Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: KPD meeting | ದೂರುಗಳ ಹಿನ್ನಲೆ ಅಭಿವೃದ್ದಿ ನಿಗಮದ ವ್ಯವಸ್ಥಾಪಕರ ಬಿಡುಗಡೆಗೆ ಸೂಚನೆ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > KPD meeting | ದೂರುಗಳ ಹಿನ್ನಲೆ ಅಭಿವೃದ್ದಿ ನಿಗಮದ ವ್ಯವಸ್ಥಾಪಕರ ಬಿಡುಗಡೆಗೆ ಸೂಚನೆ
ಇಂದಿನ ಸುದ್ದಿ

KPD meeting | ದೂರುಗಳ ಹಿನ್ನಲೆ ಅಭಿವೃದ್ದಿ ನಿಗಮದ ವ್ಯವಸ್ಥಾಪಕರ ಬಿಡುಗಡೆಗೆ ಸೂಚನೆ

Editor Nammajana
Last updated: 22 September 2025 6:11 PM
By Editor Nammajana 2 Min Read
Share
SHARE
Telegram Group Join Now
WhatsApp Group Join Now

Chitradurga news|nammajana.com|22-9-2025

ನಮ್ಮಜನ.ಕಾಂ, ಚಿತ್ರದುರ್ಗ: ಇಂದು ನಡೆದ ಜಿಲ್ಲಾ ಮಟ್ಟದ ಕೆಡಿಪಿ ಸಭೆಯಲ್ಲಿ ಡಿ. ದೇವರಾಜು ಅರಸು ಹಿಂದುಳಿದ (KPD meeting) ವರ್ಗಗಳ ಅಭಿವೃದ್ಧಿ ನಿಗಮ ಸೇರಿದಂತೆ ಹಿಂದುಳಿದ ವರ್ಗಗಳ 12 ಅಭಿವೃದ್ಧಿ ನಿಗಮಗಳಿಗೂ ಒಬ್ಬರೇ ಅಧಿಕಾರಿ ಇದ್ದು, ಈ ಎಲ್ಲ ನಿಗಮಗಳ ಜಿಲ್ಲಾ ವ್ಯವಸ್ಥಾಪಕರು ಸಭೆಗೆ ಗೈರು ಹಾಜರಾಗಿದ್ದರು.

ahobala tvs ದಸರಾ ಹಾಗು ದೀಪಾವಳಿ ಹಬ್ಬದ ವಿಶೇಷ ಕೊಡುಗೆಗಳು 2

ಈ ಕುರಿತಂತೆ ವಿಷಯ ಪ್ರಸ್ತಾಪಿಸಿದ ಹೊಸದುರ್ಗ ಶಾಸಕ ಬಿ.ಜಿ. ಗೋವಿಂದಪ್ಪ ಅವರು ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಾರ್ಯವೈಖರಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಅವರ ಮೇಲೆ ವಿವಿಧ ಆರೋಪಗಳಿರುವ ಬಗ್ಗೆ ಸಭೆಯ ಗಮನಕ್ಕೆ ತಂದರು. ಈ ನಿಗಮಗಳ ಜಿಲ್ಲಾ ವ್ಯವಸ್ಥಾಪಕರ ಮೇಲೆ ಸಾಕಷ್ಟು ದೂರುಗಳು ಕೇಳಿ ಬಂದಿವೆ.

ಉದ್ಯೋಗ ಹಾಗೂ ಶಿಕ್ಷಣದ ನೇರಸಾಲ ಯೋಜನೆ, ಹೊಲಿಗೆ ಯಂತ್ರ ವಿತರಣೆ, ಸ್ವಾವಲಂಬಿ ಸಾರಥಿ ಸೇರಿದಂತೆ ಸಹಾಯಧನ ಯೋಜನೆಗಳ ಸಾಧನೆ ಶೂನ್ಯವಿದೆ. ನಿಗಮಗಳ ಪರಿಶೀಲನೆಗೆ ಉತ್ತರಿಸಬೇಕಾದ ಅಧಿಕಾರಿಯೇ ಕೆ.ಡಿ.ಪಿ ಸಭೆಗೆ ಗೈರು ಹಾಜರಾಗಿದ್ದಾರೆ ಎಂದು ಸಚಿವ ಡಿ.ಸುಧಾಕರ್ ತೀವ್ರ ಅಸಮಧಾನ ವ್ಯಕ್ತಪಡಿಸಿದರು.

ವ್ಯವಸ್ಥಾಪಕಿ ಗೈರು ಹಾಜರಿ ಕುರಿತು ನಿಗಮದ ಸಿಬ್ಬಂದಿಗೆ ಸಭೆಯಲ್ಲಿ ಪ್ರಶ್ನಿಸಿದಾಗ, ಅಧಿಕಾರಿಗೆ ಆರೋಗ್ಯ ಸರಿಯಿಲ್ಲ, ಅವರಿಗೆ ಅಪಘಾತವಾಗಿದ್ದು ಚಿಕಿತ್ಸೆಗಾಗಿ ರಜೆ ಪಡೆದಿದ್ದಾರೆ ಎಂದು ತಿಳಿಸಿದರು. ಕೂಡಲೇ ಸಚಿವ ಡಿ.ಸುಧಾಕರ್ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಮೊಬೈಲ್ ಕರೆ ಮಾಡಿ ಈ ಕುರಿತು ಸ್ಪಷ್ಟನೆ ಕೇಳಿದರು. ಜಿಲ್ಲಾ ವ್ಯವಸ್ಥಾಪಕರು ಅಧಿಕೃತವಾಗಿ ರಜೆ ಪಡೆದಿಲ್ಲ ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕರು (KPD meeting) ಉತ್ತರಿಸಿದರು. ಉತ್ತಮವಾಗಿ ಕಾರ್ಯನಿರ್ವಹಿಸದ ಜಿಲ್ಲಾ ವ್ಯವಸ್ಥಾಪಕಿಯನ್ನು ಕೂಡಲೇ ಜಿಲ್ಲೆಯ ಕರ್ತವ್ಯದಿಂದ ಬಿಡುಗಡೆ ಮಾಡುವುದಾಗಿ ಎಂದು ಸಚಿವ ಡಿ.ಸುಧಾಕರ್ ವ್ಯವಸ್ಥಾಪಕ ನಿರ್ದೇಶಕರಿಗೆ ತಿಳಿಸಿದರು.
ಜಿಲ್ಲೆಯ ಎಲ್ಲಾ ಅಭಿವೃದ್ಧಿ ನಿಗಮಗಳ ಅಧಿಕಾರಿಗಳು ಏಜಂಟ್‍ರೊಂದಿಗೆ ಸೇರಿ ಬಡವರ ಜೀವ ಹಿಂಡುತ್ತಿದ್ದಾರೆ. ಸರ್ಕಾರ ಯೋಜನೆಗಳನ್ನು ಸರಿಯಾಗಿ ತಲುಪಿಸುತ್ತಿಲ್ಲ. ಪ್ರತಿಯೊಂದಕ್ಕೂ ರೇಟ್ ಕಾರ್ಡು ಫಿಕ್ಸ್ ಮಾಡಿದ್ದಾರೆ.

ಇವರಿಗೆ ಹೇಳುವರು ಕೇಳುವವರು ಯಾರು ಇಲ್ಲದಂತಾಗಿದೆ. ಎಂದು ಶಾಸಕ ಬಿ.ಜಿ.ಗೋವಿಂದಪ್ಪ ನಿಗಮದ ಅಧಿಕಾರಿಗಳ ನಡೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಕೂಡಲೇ ಜಿಲ್ಲಾಧಿಕಾರಿ ಹಾಗೂ ಸಿಇಓ ಎಚ್ಚೆತ್ತು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಎಲ್ಲ ಅಭಿವೃದ್ಧಿ ನಿಗಮಗಳ ಯೋಜನೆ ಕುರಿತು ಪರಿಶೀಲನೆ ನಡೆಸಬೇಕು.

ಇದನ್ನೂ ಓದಿ: ಸಾಮಾಜಿಕ, ಶೈಕ್ಷಣಿಕ ಗಣತಿ | ರಾಜ್ಯದಲ್ಲಿನ 7 ಕೋಟಿ ಜನರ ಸಮೀಕ್ಷೆಯಾಗುವವರೆಗೂ ನಡೆಸಬೇಕು | Sri Immadi Siddarameshwara Swamiji

ಅರ್ಹ ಫಲಾನುಭವಿಗಳಿಗೆ ಯೋಜನೆಯ ಲಾಭ ತಲುಪಿಸಬೇಕು ಎಂದರು. ಈ ವೇಳೆ ನಿಗಮಗಳ ಅವ್ಯವಹಾರಕ್ಕೆ ಕಡಿವಾಣ ಹಾಕುವಂತೆ ಶಾಸಕ ಟಿ.ರಘೂಮೂರ್ತಿ ಹಾಗೂ ಡಾ.ಚಂದ್ರಪ್ಪ ದನಿಗೂಡಿಸಿದರು.

Telegram Group Join Now
WhatsApp Group Join Now

You Might Also Like

Gold price | ಬಂಗಾರದ ಬೆಲೆಯಲ್ಲಿ ಇಳಿಕೆ

ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಮನೆ ಮೇಲೆ ಮತ್ತೆ ಇಡಿ ದಾಳಿ | ED Raid challakere

Challakere Rain | ಹಸ್ತ ಮಳೆಗೆ ಮುಳುಗಿದ ಲಾರಿ, ಕಾರು, ಮನೆಗಳು

Gold price rise | ಬಂಗಾರದ ಓಟಕ್ಕೆ ಬ್ರೇಕ್ ಹಾಕೋರಿಲ್ಲ, ಎಷ್ಟಿದೆ ಇಂದಿನ ಬೆಲೆ

V V Sagara Dam | ವಾಣಿ ವಿಲಾಸ ಸಾಗರ ಡ್ಯಾಂ ಲೇವೆಲ್ ಎಷ್ಟು | ಇಲ್ಲಿದೆ ಮಾಹಿತಿ

TAGGED:BG GovindappaChitradurgaD. SudhakarDistrict Level MeetingKC VeerendraKDP MeetingM. ChandrappaMinisterMLAPresidingProgress ReviewQuarterly KDPT RaghumurthyZilla Panchayatಅಧ್ಯಕಕ್ಷತೆಎಂ.ಚಂದ್ರಪ್ಪಕೆ.ಸಿ.ವೀರೇಂದ್ರಕೆಡಿಪಿ ಸಭೆಚಿತ್ರದುರ್ಗಜಿಲ್ಲಾ ಪಂಚಾಯತ್ಜಿಲ್ಲಾ ಮಟ್ಟದ ಸಭೆಟಿ ರಘುಮೂರ್ತಿಡಿ. ಸುಧಾಕರ್ತ್ರೈಮಾಸಿಕ ಕೆಡಿಪಿಪ್ರಗತಿ ಪರಿಶೀಲನೆಬಿ.ಜಿ.ಗೋವಿಂದಪ್ಪಶಾಸಕಸಚಿವ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ಅಡಿಕೆ ಧಾರಣೆ | 22 ಸೆಪ್ಟೆಂಬರ್ 2025 | ಇಂದಿನ ಅಡಿಕೆ ರೇಟ್ | Today Adike Rate
Next Article ಅನರ್ಹ ಬಿಪಿಎಲ್ ಪಡಿತರ ಚೀಟಿ ಪರಿವರ್ತನೆಗೆ ಕ್ರಮ : BPL CARD
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Today Adike Rate | ಇಂದಿನ‌ ಅಡಕೆ ರೇಟ್
ಅಡಿಕೆ ಧಾರಣೆ
Astrology | ಇಂದಿನ‌ ರಾಶಿ ಭವಿಷ್ಯ, ಯಾರಿಗೆಲ್ಲ ಶುಭ, ಅಶುಭ
ದಿನ ಭವಿಷ್ಯ
ದಿನ ಭವಿಷ್ಯ | 09-10-2025 | Dina Bhavishya
ದಿನ ಭವಿಷ್ಯ
Astrology | ದಿನ ಭವಿಷ್ಯ, ಇವತ್ತು ಹೇಗಿದೆ ರಾಶಿ ಭವಿಷ್ಯ
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

More

  • About Us!
  • Blog
  • Contact Us
  • Customize Interests
  • Disclaimer
  • Kannada News- NammaJana
  • My Bookmarks
  • ಶ್ರೀ ಅಹೋಬಲ ಟಿವಿಎಸ್

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?