Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಅಕ್ಟೋಬರ್ 3 ರಿಂದ 13 ರವರೆಗೆ ಶರಣ ಸಂಸ್ಕೃತಿ ಉತ್ಸವ |‌ Sarana sanskrti utsava
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಅಕ್ಟೋಬರ್ 3 ರಿಂದ 13 ರವರೆಗೆ ಶರಣ ಸಂಸ್ಕೃತಿ ಉತ್ಸವ |‌ Sarana sanskrti utsava
ಇಂದಿನ ಸುದ್ದಿ

ಅಕ್ಟೋಬರ್ 3 ರಿಂದ 13 ರವರೆಗೆ ಶರಣ ಸಂಸ್ಕೃತಿ ಉತ್ಸವ |‌ Sarana sanskrti utsava

Editor Nammajana
Last updated: 26 August 2024 04:33
By Editor Nammajana 3 Min Read
Share
SHARE

Chitradurga news | nammajana.com | 26-8-2024

ನಮ್ಮಜನ.ಕಾಂ, ಚಿತ್ರದುರ್ಗ: ಬಸವಕೇಂದ್ರ ಮುರುಘಾಮಠ ದಿಂದ ಪ್ರತಿ ವರ್ಷ ಆಚರಣೆಗೆ ಒಳಪಡುವ ಮಧ್ಯ ಕರ್ನಾ ಟಕದ ದಸರಾ ಉತ್ಸವವವೆಂದೇ (Sarana sanskrti utsava) ಬಿಂಬಿತವಾಗಿರುವ ಶರಣ ಸಂಸ್ಕೃತಿ ಉತ್ಸವ ಈ ಬಾರಿ ಅಕ್ಟೋಬರ್ 5 ರಿಂದ13 ರವರೆಗೆ ನಡೆಯಲಿದೆ.

ಮರುಘಾಮಠದ ಅನುಭವ ಮಂಟಪದಲ್ಲಿ ನಡೆದ ಪೂರ್ವ ಸಿದ್ಧತಾ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾ ಯಿತು. ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಸಂಸದ ಗೋವಿಂದ (Sarana sanskrti utsava) ಎಂ.ಕಾರಜೋಳ, ಶ್ರೀ ಮಠಕ್ಕೆ ತನ್ನದೇ ಆದ ಇತಿಹಾಸವಿದ್ದು, ಜಾತಿ, ಮತ, ಲಿಂಗ ಭೇದವಿಲ್ಲದೆ ಬಸವಾದಿ ಶರಣರ ಆಶಯಗಳನ್ನು ಅನುಷ್ಠಾನಕ್ಕೆ ತರುತ್ತಿದೆ.

ಶೂದ್ರರಿಗೆ ಶಿಕ್ಷಣ ಕೊಡಲು ಸಾಧ್ಯವಾಗದ ಸಂದರ್ಭದಲ್ಲಿ ಚಿತ್ರದುರ್ಗ ಬೃಹನ್ಮಠ ಅಂತಹ ಅವಕಾಶ ಮಾಡಿಕೊಟ್ಟಿದೆ. ಶರಣ ಸಂಸ್ಕೃತಿ ಉತ್ಸವದಲ್ಲಿ ಗತವೈಭವದ ಚಿಂತನೆಗಳು ನಡೆಯಲಿ ಪ್ರತಿದಿನವೂ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ ಎಂದರು.

ಮುರುಘಾಮಠದ ಆಡಳಿತ ಮಂಡಳಿ ಅಧ್ಯಕ್ಷ ಶಿವಯೋಗಿ ಸಿ.ಕಳಸದ ಮಾತನಾಡಿ, ಈ ಬಾರಿಯ ಉತ್ಸವ ಸಮಿತಿಯ ಗೌರವಾಧ್ಯಕ್ಷರಾಗಿ ಹೆಬ್ಬಾಳು ಮಠದ ಮಹಾಂತ ರುದ್ರೇಶ್ವರ ಮಹಾಸ್ವಾಮಿಗಳು, ಗೌರವ ಉಪಾಧ್ಯಕ್ಷರಾಗಿ ರಾವಂದೂರು ಮುರುಘಾ ಮಠದ ಮೋಕ್ಷಪತಿ ಮಹಾಸ್ವಾಮಿಗಳು, ಕಾರ್ಯಾಧ್ಯಕ್ಷರನ್ನಾಗಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಸಂಸದ ಗೋವಿಂದ ಎಂ. ಕಾರಜೋಳ, ಉತ್ಸವ ಸಮಿತಿ ಅಧ್ಯಕ್ಷರಾಗಿ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಇವರನ್ನು ಆಯ್ಕೆ ಮಾಡಲಾಗಿದೆ. ಉತ್ಸವವು ಅರ್ಥಪೂರ್ಣವಾಗಿ ಸರಳವಾಗಿ (Sarana sanskrti utsava) ಆಯೋಜಿಸಲಾ ಗುವುದು. ಶ್ರೀ ಮಠದ ಪರಂಪರೆಯಂತೆ ಎಲ್ಲಾ ಗೋಷ್ಠಿ ಗಳನ್ನು ಆಯೋಜಿಸಲಾಗುವುದು ಎಂದು ತಿಳಿಸಿದರು.

ಮುರುಘಾಮಠದ ಆಡಳಿತ ಮಂಡಳಿ ಸದಸ್ಯ ಡಾ. ಬಸವಕುಮಾರ ಸ್ವಾಮಿಗಳು ಮಾತ ನಾಡಿ, ಈ ವರ್ಷಕ್ಕೆ ಚಿತ್ರದುರ್ಗದ ಬಸವಕೇಂದ್ರ ಅನುಭವ ಮಂಟಪದಲ್ಲಿ ನಡೆದ ಶರಣ ಸಂಸ್ಕೃತಿ ಉತ್ಸವದ ಪೂರ್ವ ಸಿದ್ದತಾ ಸಭೆಯಲ್ಲಿ ಸಂಸದ ಗೋವಿಂದ ಕಾರಜೋಳ ಮಾತನಾಡಿದರು.

ಪೀಠದ ಲಿಂಗೈಕ್ಯ ಶ್ರೀ ಜಯ ದೇವ ಜಗದ್ಗುರುಗಳ ಜಯಂತಿ 150 ವರ್ಷ ಗಳಾಗಲಿದೆ. 53 ವರ್ಷಗಳ ಕಾಲ ಶ್ರೀ ಮಠದ ಪೀಠವನ್ನು ಅಲಂಕಸಿರುತ್ತಾರೆ. ಶ್ರೀಗಳ 100ನೇ ಜಯಂತಿ ಯನ್ನು ದಾವಣಗೆರೆಯಲ್ಲಿ ಮಲ್ಲಿಕಾ ರ್ಜುನ ಶ್ರೀಗಳು (Sarana sanskrti utsava) ಆಚರಿಸುತ್ತಾರೆ. ವರ್ಷಪೂರ್ತಿ ಜಯದೇವ ಶ್ರೀಗಳ ಕುರಿತು ಅರ್ಥಪೂರ್ಣವಾಗಿ 150 ಸ್ಥಳಗಳಲ್ಲಿ ಕಾರ್ಯ ಆಯೋಜಿಸಲಾಗುವುದು ಎಂದರು.

ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮಿಗಳು ಮಾತನಾಡಿ, ಮಧ್ಯ ಕರ್ನಾಟಕದ ನಾಡ ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಬೇಕು. ಈ ಬಾರಿ ಪುರುಷ ಮತ್ತು ಮಹಿಳಾ ಕ್ರೀಡಾಕೂಟವನ್ನು 150ನೇ ವರ್ಷದ ಜಯಂತಿ ಅಂಗವಾಗಿ ಶ್ರೀ ಜಯದೇವ ಶ್ರೀಗಳ ಹೆಸರಿನಲ್ಲಿ ಆಯೋಜಿಸಲಾಗುವುದು ಎಂದು ತಿಳಿಸಿದರು.

ಶ್ರೀ ವಚನಾನಂದ ಸ್ವಾಮಿಗಳು ಮಾತನಾಡಿ, ಶ್ರೀಮಠಕ್ಕೆ ನಾಡಿನಾದ್ಯಂತ ಶಾಖಾಮಠಗಳು, ಹಾಸ್ಟೆಲ್‌ಗಳಿವೆ. ಇದು ವರ್ಷದ ಕಾರ್ಯಕ್ರಮ ವಾಗಬೇಕು. ಜಯದೇವ ಶ್ರೀ ಗಳ (Sarana sanskrti utsava) ಹೆಸರಿನ ಅಂಚೆಚೀಟಿ, ನಾಣ್ಯಗಳ ಬಿಡುಗಡೆಯಾಗಲು ಕ್ರಮವಹಿಸಬೇಕು ಎಂದು ಹೇಳಿದರು.

ಶಾಸಕ ವೀರೇಂದ್ರ ಪಪ್ಪಿ, ಕೆಡಿಪಿ ಸದಸ್ಯ ಕೆ.ಸಿ.ನಾಗರಾಜ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ. ತಾಜ್ ಫೀರ್‌ಸೇರಿದಂತೆ ಹಲವರು ಉಪಸ್ಥಿತರಿದ್ದರು. ಸಭೆಯಲ್ಲಿ ಡಾ.ಬಸವಕುಮಾರ ಸ್ವಾಮಿಗಳು 5 ಲಕ್ಷ, ಡಾ.ಬಸವಜಯಚಂದ್ರ ಸ್ವಾಮಿಗಳು ₹51000, ಕೆ.ಎಂ ವೀರೇಶ್ ₹50 ಸಾವಿರ, ಸಿಂಧನೂರು ಬಸವಕೇಂದ್ರ ₹25 ಸಾವಿರ, ಸಿರಾಜ್ ಭೀಮಸಮುದ್ರ ₹50 ಸಾವಿರ, ಬಸವೇಶ್ವರ ವಿದ್ಯಾಸಂಸ್ಥೆ ₹25 ಸಾವಿರ, ಶಂಕರಮೂರ್ತಿ ಭೀಮಸಮುದ್ರ 1 ಲಕ್ಷ, ಮೆದೇಹಳ್ಳಿ ವಿಜಯಕುಮಾರ್‌ 25 ಸಾವಿರ, ಕಂಪ್ಯೂಟರ್ (Sarana sanskrti utsava) ಶ್ರೀನಿವಾಸ್ ₹50 ಸಾವಿರ ಉತ್ಸವಕ್ಕೆ ದೇಣಿಗೆ ನೀಡುವುದಾಗಿ ವಾಗ್ದಾನ ಮಾಡಿದರು.

ಇದನ್ನೂ ಓದಿ: ಚಿತ್ರದುರ್ಗ | ನಗರಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ಕಾಂಗ್ರೆಸ್ ಮೆಘಾ ಪ್ಲಾನ್? | Municipal Council Election

ಮೋಕ್ಷರುದ್ರಸ್ವಾಮಿ, ರುದ್ರಾಣಿ ಗಂಗಾ ಧರ್, ಕೆಇಬಿ ಷಣ್ಮುಖಪ್ಪ, ಅನೀಸ್, ಮಂಜುನಾಥ ದಾಳಿಂಬೆ, ವೀರೇಂದ್ರ ಕುಮಾರ್‌ಪಿ, ವೀರಶೈವ ಸಮಾಜ, ಅಖಿಲಭಾರತ ವೀರಶೈವ ಮಹಾಸಭೆ, ಹಾಗೂ ಇತರೆ ಸಮಾಜಗಳ ಮುಖಂಡರು, ಶಾಲಾಕಾಲೇಜುಗಳ ಮುಖ್ಯಸ್ಥರು ಇದ್ದರು.

You Might Also Like

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

TAGGED:2024ChitradurgaChitradurga NewsKannada Newskannada suddiNammajana.comOctober 3President KC Virendra PappiSharan Culture Festivalಅಕ್ಟೋಬರ್ 3ಅಧ್ಯಕ್ಷ ಕೆ.ಸಿ.ವೀರೇಂದ್ರ ಪಪ್ಪಿಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂಶರಣ ಸಂಸ್ಕೃತಿ ಉತ್ಸವ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Dina Bhavishya: ಇಂದಿನ ದಿನ ಭವಿಷ್ಯ‌ 26-8-2024
Next Article ಚಿತ್ರದುರ್ಗ ನಗರಸಭೆ | ತೀವ್ರ ಕುತೂಹಲ‌ ಮೂಡಿಸಿದ ಚುನಾವಣೆ | ಬಿಜೆಪಿ ಸದಸ್ಯರಿಗೆ ವಿಪ್ ಜಾರಿ | ಜಿಲ್ಲಾಧ್ಯಕ್ಷ ಮುರುಳಿ ಹೇಳಿದ್ದೇನು? | Municipality Election
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?
ದಿನ ಭವಿಷ್ಯ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?