Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Book release Chitradurga: ಆರೋಗ್ಯ ಪೂರ್ಣ ಸಮಾಜ ಕಟ್ಟುವ ಜವಬ್ದಾರಿ ಬರಹಗಾರನ ಮೇಲಿದೆ: ಪ್ರೊ.ಕಾಳೇಗೌಡ ನಾಗವಾರ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > Book release Chitradurga: ಆರೋಗ್ಯ ಪೂರ್ಣ ಸಮಾಜ ಕಟ್ಟುವ ಜವಬ್ದಾರಿ ಬರಹಗಾರನ ಮೇಲಿದೆ: ಪ್ರೊ.ಕಾಳೇಗೌಡ ನಾಗವಾರ
ಇಂದಿನ ಸುದ್ದಿ

Book release Chitradurga: ಆರೋಗ್ಯ ಪೂರ್ಣ ಸಮಾಜ ಕಟ್ಟುವ ಜವಬ್ದಾರಿ ಬರಹಗಾರನ ಮೇಲಿದೆ: ಪ್ರೊ.ಕಾಳೇಗೌಡ ನಾಗವಾರ

Editor Nammajana
Last updated: 16 June 2024 15:22
By Editor Nammajana 3 Min Read
Share
SHARE

Chitradurga news|nammajana.com|16-6-2024

ನಮ್ಮ ಜನ.ಕಾಂ, ಚಿತ್ರದುರ್ಗ: ಆರೋಗ್ಯ ಪೂರ್ಣ ಸಮಾಜವನ್ನು ಕಟ್ಟುವ ಜವಾಬ್ದಾರಿ ಬರಹಗಾರನ (Book release Chitradurga) ಮೇಲಿದೆ ಎಂದು ಖ್ಯಾತ ಸಾಹಿತಿ ಹಾಗೂ ಸಂಸ್ಕøತಿ ಚಿಂತಕ ಮೈಸೂರಿನ ಪ್ರೊ.ಕಾಳೇಗೌಡ ನಾಗವಾರ ತಿಳಿಸಿದರು.

ಅಭಿರುಚಿ ಸಾಹಿತ್ಯಕ-ಸಾಂಸ್ಕøತಿಕ ವೇದಿಕೆ ವತಿಯಿಂದ ತ.ರಾ.ಸು.ರಂಗ ಮಂದಿರದಲ್ಲಿ ಭಾನುವಾರ ನಡೆದ ಡಾ.ದೊಡ್ಡಮಲ್ಲಯ್ಯರವರ ಕಂಡುಂಡ ಕಥೆಗಳು ಹಾಗೂ ಮೂಕ ಲಹರಿ ಎರಡು ಕೃತಿಗಳ ಬಿಡುಗಡೆ (Book release Chitradurga) ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ದೊಡ್ಡಮಲ್ಲಯ್ಯ ವೈದ್ಯರಾಗಿ ಸಾಹಿತ್ಯ ಅರ್ಪಣೆ ಮನೋಭಾವ ಬೆಳೆಸಿಕೊಂಡಿದ್ದಾರೆ (Book release Chitradurga)

ಬ್ರಾಹ್ಮಣರಿಂದ ಹಿಡಿದು ದಲಿತರವರೆಗೆ ಎಲ್ಲರಿಗೂ ಸಮಾಜವನ್ನು ಪರಿವರ್ತಿಸುವ ಹೊಣೆಗಾರಿಕೆಯಿದೆ. ಬದುಕು ಎನ್ನುವುದು ದೊಡ್ಡದು. ಡಾ.ದೊಡ್ಡಮಲ್ಲಯ್ಯ ಪಶುವೈದ್ಯರಾಗಿದ್ದುಕೊಂಡು ಸಾಹಿತ್ಯ ಅರ್ಪಣೆ ಮನೋಭಾವ ಬೆಳೆಸಿಕೊಂಡಿದ್ದಾರೆ.

ಎಲ್ಲಾ ಮನಸ್ಸುಗಳು ಒಟ್ಟಿಗೆ ಬೆರೆಯಬೇಕಾದರೆ ಇಂತಹ ಕಾರ್ಯಕ್ರಮಗಳು ನಡೆಯುತ್ತಿರಬೇಕು. ಗಾಂಧಿಜಿಯ ಅನೇಕ ವಿಚಾರಗಳು ಅವೈಜ್ಞಾನಿಕವಾಗಿದೆ. ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್, ಲೋಹಿಯಾ ಇವರುಗಳ ಕಾಣಿಕೆ ಸಮಾಜಕ್ಕೆ ದೊಡ್ಡದಿದೆ. ಬುಡಕಟ್ಟು ಜನಾಂಗದ ಜೀವನ ಪದ್ದತಿ, ಆರೋಗ್ಯಕರ ಚಿಂತನೆ ಕುರಿತು ಕೃತಿಯಲ್ಲಿದೆ. ಪ್ರಜಾಪ್ರಭುತ್ವದಲ್ಲಿ ಸತ್ಯವಿರಬೇಕು. ಕಾಡುಗೊಲ್ಲರಲ್ಲಿ ಸಾಂಸ್ಕøತಿಕ ಚಿಂತನೆಯಿದೆ. ವಿಚಾರ, ಮುಗ್ದತೆಯ ಪ್ರತಿರೂಪ, ಕಲ್ಮಶ ಗೊತ್ತಿಲ್ಲದ ಜನ. ಡಾ.ದೊಡ್ಡಮಲ್ಲಯ್ಯ ಪಶುವೈದ್ಯರಾಗಿದ್ದುಕೊಂಡೆ ಬರವಣಿಗೆಯಲ್ಲಿ ತೊಡಗಿಕೊಂಡಿರುವುದನ್ನು ನೋಡಿದರೆ ಅವರಲ್ಲಿ ಬರವಣಿಗೆ ಬಗ್ಗೆ ಆಸಕ್ತಿಯಿದೆ ಎನ್ನುವುದು ಗೊತ್ತಾಗುತ್ತದೆ ಎಂದರು.

ವ್ಯಾಟ್ಸಪ್ ಫೆಸ್ ಬುಕ್ ಮಾಯಲೋಕದಲ್ಲಿ ಪುಸ್ತಕ ಓದುವರ ಸಂಖ್ಯೆ ವಿರಳ: ಬಿ.ಟಿ.ಕುಮಾರಸ್ವಾಮಿ (Book release Chitradurga)

ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಕೃತಿಗಳನ್ನು ಬಿಡುಗಡೆಗೊಳಿಸಿ ಮಾತನಾಡುತ್ತ ವಾಟ್ಸ್‍ಪ್, ಫೇಸ್‍ಬುಕ್‍ಗಳ ಮಾಯಾಲೋಕದಲ್ಲಿ ಓದುವವರ ಸಂಖ್ಯೆ ಕಡಿಮೆಯಾಗುತ್ತಿದೆ. ಬರವಣಿಗೆ, ಸೃಜನಶೀಲತೆ ನಿಂತಿದೆ. ಕಂಪ್ಯೂಟರ್ ಯುಗದಲ್ಲಿ ಕೈಬರವಣಿಗೆಯೇ ಕಾಣೆಯಾಗಿರುವುದರಿಂದ ಕನ್ನಡಕ್ಕೆ ಸಾಹಿತ್ಯದ ಶಕ್ತಿಯನ್ನು ತುಂಬಬೇಕಾಗಿದೆ ಎಂದು ಹೇಳಿದರು.

ಬುಡಕಟ್ಟು ಜನಾಂಗದಲ್ಲಿ ಜನಿಸಿದ ಡಾ.ದೊಡ್ಡಮಲ್ಲಯ್ಯ ಸಾಹಿತ್ಯದಲ್ಲಿ ತೊಡಗಿಸಿಕೊಂಡಿರುವುದು ಹೆಮ್ಮೆಯ ಸಂಗತಿ. ಕಂಡುಂಡ ಕಥೆಗಳು ಹಾಗೂ ಮೂಕ ಲಹರಿ ಕೃತಿಗಳಲ್ಲಿ ಗ್ರಾಮೀಣ ಭಾಷೆಯಿರುವುದರಿಂದ ಸರಳವಾಗಿ ಅರ್ಥವಾಗುವಂತಿದೆ. ಅಲ್ಲಲ್ಲಿ ಹಾಸ್ಯವೂ ಇದೆ. ಮೂಕ ಪ್ರಾಣಿಗಳ ಸೇವೆ ಮಾಡುವುದರ ಜೊತೆಗೆ ಸಾಹಿತ್ಯದ ಸೇವೆಗೂ ಬದ್ದರಾಗಿರುವ ಡಾ.ದೊಡ್ಡಮಲ್ಲಯ್ಯನವರಿಂದ ಇನ್ನಷ್ಟು ಕೃತಿಗಳು ಹೊರಬರಲಿ ಎಂದು ಹಾರೈಸಿದರು.

ಪುಸ್ತಕಗಳನ್ನು ಶೋಕೇಸ್‍ಗಳಲ್ಲಿ ಇಡುವಂತಾಗಬಾರದು. ಓದಬೇಕು. ಕೃತಿ ಮತ್ತು ಸಾಹಿತ್ಯ ಪ್ರತಿಯೊಬ್ಬರ ಮನಸ್ಸಿಗೆ ಗಳೆಯನಿದ್ದಂತೆ. ಇಂದಿನ ದಿನಗಳಲ್ಲಿ ಕೃಷಿ, ಪಶುಪಾಲನೆ ವಿರಳವಾಗುತ್ತಿದೆ. ಕೃತಿಗಳನ್ನು ಓದಿದರೆ ಭಾಷೆ ಬಗ್ಗೆ ಗೌರವ ಮೂಡುತ್ತದೆ ಎಂದರು.

ಇದನ್ನೂ ಓದಿ: Renukaswamy: ರೇಣುಕಾಸ್ವಾಮಿ ಕುಟುಂಬ ಭೇಟಿ ಮಾಡಿ ಧೈರ್ಯ ತುಂಬಿದ ಉಮೇಶ್ ಕಾರಜೋಳ

ಆರೋಗ್ಯಕರ ಅಭಿರುಚಿ ಪ್ರಸ್ತುತ ಸಮಾಜಕ್ಕೆ ಅಗತ್ಯ: ಪ್ರೊ.ಬಿ.ಪಿ.ವೀರೇಂದ್ರಕುಮಾರ್ (Book release Chitradurga)

ವಿಶ್ರಾಂತ ಕನ್ನಡ ಪ್ರಾಧ್ಯಾಪಕ ಪ್ರೊ.ಬಿ.ಪಿ.ವೀರೇಂದ್ರಕುಮಾರ್ ಕಂಡುಂಡ ಕಥೆಗಳು ಕೃತಿ ಕುರಿತು ಮಾತನಾಡುತ್ತ ಆರೋಗ್ಯಕರ ಅಭಿರುಚಿ ಇಂದಿನ ಸಮಾಜಕ್ಕೆ ಬೇಕು. ಬರಹ, ಆಲೋಚನೆಗಳು ಸಮಾಜಕ್ಕೆ ಪೂರಕವಾಗಿರಬೇಕು. ಡಾ.ದೊಡ್ಡಮಲ್ಲಯ್ಯನವರು ಪಶುವೈದ್ಯರಾಗಿದ್ದುಕೊಂಡು ಅನೇಕ ಕೃತಿಗಳನ್ನು ರಚಿಸಿದ್ದಾರೆ.

ಕನ್ನಡ ಬರವಣಿಗೆಯಲ್ಲಿ ತೊಡಗುವವರು ತುಂಬಾ ಕಡಿಮೆಯಿರುವ ಪ್ರಸ್ತುತ ದಿನಮಾನಗಳಲ್ಲಿ ಇಂತಹ ಕೃತಿಗಳು ಹೊರಬರುತ್ತಿರುವುದು ಹೆಮ್ಮೆಯ ಸಂಗತಿ ಎಂದು ಶ್ಲಾಘಿಸಿದರು.

ನಿತ್ಯ ಜೀವನ ಹಾಗೂ ಸುತ್ತಮುತ್ತಲಿನ ಪರಿಸರ ನನ್ನನ್ನು ಬರವಣಿಗೆ ಕಡೆ ಸೆಳೆಯಿತು: ಡಾ.ದೊಡ್ಡಮಲ್ಲಯ್ಯ (Book release Chitradurga)

ಕೃತಿಕಾರ ಡಾ.ದೊಡ್ಡಮಲ್ಲಯ್ಯ ಪ್ರಾಸ್ತಾವಿಕವಾಗಿ ಮಾತನಾಡಿ ಓದು ನನ್ನ ಬರವಣಿಗೆಯಲ್ಲಿ ಆಸೆ, ಸಡಗರ, ಸಂಭ್ರಮವನ್ನು ಹುಟ್ಟಿಸುತ್ತಿತ್ತು. ಹಾಗಾಗಿಯೇ ನಾನು ಕೃತಿಗಳನ್ನು ಹೊರತರಲು ಪ್ರೇರಣೆಯಾಯಿತು. ಕೆಲವು ಜನ ಮೂಕ ಪ್ರಾಣಿಗಳಿಗಿಂತಲೂ ಕಡೆಯಾಗಿರುತ್ತಾರೆ. ಆದ್ದರಿಂದ ಮೂಕ ಪ್ರಾಣಿಗಳ ಸೇವೆ ಮಾಡುವುದರಲ್ಲಿ ನನಗೆ ತೃಪ್ತಿಯಿದೆ. ನಿತ್ಯ ಜೀವನ ಹಾಗೂ ಸುತ್ತಮುತ್ತಲಿನ ಪರಿಸರ ನನ್ನನ್ನು ಬರವಣಿಗೆ ಕಡೆ ಸೆಳೆಯಿತು. ಪರಿಸರದ ಅನುಭವ ಮೂಕ ಪ್ರಾಣಿಗಳ ಸೇವೆ, ಪ್ರಕೃತಿಯ ಅನೇಕ ರಹಸ್ಯ, ಸೂಕ್ಷ್ಮತೆಗಳ ಪಾಠ ನನ್ನ ತಂದೆಯಿಂದ ಕಲಿತೆ ಎಂದು ಸ್ಮರಿಸಿದರು.

ಇದನ್ನೂ ಓದಿ: Renukaswamy murder case accused Anukumar: ಅಮ್ಮನ ಕಣ್ಣಿರು ಒರೆಸಿದ ಆರೋಪಿ ಅನು | ತಂದೆ ಅಂತ್ಯ ಸಂಸ್ಕಾರ ಮುಗಿಸಿದ ಆರೋಪಿ ಅನುಕುಮಾರ್

ಅಭಿರುಚಿ ಸಹ ಸಂಚಾಲಕರು ಹಾಗೂ ಸಾಹಿತಿ ಸಿ.ಸೋಮಶೇಖರಯ್ಯ ಅಧ್ಯಕ್ಷತೆ ವಹಿಸಿದ್ದರು. (Book release Chitradurga)
ಸಾಹಿತಿ ಹಾಗೂ ಪತ್ರಕರ್ತ ಮಂಜುನಾಥ ಅದ್ದೆ, ಶಿವಮೊಗ್ಗ ಕನ್ನಡ ಪಶುವೈದ್ಯ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ.ಎಸ್.ಬಿ.ರವಿಕುಮಾರ್, ಕರ್ನಾಟಕ ಪಶುವೈದ್ಯಕೀಯ ಸಂಘದ ಜಿಲ್ಲಾಧ್ಯಕ್ಷ ಡಾ.ಎಸ್.ಕಲ್ಲಪ್ಪ, ಬೆಂಗಳೂರು ಮಹಾರಾಣಿ ಕಾಲೇಜಿನ ಸಮಾಜಶಾಸ್ತ್ರ ಪ್ರಾಧ್ಯಾಪಕ ಸಿ.ಜಿ.ಲಕ್ಷ್ಮಿಪತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್ ವೇದಿಕೆಯಲ್ಲಿದ್ದರು.
ಡಾ.ದೊಡ್ಡಮಲ್ಲಯ್ಯನವರ ಅಪಾರ ಅಭಿಮಾನಿಗಳು ಕೃತಿಗಳ ಲೋಕಾರ್ಪಣೆಯಲ್ಲಿ ಭಾಗವಹಿಸಿದ್ದರು.
ಗಂಗಾಧರ್ ಮತ್ತು ತಂಡದವರು ಪ್ರಾರ್ಥಿಸಿದರು. ಡಾ.ಅಭಿನವ ಡಿ.ಎಂ. ವಂದಿಸಿದರು. ಶ್ರೀಮತಿ ಜಯಾ ಪ್ರಾಣೇಶ್ ನಿರೂಪಿಸಿದರು.

You Might Also Like

Dina Bhavishya | ದಿನ ಭವಿಷ್ಯ, ಇವತ್ತು ಯಾವ ರಾಶಿಗೆ ಶುಭ?

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

TAGGED:Book ReleaseChitradurgaChitradurga NewsDoddamalayaKandunda KathesKannada Newskannada suddiMooka LahariNammajana.comTarasu Ranga MandirTwo works releaseಎರಡು ಕೃತಿಗಳ ಬಿಡುಗಡೆಕಂಡುಂಡ ಕಥೆಗಳುಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿತರಾಸು ರಂಗ ಮಂದಿರದೊಡ್ಡಮಲ್ಲಯ್ಯನಮ್ಮಜನ.ಕಾಂಪುಸ್ತಕ ಬಿಡುಗಡೆಮೂಕ ಲಹರಿ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Renukaswamy: ರೇಣುಕಾಸ್ವಾಮಿ ಕುಟುಂಬ ಭೇಟಿ ಮಾಡಿ ಧೈರ್ಯ ತುಂಬಿದ ಉಮೇಶ್ ಕಾರಜೋಳ
Next Article Today petrol diesel price in Chitradurga: ಕರ್ನಾಟಕದಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಹೆಚ್ಚಳ, ಚಿತ್ರದುರ್ಗದಲ್ಲಿ ಎಷ್ಟಿದೆ ರೇಟ್?
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?
ದಿನ ಭವಿಷ್ಯ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?