Chitradurga news| nammajana.com|7-6-2024
ನಮ್ಮಜನ.ಕಾಂ, ಚಿತ್ರದುರ್ಗ: ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ 18 ವರ್ಷದ ಬಿಜೆಪಿ ಆಡಳಿತಕ್ಕೆ (D. T. Srinivas) ಶಿಕ್ಷಕರು ಕೊನೆಯಾಡಿದ್ದಾರೆ. ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಅವರು ಭರ್ಜರಿ ಗೆಲುವು ವೈಎಎನ್ ಕೋಟೆಯನ್ನು ಪುಡಿಪುಡಿ ಮಾಡಿದ್ದಾರೆ.
ಇದನ್ನೂ ಓದಿ: Chitradurga: ಜಿಲ್ಲಾ ಆಸ್ಪತ್ರೆಯಲ್ಲಿ ಹೃದಯ ತಪಾಸಣೆ ಕ್ಲಿನಿಕ್

ವೈಎಎನ್ ಗೆಲುವು ಸಾಧಿಸುತ್ತಾರೆ ಎಂಬ ಆತ್ಮ ವಿಶ್ವಾಸದಲ್ಲಿದ್ದ ಬಿಜೆಪಿಗೆ ಕಾಂಗ್ರೆಸ್ ಶಾಕ್ ನೀಡಿದೆ. ಕಳೆದ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಡಿ.ಟಿ.ಶ್ರೀನಿವಾಸ್ ಎರಡನೇ ಅತಿ ಹೆಚ್ಚು ಮತ ಪಡೆದ ಅಭ್ಯರ್ಥಿ ಆಗಿದ್ದರು.
ಬಿಜೆಪಿ ಟಿಕೆಟ್ ಸಿಕ್ಕಿದ್ದರೆ ಡಿ.ಟಿ.ಶ್ರೀನಿವಾಸ್ ಗೆಲುವು ಸುಲಭವಾಗುತ್ತಿತ್ತು. ಆದರೆ ಎದೆಗುಂದರೆ ಶ್ರೀನಿವಾಸ್ ಮತ್ತು ಪತ್ನಿ ಪೂರ್ಣಿಮಾ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗಿ ಟಿಕೆಟ್ ಪಡೆದು ಭರ್ಜರಿ ಗೆಲುವು ಸಹ ಸಾಧಿಸುವ ಮೂಲಕ ವೈಎಎನ್ ಅಧಿಪತ್ಯಕ್ಕೆ ಅಂತ್ಯ ಹಾಡಿದ್ದಾರೆ.
ಅಭ್ಯರ್ಥಿಗಳು ಪಡೆದ ಮತಗಳ ಒಟ್ಟು ವಿವರ: (D. T. Srinivas)
- ಡಿ.ಟಿ.ಶ್ರೀನಿವಾಸ್ ಕಾಂಗ್ರೆಸ್- 12632
- ವೈ .ಎ.ನಾರಾಯಣಸ್ವಾಮಿ ಬಿಜೆಪಿ-7564
- ವಿನೋದ್ ಶಿವರಾಜ್ ಪಕ್ಷೇತರ-6863
ಶ್ರೀನಿವಾಸ್ ಗೆಲುವಿನ ಅಂತರ: 5068
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252