
Chitradurga news| nammajana.com|30-5-2024
ನಮ್ಮ ಜನ.ಕಾಂ, ಚಿತ್ರದುರ್ಗ: 2023-24ನೇ ಸಾಲಿನಲ್ಲಿ ಕೃಷಿ ಇಲಾಖೆಯ ವಿವಿಧ ಯೋಜನೆ, ಕಾರ್ಯಕ್ರಮಗಳ ಸಮಗ್ರ ಅನುಷ್ಠಾನದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಚಿತ್ರದುರ್ಗ (Chitradurga) ಜಿಲ್ಲೆಗೆ ದ್ವಿತೀಯ ಸ್ಥಾನ ದೊರಕಿದೆ.ಕೃಷಿ ಇಲಾಖೆಯ ಮಣ್ಣು ಪರೀಕ್ಷಾ ಪ್ರಯೋಗಾಲಯಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಚಿತ್ರದುರ್ಗ (Chitradurga) ಜಿಲ್ಲೆಯ ಮಣ್ಣು ಪರೀಕ್ಷಾ ಪ್ರಯೋಗಾಲಯಕ್ಕೆ ಪ್ರಥಮ ಸ್ಥಾನ ಹಾಗೂ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ನರೇಗಾ) ಕಾರ್ಯಕ್ರಮದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಚಿತ್ರದುರ್ಗ (Chitradurga) ಜಿಲ್ಲೆಗೆ ಪ್ರಥಮ ಸ್ಥಾನ ಲಭಿಸಿದ್ದರಿಂದ ಈಚೆಗೆ ಬೆಂಗಳೂರಿನಲ್ಲಿ ಜರುಗಿದ ಪ್ರಸಕ್ತ ಸಾಲಿನ ರಾಜ್ಯಮಟ್ಟದ ಮುಂಗಾರು ಹಂಗಾಮಿನ ಕಾರ್ಯಾಗಾರದಲ್ಲಿ ಪ್ರಶಂಸನಾ ಪತ್ರ ನೀಡಿ ಪುರಸ್ಕರಿಸಲಾಗಿದೆ.
ಚಿತ್ರದುರ್ಗ (Chitradurga) ಜಿಲ್ಲೆಗೆ ಕೃಷಿ ಸ್ಥಾನ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಇಲಾಖೆಯ ವಿವಿಧ ಯೋಜನೆಗಳನ್ನು ಕಾಲಾನುಕಾಲಕ್ಕೆ ರೈತರಿಗೆ ತಲುಪಿಸಿ ತಾಂತ್ರಿಕ ಮಾಹಿತಿ ಒದಗಿಸಿ, ಬರಗಾಲದ ಪರಿಸ್ಥಿತಿಯಲ್ಲಿ ಇಳುವರಿ ಪಡೆದು, ಜೀವನ ನಿರ್ವಹಣೆಗೆ ಸುಲಲಿತಗೊಳಿಸಲು ರೈತರಿಗೆ ಭರವಸೆ ನೀಡಿದ ಕಾರ್ಯಕ್ರಮಗಳ ಯಶಸ್ವಿ ಅನುಷ್ಠಾನಕ್ಕೆ ಎರಡನೇ ಅತ್ಯುತ್ತಮ ಜಿಲ್ಲೆಯೆಂದು ಪ್ರಶಸ್ತಿ ಪಡೆದಿದೆ.

ಮಣ್ಣು ಆರೋಗ್ಯ ಕೇಂದ್ರ ಚಿತ್ರದುರ್ಗವು ರಾಜ್ಯದಲ್ಲಿ ಪ್ರಥಮ ಸ್ಥಾನಕ್ಕೆ (Chitradurga)
“ನಾವು ಸತ್ತರೆ ಮಣ್ಣಿಗೆ, ಮಣ್ಣು ಸತ್ತರೆ ಎಲ್ಲಿಗೆ”, “ಮಣ್ಣಿನ ಆರೋಗ್ಯದಿಂದ ಬೆಳೆಗಳ ಆರೋಗ್ಯ -ನಮ್ಮ ಆರೋಗ್ಯ” ಈ ನಿಟ್ಟಿನಲ್ಲಿ ಗ್ರಾಮಗಳಲ್ಲಿ ಮಣ್ಣು ಅಭಿಯಾನ ಕಾರ್ಯಕ್ರಮದಡಿ ಮಣ್ಣು ಪರೀಕ್ಷೆ ಮಹತ್ವ, ಮಣ್ಣು ಪರೀಕ್ಷೆ ಆಧಾರದ ಮೇಲೆ ರಸಗೊಬ್ಬರಗಳ ಸಮರ್ಥ ಬಳಕೆ ಕುರಿತು ಸಕಾಲದಲ್ಲಿ ಮಾಹಿತಿ ನೀಡಿದ ಮಣ್ಣು ಆರೋಗ್ಯ ಕೇಂದ್ರ ಚಿತ್ರದುರ್ಗವು ರಾಜ್ಯದಲ್ಲಿ ಪ್ರಥಮ ಸ್ಥಾನಕ್ಕೆ ಭಾಜನರಾಗಿರುವುದು ಹೆಮ್ಮೆಯ ವಿಷಯವಾಗಿದೆ.
ಕೃಷಿ ಕಾರ್ಮಿಕರಿಗೆ ಉದ್ಯೋಗ ಕಲ್ಪಿಸಿ ಪ್ರಥಮ ಸ್ಥಾನ (Chitradurga)
ಮಣ್ಣು ಹಾಗೂ ನೀರು ಸಂರಕ್ಷಣೆ ಕುರಿತು ಜಲಾನಯನ ಇಲಾಖೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಬದು ನಿರ್ಮಾಣ, ಕೃಷಿ ಹೊಂಡ, ಅರಣ್ಯ ಹಾಗೂ ತೋಟಗಾರಿಕೆ ಚಟುವಟುಕೆಗಳ ಮೂಲಕ ಮಣ್ಣು ಮತ್ತು ನೀರು ಸಂರಕ್ಷಣೆ ಮಾಡುವುದರ ಜೊತೆಗೆ ಕೃಷಿ ಕಾರ್ಮಿಕರಿಗೆ ಉದ್ಯೋಗ ಕಲ್ಪಿಸುವ ಮೂಲಕ ಉತ್ತಮ ಪ್ರಗತಿ ಸಾಧಿಸಿ ಜಿಲ್ಲೆಯು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದು ಮತ್ತೊಂದು ಗರಿ ಮುಡಿಗೇರಿಸಿಕೊಂಡಿದೆ.
ಅಭಿನಂದನೆ
ಪ್ರಶಸ್ತಿಗೆ ಭಾಜನರಾದ ಹಿನ್ನಲೆಯಲ್ಲಿ ಕೃಷಿ ಇಲಾಖೆ ಅಧಿಕಾರಿಗಳು ಜಿಲ್ಲಾಧಿಕಾರಿ ಜಿ.ವೆಂಕಟೇಶ್, ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಜೆ.ಸೋಮಶೇಖರ್ ಹಾಗೂ ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಅವರಿಗೆ ಅಭಿನಂದಿಸಿದರು.
ಇದನ್ನೂ ಓದಿ: Hotel Durgada siri: ದುರ್ಗದ ಸಿರಿ ಹೋಟೆಲ್ ನಲ್ಲಿ ಇಸ್ಪೇಟ್ ಅಡ್ಡೆ ಮೇಲೆ ದಾಳಿ, 32 ಜನ ವಶ
ಈ ಸಂದರ್ಭದಲ್ಲಿ ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ್, ಉಪ ಕೃಷಿನಿರ್ದೇಶಕರಾದ ಶಿವಕುಮಾರ್, ಪ್ರಭಾಕರ್ ಸೇರಿದಂತೆ ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕರು, ಮಣ್ಣು ಆರೋಗ್ಯ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕರು, ವಿಷಯ ತಜ್ಞರು ಇದ್ದರು.