Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Legal Volunteering: ಅರೆಕಾಲಿಕ ಕಾನೂನು ಸ್ವಯಂ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > Legal Volunteering: ಅರೆಕಾಲಿಕ ಕಾನೂನು ಸ್ವಯಂ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ
ಇಂದಿನ ಸುದ್ದಿ

Legal Volunteering: ಅರೆಕಾಲಿಕ ಕಾನೂನು ಸ್ವಯಂ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Editor Nammajana
Last updated: 27 July 2024 16:34
By Editor Nammajana 2 Min Read
Share
SHARE

Chitradurga news|nammajana.com|27-7-2024

ನಮ್ಮಜನ.ಕಾಂ, ಚಿತ್ರದುರ್ಗ: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಚಿತ್ರದುರ್ಗ ಜಿಲ್ಲೆಯ ಆರು ತಾಲ್ಲೂಕು ಕಾನೂನು ಸೇವಾ ಸಮಿತಿಗಳಿಗೆ ಅರೇ ಕಾಲಿಕ (Legal Volunteering) ಕಾನೂನು ಸ್ವಯಂ ಸೇವಕರ (Para Legal Volunteers) ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.‌

ಈ ವರ್ಗದವರಿಗೆ ಅರ್ಜಿ ಸಲ್ಲಿಸಲು ಅವಕಾಶ

ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವರು, ಉನ್ನತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳು, ಪ್ರಾಧ್ಯಾಪಕರು, ಕಾನೂನು ವಿದ್ಯಾರ್ಥಿಗಳು, ಅಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ವಿವಿಧ ಸರ್ಕಾರಿ ಕಛೇರಿಗಳಲ್ಲಿ (Legal Volunteering) ಕಾರ್ಯನಿರ್ವಹಿಸುತ್ತಿರುವವರು, ನಿವೃತ್ತ ಸರ್ಕಾರಿ ನೌಕರರು, ವಿವಿಧ ಸಂಘಟನೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾಮಾಜಿಕ ಸೇವಾ ಮನೋಭಾವ ಹೊಂದಿರುವ ಪುರುಷ ಮತ್ತು ಮಹಿಳೆಯರು, ಮಂಗಳಮುಖಿಯರು, ಸನ್ನಡತೆ ಹೊಂದಿದ ಕಾರಾಗೃಹ ಬಂದಿಗಳು ಮತ್ತು ಸ್ವ ಸಹಾಯ
ಸಂಘಗಳ ಸದಸ್ಯರು ಅರ್ಜಿ ಸಲ್ಲಿಸಬಹದು.

ಅರ್ಜಿ ಸಲ್ಲಿಸುವ ಮಾಹಿತಿಯ ವಿವರ

ಆಸಕ್ತ ಅಭ್ಯರ್ಥಿಗಳು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ನಿಗದಿತ ಅರ್ಜಿ ನಮೂನೆಯಲ್ಲಿ ತಮ್ಮ ವೈಯಕ್ತಿಕ ವಿವರಗಳನ್ನು ಸ್ವ ಹಸ್ತಾಕ್ಷರದಿಂದ ಭರ್ತಿ ಮಾಡಿ, ಆಯಾ ತಾಲ್ಲೂಕು ಕಾನೂನು ಸೇವಾ ಸಮಿತಿ ಕಾರ್ಯದರ್ಶಿಗಳಿಗೆ, ದಿನಾಂಕ 02-08-2024 ರ ಸಂಜೆ 5.00ರ ಒಳಾಗಾಗಿ ಖುದ್ದು ಸಲ್ಲಿಸಬೇಕು. ಅವಧಿ (Legal Volunteering) ಮುಗಿದ ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.

ಅರೇ ಕಾಲಿಕ ಕಾನೂನು ಸ್ವಯಂ ಸೇವಕರ ನೇಮಕ

ಕಳೆದ ವರ್ಷದಲ್ಲಿ ಅರೇ ಕಾಲಿಕ ಕಾನೂನು ಸ್ವಯಂ ಸೇವಕರಾಗಿ (PLV) ನೇಮಕಗೊಂಡು ಮುಂದಿನ ವರ್ಷಕ್ಕೆ ಕರ್ತವ್ಯ ನಿರ್ವಹಿಸಲು ಆಸಕ್ತರಿರುವವರು ಒಪ್ಪಿಗೆ ಪತ್ರವನ್ನು ಮೇಲೆ ಹೇಳಿದ ದಿನಾಂಕದೊಳಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಚಿತ್ರದುರ್ಗ ಇಲ್ಲಿಗೆ ಸಲ್ಲಿಸಲು ಸೂಚಿಸಲಾಗಿದೆ. ಅರೇ ಕಾಲಿಕ ಕಾನೂನು ಸ್ವಯಂ ಸೇವಕರಾಗಿ ಕೆಲಸ ನಿರ್ವಹಿಸಲು (Legal Volunteering) ಯಾವುದೇ ರೀತಿಯಾದ ವೇತನ ಇರುವುದಿಲ್ಲ.

ಇದನ್ನೂ ಓದಿ: ADIKE RATE INCREASE: 27 ಜುಲೈ 2024 | ಚನ್ನಗಿರಿ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ತುಸು ಏರಿಕೆ

ರಾಜ್ಯ ಕಾನೂನು ಸೇವಾ ಪ್ರಾಧಿಕಾರರವರ ನಿರ್ದೇಶನದಂತೆ ಯಾವುದಾದರೂ ಕಾನೂನು ಸೇವಾ ಕೇಂದ್ರಗಳಿಗೆ ಅರೇ ಕಾಲಿಕ ಕಾನೂನು ಸ್ವಯಂ ಸೇವಕರಾಗಿ (PLV) ನೇಮಿಸಿದ್ದಲ್ಲಿ ಪ್ರತಿ ಕೆಲಸದ ದಿನಕ್ಕೆ ರೂ. 250/- ಮೀರದಂತೆ ಗೌರವಧನ ನಿಗಧಿಪಡಿಸಲಾಗಿದೆ ಎಂದು ಜಿಲ್ಲಾ ಕಾನೂನು ಸೇವಾ (Legal Volunteering) ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ವಿಜಯ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

You Might Also Like

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

TAGGED:Application InvitationChitradurgaChitradurga NewsKannada Newskannada suddiLegal VolunteeringNammajana.comPart TimeRecruitmentState Legal Services AuthorityVarious Organizationಅರೆಕಾಲಿಕಅರ್ಜಿ ಆಹ್ವಾನಕನ್ನಡ ನ್ಯೂಸ್ಕನ್ನಡ ಸುದ್ದಿಕಾನೂನು ಸ್ವಯಂ ಸೇವಕಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂನೇಮಕಾತಿರಾಜ್ಯ ಕಾನೂನು ಸೇವಾ ಪ್ರಾಧಿಕಾರವಿವಿಧ ಸಂಘಟನೆ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ADIKE RATE INCREASE: 27 ಜುಲೈ 2024 | ಚನ್ನಗಿರಿ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ತುಸು ಏರಿಕೆ
Next Article Dina Bhavishya: ದಿನ ಭವಿಷ್ಯ 28-7-2024
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?
ದಿನ ಭವಿಷ್ಯ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?