Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಕಚೇರಿ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ | District Bal Bhavan
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಕಚೇರಿ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ | District Bal Bhavan
ಇಂದಿನ ಸುದ್ದಿ

ಕಚೇರಿ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ | District Bal Bhavan

Editor Nammajana
Last updated: 29 June 2024 13:24
By Editor Nammajana 2 Min Read
Share
SHARE

Chitradurga news|nammajana.com|29-6-2024

ನಮ್ಮಜನ.ಕಾಂ, ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಬಾಲಭವನದಲ್ಲಿ ಖಾಲಿ ಇರುವ ಕಚೇರಿ ಸಹಾಯಕರನ್ನು (District Bal Bhavan) ಸಂಚಿತ ವೇತನದ (ಗೌರವಧನ) ಆಧಾರದ ಮೇಲೆ ತಾತ್ಕಾಲಿಕವಾಗಿ ಆಯ್ಕೆ ಮಾಡಿಕೊಳ್ಳಲು ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜುಲೈ 1 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಲಿದ್ದು, ಜುಲೈ 30 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಜಿಲ್ಲಾ ಬಾಲಭವನ ಕಚೇರಿಯಲ್ಲಿ ಕಛೇರಿ ಸಹಾಯಕರು-1 ಹುದ್ದೆ ಖಾಲಿ ಇದ್ದು, ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕನಿಷ್ಠ ಪಿ.ಯು.ಸಿ ಮತ್ತು ಮೇಲ್ಪಟ್ಟ ವಿದ್ಯಾರ್ಹತೆಯೊಂದಿಗೆ (District Bal Bhavan)  ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಹೆಯಾನ ಗೌರವಧನ ರೂ.10,000/- ನೀಡಲಾಗುವುದು. ಅರ್ಜಿಗಳನ್ನು ಜುಲೈ 30 ರಂದು ಸಂಜೆ 5 ಗಂಟೆಯ ಒಳಗಾಗಿ ಜಿಲ್ಲಾ ಬಾಲಭವನ ಕಚೇರಿಗೆ ಸಲ್ಲಿಸಬೇಕು. ನಂತರ ಬಂದಂತಹ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.

ಷರತ್ತು:(District Bal Bhavan)

ಗಣಕಯಂತ್ರದಲ್ಲಿ ಎಂಎಸ್ ಆಫೀಸ್ ಹಾಗೂ ಕನ್ನಡ ಮತ್ತು ಇಂಗ್ಲೀಷ್ ಭಾಷೆಯಲ್ಲಿ ಪರಿಣಿತಿ ಹೊಂದಿರಬೇಕು. ಸರ್ಕಾರಿ ಅಥವಾ ಸ್ವಯಂ ಸೇವಾ ಸಂಸ್ಥೆಗಳಲ್ಲಿ ಕನಿಷ್ಠ 3 ವರ್ಷದ ಅನುಭವ ಹೊಂದಿರಬೇಕು. ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಯು 18 ರಿಂದ 45 ವರ್ಷ ವಯೋಮಿತಿ ಹೊಂದಿರಬೇಕು. ನೇಮಕಗೊಂಡ ಅಭ್ಯರ್ಥಿಯು ಕಾಲ ಕಾಲಕ್ಕೆ ರಾಜ್ಯ ಬಾಲಭವನ ಸೊಸೈಟಿಯ ಕಾರ್ಯದರ್ಶಿಗಳು ನೀಡುವ ಸೂಚನೆ, ಮಾರ್ಗದರ್ಶನಗಳಂತೆ ಕಾರ್ಯನಿರ್ವಹಿಸಬೇಕು.

ಈ ಹುದ್ದೆಯು ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿದ್ದು, ತಮ್ಮ ಸೇವೆಯು ತೃಪ್ತಿಕರವಾಗಿಲ್ಲವೆಂದು ಕಂಡುಬಂದಲ್ಲಿ ಯಾವುದೇ ಮುನ್ನೆಚ್ಚರಿಕೆ ಅಥವಾ ನೋಟೀಸ್ ನೀಡದೆ ತೆಗೆದು ಹಾಕುವ ಅಧಿಕಾರ ಜಿಲ್ಲಾಮಟ್ಟದ ಸಮಿತಿಗೆ ಇರುತ್ತದೆ. ಈ ಹುದ್ದೆಯು 11 ತಿಂಗಳಿಗೆ ಮಾತ್ರ ಚಾಲ್ತಿಯಲ್ಲಿರುತ್ತದೆ. ಅರ್ಜಿಯೊಂದಿಗೆ ಅಗತ್ಯ ದೃಢೀಕರಣ ಪತ್ರಗಳೊಂದಿಗೆ ಮುಚ್ಚಿದ ಲಕೋಟೆಯಲ್ಲಿ ಮುದ್ದಾಂ ಸಲ್ಲಿಸಬೇಕು.

ಇದನ್ನೂ ಓದಿ: ಚಳ್ಳಕೆರೆ ನಗರಸಭೆ ಸ್ಥಾನಕ್ಕೆ ಕೆ.ಸಿ.ನಾಗರಾಜ್ ರಾಜೀನಾಮೆ | KC Nagaraj Resignation

ಜಿಲ್ಲೆಯ ಅಭ್ಯರ್ಥಿಗಳಿಗೆ ಮಾತ್ರ ಅವಕಾಶ ಕಲ್ಪಿಸಿದ್ದು, ಆಯ್ಕೆಯಾದ ಅಭ್ಯರ್ಥಿಯು ಕೇಂದ್ರ ಸ್ಥಾನದಲ್ಲಿ ವಾಸಿಸುವುದು (District Bal Bhavan)  ಕಡ್ಡಾಯವಾಗಿದೆ. ಅರ್ಜಿ ಸಲ್ಲಿಸುವವರು ನಿಗಧಿತ ವಿದ್ಯಾರ್ಹತೆಯನ್ನು ಕಡ್ಡಾಯವಾಗಿ ಹೊಂದಿರಬೇಕು. ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯ ಮೂಲಕ ಆಯ್ಕೆ ಮಾಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ನಗರದ ವೀರವನಿತೆ ಓಬವ್ವ ಕ್ರೀಡಾಂಗಣ ಹತ್ತಿರದ, ಜಿಲ್ಲಾ ಬಾಲಭವನ ಕಾರ್ಯಾಲಯದಲ್ಲಿ (District Bal Bhavan) ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕರ ಕಚೇರಿ ದೂರವಾಣಿ ಸಂಖ್ಯೆ 08194-235259, ಮೊಬೈಲ್ ನಂಬರ್ 7259551325 ಗೆ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್ ತಿಳಿಸಿದ್ದಾರೆ.

You Might Also Like

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

TAGGED:Application InvitationChitradurgaChitradurga District Child BhavanChitradurga NewsComputerDistrict BalabhavanKannada Newskannada suddiNammajana.comOffice AssistantOffice Assistant VacancyPUCಅರ್ಜಿ ಆಹ್ವಾನಕಚೇರಿ ಸಹಾಯಕಕಚೇರಿ ಸಹಾಯಕ ಹುದ್ದೆಕನ್ನಡ ನ್ಯೂಸ್ಕನ್ನಡ ಸುದ್ದಿಕಂಪ್ಯೂಟರ್ಚಿತ್ರದುರ್ಗಚಿತ್ರದುರ್ಗ ಜಿಲ್ಲಾ ಬಾಲ ಭವನಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಜಿಲ್ಲಾ ಬಾಲಭವನನಮ್ಮಜನ.ಕಾಂಪಿಯುಸಿ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article 29 ಜೂನ್ 2024 | ಚನ್ನಗಿರಿ | ಎಲ್ಲೆಲ್ಲಿ ಎಷ್ಟಿದೆ ಅಡಿಕೆ ಧಾರಣೆ? | Adike Rate channagiri
Next Article ಚಳ್ಳಕೆರೆ ಕ್ರೀಡಾ ಕ್ಷೇತ್ರಕ್ಕೆ ಎಚ್.ತಿಪ್ಪೇಸ್ವಾಮಿ ಕೊಡುಗೆ ಅನನ್ಯ: ಟಿ.ರಘುಮೂರ್ತಿ ಪ್ರಶಂಸೆ | sports field
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?