Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಬೆಂಗಳೂರು ಕಟ್ಟಿದ ನಾಡಪ್ರಭು ಕೆಂಪೇಗೌಡರು ವಿಶ್ವಖ್ಯಾತಿ: ಶಾಸಕ ರಘುಮೂರ್ತಿ ಬಣ್ಣನೆ |Nadaprabhu Kempegowda Jayanti challakere
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಬೆಂಗಳೂರು ಕಟ್ಟಿದ ನಾಡಪ್ರಭು ಕೆಂಪೇಗೌಡರು ವಿಶ್ವಖ್ಯಾತಿ: ಶಾಸಕ ರಘುಮೂರ್ತಿ ಬಣ್ಣನೆ |Nadaprabhu Kempegowda Jayanti challakere
ಇಂದಿನ ಸುದ್ದಿ

ಬೆಂಗಳೂರು ಕಟ್ಟಿದ ನಾಡಪ್ರಭು ಕೆಂಪೇಗೌಡರು ವಿಶ್ವಖ್ಯಾತಿ: ಶಾಸಕ ರಘುಮೂರ್ತಿ ಬಣ್ಣನೆ |Nadaprabhu Kempegowda Jayanti challakere

Editor Nammajana
Last updated: 27 June 2024 16:08
By Editor Nammajana 2 Min Read
Share
SHARE

Chitradurga news|nammajana.com|27-6-2024

ನಮ್ಮಜನ.ಕಾಂ, ಚಳ್ಳಕೆರೆ: ವಿಶ್ವಮಟ್ಟದಲ್ಲಿ ಖ್ಯಾತಿಯಾದ ಬೆಂಗಳೂರು ನಗರ ಇಂದು ಹಲವಾರು ಐತಿಹಾಸಿಕ ಘಟನೆಗೆ ಸಾಕ್ಷಿಯಾಗಿದೆ. ಕರ್ನಾಟಕ ಬೆಂಗಳೂರು ಎಂದರೆ ಪ್ರತಿಯೊಬ್ಬ ವ್ಯಕ್ತಿಯೂ ಇಷ್ಟಪಡುವ ಮಹಾನ್ ನಗರವಾಗಿದೆ. ನಾಡಪ್ರಭುಕೆಂಪೇಗೌಡರ (Nadaprabhu Kempegowda Jayanti challakere)  ಚಿಂತನೆಗಳನ್ನು ಎಲ್ಲರೂ ಅಳವಡಿಸಿಕೊಂಡು ಮುನ್ನಡೆಯಬೇಕೆಂದು ಕ್ಷೇತ್ರದ ಶಾಸಕ ಕರ್ನಾಟಕ ರಾಜ್ಯ ಸಣ್ಣಕೈಗಾರಿಕೆ ಮಂಡಳಿ ಅಧ್ಯಕ್ಷ ಟಿ.ರಘುಮೂರ್ತಿ ತಿಳಿಸಿದರು.

ಅವರು, ಗುರುವಾರ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲ್ಲೂಕು ಒಕ್ಕಲಿಗರ ಸಂಘ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ನಾಡಪ್ರಭು ಕೆಂಪೇಗೌಡರ ೫೧೫ನೇ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಚಳ್ಳಕೆರೆ ತಾಲ್ಲೂಕು ಸೇರಿದಂತೆ ರಾಜ್ಯವ್ಯಾಪ್ತಿಯಲ್ಲಿ ಹೆಚ್ಚಿನ ಸಂಖ್ಯೆಯನ್ನು ಹೊಂದಿರುವ ಒಕ್ಕಲಿಗರ ಸಮುದಾಯ ಎಲ್ಲಾ ಜನಾಂಗದ ಗೌರವಕ್ಕೆ ಪಾತ್ರವಾಗಿದೆ. ನಾಡಪ್ರಭು ಕೆಂಪೇಗೌಡರು ಅಚಲವಾದ ದೃಢನಿರ್ಧಾರ ಕೆಲಸವನ್ನು ಮಾಡಲೇಬೇಕೆಂಬ ಸಂಕಲ್ಪ ಎಲ್ಲರಿಗೂ ಮಾದರಿಯಾಗಿದೆ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ತಹಶೀಲ್ದಾರ್ ರೇಹಾನ್‌ಪಾಷ, ಬೆಂಗಳೂರು ನಿರ್ಮಾಣದ ಕರ್ತೃ ನಾಡಪ್ರಭುಕೆಂಪೇಗೌಡರ ಸ್ಮರಣೆ ನಮ್ಮಲ್ಲರಿಗೂ ಸ್ಪೂರ್ತಿದಾಯಕ. ಹಲವಾರು ಸಮಸ್ಯೆಗಳ ನಡುವೆಯೂ ಅವರು ಪ್ರಾಮಾಣಿಕವಾಗಿ ಮಾಡಿದ ಸೇವೆಯನ್ನು ನಾವೆಲ್ಲರೂ ನಿತ್ಯ ನೆನಪಿಸಿಕೊಳ್ಳಬೇಕು, ಕೆಂಪೇಗೌಡರು (Nadaprabhu Kempegowda Jayanti challakere) ಎಲ್ಲರಿಗೂ ಆದರ್ಶಪ್ರಾಯರು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಚನ್ನಕೇಶವ ಮಾತನಾಡಿ, ಬೆಂಗಳೂರಿನ ಅಭಿವೃದ್ದಿಯನ್ನು ನಾಡೇ ಮೆಚ್ಚುವಂತೆ ಮಾಡಿದ ಕೆಂಪೇಗೌಡರ ಆದರ್ಶಗಳು ಶಾಸಕ ಟಿ.ರಘುಮೂರ್ತಿಯವರು ಮೈಗೂಡಿಸಿಕೊಂಡಿದ್ಧಾರೆ ಎಂದರೆ ತಪ್ಪಲ್ಲ. ಕಾರಣ, ಚಳ್ಳಕೆರೆ ಕ್ಷೇತ್ರದ ಅಭಿವೃದ್ದಿಗೆ ಹೆಚ್ಚು ಶ್ರಮಿಸಿದ ಶಾಸಕರನ್ನು ಚಳ್ಳಕೆರೆಯ ಕೆಂಪೇಗೌಡ ಎಂದರು.

ಇದನ್ನೂ ಓದಿ: ಈಡೀಸ್ ಲಾರ್ವಾ ಸಮೀಕ್ಷೆ | ಸ್ವಯಂ ಸೇವಕರ ಆಯ್ಕೆ | ಮೊದಲ ಬಂದವರಿಗೆ ಆದ್ಯತೆ| Aedes larvae sarvey

ಕೆಂಪೇಗೌಡರ (Nadaprabhu Kempegowda Jayanti challakere)  ಸುಧೀರ್ಘ ಜೀವನ, ಸಾಧನೆಯ ಬಗ್ಗೆ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಎಂ.ರವೀಶ್ ಉಪನ್ಯಾಸ ನೀಡಿದರು. ಒಕ್ಕಲಿಗರ ಸಂಘದ ಗೌರವಾಧ್ಯಕ್ಷ ಎಚ್.ಆನಂದಪ್ಪ, ವಕೀಲ ಹನುಮಂತರಾಯ, ಬೆಳಗೆರೆ ಚಂದ್ರಪ್ಪ ಮುಂತಾದವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ನಗರಸಭಾ ಸದಸ್ಯರಾದ ಕೆ.ವೀರಭದ್ರಪ್ಪ, ರಮೇಶ್‌ಗೌಡ, ಸುಮಕ್ಕ, ಕವಿತಾ, ಎಂ.ಜೆ.ರಾಘವೇಂದ್ರ, ನಾಮಿನಿ ಸದಸ್ಯರಾದ ಬಡಗಿಪಾಪಣ್ಣ, ನೇತಾಜಿಪ್ರಸನ್ನ, ಅನ್ವರ್‌ಮಾಸ್ಟರ್, ವೀರಭದ್ರಪ್ಪ, ಕೆಡಿಪಿ ಸದಸ್ಯ ಸುರೇಶ್‌ಕುಮಾರ್, ಕೃಷ್ಣಮೂರ್ತಿ, ಪ್ರಹ್ಲಾದ್, ಷಣ್ಮುಖಪ್ಪ, ವೀರೇಶ್, ನಾಗೇಂದ್ರಪ್ಪ ಮುಂತಾದವರು ಉಪಸ್ಥಿತರಿದ್ದರು.

You Might Also Like

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

TAGGED:BangaloreChallakereChitradurga NewsJayantiKannada Newskannada suddiKempegowdaKempegowda JayantiMLANadaprabhuNammajana.comT Raghumurthyಕನ್ನಡ ನ್ಯೂಸ್ಕನ್ನಡ ಸುದ್ದಿಕೆಂಪೇಗೌಡಕೆಂಪೇಗೌಡ ಜಯಂತಿಕೆಂಪೇಗೌಡರುಚಳ್ಳಕೆರೆಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಜಯಂತಿಟಿ ರಘುಮೂರ್ತಿನಮ್ಮಜನ.ಕಾಂನಾಡಪ್ರಭುಬೆಂಗಳೂರುಶಾಸಕರು
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ಈಡೀಸ್ ಲಾರ್ವಾ ಸಮೀಕ್ಷೆ | ಸ್ವಯಂ ಸೇವಕರ ಆಯ್ಕೆ | ಮೊದಲ ಬಂದವರಿಗೆ ಆದ್ಯತೆ| Aedes larvae sarvey
Next Article ಬೆಲಗೂರು ಮಹಾಲಕ್ಷ್ಮಿ ಅಮ್ಮನವರಿಗೆ 650 ಗ್ರಾಂ ನವರತ್ನ ಖಚಿತ ಸ್ವರ್ಣ‌ ಕಿರೀಟಧಾರಣೆ | Belguru Mahalakshmi Amma Keerita Dharana
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?
ದಿನ ಭವಿಷ್ಯ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?