರಗುತ್ತಿಗೆ ಆಧಾರದ ಮೇಲೆ ನೇಮಕಕ್ಕೆ ಡಿಸಿ ಸೂಚನೆ

Nammajana Sub Editor
Last updated: 12 September 2025 10:17 AM
By Nammajana Sub Editor 4 Min Read
Share
SHARE
Telegram Group Join Now
WhatsApp Group Join Now

Chitradurga News | Nammajana.com |12-09-2025

ನಮ್ಮಜನ ನ್ಯೂಸ್ ಕಾಂ, ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ(District Hospital) ಮಂಜೂರಾದ ಹುದ್ದೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅನುಗುಣವಾಗಿ ತಜ್ಞ ವೈದ್ಯರು, ಶುಶ್ರೂಷಕರು, ತಂತ್ರಜ್ಞರು, ಗ್ರೂಪ್-ಡಿ ನೌಕರರನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ನೀಡಿದರು.

ahobala tvs ದಸರಾ ಹಾಗು ದೀಪಾವಳಿ ಹಬ್ಬದ ವಿಶೇಷ ಕೊಡುಗೆಗಳು 2

ಇದನ್ನೂ ಓದಿ: ವಿಷ ಜಂತು ಕಚ್ಚಿ ರೈತ ಸಾವು

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲಾಸ್ಪತ್ರೆಗೆ ಮಂಜೂರಾದ ಹುದ್ದೆಗಳು ಖಾಲಿ ಇದ್ದ ಸಂದರ್ಭದಲ್ಲಿ ಹೊರಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಸರ್ಕಾರ ಅನುಮತಿ ನೀಡಿದೆ.

ಜಿಲ್ಲಾಸ್ಪತ್ರೆಯಲ್ಲಿ ಫಿಜಿಷಿಯನ್, ಹೃದ್ರೋಗ ತಜ್ಞರು, ಅರವಳಿಕೆ ತಜ್ಞರು, ನೆಫ್ರೋಲಜಿ, ನ್ಯೂರೋಲಜಿ ಅಂತಹ ತಜ್ಞ ವೈದ್ಯರ ಕೊರತೆ ಕಾಡಬಾರದು. ಆಸ್ಪತ್ರೆಯಲ್ಲಿ ಇಂಜಿನಿಯರ್ ಗ್ರೇಡ್ 2 ಹಾಗೂ ಗ್ರೇಡ್ -3 ಹಂತದ 6 ಹುದ್ದೆಗಳು ಖಾಲಿಯಿವೆ. ಹೊರಗುತ್ತಿಗೆ ಅಥವಾ ಪ್ರಭಾರದಲ್ಲಿ ಈ ಹುದ್ದೆಗಳಿಗೆ ಭರ್ತಿ ಮಾಡಲು ಸಾಧ್ಯವಿಲ್ಲವೇ ಎಂದು ಪ್ರಶ್ನಿಸಿದರು.

ಜಿಲ್ಲಾಸ್ಪತ್ರೆಯ ದುರಸ್ಥಿ ಕಾಮಗಾರಿ ಪೂರ್ಣಗೊಂಡು ಎರಡು ವರ್ಷಗಳು ತುಂಬಿಲ್ಲ. ಆದರೂ ವಾರ್ಡ್ ಮೇಲ್ಛಾವಣಿ ಕುಸಿದು ಬಿದ್ದು ರೋಗಿಗಳಿಗೆ ತೊಂದರೆಯಾದ ಕುರಿತು ಮಾಧ್ಯಮಗಳಲ್ಲಿ ವರದಿ ಬಿತ್ತರವಾಗಿತ್ತು. ಕಟ್ಟಡ ಕ್ಷಮತೆ, ಅಗತ್ಯ ಇರುವ ದುರಸ್ಥಿ ಕೆಲಸಗಳ ಕುರಿತು ಇಂಜಿನಿಯರ್ ಅವರ ವರದಿ ಇಲ್ಲದೇ ದುರಸ್ಥಿ ಕಾಮಗಾರಿ ನಡೆಸಲಾಗಿದೆಯೇ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಜಿಲ್ಲಾ ಶಸ್ತ್ರಚಿಕಿತ್ಸಕರನ್ನು ಪ್ರಶ್ನಿಸಿದರು.

ಖಾಸಗಿ ಆಸ್ಪತ್ರೆ ಹಾಗೂ ಕ್ಲಿನಿಕ್ ಮೇಲಿನ ಕಾಳಜಿಗೆ ಅಸಮಧಾನ :

ಜಯದೇವ, ಕಿದ್ವಾಯಿ ಸೇರಿದಂತೆ ರಾಜ್ಯದ ಪ್ರತಿಷ್ಠಿತ ವೈದ್ಯಕೀಯ ಸಂಸ್ಥೆಗಳು ಸಿಬ್ಬಂದಿ ಕೊರತೆ ನಡುವೆಯೂ ರಾಜ್ಯದ ಮೂಲೆ ಮೂಲೆಗಳಿಂದ ಆಗಮಿಸುವ ರೋಗಿಗಳಿಗೆ ವಿಶ್ವ ದರ್ಜೆಯ ಚಿಕಿತ್ಸೆ ನೀಡುತ್ತಿವೆ.

ಬೇರೆಡೆಗೆ ಹೊಲಿಸಿದರೆ ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಸಿಬ್ಬಂದಿ ಸಂಖ್ಯೆ ಹೆಚ್ಚಿದೆ. ಆದರೆ ಇಲ್ಲಿನ ವೈದ್ಯರಿಗೆ ತಮ್ಮ ಸ್ವಂತ ಖಾಸಗಿ ಆಸ್ಪತ್ರೆ ಹಾಗೂ ಕ್ಲಿನಿಕ್‍ಗಳ ಮೇಲಿರುವಷ್ಟು ಕಾಳಜಿ ಜಿಲ್ಲಾಸ್ಪತ್ರೆಯ ಬಗ್ಗೆ ಇಲ್ಲ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಇದನ್ನೂ ಓದಿ: ಹಿಂದೂ ಮಹಾಗಣಪತಿ ಶೋಭಾಯಾತ್ರೆಗೆ ಬಿಗಿ ಬಂದೋಬಸ್ತ್ | 3869 ಪೊಲೀಸ್ ಅಧಿಕಾರಿ, ಸಿಬ್ಬಂದಿ ಹಾಗೂ 30 ವಿಶೇಷ ತುಕಡಿಗಳ ನಿಯೋಜನೆ | Hindu Mahaganpati

ಸಿಬ್ಬಂದಿ ಕೊರತೆ ನಡುವೆಯೂ(District Hospital) ವೈದ್ಯರ ಖಾಸಗಿ ಆಸ್ಪತ್ರೆಗಳು ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸುತ್ತವೆ. ಆದರೆ ಜಿಲ್ಲಾಸ್ಪತ್ರೆಯಲ್ಲಿ ಮಾತ್ರ ಇದು ಸಾಧ್ಯವಿಲ್ಲ ಎಂದರೆ ಹೇಗೆ? ಇದಕ್ಕೆಲ್ಲಾ ಇಚ್ಚಾಶಕ್ತಿ ಕೊರತೆಯೇ ಕಾರಣವಾಗಿದೆ. ಆಡಳಿತಾಧಿಕಾರಿಗಳು, ವೈದ್ಯರು, ಶುಶ್ರೂಷಕರು, ತಂತ್ರಜ್ಞರು, ಗ್ರೂಪ್ ಡಿ ಸಿಬ್ಬಂದಿಯ ಮೇಲೆ ಜಿಲ್ಲಾ ಶಸ್ತ್ರಚಿಕಿತ್ಸಕರಿಗೆ ಹಿಡಿತ ಇಲ್ಲವೇ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಬೇಸರ ವ್ಯಕ್ತಪಡಿಸಿದರು.

ಎ.ಬಿ.ಆರ್.ಕೆ. ಅನುದಾನದ ಲೆಕ್ಕ ಪತ್ರ ನೀಡಲು ಸೂಚನೆ:

ಜಿಲ್ಲಾ ಆಸ್ಪತ್ರೆಯಲ್ಲಿ ಕಳೆದ 3 ವರ್ಷಗಳಲ್ಲಿ ಎ.ಬಿ.ಆರ್.ಕೆ (ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ) ಯೋಜನೆಯಡಿ ನೀಡಿದ ಶಸ್ತ್ರಚಿಕಿತ್ಸೆ ಹಾಗೂ ಯೋಜನೆಗೆ ಸರ್ಕಾರದಿಂದ ಬಿಡುಗಡೆ ಮಾಡಿದ ಅನುದಾನದ ಕುರಿತು ಲೆಕ್ಕ ಪತ್ರ ವಿವರಗಳನ್ನು ಸಲ್ಲಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಜಿಲ್ಲಾ ಶಸ್ತ್ರಚಿಕಿತ್ಸಕರಿಗೆ ಸೂಚಿಸಿದರು.

ಎ.ಬಿ.ಆರ್.ಕೆ ಅನುದಾನದಲ್ಲಿ ವೈದ್ಯರಿಗೆ ನೀಡಿದ ಭತ್ಯೆ, ಖರೀದಿಸಿದ ಔಷದೋಪಕರಣಗಳ ವೆಚ್ಚವನ್ನು ಪರಿಶೀಲನೆಗೆ ನೀಡಬೇಕು. ಜಿಲ್ಲಾ ಶಸ್ತ್ರಚಿಕಿತ್ಸಕರಿಗೆ ಇರುವ ಆರ್ಥಿಕ ವೆಚ್ಚದ ಅಧಿಕಾರದಡಿ ಖರ್ಚು ಮಾಡಿದ ವೆಚ್ಚದ ಮಾಹಿತಿ ನೀಡಬೇಕು. ರಾಜ್ಯ ಔಷದೋಗ್ರಾಣದಿಂದ ಜಿಲ್ಲಾಸ್ಪತ್ರೆಗೆ ಸರಬರಾಜು ಮಾಡಿದ ಔಷಧಗಳ ವಿವರ ಹಾಗೂ ಖಾಸಗಿ ಸರಬರಾಜುದಾರರಿಂದ ಖರೀದಿಸಿದ ಔಷಧಗಳ ವಿವರವನ್ನು ಕಂಪನಿಗಳ ಹೆಸರು ಸಹಿತ ಪರಿಶೀಲನೆಗೆ ನೀಡುವಂತೆ ಹೇಳಿದರು.

ಸಿಜೇರಿಯನ್ ಹೆರಿಗೆ ಹೆಚ್ಚಳಕ್ಕೆ ಕಳವಳ :

ಜಿಲ್ಲಾಸ್ಪತ್ರೆಯಲ್ಲಿ ಈ ವರ್ಷ ಏಪ್ರಿಲ್ ನಿಂದ ಆಗಸ್ಟ್‍ವರೆಗೆ ಒಟ್ಟು 2,638 ಹೆರಿಗೆಗಳು ಸಂಭವಿಸಿವೆ. ಈ ಪೈಕಿ 789 ಸಹಜ 1,859 ಸಿಜೇರಿಯನ್ ಹೆರಿಗೆಗಳಾಗಿವೆ. ಸಿಜೇರಿಯನ್ ಹೆರಿಗೆ ಪ್ರಮಾಣ ಹೆಚ್ಚಿರುವುದಕ್ಕೆ ಜಿಲ್ಲಾಧಿಕಾರಿ ವೆಂಕಟೇಶ್ ಕಳವಳ ವ್ಯಕ್ತಪಡಿಸಿದರು.

ಗರ್ಭಧಾರಣೆಯಿಂದ ಹಿಡಿದು ಮಗು ಜನಿಸಿದ ನಂತರವೂ ಗರ್ಭಿಣಿ ಹಾಗೂ ಬಾಣಂತಿಯರ ಆರೋಗ್ಯದ ಕಾಳಜಿ ವಹಿಸಲು ಸರ್ಕಾರ ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ಗರ್ಭಿಣಿಯರಿಗೆ ಪೌಷ್ಠಿಕ ಆಹಾರ ನೀಡುವುದರ ಮೂಲಕ ತೂಕ ಹೆಚ್ಚಳ, ರಕ್ತಹೀನತೆ, ಅಪೌಷ್ಠಿಕತೆ ತಪ್ಪಿಸಲು ಸಾಕಷ್ಟು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಆದರೂ ಜಿಲ್ಲಾಸ್ಪತ್ರೆಯಲ್ಲಿ ಸಿಜೇರಿಯನ್ ಹೆರಿಗಳು ಹೆಚ್ಚಾಗುತ್ತಿರುವುದು ಏಕೆ ವೈದ್ಯರನ್ನು ಪ್ರಶ್ನಿಸಿದರು.

ಪ್ರಸಕ್ತ ವರ್ಷದಲ್ಲಿ ಜಿಲ್ಲಾಸ್ಪತ್ರೆಯಿಂದ 754 ಮೇಜರ್ ಆಪರೇಷನ್, 486 ಟ್ರಾಮಾ ಆಪರೇಷನ್, 441 ಕಣ್ಣಿನ ಶಸ್ತ್ರಚಿಕಿತ್ಸೆ 96 ಇತರೆ ಶಸ್ತ್ರಚಿಕತ್ಸೆಗಳನ್ನು ನಡೆಸಲಾಗಿದೆ. 1,70,020 ಹೊರ ರೋಗಿಗಳು, 22,624 ಒಳರೋಗಿಗಳು ಚಿಕಿತ್ಸೆ ಪಡೆದಿದ್ದಾರೆ. 2,920 ಸಿ.ಟಿ.ಸ್ಕ್ಯಾನ್, 5,874 ಎಂ.ಆರ್.ಐ ಸ್ಕಾನ್ ಮಾಡಲಾಗಿದೆ. 311 ರೋಗಿಗಳು 2,917 ಸೈಕಲ್‍ಗಳಷ್ಟು ಡಯಾಲಿಸಿಸ್‍ಗೆ ಒಳಪಟ್ಟಿದ್ದಾರೆ. 560 ರೋಗಗಳು ಐ.ಸಿ.ಯುಗೆ ದಾಖಲಾಗಿದ್ದಾರೆ.

ಈ ಪೈಕಿ 93 ರೋಗಿಗಳಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಗುಣಪಡಿಸಲಾಗಿದೆ. 234 ರೋಗಿಗಳನ್ನು ಉನ್ನತ ಮಟ್ಟದ ಚಿಕಿತ್ಸೆಗಾಗಿ ಬೇರೆಡೆಗೆ ಶಿಫಾರಸ್ಸು ಮಾಡಲಾಗಿದೆ. 70 ರೋಗಿಗಳು ಮೃತಪಟ್ಟಿದ್ದಾರೆ. 15,799 ಪ್ರಕರಣಗಳಲ್ಲಿ ಎ.ಬಿ.ಆರ್.ಕೆ. ಕ್ಲೈಮ್ ಸಲ್ಲಿಕೆ ಮಾಡಲಾಗಿದೆ ಎಂದು ಜಿಲ್ಲಾಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ಮಾಹಿತಿ ನೀಡಿದರು.

ಜಿಲ್ಲಾಸ್ಪತ್ರೆಯಲ್ಲಿ ಮೂಳೆಗೆ ಸಂಬಂಧಿಸಿದ ಶಸ್ತ್ರಚಿಕಿತ್ಸೆಗೆ ರೋಗಿಗಳು ವಾರಗಟ್ಟಲೇ ಕಾಯುವ ಪರಿಸ್ಥಿತಿ ಇದೆ. ಕೇವಲ 486 ಟ್ರಾಮಾ ಅಪರೇಷನ್‍ಗಳನ್ನು ಮಾಡಲಾಗಿದೆ. ಈ ವಿಭಾಗದಲ್ಲಿ 7 ತಜ್ಞ ವೈದ್ಯರು ಕೆಲಸ ಮಾಡುತ್ತಾರೆ. ಆದರೂ ದಿನಕ್ಕೆ ಕೇವಲ ಸರಾಸರಿ 2 ರಿಂದ 3 ಶಸ್ತ್ರಚಿಕಿತ್ಸೆಗಳನ್ನು ಮಾತ್ರ ಮಾಡಲಾಗುತ್ತಿದೆ. ರೋಗಿಗಳ ಮನವಿಗೆ ವೈದ್ಯರು ಸ್ಪಂದಿಸುವುದಿಲ್ಲ ಎಂದು ಆರೋಗ್ಯ ರಕ್ಷಾ ಸಮಿತಿ ಸದಸ್ಯರು ಸಭೆಯಲ್ಲಿ ದೂರಿದರು.

ಇದನ್ನೂ ಓದಿ: ಚಳ್ಳಕೆರೆ : ಇಂದು ವಿದ್ಯುತ್ ವ್ಯತ್ಯಯ | POWER CUT

ಜಿಲ್ಲಾಸ್ಪತ್ರೆಯ ಮುಂದಿರುವ(District Hospital) ರಸ್ತೆಯನ್ನು ಹಾಕರ್ ಹಾಗೂ ಪಾರ್ಕಿಂಗ್‍ಗೆ ಮೀಸಲಿರಿಸಿ, ವಾಹನ ಓಡಾಟ ನಿರ್ಬಂದಿಸಲು ನಗರಸಭೆ ತಿರ್ಮಾನ ಕೈಗೊಳ್ಳಬೇಕು. ಆಸ್ಪತ್ರೆಯ ಮುಂದಿರುವ ಆಟೋ ನಿಲ್ದಾಣಕ್ಕೂ ಬೇರೆಡೆ ಜಾಗ ಗುರುತಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ನಗರಸಭೆ ಅಧಿಕಾರಿಗಳಿಗೆ ನಿರ್ದೇಶಿಸಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರೇಣುಪ್ರಸಾದ್, ನಿವಾಸಿ ವೈದ್ಯಾಧಿಕಾರಿ ಆನಂದ್ ಪ್ರಕಾಶ್, ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ. ಸಿ.ಓ.ಸುಧಾ ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಡಾ.ಶೀತಲ್ ಪ್ರಶಾಂತ, ಚಿದಾನಂದ ಸ್ವಾಮಿ, ಹಬೀಬುಲ್ಲಾ, ನಾಗರಾಜ ಸಕ್ಕರೆ, ಎಂ.ಆರ್.ಸಿ. ಮೂರ್ತಿ, ರೆಹಮತ್ ಸೇರಿದಂತೆ ಮತ್ತಿತರರು ಇದ್ದರು.

Telegram Group Join Now
WhatsApp Group Join Now

You Might Also Like

Gold price | ಬಂಗಾರದ ಬೆಲೆಯಲ್ಲಿ ಇಳಿಕೆ

ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಮನೆ ಮೇಲೆ ಮತ್ತೆ ಇಡಿ ದಾಳಿ | ED Raid challakere

Challakere Rain | ಹಸ್ತ ಮಳೆಗೆ ಮುಳುಗಿದ ಲಾರಿ, ಕಾರು, ಮನೆಗಳು

Astrology | ಇಂದಿನ‌ ರಾಶಿ ಭವಿಷ್ಯ, ಯಾರಿಗೆಲ್ಲ ಶುಭ, ಅಶುಭ

ದಿನ ಭವಿಷ್ಯ | 09-10-2025 | Dina Bhavishya

TAGGED:ABRK grantAppointmentCaesarean section deliveryChitradurgaChitradurga District HospitalChitradurga NewsDC VenkateshDr. RenuprasadKannada NewsNammajana.comprivate hospitalstaff shortageಎ.ಬಿ.ಆರ್.ಕೆ. ಅನುದಾನಕನ್ನಡ ನ್ಯೂಸ್ಕನ್ನಡ ಸುದ್ದಿಖಾಸಗಿ ಆಸ್ಪತ್ರೆಚಿತ್ರದುರ್ಗಚಿತ್ರದುರ್ಗ ಜಿಲ್ಲಾಸ್ಪತ್ರೆಚಿತ್ರದುರ್ಗ ನ್ಯೂಸ್ಡಾ.ರೇಣುಪ್ರಸಾದ್ಡಿಸಿ ವೆಂಕಟೇಶ್ನಮ್ಮಜನ.ಕಾಂನೇಮಕಸಿಜೇರಿಯನ್ ಹೆರಿಗೆಸಿಬ್ಬಂದಿ ಕೊರತೆ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ವಿಷ ಜಂತು ಕಚ್ಚಿ ರೈತ ಸಾವು
Next Article ಬಂಗಾರದ ಬೆಲೆಯಲ್ಲಿ ಭಾರೀ ಏರಿಕೆ | Chitradurga Gold Rate
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Today Adike Rate | ಇಂದಿನ‌ ಅಡಕೆ ರೇಟ್
ಅಡಿಕೆ ಧಾರಣೆ
Gold price rise | ಬಂಗಾರದ ಓಟಕ್ಕೆ ಬ್ರೇಕ್ ಹಾಕೋರಿಲ್ಲ, ಎಷ್ಟಿದೆ ಇಂದಿನ ಬೆಲೆ
ಇಂದಿನ ಸುದ್ದಿ
V V Sagara Dam | ವಾಣಿ ವಿಲಾಸ ಸಾಗರ ಡ್ಯಾಂ ಲೇವೆಲ್ ಎಷ್ಟು | ಇಲ್ಲಿದೆ ಮಾಹಿತಿ
ಇಂದಿನ ಸುದ್ದಿ
Astrology | ದಿನ ಭವಿಷ್ಯ, ಇವತ್ತು ಹೇಗಿದೆ ರಾಶಿ ಭವಿಷ್ಯ
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

More

  • About Us!
  • Blog
  • Contact Us
  • Customize Interests
  • Disclaimer
  • Kannada News- NammaJana
  • My Bookmarks
  • ಶ್ರೀ ಅಹೋಬಲ ಟಿವಿಎಸ್

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?