Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Kavadigara Hatti News: 3.07 ಕೋಟಿ ರೂ ವೆಚ್ಚದಲ್ಲಿ ಕವಾಡಿಗರ ಹಟ್ಟಿ ಅಭಿವೃದ್ದಿ: ರೇಣುಕಾ ಸ್ಪಷ್ಟನೆ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > Kavadigara Hatti News: 3.07 ಕೋಟಿ ರೂ ವೆಚ್ಚದಲ್ಲಿ ಕವಾಡಿಗರ ಹಟ್ಟಿ ಅಭಿವೃದ್ದಿ: ರೇಣುಕಾ ಸ್ಪಷ್ಟನೆ
ಇಂದಿನ ಸುದ್ದಿ

Kavadigara Hatti News: 3.07 ಕೋಟಿ ರೂ ವೆಚ್ಚದಲ್ಲಿ ಕವಾಡಿಗರ ಹಟ್ಟಿ ಅಭಿವೃದ್ದಿ: ರೇಣುಕಾ ಸ್ಪಷ್ಟನೆ

Editor Nammajana
Last updated: 18 June 2024 11:30 AM
By Editor Nammajana 2 Min Read
Share
SHARE
Telegram Group Join Now
WhatsApp Group Join Now

Chitradurga news|nammajana.com|18-6-2024

ನಮ್ಮಜನ.ಕಾಂ, ಚಿತ್ರದುರ್ಗ: ನಗರದ ಹೊರ ವಲಯದಲ್ಲಿರುವ ಕವಾಡಿಗರ ಹಟ್ಟಿಯ (Kavadigara Hatti News) ವಿವಿಧ ಅಭಿವೃದ್ಧಿ ಕಾಮಗಾರಿಗಳು ಚಾಲನೆಯಲ್ಲಿದ್ದು, ತ್ವರಿತ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ನಗರಸಭೆ ಪೌರಾಯುಕ್ತೆ ರೇಣುಕಾ ಅವರು ತಿಳಿಸಿದ್ದಾರೆ.

ಕಳೆದ ವರ್ಷ ಕವಾಡಿಗರ ಹಟ್ಟಿಯಲ್ಲಿ (Kavadigara Hatti News) ಕುಡಿಯುವ ನೀರಿನ ಕಾರಣದಿಂದ ಜರುಗಿದ ಅಹಿತಕರ ಘಟನೆಯ ಬಳಿಕ ಕವಾಡಿಗರ ಹಟ್ಟಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯವರಿಗೆ ಸರ್ಕಾರ 3.07 ಕೋಟಿ ರೂ. ಒದಗಿಸಿ ಕಾಮಗಾರಿಗಳಿಗೆ ಅನುಮೋದನೆ ನೀಡಿದೆ. ಮಂಡಳಿಯ ಕಾರ್ಯಪಾಲಕ ಅಭಿಯಂತರರು ಒಂದು ತಿಂಗಳ ಒಳಗಾಗಿ ಎಲ್ಲ ಕಾಮಗಾರಿಗಳು ಪೂರ್ಣಗೊಳಿಸುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: chitradurga Today latest news: ರೇಣುಕಾಸ್ವಾಮಿ ಕುಟುಂಬಕ್ಕೆ ಬಿಜೆಪಿ ಪಕ್ಷದಿಂದ 2 ಲಕ್ಷ ಪರಿಹಾರ | ಬಿ.ವೈ.ವಿಜಯೇಂದ್

ಕವಾಡಿಗರ ಹಟ್ಟಿಯಲ್ಲಿ ಮೂಲಭೂತ ಸೌಕರ್ಯಗಳನ್ನು ಕೈಗೊಳ್ಳುವ ಕಾಮಗಾರಿಗೆ ಈಗಾಗಲೆ ಅನುಮೋದನೆ ದೊರೆತಿದ್ದು, ಲೋಕಸಭಾ ಚುನಾವಣೆ ನೀತಿ ಸಂಹಿತೆ ಕಾರಣದಿಂದಾಗಿ ವಿಳಂಬವಾಗಿರುತ್ತದೆ.

ಇಲ್ಲಿನ ಎ.ಕೆ. ಕಾಲೋನಿಯಲ್ಲಿ ಸದ್ಯ ಒಳಚರಂಡಿ ಸಂಪರ್ಕ ಇಲ್ಲದಿರುವ ಮನೆಗಳಿಗೆ 20 ಲಕ್ಷ ರೂ. ವೆಚ್ಚದಲ್ಲಿ ಸಂಪರ್ಕ ಕಲ್ಪಿಸುವ ಕಾಮಗಾರಿ, ತೆರೆದ ಚರಂಡಿಗಳನ್ನು 25 ಲಕ್ಷ ರೂ. ವೆಚ್ಚದಲ್ಲಿ ಭಾಗಶಃ ಪುನರ್ ನಿರ್ಮಿಸಿ ಭಾಗಶಃ ಹಾಳಾಗಿರುವೆಡೆ ಸರಿಪಡಿಸುವುದು ಮತ್ತು ಪುನರ್ ನಿರ್ಮಿಸುವುದು ಹಾಗೂ 38 ಲಕ್ಷ ರೂ. ವೆಚ್ಚದಲ್ಲಿ 60 ಆಸನಗಳ ಸಾಮೂಹಿಕ ಶೌಚಾಲಯ ನಿರ್ಮಾಣ ಮತ್ತು ನೀರಿನ ಸಂಪರ್ಕ, ಒಳಚರಂಡಿ ಹಾಗೂ ವಿದ್ಯುತ್ ಸಂಪರ್ಕ ಕಲ್ಪಿಸುವ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ ನಡೆದಿದೆ.

ಕವಾಡಿಗರ ಹಟ್ಟಿ (Kavadigara Hatti News) ಬಳಿ ರಸ್ತೆ ಅಗಲೀಕರಣದಿಂದ ತೊಂದರೆಗೊಳಗಾಗುವ 59 ಮನೆಗಳ ಪಟ್ಟಿಯನ್ನು ಸಿದ್ಧಪಡಿಸಿದ್ದು, ನಗರಸಭೆಯಿಂದ ಖರೀದಿಸಿರುವ 03 ಎಕರೆ ಪ್ರದೇಶದಲ್ಲಿ ಇವರಿಗೆ ನಿವೇಶನ ಹಂಚಲು ತೀರ್ಮಾಣಿಸಲಾಗಿದೆ. ಈಗಾಗಲೆ ನಗರಾಭಿವೃದ್ಧಿ ಪ್ರಾಧಿಕಾರದಿಂದ ಲೇಔಟ್ ನಕ್ಷೆ ಅನುಮೋದನೆ ಪಡೆದು, ರಸ್ತೆ ಮತ್ತು ಚರಂಡಿ ಮಾಡಿ ನಿವೇಶನ ಗುರುತಿಸಲಾಗಿದೆ.

ಬರುವ ದಿನಗಳಲ್ಲಿ ಶಾಸಕರ ಅಧ್ಯಕ್ಷತೆಯಲ್ಲಿನ ಆಶ್ರಯ ಸಮಿತಿ ಸಭೆಯಲ್ಲಿ ಅನುಮೋದನೆ ಪಡೆದು ಹಕ್ಕುಪತ್ತ ನೀಡಲು ಕ್ರಮ ವಹಿಸಲಾಗಿದೆ. ಕವಾಡಿಗರ ಹಟ್ಟಿಯಲ್ಲಿ ಈಗಾಗಲೆ ಗ್ರಾಮೀಣ ನೀರು ಸರಬರಾಜು ಮಂಡಳಿಯಿಂದ ಶುದ್ಧ ಕುಡಿಯುವ ನೀರಿನ ಘಟಕವನ್ನು ನಿರ್ಮಿಸಿದ್ದು, ಕಾರ್ಯ ನಿರ್ವಹಿಸುತ್ತಿದೆ.

ಇದನ್ನೂ ಓದಿ: Physiotherapy: ಫಿಜಿಯೋಥೆರಪಿಸ್ಟ್ ನೇಮಕಾತಿಗೆ ಅರ್ಜಿ

ಕವಾಡಿಗರ ಹಟ್ಟಿ (Kavadigara Hatti News) ಪ್ರದೇಶಕ್ಕೆ ಸರಬರಾಜು ಮಾಡುವ ನೀರನ್ನು ನಿಯಮಿತವಾಗಿ ಪರೀಕ್ಷೆ ಒಳಪಡಿಸಲಾಗುತ್ತಿದ್ದು, ಕಳೆದ ಜೂ. 07 ರಂದು ಕೈಗೊಂಡ ಪರೀಕ್ಷೆಯಲ್ಲಿ ಇಲ್ಲಿನ ಕುಡಿಯುವ ನೀರು ಯೋಗ್ಯವಾಗಿದೆ ಎಂಬ ವರದಿ ಬಂದಿದೆ. ಹಟ್ಟಿಯ ಸ್ವಚ್ಛತೆಗೆ ಸಂಬಂಧಿಸಿದಂತೆ ಈಗಾಗಲೆ ಚರಂಡಿ ಮತ್ತು ರಸ್ತೆಗಳನ್ನು ವಾರಕ್ಕೆ ಎರಡು ಬಾರಿ ಸ್ವಚ್ಛಗೊಳಿಸಲಾಗುತ್ತಿದ್ದು, ಜನರು ಕಸವನ್ನು ಎಲ್ಲೆಂದರಲ್ಲಿ ಸುರಿಯದೆ, ನಗರಸಭೆಯ ವಾಹನಗಳಿಗೇ ನೀಡಬೇಕೆಂದು ಇಲ್ಲಿನ ಜನರಲ್ಲಿ ಅರಿವು ಮೂಡಿಸಲಾಗತ್ತಿದೆ. ಕವಾಡಿಗರ ಹಟ್ಟಿಯ ಸ್ವಚ್ಛತೆಗೆ ಜನರ ಸಹಕಾರವೂ ಅಗತ್ಯವಾಗಿದೆ ಎಂದು ನಗರಸಭೆ ಪೌರಾಯುಕ್ತೆ ರೇಣುಕಾ ಅವರು ತಿಳಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ನಮ್ಮಜನ.ಕಾಂ gmail:  nammajananews@gmail.com

» Whatsapp Number-9686622252

You Might Also Like

Bhadra: ಭದ್ರಾ ಜಲಾಶಯಕ್ಕೆ ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ಬಾಗಿನ ಸಮರ್ಪಣೆ

Nikhil Kumaswamy: ಮಾಜಿ ಸಂಸದ ಪ್ರಜ್ವಲ್ ಜೀವಾವಧಿ ಶಿಕ್ಷೆ ಬಗ್ಗೆ ನಿಖಿಲ್ ಕುಮಾರಸ್ವಾಮಿ ಹೇಳಿದ್ದೇನು?

ಗಣಿಬಾಧಿತ ಹಳ್ಳಿಗಳಲ್ಲಿ ವಸತಿ, ನಿವೇಶನ ರಹಿತ ಫಲಾನುಭವಿಗಳ ಆಯ್ಕೆ : ಗ್ರಾಮ ಸಭೆ ನಡೆಸಲು ದಿನಾಂಕ ನಿಗದಿ | HOLALKERE

HIRIYUR | ಕುಡಿಯುವ ನೀರಿಗಾಗಿ ಶಾಲಾ ಮಕ್ಕಳು ಪ್ರತಿಭಟನೆ

Dina Bhavishya | ದಿನ ಭವಿಷ್ಯ | ಇಂದು ಯಾವ ರಾಶಿಗೆ ಶುಭಯೋಗ

TAGGED:3.07 crore cost3.07 ಕೋಟಿ ವೆಚ್ಚChitradurgaChitradurga NewsDevelopmentKannada Newskannada suddiKavadigara HattiNammajana.comRenukaಅಭಿವೃದ್ಧಿಕನ್ನಡ ನ್ಯೂಸ್ಕನ್ನಡ ಸುದ್ದಿಕಾವಾಡಿಗರ ಹಟ್ಟಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂರೇಣುಕಾ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy1
Sleepy0
Angry0
Dead0
Wink0
Previous Article chitradurga Today latest news: ರೇಣುಕಾಸ್ವಾಮಿ ಕುಟುಂಬಕ್ಕೆ ಬಿಜೆಪಿ ಪಕ್ಷದಿಂದ 2 ಲಕ್ಷ ಪರಿಹಾರ | ಬಿ.ವೈ.ವಿಜಯೇಂದ್ರ
Next Article Jana Spandana Chitradurga: ಜೂ.19 ರಂದು ಚಿಕ್ಕಾಲಗಟ್ಟ ಗ್ರಾಮದಲ್ಲಿ ಜನಸ್ಪಂದನ ಕಾರ್ಯಕ್ರಮ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

internal reservation: ಒಳಮೀಸಲಾತಿ ಜಾರಿ ಖಚಿತ : ಮಾಜಿ ಸಚಿವ ಎಚ್.ಆಂಜನೇಯ
ಇಂದಿನ ಸುದ್ದಿ
creative activities: ಪಠ್ಯದ ಜತೆಗೆ ಸೃಜನಶೀಲ ಚಟುವಟಿಕೆಗಳಲ್ಲಿಯೂ ಪಾಲ್ಗೊಳ್ಳಿ: ಬಿ.ವಿ.ತುಕಾರಾಂರಾವ್
ಇಂದಿನ ಸುದ್ದಿ
Akka Cafe: ಜಿಲ್ಲಾ ಪಂಚಾಯತ್ ಆವರಣದಲ್ಲಿ ಅಕ್ಕ ಕೆಫೆ ಪ್ರಾರಂಭ
ಇಂದಿನ ಸುದ್ದಿ
mining: ಗಣಿ ಮಾಫಿಯ ನಿಲ್ಲಿಸಿ ಪರಿಸರ ರಕ್ಷಿಸಿ | ಆ.16ರಂದು ಬಳ್ಳಾರಿಯಲ್ಲಿ ರಾಜ್ಯ ಸಮಾವೇಶ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?