Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಕೇಂದ್ರದ ನಬಾರ್ಡ್ ಆರ್ಥಿಕ ನೆರವು ಕಡಿತ ವಿಷಾದನೀಯ: ಸಚಿವ ಡಿ.ಸುಧಾಕರ್ ಹೇಳಿಕೆ | Cooperative Bank
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಕೇಂದ್ರದ ನಬಾರ್ಡ್ ಆರ್ಥಿಕ ನೆರವು ಕಡಿತ ವಿಷಾದನೀಯ: ಸಚಿವ ಡಿ.ಸುಧಾಕರ್ ಹೇಳಿಕೆ | Cooperative Bank
ಇಂದಿನ ಸುದ್ದಿ

ಕೇಂದ್ರದ ನಬಾರ್ಡ್ ಆರ್ಥಿಕ ನೆರವು ಕಡಿತ ವಿಷಾದನೀಯ: ಸಚಿವ ಡಿ.ಸುಧಾಕರ್ ಹೇಳಿಕೆ | Cooperative Bank

Editor Nammajana
Last updated: 15 November 2024 5:00 PM
By Editor Nammajana 5 Min Read
Share
SHARE
Telegram Group Join Now
WhatsApp Group Join Now

Chitradurga news|nammajana.com|15-11-2024

ನಮ್ಮಜನ.ಕಾಂ, ಚಿತ್ರದುರ್ಗ: ನಬಾರ್ಡ್ (ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್) ವತಿಹಯಿಂದ ರಾಜ್ಯಕ್ಕೆ ಬರುತ್ತಿದ್ದ ಆರ್ಥಿಕ ನೆರವಿನಲ್ಲಿ ಶೇ.58ರಷ್ಟು ಕಡಿತ (Cooperative Bank) ಮಾಡಿರುವುದು ವಿಷಾದನೀಯ ಸಂಗತಿಯಾಗಿದೆ.

ಈ ವರ್ಷ ರಾಜ್ಯಕ್ಕೆ ನಬಾರ್ಡ್ ನೀಡಬೇಕಿದ್ದ ರೂ.5800 ಕೋಟಿ ಆರ್ಥಿಕ ನೆರವಿನಲ್ಲಿ, ಕೇವಲ ರೂ.2300 ಕೋಟಿಗಳನ್ನು ಮಾತ್ರ ನೀಡಿದೆ. ರೂ.3500 ಕೋಟಿ ಬಿಡುಗಡೆ ಮಾಡಿಲ್ಲ. ಇದು ರಾಜ್ಯಕ್ಕೆ ಉಂಟಾದ ಅನ್ಯಾಯ ಎಂದು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷರಾಗಿರುವ, ಯೋಜನೆ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಡಿ.ಸುಧಾಕರ್ ಹೇಳಿದರು.

ನಗರದ ಚಳ್ಳಕೆರೆ ರಸ್ತೆಯ ಶ್ರೀರಾಮ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ, 71ನೇ ಅಖಿಲ ಭಾರತ ಸಹಕಾರ ಸಪ್ತಾಹ-2024 ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಬರಗಾಲದಿಂದ ತತ್ತರಿಸಿದ ರಾಜ್ಯದ ರೈತರಿಗೆ ನರ್ಬಾಡ್ ನೆರವಿನ ಹಸ್ತ ಚಾಚಬೇಕಿದೆ. ರಾಜ್ಯದ ಎಲ್ಲಾ ರಾಜಕೀಯ ನಾಯಕರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ಕಡಿತ ಗೊಳಿಸಿದ ಬಾಕಿ (Cooperative Bank) ಹಣವನ್ನು ನಬಾರ್ಡ್‍ನಿಂದ ಬಿಡುಗಡೆ ಮಾಡಿಸಬೇಕು.

ರಾಜ್ಯದ ಎಲ್ಲಾ ಡಿಸಿಸಿ ಬ್ಯಾಂಕುಗಳು ನಬಾರ್ಡ್‍ನಿಂದ ಪಡೆದ ಸಾಲ ಮರುಪಾತಿ ಮಾಡಲು ಹೆಚ್ಚಿನ ಬಡ್ಡಿದರ ಸಾಲ ಮಾಡುವ ಪರಿಸ್ಥಿತಿ ಉಂಟಾಗಿದೆ. ನಬಾರ್ಡ್ ಆರ್ಥಿಕ ನೆರವು ಹೆಚ್ಚಿಸುವ ಕುರಿತು, ರಾಜ್ಯದ ಮುಖ್ಯಂತ್ರಿಗಳು ಹಾಗೂ ಸಹಕಾರಿ ಸಚಿವರು, ಪ್ರಧಾನ ಮಂತ್ರಿ ಹಾಗೂ ಹಣಕಾಸು ಸಚಿವರಿಗೆ ಪತ್ರ ಬರೆದಿದ್ದಾರೆ. ನಬಾರ್ಡ್ ನೆರವು ನೀಡದಿದ್ದರೆ ರಾಜ್ಯದ ಸಹಕಾರಿ ಕ್ಷೇತ್ರಕ್ಕೆ ದೊಡ್ಡ ಪೆಟ್ಟು ಬೀಳಲಿದೆ ಎಂದು ಸಚಿವ ಡಿ.ಸುಧಾಕರ್ ತಿಳಿಸಿದರು.

ಚಿತ್ರದುರ್ಗ ಬರಪೀಡಿತ ಜಿಲ್ಲೆಯಾಗಿದ್ದು, ಡಿಸಿಸಿ ಬ್ಯಾಂಕ್ ಮೂಲಕ 70300 ರೈತರಿಗೆ ರೂ.700 ಕೋಟಿ ಬೆಳೆ ಸಾಲ ಹಾಗೂ ಕೃಷಿ ಸಾಲ ನೀಡಲಾಗಿದೆ. ಇನ್ನೂ ಹೆಚ್ಚಿನ ರೈತರು ಸಾಲಕ್ಕೆ ಬೇಡಿಕೆ ಇಟ್ಟಿದ್ದಾರೆ. ನಬಾರ್ಡ್ ನೆರವು ದೊರೆತರೆ ಇನ್ನೂ ಹೆಚ್ಚಿನ ರೈತರಿಗೆ ನೆರವು ನೀಡಬಹುದು.

ರಾಜ್ಯದ ಎಲ್ಲಾ ಡಿಸಿಸಿ ಬ್ಯಾಂಕುಗಳು ತಮ್ಮ ಆಡಳಿತ (Cooperative Bank) ವ್ಯವಸ್ಥೆಯಲ್ಲಿ ತಂತ್ರಜ್ಞಾನ ಅಳವಡಿಸಿಕೊಂಡು, ಪಾರದರ್ಶಕತೆ ಹೆಚ್ಚಿನ ಒತ್ತು ನೀಡಬೇಕು. ಇಂದು ಸಹಕಾರ ಕೇವಲ ವ್ಯವಹಾರ ತತ್ವವಾಗಿ ಉಳಿದಿಲ್ಲ. ಬದಲಾಗಿ ಸಹಕಾರ ಎನ್ನುವುದು ಜೀವನ ವಿಧಾನವಾಗಿ ಬದಲಾಗಿದೆ.

ರೈತರ ಹಾಗೂ ಗ್ರಾಮೀಣ ಜನರ ಆರ್ಥಿಕ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರವಹಿಸಿದೆ. ಸಹಕಾರ ಚಳುವಳಿ ವಿಶ್ವದಾದ್ಯಂತ ವ್ಯಾಪಿಸಿದೆ. 130 ದೇಶಗಳಲ್ಲಿ 30 ಲಕ್ಷ ಸಹಕಾರಿ ಸಂಘಗಳಿಂದ ಸುಮಾರು 100 ಕೋಟಿಗೂ ಅಧಿಕ ಜನ ಸದಸ್ಯರಿದ್ದಾರೆ.

ಭಾರತ ದೇಶದ ಸಹಕಾರಿ ಚಳುವಳಿ ದೊಡ್ಡದು. ರಾಷ್ಟ್ರದಲ್ಲಿ 8.5 ಲಕ್ಷ ಸಹಕಾರಿ ಸಂಸ್ಥೆಗಳು ಇದ್ದು, ಇದರಲ್ಲಿ 31 ಕೋಟಿ ಜನರು ಇದ್ದಾರೆ. ಸಹಕಾರ ತತ್ವದ ಆಚರಣೆ ಬಗ್ಗೆ ಜನ ಜಾಗೃತಿ ಉಂಟುಮಾಡುವ ಉದ್ದೇಶದಿಂದ ಸಹಕಾರ ಸಪ್ತಾಹ ಆಚರಿಸಲಾಗುತ್ತಿದೆ.

ವಿಶ್ವ ಖ್ಯಾತಿ ಪಡೆದ ಫಿಪ್ಕೋ, ಅಮುಲ್, ಕೆ.ಎಂ.ಎಫ್ ನಂತಹ ಸಂಸ್ಥೆಗಳು ದೈತ್ಯವಾಗಿ ಬೆಳದಿವೆ. ಬಡತನ ನಿವಾರಣೆ, ಉದ್ಯೋಗ ಸೃಷ್ಠಿಯಲ್ಲಿ ಹಾಗೂ ರಾಷ್ಟ್ರ ಆರ್ಥಿಕತೆಯನ್ನು ವಿಶ್ವ ಮಟ್ಟಕ್ಕೆ ಏರಿಸುವಲ್ಲಿ ಸಹಕಾರಿ ವ್ಯವಸ್ಥೆ ಪ್ರಮುಖ ಪಾತ್ರ ವಹಿಸುತ್ತಿದೆ.

ದೇಶದಲ್ಲಿ ಸಹಕಾರಿ ಕ್ಷೇತ್ರದಲ್ಲಿ ಗಣನೀಯ ಸಾಧನೆಗೈದ ರಾಜ್ಯಗಳಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. ರಾಜ್ಯದಲ್ಲಿ 47 ಸಾವಿರ ಸಹಕಾರಿ ಸಂಘಗಳು ಇದ್ದು, ಸುಮಾರು 2.7 ಕೋಟಿ ಜನರು ಇದರಲ್ಲಿ ಪಾಲ್ಗೊಂಡಿದ್ದಾರೆ.

ರಾಜ್ಯದ ಸಹಕಾರಿ ವ್ಯವಸ್ಥೆಯಲ್ಲಿ ಕೃಷಿ ಪತ್ತಿನ, ಹೈನುಗಾರಿಕೆ, ಸಹಕಾರಿ ಬ್ಯಾಂಕುಗಳು ಗಣನೀಯ ಸಾಧನೆ ಮಾಡಿವೆ. ಅಪೆಕ್ಸ್, ಡಿಸಿಸಿ ಬ್ಯಾಂಕುಗಳು ಸಧೃಡವಾಗಿವೆ. ಸಹಕಾರ ವಲಯದ ಬಗ್ಗೆ ಜನರಿಗೆ ಸಾಕಷ್ಟು ಪ್ರಚಾರ ನೀಡಬೇಕಿದೆ. ಸಹಕಾರ ಸಾಧನೆ ತಿಳಿಸುವ ವ್ಯವಸ್ಥೆ ಆಗಬೇಕು. ರಾಜ್ಯ ಸರ್ಕಾರ ಸಹಕಾರಿ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಿದೆ ಎಂದು ಸಚಿವ ಡಿ.ಸುಧಾಕರ್ ಹೇಳಿದರು.

ಸಹಕಾರಿ ಸಪ್ತಾಹದ ಅಂಗವಾಗಿ ಆಯೋಜಿಸಲಾದ ವಸ್ತು ಪ್ರದರ್ಶನ ಮಳಿಗೆಗೆ ಚಾಲನೆ ನೀಡಿ ಮಾತನಾಡಿದ ಸಂಸದ ಎಂ ಗೋವಿಂದ ಕಾರಜೋಳ, ಸಹಕಾರಿ ಬ್ಯಾಂಕುಗಳು ಗ್ರಾಮೀಣ ಕ್ಷೇತ್ರಕ್ಕೂ ತಮ್ಮ ಸೇವೆಯನ್ನು ನೀಡುತ್ತಿವೆ. ಶೂನ್ಯ ಬಡ್ಡಿದರಲ್ಲಿ ರೈತರಿಗೆ ಸಾಲ ಸೌಲಭ್ಯ ಒದಗಿಸಲಾಗಿದೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಕೇಂದ್ರದಲ್ಲಿ ಸಹಕಾರಿ ಇಲಾಖೆ ಸ್ಥಾಪಿಸಿ, ಸಹಕಾರಿ ಸಂಸ್ಥೆಗಳಿಗೆ ಹಲವು ಉದ್ದಿಮೆ ಸ್ಥಾಪಿಸಲು ನೆರವು ನೀಡುತ್ತಿದ್ದಾರೆ.

ರಾಜ್ಯದ ಸಹಕಾರಿ ಸಂಸ್ಥೆಗಳಲ್ಲಿ ಶೇ.50 ರಷ್ಟು ಮಹಿಳೆಯರನ್ನು ಸದಸ್ಯರನ್ನಾಗಿಸಲು ಪ್ರಯತ್ನ ನಡೆಸಬೇಕು. ರಾಜ್ಯದಲ್ಲಿ ಯಾವುದೇ ಸಹಕಾರಿ ಸಂಸ್ಥೆಗಳು ಮುಚ್ಚುವಂತಾಗಬಾರದು. ಇವುಗಳಿಗೆ ರಾಜ್ಯ ಸರ್ಕಾರದಿಂದ ಅಗತ್ಯ ನೆರವು ನೀಡಿ ಪುನಶ್ಚೇತನಗೊಳಿಸಬೇಕು ಎಂದರು.

ಸಹಕಾರ ವಾರ ಪತ್ರಿಕೆಯ ವಿಶೇಷ ಸಂಚಿಕೆ ಬಿಡುಗಡೆಗೊಳಿಸಿ ಮಾತನಾಡಿದ ರಾಜ್ಯ ಸಹಕಾರ ಮಹಾಮಂಡಳ ಅಧ್ಯಕ್ಷ ಹಾಗೂ ಶಾಸಕ ಜಿ.ಟಿ.ದೇವೇಗೌಡ ಮಾತನಾಡಿ, ಗದಗ ಜಿಲ್ಲೆಯ ಶಿದ್ದನಗೌಡ ಸಂಣರಾಮನಗೌಡ ಪಾಟೀಲ ರಾಜ್ಯದಲ್ಲಿ ದೇಶದಲ್ಲೇ ಪ್ರಥಮ ಕೃಷಿ ಪತ್ತಿನ ಸಹಕಾರ ಸಂಘ ಸ್ಥಾಪಿಸಿ ರಾಜ್ಯದಲ್ಲಿ ಸಹಕಾರ ಕ್ರಾಂತಿ ಮುನ್ನುಡಿ ಬರೆದರು.

ಮಹಾತ್ಮ ಗಾಂಧೀಜಿಯವರು ಪ್ರತಿಯೊಂದು ಹಳ್ಳಿಯಲ್ಲೂ ಸಹಕಾರಿ ಸಂಘಗಳನ್ನು ಸ್ಥಾಪಿಸುವ ಕನಸು ಹೊಂದಿದ್ದರು. ಭಾರತದ ಆರ್ಥಿಕ ಸ್ವಾತಂತ್ರ್ಯಕ್ಕೆ ಸಹಕಾರವೇ ಹೆಬ್ಬಾಗಿಲು ಎಂದು ಅವರು ಹೇಳಿದರು.

ಇನ್ನೂ ದೇಶದ ಪ್ರಥಮ ಪ್ರಧಾನಿ ಜವಹರಲಾಲ್ ನೆಹರು ಅವರು ತಮ್ಮ ಪಂಚ ವಾರ್ಷಿಕ ಯೋಜನೆಗಳಲ್ಲಿ ಸಹಕಾರಿ ಕ್ಷೇತ್ರಕ್ಕೆ ಒತ್ತು ನೀಡಿದರು. ಗ್ರಾಮಕ್ಕೊಂದು ಶಾಲೆ, ಪಂಚಾಯಿತಿ ಹಾಗೂ ಸಹಕಾರಿ ಸಂಘ ಇದ್ದಲ್ಲಿ ಮಾತ್ರ ಗ್ರಾಮದ ಅಭಿವೃದ್ಧಿ ಸಾಧ್ಯ ಎಂದು ನಂಬಿದ್ದರು.

ಪ್ರಪಂಚದಲ್ಲಿ ಮೊದಲ ಬಾರಿಗೆ ಲಂಡನ್ ನಗರದಲ್ಲಿ ರಾರ್ಬಟ್ ಓವನ್ ಎನ್ನುವರು ಕಾರ್ಮಿಕರ ಕಲ್ಯಾಣದ ಹಿತದೃಷ್ಠಿಯಿಂದ (Cooperative Bank) ಸಹಕಾರಿ ಚಳುವಳಿ ಪ್ರಾರಂಭಿಸಿದರು. ಇಂದು ಸಹಕಾರಿ ಕ್ಷೇತ್ರ ಹೆಮ್ಮರವಾಗಿ ಬೆಳದಿದೆ.

ರಾಜ್ಯದಲ್ಲಿ ಸುಮಾರು 47 ಸಾವಿರ ಸಹಕಾರಿ ಸಂಸ್ಥೆಗಳು ಇದ್ದು, ಇವುಗಳಲ್ಲಿ ಒಟ್ಟು ರೂ. 2 ಲಕ್ಷಕೋಟಿ ಠೇವಣಿ ಹಣವಿದೆ. ಈ ಹಣವನ್ನು ರೈತರಿಗೆ ಸಾಲರ ರೂಪದಲ್ಲಿ ನೀಡಲಾಗುತ್ತಿದೆ. ಮಹಿಳೆಯರು ಸಹ ಆರ್ಥಿಕವಾಗಿ ಸ್ವಾಲಂಬಿಯಾಗಲು ಸಹಕಾರಿ ಕ್ಷೇತ್ರ ಸಂಜೀವಿನಿಯಾಗಿದೆ.

ಈ ಹಿಂದೆ ನರ್ಬಾಡ್ ಶೇ.1 ರ ಬಡ್ಡಿ ದರದಲ್ಲಿ ಸಾಲ ನೀಡುತ್ತಿತ್ತು. ಸದ್ಯ ಈ ಬಡ್ಡಿದರ ಶೇ.4 ರ ಬಡ್ಡಿ ದರದಲ್ಲಿ ಸಾಲ ನೀಡುತ್ತಿದೆ. ಇದರಿಂದ ಸಹಕಾರಿ ಸಂಘಗಳ ಮೇಲೆ ಹೆಚ್ಚಿನ ಹೊರೆ ಬೀಳುತ್ತಿದೆ. ಬ್ಯಾಂಕುಗಳ ರಾಷ್ಟ್ರೀಕರಣ, ಉದಾರೀಕರಣ, ಖಾಸಗಿ ಬ್ಯಾಂಕುಗಳ ಲಗ್ಗೆಯ ನಡುವೆಯೂ ಸಹಕಾರಿ ಬ್ಯಾಂಕುಗಳು ತಮ್ಮ ಅಸ್ತಿತ್ವವನ್ನು ಉಳಿಸಿಕೊಂಡು ನಾಡಿನ ಜನರಿಗೆ ಸೇವೆ ನೀಡುತ್ತಿವೆ. ಸರ್ಕಾರ ಹಸ್ತಕ್ಷೇಪ ಇಲ್ಲದೆಯೇ ಅಮುಲ್ ಹಾಗೂ ಕೆ.ಎಂ.ಎಫ್‍ನಂತಹ ಸಂಸ್ಥೆಗಳು ಲಕ್ಷಾಂತರ ಜನರಿಗೆ ನೆರವು ನೀಡುತ್ತಿವೆ.

ದೇಶದಲ್ಲಿ ರಾಜ್ಯದಲ್ಲಿ ಮಾತ್ರ ಸಹಕಾರ ಚಳುವಳಿ ಮತ್ತು ಗ್ರಾಮೀಣಾಭಿವೃದ್ಧಿ ಮೀಸಲಾದ ಏಕಮಾತ್ರ ಕನ್ನಡ ವಾರ ಪತ್ರಿಕೆ ಸಹಕಾರವನ್ನು ಪ್ರಕಟಿಸಲಾಗುತ್ತಿದೆ ಎಂದರು. (Cooperative Bank) ಇದೇ ಸಂದರ್ಭದಲ್ಲಿ ಜಿಲ್ಲೆಯ ಸಹಕಾರ ಕ್ಷೇತ್ರದಲ್ಲಿ ಅನುಪಮ ಸೇವೆಯನ್ನು ಸಲ್ಲಿಸಿರುವ 6 ಹಿರಿಯ ಸಹಕಾರಿಗಳಿಗೆ ಹಾಗೂ 6 ಸಹಕಾರಿ ಸಂಘಗಳಿಗೆ ಸನ್ಮಾನಿಸಲಾಯಿತು.

ಇದನ್ನೂ ಓದಿ: ಶಿಶುಪಾಲನಾ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಆಚರಣೆ | Children’s Day

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್.ನವೀನ್, ಚಿದಾನಂದ ಎಂ.ಗೌಡ,  ಕರ್ನಾಟಕ ಸಹಕಾರ ಎಣ್ಣೆ ಬೀಜ ಬೆಳೆಗಾರರ ಮಹಾ ಮಂಡಳದ ಅಧ್ಯಕ್ಷ ವೆಂಕಟರಾವ್ ನಾಡಗೌಡ, ಸಹಕಾರ ಮಂಡಳಿಯ ನಿರ್ದೇಶಕರಾದ ಎನ್.ಗಂಗಣ್ಣ, ಹೆಚ್.ಮಂಜುನಾಥ್, ಆರ್.ರಾಮರೆಡ್ಡಿ, ಎಸ್.ಆರ್.ಗಿರೀಶ್, ಶಿಮೂಲ್ ನಿರ್ದೇಶಕರಾದ ಜಿ.ಪಿ.ರೇವಣಸಿದ್ದಪ್ಪ, ಸಂಜೀವ್ ಮೂರ್ತಿ, ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಹೆಚ್.ಎಂ.ದ್ಯಾಮಣ್ಣ ಕೋಗುಂಡೆ, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ವ್ಯವಸ್ಥಾಪಕ ಇಲ್ಯಾಸ್ ಉಲ್ಲಾ ಷರೀಫ್, ಸಹಕಾರಿ ಸಂಘಗಳ ಉಪನಿಬಂಧಕ ಆರ್.ಎಸ್.ದಿಲೀಪ್ ಕುಮಾರ್, ಸಹಕಾರ ಸಂಘಗಳ ಸಹಾಯಕ ನಿಬಂಧಕ ಬಾಹುಬಲಿ ಹಂಜೆ ಸೇರಿದಂತೆ ಇತರೆ ಸಹಕಾರ ಮಂಡಳಿಗಳ ಅಧ್ಯಕ್ಷರು, ನಿರ್ದೇಶಕರು, ವ್ಯವಸ್ಥಾಪಕರು ಹಾಗೂ ಸದಸ್ಯರು ಭಾಗವಹಿಸಿದ್ದರು.

ಇದನ್ನೂ ಓದಿ: ಬಬ್ಬೂರು ಫಾರಂ | ನ.16 ಮತ್ತು 17ರಂದು ಕೃಷಿಮೇಳ | Krishi Mela

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ನಮ್ಮಜನ.ಕಾಂ gmail:  nammajananews@gmail.com

» Whatsapp Number-9686622252

You Might Also Like

ದಿನ ಭವಿಷ್ಯ | 5-8-2025 | Bhavishya

Adike Rate | ಅಡಿಕೆ ರೇಟ್ | ಯಾವ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ರೇಟ್ ಎಷ್ಟಿದೆ

Coconut sapling: ಹೊಸದಾಗಿ ತೆಂಗಿನ ಸಸಿ ನಾಟಿ ಮಾಡಿಕೊಳ್ಳುವ ರೈತರಿಗೆ ಸಹಾಯಧನಕ್ಕೆ ಅರ್ಜಿ ಆಹ್ವಾನ

ಹೋಟೆಲ್ ಉದ್ದಿಮೆಯಲ್ಲಿ ಮಹಿಳೆಯರು ಪಾಲ್ಗೊಳ್ಳಲು ಅಕ್ಕ ಕೆಫೆ ಉತ್ತೇಜನ : ಸಚಿವ ಡಿ.ಸುಧಾಕರ್ | Akka Cafe

ಬಂಗಾರದ ಬೆಲೆಯಲ್ಲಿ ಏರಿಕೆ | Today Gold Rate

TAGGED:71st All India Co-operative Week-202471ನೇ ಅಖಿಲ ಭಾರತ ಸಹಕಾರ ಸಪ್ತಾಹ-2024Chitradurga NewsCo-operative BankD. SudhakarDCC Bank ChitradurgaKannada Newskannada suddiMinisterNammajana.comWeek-2024ಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಡಿ. ಸುಧಾಕರ್ಡಿಸಿಸಿ ಬ್ಯಾಂಕ್ ಚಿತ್ರದುರ್ಗನಮ್ಮಜನ.ಕಾಂಸಚಿವಸಪ್ತಾಹ -2024ಸಹಕಾರ ಬ್ಯಾಂಕ್ಸಹಕಾರಿ ಬ್ಯಾಂಕ್
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ಶಿಶುಪಾಲನಾ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಆಚರಣೆ | Children’s Day
Next Article ಇಂದಿನ ರಾಶಿ ಭವಿಷ್ಯ, ಕೆಲಸದಲ್ಲಿ ಅಡೆತಡೆ, ಹೊಸ ಜವಬ್ದಾರಿಯಲ್ಲಿ ಯಶಸ್ಸು | Dina Bhavishya
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

kadu kayuva mara: ಅರಿವಿನ ಜೊತೆಗೆ ಮನಸ್ಸಿಟ್ಟು ಓದಿದವರು ಮಹತ್ವದ ಕೃತಿಗಳನ್ನು ನೀಡಬಲ್ಲರು: ಡಾ.ಬಿ.ಆರ್.ರವಿಕಾಂತೇಗೌಡ
ಇಂದಿನ ಸುದ್ದಿ
Today Dina Bhavishya | ದಿನ ಭವಿಷ್ಯ | ಆಗಸ್ಟ್ 04
ದಿನ ಭವಿಷ್ಯ
Bhadra: ಭದ್ರಾ ಜಲಾಶಯಕ್ಕೆ ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ಬಾಗಿನ ಸಮರ್ಪಣೆ
ಇಂದಿನ ಸುದ್ದಿ
Nikhil Kumaswamy: ಮಾಜಿ ಸಂಸದ ಪ್ರಜ್ವಲ್ ಜೀವಾವಧಿ ಶಿಕ್ಷೆ ಬಗ್ಗೆ ನಿಖಿಲ್ ಕುಮಾರಸ್ವಾಮಿ ಹೇಳಿದ್ದೇನು?
ರಾಜಕೀಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?