Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಸರ್ಕಾರಿ ನೌಕರರ ಸಮಸ್ಯೆಗಳ ನಿವಾರಣೆ ಕಡೆ ನನ್ನ ಹೆಜ್ಜೆ: ಮಾಲತೇಶ್ ಮುದ್ದಜ್ಜಿ | Government Employees Association Chitradurga
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಸರ್ಕಾರಿ ನೌಕರರ ಸಮಸ್ಯೆಗಳ ನಿವಾರಣೆ ಕಡೆ ನನ್ನ ಹೆಜ್ಜೆ: ಮಾಲತೇಶ್ ಮುದ್ದಜ್ಜಿ | Government Employees Association Chitradurga
ಇಂದಿನ ಸುದ್ದಿ

ಸರ್ಕಾರಿ ನೌಕರರ ಸಮಸ್ಯೆಗಳ ನಿವಾರಣೆ ಕಡೆ ನನ್ನ ಹೆಜ್ಜೆ: ಮಾಲತೇಶ್ ಮುದ್ದಜ್ಜಿ | Government Employees Association Chitradurga

Editor Nammajana
Last updated: 12 December 2024 11:52
By Editor Nammajana 2 Min Read
Share
SHARE

Chitradurga news|nammajana.com|12-12-2024 

ನಮ್ಮಜನ.ಕಾಂ, ಚಿತ್ರದುರ್ಗ: ಹಾಲಿ ಸರ್ಕಾರಿ ನೌಕರರಾಗಿ ಮೃತಪಟ್ಟಲ್ಲಿ ಅವರ ಅಂತ್ಯಕ್ರಿಯೆಗೆ ನೌಕರರ ಸಂಘದಿಂದ (Government Employees Association Chitradurga) 5000 ರೂ,  ಚಿತ್ರದುರ್ಗ ನಗರದಲ್ಲಿ ಸರ್ಕಾರಿ ನೌಕರರ ಭವನ ನಿರ್ಮಾಣಕ್ಕೆ ಶ್ರಮಿಸುತ್ತೇನೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಾಲತೇಶ್ ಮುದ್ದಜ್ಜಿ ತಿಳಿಸಿದರು.

ಚಿತ್ರದುರ್ಗ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ ಸರ್ಕಾರಿ ನೌಕರರಿಗೆ ಜ್ಯೋತಿ ಸಂಜೀವಿನಿ ಯೋಜನೆ ಜಾರಿ, ಎನ್.ಪಿ.ಎಸ್ ರದ್ದು ಹಳೇ ಪದ್ದತಿಯಂತೆ ಪಿಂಚಿಣಿ ಜಾರಿ ಹಾಗೂ ರಾಜ್ಯ ಸರ್ಕಾರಿ ನೌಕರರಿಗೂ ಸಹ ಕೇಂದ್ರ ಮಾದರಿ ವೇತನ ನೀಡುವಂತೆ ಸರ್ಕಾರಕ್ಕೆ ಒತ್ತಾಯ ಮಾಡುವ ಸಲುವಾಗಿ ರಾಜ್ಯ ಸಂಘದ ಜೊತೆಯಲ್ಲಿ (Government Employees Association Chitradurga) ಹೋರಾಟವನ್ನು ಮಾಡಲಾಗುವುದು ಎಂದರು.

2024 ರಿಂದ 2029 ರವರೆಗೆ ನಮ್ಮ ನೂತನ ಪದಾಧಿಕಾರಿಗಳು ಕಾರ್ಯ ನಿರ್ವಹಿಸಲಿದ್ದು, ಇದರಲ್ಲಿ ಸಾಧ್ಯವಾದಷ್ಟು ಸರ್ಕಾರಿ ನೌಕರರಿಗೆ ಅನುಕೂಲವಾಗುವಂತೆ ಕಾರ್ಯವನ್ನು ಮಾಡಲಾಗುವುದು. ಈ ಹಿನ್ನಲೆಯಲ್ಲಿ ಈ ಹಿಂದಿನ ಕಾರ್ಯಕಾರಿ ಸಮಿತಿಯು ಚಿತ್ರದುರ್ಗ ತಾಲ್ಲೂಕಿನ ಸರ್ಕಾರಿ ನೌಕರರು ಮೃತಪಟ್ಟಲ್ಲಿ ಅವರ ಅಂತ್ಯ ಸಂಸ್ಕಾರಕ್ಕೆ 2000 ರೂ.ಗಳನ್ನು ನೀಡಲಾಗುತ್ತಿತ್ತು.

ನಮ್ಮ ಮೊದಲನೇ ಸಭೆಯಲ್ಲಿ ಈ ಮೊತ್ತವನ್ನು 5000 ರೂ.ಗಳನ್ನು ನೀಡಲು ತೀರ್ಮಾನ ಮಾಡಲಾಯಿತು. ಇದರೊಂದಿಗೆ ಸರ್ಕಾರಿ ನೌಕರರ ಭವನ ನಿರ್ಮಾಣಕ್ಕೆ ಸೂಕ್ತವಾದ ಜಾಗವನ್ನು ಹುಡುಕಲಾಗುತ್ತಿದೆ. ಮಂಜೂರಾದ ತಕ್ಷಣ ಸಮುದಾಯ ಭವನವನ್ನು ನಿರ್ಮಾಣ ಮಾಡಲು ಕಾರ್ಯಕಾರಿ ಸಮಿತಿ ಮುಂದಾಗಲಿದೆ ಎಂದರು.

ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಜ್ಯೋತಿ ಸಂಜೀವಿನಿ ಯೋಜನೆಯನ್ನು ಜಾರಿ ಮಾಡಲು ಮುಂದಾಗಿದೆ, ಇದನ್ನು ಜನವರಿಯಲ್ಲಿ ಜಾರಿ ಮಾಡಲು ಸರ್ಕಾರ ಮುಂದಾಗಿದ್ದು, ಇದನ್ನು ಸಾಧ್ಯವಾದಷ್ಟು ಶೀಘ್ರವಾಗಿ ಜಾರಿ ಮಾಡುವಂತೆ ಸರ್ಕಾರವನ್ನು ರಾಜ್ಯ ಸಮಿತಿಯ ಸಹಯೋಗದೊಂದಿಗೆ ಒತ್ತಾಯ ಮಾಡಲಾಗುವುದು.

2006ರ ನಂತರದ ನೇಮಕಾತಿಯವರಿಗೆ ಪಿಂಚಣಿಯನ್ನು ರದ್ದು ಮಾಡಿರುವ ಸರ್ಕಾರದ ಎನ್.ಪಿ.ಎಸ್‍ನ್ನು ರದ್ದು ಮಾಡಿ ಹಳೇಯ ಪದ್ದತಿಯ ಪಿಂಚಿಣಿಯ ವ್ಯವಸ್ಥೆಯನ್ನು ಜಾರಿ ಮಾಡುವಂತೆ ಸರ್ಕಾರವನ್ನು ಆಗ್ರಹಿಸಲಾಗುವುದು ಎಂದು ತಿಳಿಸಿದರು.

ರಾಜ್ಯ ಸರ್ಕಾರದ ನೌಕರರಿಗೂ ಕೇಂದ್ರ ಸರ್ಕಾರದ ನೌಕರರಿಗೂ ವೇತನ ತಾರತಮ್ಯ ಇದೆ. ಇದನ್ನು ಹೋಗಲಾಡಿಸಲು ಸರ್ಕಾರ ಮಂದಾಗಬೇಕಿದೆ. ಕೇಂದ್ರ ಸರ್ಕಾರ ತನ್ನ ನೌಕರರಿಗೆ ಯಾವ ರೀತಿ ವೇತನವನ್ನು ನೀಡುತ್ತದ್ದೇಯೇ ಅದೇ ಮಾದರಿಯಲ್ಲಿ ರಾಜ್ಯ ಸರ್ಕಾರ ತನ್ನ ನೌಕರರಿಗೂ ಸಹಾ ವೇತನವನ್ನು (Government Employees Association Chitradurga) ನೀಡುವಂತೆ ಹೋರಾಟವನ್ನು ಮಾಡಲಾಗುವುದು ಎಂದು  ತಿಳಿಸಿದರು.

ಇದನ್ನೂ ಓದಿ: ಮೆದೇಹಳ್ಳಿ ಗ್ರಾ.ಪಂ ಅಧ್ಯಕ್ಷರಾಗಿ ಕಾವ್ಯ ವಿಜಯಕುಮಾರ್ ಆಯ್ಕೆ | Medehalli

ಈ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ ಜಿಲ್ಲಾ ಖಂಜಾಚಿ ಮಲ್ಲಿಕಾರ್ಜನ್, ರಾಜ್ಯ ಪರಿಷತ್ ಸದಸ್ಯರಾದ ರಾಜಪ್ಪ, ಕಾರ್ಯದರ್ಶಿ ಶ್ರೀನಿವಾಸ್, ನಿರ್ದೆಶಕರಾದ ಜಗ್ಗೇಶ್ ಉಪಸ್ಥಿರಿದ್ದರು.

You Might Also Like

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

TAGGED:ChitradurgaChitradurga NewsEmployee ProblemGovernment Employees AssociationGovernment Employees Association ChitradurgaKannada Newskannada suddiMalatesh MuddajiNammajana.comnew District Presidentಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂನೂತನ ಜಿಲ್ಲಾಧ್ಯಕ್ಷನೌಕರರ ಸಮಸ್ಯೆಮಾಲತೇಶ್ ಮುದ್ದಜ್ಜಿಸರ್ಕಾರಿ ನೌಕರರ ಸಂಘಸರ್ಕಾರಿ ನೌಕರರ ಸಂಘ ಚಿತ್ರದುರ್ಗ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy1
Sleepy1
Angry0
Dead0
Wink2
Previous Article ಮೆದೇಹಳ್ಳಿ ಗ್ರಾ.ಪಂ ಅಧ್ಯಕ್ಷರಾಗಿ ಕಾವ್ಯ ವಿಜಯಕುಮಾರ್ ಆಯ್ಕೆ | Medehalli
Next Article ಮಾಜಿ ಸಿಎಂ ನಿಜಲಿಂಗಪ್ಪ ಮನೆ ಖರೀದಿ ಮಾಡಿದ ಸರ್ಕಾರ | Nijalingappa house
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?
ದಿನ ಭವಿಷ್ಯ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?