Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಭದ್ರಾ ಮೇಲ್ದಂಡೆ, ನೇರ ರೈಲ್ವೆ ಯೋಜನೆ ಕಾಮಗಾರಿ ತ್ವರಿತವಾಗಿ: ಸಚಿವ ಡಿ.ಸುಧಾಕರ್ | Bhadra Upper Bank
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಭದ್ರಾ ಮೇಲ್ದಂಡೆ, ನೇರ ರೈಲ್ವೆ ಯೋಜನೆ ಕಾಮಗಾರಿ ತ್ವರಿತವಾಗಿ: ಸಚಿವ ಡಿ.ಸುಧಾಕರ್ | Bhadra Upper Bank
ಇಂದಿನ ಸುದ್ದಿ

ಭದ್ರಾ ಮೇಲ್ದಂಡೆ, ನೇರ ರೈಲ್ವೆ ಯೋಜನೆ ಕಾಮಗಾರಿ ತ್ವರಿತವಾಗಿ: ಸಚಿವ ಡಿ.ಸುಧಾಕರ್ | Bhadra Upper Bank

Editor Nammajana
Last updated: 1 July 2024 16:40
By Editor Nammajana 2 Min Read
Share
SHARE
Chitradurga news|nammajana.com|1-7-2024
ನಮ್ಮಜನ.ಕಾಂ, ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆ ಹಾಗೂ ದಾವಣಗೆರೆ-ತುಮಕೂರು ನೇರ ರೈಲ್ವೆ ಯೋಜನೆ ಕಾಮಗಾರಿಗಳನ್ನು (Bhadra Upper Bank) ತ್ವರಿತವಾಗಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು ಎಂದು ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಸೂಚನೆ ನೀಡಿದರು.
ಹಿರಿಯೂರು ನಗರಸಭೆ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಭದ್ರಾ ಮೇಲ್ದಂಡೆ ಯೋಜನೆ, ನೇರ ರೈಲ್ವೆ ಯೋಜನೆ (Bhadra Upper Bank) ಹಾಗೂ ಕೆಐಡಿಬಿ ಇಲಾಖೆಗಳ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.
ಭದ್ರಾ ಮೇಲ್ದಂಡೆ ಯೋಜನೆ, ನೇರ ರೈಲ್ವೆ ಯೋಜನೆ, ಕೈಗಾರಿಕಾ ಕಾರಿಡಾರ್ ಯೋಜನೆಗಳನ್ನು (Bhadra Upper Bank) ನಿಗಧಿತ ಸಮಯದೊಳಗೆ ಪೂರ್ಣಗೊಳಿಸಬೇಕು. ಚುನಾವಣಾ ನೀತಿ ಸಂಹಿತೆಯಿಂದಾಗಿ ಯೋಜನೆ ಕಾಮಗಾರಿಗಳು ಮಂದಗತಿಯಾಗಿದ್ದು, ಇದೀಗ ಯೋಜನೆಗಳ ಪೂರ್ಣಗೊಳಿಸಲು ವೇಗ ನೀಡಲಾಗುವುದು ಎಂದರು.
ಬೋರನಕಣಿವೆ ಜಲಾಶಯದ ವಿವರ ಪರಿಶೀಲಿಸಿ ಹೆಚ್ಚಿನ ನೀರಿನ ಅಲೋಕೇಶನ್ ತಂದು ಅಲ್ಲಿಂದ ಗಾಯಿತ್ರಿ (Bhadra Upper Bank) ಜಲಾಶಯಕ್ಕೆ ತರಲು ಕ್ರಮವಹಿಸಲಾಗುವುದು. ಹೊಸಹಳ್ಳಿ ಬ್ಯಾರೇಜ್‍ನ ವಿದ್ಯುತ್ ಸಮಸ್ಯೆಯನ್ನು ಆ ಭಾಗದ ರೈತರೊಂದಿಗೆ ಚರ್ಚಿಸಿ ಶೀಘ್ರ ಬಗೆಹರಿಸಿ ಬಹುದೊಡ್ಡ ಈ ಯೋಜನೆಗಳನ್ನು ಆದಷ್ಟು ಶೀಘ್ರವಾಗಿ ಪೂರ್ಣಗೊಳಿಸಿ, ಸಾರ್ವಜನಿಕರ ಉಪಯೋಗಕ್ಕೆ ನೀಡಬೇಕಿದೆ ಎಂದರು.
ಇದನ್ನೂ ಓದಿ: ADIKE RATE |1 ಜುಲೈ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ಧಾರಣೆ
ಕೆಐಡಿಬಿ ಅಧಿಕಾರಿ ಲಕ್ಷ್ಮೀಶ್ ಮಾತನಾಡಿ ಮೇಟಿಕುರ್ಕೆ ಕೈಗಾರಿಕಾ ಕಾರಿಡಾರ್ ಯೋಜನೆಯ 1156 ಎಕರೆ ಪ್ರದೇಶದಲ್ಲಿ 920 ಎಕರೆ ಪ್ರದೇಶದ ರೈತರಿಗೆ ಪರಿಹಾರ ನೀಡಲಾಗಿದೆ. ಇನ್ನೂ 336 ಎಕರೆಗೆ ಪರಿಹಾರ ಕೊಡಬೇಕು. ಇಲ್ಲಿಯವರೆಗೆ ರೂ.380 ಕೋಟಿ ಬಿಡುಗಡೆ ಮಾಡಿದೆ. ಅದರಲ್ಲಿ ರೂ.312 ಕೋಟಿ ಪರಿಹಾರ ನೀಡಲಾಗಿದೆ.
ಮೇಟಿಕುರ್ಕೆ ಕರಿಯೋಬನಹಳ್ಳಿಯಲ್ಲಿ ಲೇಔಟ್ ಅನುಮೋದನೆ ಆಗಿದೆ. ನಾಲ್ಕರಲ್ಲಿ ಮೂರು ಪ್ಯಾಕೇಜ್ ವರ್ಕ್ ಅವಾರ್ಡ್ ಆಗಿದ್ದು ಕೆಲಸ ನಡೆಯುತ್ತಿದೆ. ಒಂದರಲ್ಲಿ ಕೆಲಸ ಶುರುವಾಗಬೇಕಿದೆ. 1156 ಎಕರೆ ಪ್ರದೇಶದಲ್ಲಿ 764 ಎಕರೆ ಕೈಗಾರಿಕಾ ಪ್ರದೇಶವಾಗಿದ್ದು, ಉಳಿದ ಪ್ರದೇಶದಲ್ಲಿ ಉದ್ಯಾನವನ, ಆಸ್ಪತ್ರೆ,(Bhadra Upper Bank) ವಸತಿ ಗೃಹಗಳಿಗೆ ಮೀಸಲಿರಿಸಲಾಗಿದೆ ಎಂದರು.
ಇದನ್ನೂ ಓದಿ:  ರೈತನ ಮೇಲೆ ಕರಡಿ ದಾಳಿ | Bear attack on farmer
ದಾವಣಗೆರೆ-ತುಮಕೂರು ನೇರ ರೈಲ್ವೆ ಯೋಜನೆಗೆ 1210 ಎಕರೆ ಬೇಕಾಗಿದ್ದು, ಹಿರಿಯೂರಿನಲ್ಲಿ 55 ಕಿಮೀ ಹಾದು ಹೋಗಲಿದೆ. ತಾಲ್ಲೂಕಿನಲ್ಲಿ 113 ಎಕರೆ ಭೂ ಸ್ವಾಧೀನ ಬಾಕಿಯಿದೆ. ಎರಡು ತಿಂಗಳಲ್ಲಿ 70 ಎಕರೆ ಭೂ ಸ್ವಾಧೀನಪಡಿಸಿಕೊಂಡು ಕೆಲಸ ಪ್ರಾರಂಭ ಮಾಡಲಾಗುವುದು ಎಂದು ವಿಶೇಷ ಭೂಸ್ವಾಧೀನಾಧಿಕಾರಿ ವಿವೇಕ್ ಸಭೆಗೆ ಮಾಹಿತಿ ನೀಡಿದರು.
ಭದ್ರಾ ಮೇಲ್ದಂಡೆ ಯೋಜನೆ ಮುಖ್ಯ ಎಂಜಿನಿಯರ್ ಎಸ್.ಎಚ್.ಲಮಾಣಿ ಮಾತನಾಡಿ, ಭದ್ರಾ ಮೇಲ್ದಂಡೆ ಯೋಜನೆಯಿಂದ ಅನುಮೋದನೆ ಆಗಿರುವ ಕೆರೆಗಳಿಗೆ ನೀರು (Bhadra Upper Bank) ಬರಲಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ಜವನಗೊಂಡನಹಳ್ಳಿ ಹಾಗೂ ಕರಿಯಾಲ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಹಳ್ಳಿಗಳಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ. ನಮಗೆ ನೀರಿನ ಸಮಸ್ಯೆ ಬಗೆಹರಿಸಬೇಕು ಎಂದು ಕರಿಯಾಲ ಗ್ರಾಮ ಪಂಚಾಯಿತಿ ಅಧ್ಯಕ್ಷ ರಮೇಶ್ ಅವರು ಸಚಿವರಿಗೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

You Might Also Like

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

TAGGED:Bhadra upper bankChitradurga NewsDirect RailwayKannada Newskannada suddiKIDB DepartmentMeetingNammajana.comಕನ್ನಡ ನ್ಯೂಸ್ಕನ್ನಡ ಸುದ್ದಿಕೆಐಡಿಬಿ ಇಲಾಖೆಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂನೇರ ರೈಲ್ವೆಭದ್ರಾ ಮೇಲ್ದಂಡೆಮೀಟಿಂಗ್
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ADIKE RATE |1 ಜುಲೈ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ಧಾರಣೆ
Next Article ವಿದ್ಯಾರ್ಥಿ ನಿಲಯಕ್ಕೆ ರಾಜ್ಯ ಮಾನವ ಹಕ್ಕುಗಳ ಆಯೋಗದ ನ್ಯಾಯಾಂಗ ಸದಸ್ಯ ಎಸ್.ಕೆ.ವೆಂಟಿಗೋಡಿ ಭೇಟಿ, ಪರಿಶೀಲನೆ | Human Rights Commission
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?
ದಿನ ಭವಿಷ್ಯ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?