Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Lokayukta | ವಿವಿಧ ಬಗೆಯ ಪ್ರಕರಣಗಳಲ್ಲಿ ಸ್ಥಳದಲ್ಲಿಯೇ ಇತ್ಯರ್ಥವಾದ ಅರ್ಜಿ ಎಷ್ಟು, ಕೆ.ಎನ್.ಫಣೀಂದ್ರ ಹೇಳಿದ್ದೇನು?
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > Lokayukta | ವಿವಿಧ ಬಗೆಯ ಪ್ರಕರಣಗಳಲ್ಲಿ ಸ್ಥಳದಲ್ಲಿಯೇ ಇತ್ಯರ್ಥವಾದ ಅರ್ಜಿ ಎಷ್ಟು, ಕೆ.ಎನ್.ಫಣೀಂದ್ರ ಹೇಳಿದ್ದೇನು?
ಇಂದಿನ ಸುದ್ದಿ

Lokayukta | ವಿವಿಧ ಬಗೆಯ ಪ್ರಕರಣಗಳಲ್ಲಿ ಸ್ಥಳದಲ್ಲಿಯೇ ಇತ್ಯರ್ಥವಾದ ಅರ್ಜಿ ಎಷ್ಟು, ಕೆ.ಎನ್.ಫಣೀಂದ್ರ ಹೇಳಿದ್ದೇನು?

Editor Nammajana
Last updated: 24 January 2025 6:08 PM
By Editor Nammajana 4 Min Read
Share
SHARE
Telegram Group Join Now
WhatsApp Group Join Now

Chitradurga news |Nammajana.com|24-1-2025

ನಮ್ಮಜನ.ಕಾಂ, ಚಿತ್ರದುರ್ಗ: ಲೋಕಾಯುಕ್ತ ಸಂಸ್ಥೆಯ ಕಾರ್ಯ ಕ್ಷಮತೆ ಬಗ್ಗೆ ಜನರಲ್ಲಿ ವಿಶ್ವಾಸ ಮೂಡಿದ್ದು, ರಾಜ್ಯದಲ್ಲಿ (Lokayukta) ಒಟ್ಟು ಸುಮಾರು 29 ಸಾವಿರ ಪ್ರಕರಣಗಳು ದಾಖಲಾಗಿವೆ.

ಜಿಲ್ಲೆಯಲ್ಲಿ ಗುರುವಾರದಂದು ನಡೆಸಿದ ವಿಚಾರಣೆ ಸಂದರ್ಭದಲ್ಲಿ ಲೋಕಾಯುಕ್ತ ಸಂಸ್ಥೆಯ ಕಾರ್ಯವ್ಯಾಪ್ತಿಗೆ ಒಳಪಡುವ ಜಿಲ್ಲೆಯ 53  ವಿವಿಧ ಬಗೆಯ ಪ್ರಕರಣಗಳನ್ನು ದೂರುದಾರರು ಹಾಗೂ ಎದುರುದಾರರ ಸಮಕ್ಷಮದಲ್ಲಿ ಇತ್ಯರ್ಥಪಡಿಸಲಾಗಿದೆ ಎಂದು ಉಪಲೋಕಾಯುಕ್ತ (Lokayukta) ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಹೇಳಿದರು.

ನಗರದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ ಲೋಕಾಯುಕ್ತ ಸಂಸ್ಥೆಯಲ್ಲಿ ಇಬ್ಬರು ಉಪಲೋಕಾಯುಕ್ತರಲ್ಲಿ ಸೇರಿದಂತೆ ಸುಮಾರು 21 ಸಾವಿರ ಪ್ರಕರಣಗಳು ಬಾಕಿ ಇವೆ, ಲೋಕಾಯುಕ್ತರಲ್ಲಿ 08 ಸಾವಿರ ಪ್ರಕರಣಗಳು ಇವೆ.  ಜನರಲ್ಲಿ ಲೋಕಾಯುಕ್ತ  ಸಂಸ್ಥೆಯ ಬಗ್ಗೆ ವಿಶ್ವಾಸ ಮೂಡಿದ್ದು, ಅಹವಾಲು ಕೋರಿ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗುತ್ತಿವೆ.

ಸಂಸ್ಥೆಯ ಕಾರ್ಯ ವ್ಯಾಪ್ತಿಗೆ ಒಳಪಟ್ಟಂತೆ ಚಿತ್ರದುರ್ಗ ಜಿಲ್ಲೆಯ ಸುಮಾರು 400 ದೂರುಗಳು ಇದ್ದವು, ಈ ಪೈಕಿ ನೋಟಿಸ್ ವಿತರಣೆ ಮಾಡಿ, ಪ್ರಾಥಮಿಕ ವರದಿಯ ನಂತರ ಸ್ಥಳದಲ್ಲಿಯೇ ತೀರ್ಮಾನ ಮಾಡಲು ಅವಕಾಶವಿರುವ 73 ಪ್ರಕರಣಗಳನ್ನು ಆರಿಸಿಕೊಂಡು ವಿಚಾರಣೆ ಮಾಡಲಾಗಿ, 53 ಪ್ರಕರಣಗಳು ಸ್ಥಳದಲ್ಲಿಯೇ ತೀರ್ಮಾನವಾಗಿದ್ದು, ಉಳಿದ ಪ್ರಕರಣಗಳನ್ನು ತಾಂತ್ರಿಕ ಸಮಸ್ಯೆಯಿಂದಾಗಿ ಲೋಕಾಯುಕ್ತದಲ್ಲಿಯೇ (Lokayukta) ಮುಂದುವರೆಸಿ ಕಾನೂನು ಪ್ರಕಾರವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಜ.22 ರಿಂದ 24 ರವರೆಗೆ ಮೂರು ದಿನಗಳ ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮದಲ್ಲಿ ಜ.22ರಂದು ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಮಾಡಿದ್ದು, ಲೋಕಾಯುಕ್ತ ಸಂಸ್ಥೆಯ ಬಗ್ಗೆ ಜನರಲ್ಲಿ ಹೆಚ್ಚಿನ ಜಾಗೃತಿ ಮೂಡಿರುವುದರಿಂದಾಗಿ ಜ.23 ರಂದು ಸಹ ಕುಂದುಕೊರತೆ, ಅಹವಾಲುಗಳನ್ನು ಸಾರ್ವಜನಿಕರಿಂದ ಸ್ವೀಕರಿಸಲಾಗಿದೆ.

ಇದರಿಂದ ಲೋಕಾಯುಕ್ತ ಸಂಸ್ಥೆಗೆ ಭರಪೂರವಾಗಿ ದೂರುಗಳು ಸ್ವೀಕರವಾಗಿದ್ದು, ಸಾರ್ವಜನಿಕರ ಕುಂದುಕೊರತೆಗಳಿಗೆ ಸಂಬಂಧಪಟ್ಟಂತೆ ಒಟ್ಟು 175 ದೂರುಗಳನ್ನು ಸ್ವೀಕಾರ ಮಾಡಿದ್ದು, ಈ ದೂರುಗಳಲ್ಲಿ 65 ಪ್ರಕರಣಗಳು ಲೋಕಾಯುಕ್ತ ಸಂಸ್ಥೆಯ ವ್ಯಾಪ್ತಿಗೆ ಒಳಪಡುವ ಪ್ರಕರಣಗಳಾಗಿದ್ದು, ಇನ್ನುಳಿದ ದೂರುಗಳನ್ನು, ಸಮಸ್ಯೆಗಳನ್ನು ಪರಿಹಾರ ಮಾಡುವ ಸಲುವಾಗಿ ಕಾನೂನಿನ ಸಲಹೆ ನೀಡಲಾಗಿದೆ ಎಂದು ತಿಳಿಸಿದ ಅವರು, ರೂ.03 ಲಕ್ಷಕ್ಕಿಂತ ಆದಾಯ ಕಡಿಮೆ ಇರುವ ವ್ಯಕ್ತಿಗಳಿಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಮೂಲಕ ಉಚಿತ ಕಾನೂನು ಸಲಹೆ, ವಕೀಲರ ನೇಮಕ, ಕಾನೂನಿನ ನೆರವು ನೀಡುವಂತೆ ಸೂಕ್ತ ಮಾರ್ಗದರ್ಶನಕ್ಕಾಗಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ವಹಿಸಿಕೊಡಲಾಗಿದೆ.

ಇನ್ನೂ ರಿಜಿಸ್ಟರ್ ಮಾಡಿಕೊಳ್ಳಲು ಆಗದೇ ಇರುವ ಪ್ರಕರಣಗಳನ್ನು, (ಸಮಸ್ಯೆ ಇನ್ನೂ ಉದ್ಭವ ಆಗದೇ ಇರುವ ಪ್ರಕರಣಗಳು) ಸಂಬಂಧಪಟ್ಟ ಅಧಿಕಾರಿಗಳಿಗೆ ಜನರಿಂದ ಸ್ವೀಕರಿಸಿರುವ ಅರ್ಜಿಗಳ ಪ್ರತಿಗಳನ್ನು ಕಳುಹಿಸಲಾಗಿದೆ.  ಜಿಲ್ಲೆಯಲ್ಲಿ ಕಳೆದೆರಡು ದಿನಗಳಲ್ಲಿ ಸಲ್ಲಿಕೆಯಾದ ದೂರು ಅರ್ಜಿಗಳ ಪೈಕಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ನಗರಸಭೆ ಹಾಗೂ ಕಂದಾಯ ಇಲಾಖೆಗೆ (Lokayukta) ಸಂಬಂಧಿಸಿದ್ದು ಹೆಚ್ಚಿನ ಸಂಖ್ಯೆಯಲ್ಲಿವೆ ಎಂದು ಹೇಳಿದರು.

ಲೋಕಾಯುಕ್ತ ಸಂಸ್ಥೆಗೆ ಇನ್ನಷ್ಟು ಮಾನವ ಸಂಪನ್ಮೂಲದ ಅಗತ್ಯವಿದ್ದು, ಸಂಸ್ಥೆಯಲ್ಲಿ ಶೇ. 30 ರಷ್ಟು ಹುದ್ದೆಗಳು ಖಾಲಿ ಇವೆ.  ಜನಸಂಖ್ಯೆಗೆ ಅನುಗುಣವಾಗಿ, ಇನ್ನಷ್ಟು ಹೆಚ್ಚಿನ ಸಿಬ್ಬಂದಿ ಒದಗಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದರು.

ಸಾರ್ವಜನಿಕರ ಭೇಟಿ ಜೊತೆಗೆ ವಕೀಲರ ಸಂಘಕ್ಕೆ ಭೇಟಿ ನೀಡಿ, ವಕೀಲರೊಂದಿಗೆ ಸಂವಾದ ಕಾರ್ಯಕ್ರಮ, ಜಿಲ್ಲೆಯ ಎಲ್ಲ ನ್ಯಾಯಾಧೀಶರೊಂದಿಗೆ ಸಂವಾದ ನಡೆಸಿ ಲೋಕಾಯುಕ್ತ ಸಂಸ್ಥೆಯ ಕಾರ್ಯನಿರ್ವಹಣೆ ಹಾಗೂ ಲೋಕಾಯುಕ್ತ ಕಾಯ್ದೆ ಕುರಿತು ಅರಿವು ಮೂಡಿಸಲು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸಹಯೋಗದಲ್ಲಿ ಜನರನ್ನು ತಲುಪಲು ಕಾರ್ಯಕ್ರಮಗಳನ್ನು ಹಾಕಿಕೊಳ್ಳಲಾಗುತ್ತಿದೆ.

ಲೋಕಾಯುಕ್ತ ಸಂಸ್ಥೆ ವತಿಯಿಂದ ಹಮ್ಮಿಕೊಂಡಿದ್ದ (Lokayukta) ಕುಂದುಕೊರತೆ, ಅಹವಾಲು ಸ್ವೀಕಾರ, ಪ್ರಕರಣಗಳ ವಿಚಾರಣೆಗೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ ಎಂದು ಹೇಳಿದರು.

ಸಾರ್ವಜನಿಕರಿಂದ ಕುಂದುಕೊರತೆ, ಅಹವಾಲು ಸ್ವೀಕಾರದಲ್ಲಿ ನಗರಸಭೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕಂದಾಯ ಇಲಾಖೆ ಹಾಗೂ ತಾಲ್ಲೂಕು ಪಂಚಾಯತ್ ಇಒ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಮೇಲೆ ಹೆಚ್ಚಿನ ದೂರುಗಳು ಸಲ್ಲಿಕೆಯಾಗಿವೆ ಎಂದು ತಿಳಿಸಿದ ಅವರು, ಚಿತ್ರದುರ್ಗ ನಗರದ ವಿವಿಧೆಡೆ ಪರಿಶೀಲನೆ ಮಾಡಲಾಗಿದ್ದು, ಸ್ಥಳ ಪರಿಶೀಲನೆ ಸಂದರ್ಭದಲ್ಲಿ ಸಮಸ್ಯೆಗಳು ಕಂಡುಬಂದಾಗ ಸ್ವಯಂ ಪ್ರೇರಿತವಾಗಿ ದೂರು ದಾಖಲು ಮಾಡಿಕೊಳ್ಳಲಾಗಿದ್ದು, ಸಂಬಂಧಪಟ್ಟವರಿಗೆ ನೋಟಿಸ್ ನೀಡಿ,  ಸಮಸ್ಯೆ ಪರಿಹಾರ ಆಗುವವರೆಗೂ ಪ್ರಕರಣ ಚಾಲ್ತಿಯಲ್ಲಿರಲಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಯಾವುದೇ ಸಾರ್ವಜನಿಕರಿಗೆ ಸರ್ಕಾರಿ ಅಧಿಕಾರಿ, ನೌಕರರಿಂದ ತೊಂದರೆಗೊಳಗಾದ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಅರ್ಜಿ ನಮೂನೆ-1 ಮತ್ತು ನಮೂನೆ-2ರಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು.  ಇದರಲ್ಲಿ ದುರುದ್ದೇಶದ ಕಾರಣ ಇರಬಾರದು.ಇದರಿಂದ ತ್ವರಿತವಾಗಿ ಪ್ರಕರಣ ಇತ್ಯರ್ಥಪಡಿಸಬಹುದಾಗಿದೆ ಎಂದರು.

ಭ್ರಷ್ಟಾಚಾರ ಪ್ರಕರಣಗಳಲ್ಲಿ ಶಿಕ್ಷಯ ಪ್ರಮಾಣ ಕಡಿಮೆ ಇದೆ.  ಭ್ರಷ್ಟಾಚಾರದ ವಿಧಾನ ಇತ್ತೀಚಿನ ದಿನಗಳಲ್ಲಿ ತಂತ್ರಜ್ಞಾನದ ಜೊತೆ ಜೊತೆಗೆ ಬದಲಾಗುತ್ತಿದೆ.  ಹೀಗಾಗಿ ತಾಂತ್ರಿಕವಾಗಿ ತನಿಖೆ ಸಮರ್ಪಕವಾಗಿ ನಡೆಸಲು ಆಗುತ್ತಿಲ್ಲ.  ಹೀಗಾಗಿ  ಈ ಕುರಿತು ಹೆಚ್ಚಿನ ಸವಲತ್ತು ಒದಗಿಸುವಂತೆ ಸರ್ಕಾರಕ್ಕೆ ಮನವಿ (Lokayukta) ಮಾಡಿದ್ದೇವೆ ಎಂದರು.

ಇದನ್ನೂ ಓದಿ: ಭದ್ರಾ ಮೇಲ್ದಂಡೆ ಕಾಮಗಾರಿಗಳು ಸ್ಥಗಿತವಾಗಿಲ್ಲ: ಸಿಎಂ ಸಿದ್ದರಾಮಯ್ಯ | Upper bank of Bhadra

ಈ ಸಂದರ್ಭದಲ್ಲಿ ಲೋಕಾಯುಕ್ತ ಅಪರ ನಿಬಂಧಕರಾದ ಪೃಥ್ವಿರಾಜ್ ವರ್ಣೇಕರ್ ಹಾಗೂ ಜಿ.ವಿ. ವಿಜಯಾನಂದ, ಉಪಲೋಕಾಯುಕ್ತರ ಆಪ್ತ ಕಾರ್ಯದರ್ಶಿ ಹಾಗೂ ಸಿವಿಲ್ ನ್ಯಾಯಾಧೀಶರಾದ ಕಿರಣ್ ಪಿ. ಎಂ. ಪಾಟೀಲ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯೂ ಆಗಿರುವ ಹಿರಿಯ ಸಿವಿಲ್ ನ್ಯಾಯಾಧೀಶ ಎಂ. ವಿಜಯ್, ಜಿಲ್ಲಾಧಿಕಾರಿ ವೆಂಕಟೇಶ್ ಟಿ, ಜಿ.ಪಂ. ಸಿಇಒ ಸೋಮಶೇಖರ್ ಎಸ್.ಜೆ., ಲೋಕಾಯುಕ್ತ ಅಧೀಕ್ಷಕ ವಾಸುದೇವರಾಮ, ಡಿವೈಎಸ್‍ಪಿ ಮೃತ್ಯುಂಜಯ, ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ ಮತ್ತಿತರರಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ನಮ್ಮಜನ.ಕಾಂ gmail:  nammajananews@gmail.com

» Whatsapp Number-9686622252

You Might Also Like

Adike Rate | ಅಡಿಕೆ ರೇಟ್ | ಯಾವ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ರೇಟ್ ಎಷ್ಟಿದೆ

Coconut sapling: ಹೊಸದಾಗಿ ತೆಂಗಿನ ಸಸಿ ನಾಟಿ ಮಾಡಿಕೊಳ್ಳುವ ರೈತರಿಗೆ ಸಹಾಯಧನಕ್ಕೆ ಅರ್ಜಿ ಆಹ್ವಾನ

ಹೋಟೆಲ್ ಉದ್ದಿಮೆಯಲ್ಲಿ ಮಹಿಳೆಯರು ಪಾಲ್ಗೊಳ್ಳಲು ಅಕ್ಕ ಕೆಫೆ ಉತ್ತೇಜನ : ಸಚಿವ ಡಿ.ಸುಧಾಕರ್ | Akka Cafe

ಬಂಗಾರದ ಬೆಲೆಯಲ್ಲಿ ಏರಿಕೆ | Today Gold Rate

kadu kayuva mara: ಅರಿವಿನ ಜೊತೆಗೆ ಮನಸ್ಸಿಟ್ಟು ಓದಿದವರು ಮಹತ್ವದ ಕೃತಿಗಳನ್ನು ನೀಡಬಲ್ಲರು: ಡಾ.ಬಿ.ಆರ್.ರವಿಕಾಂತೇಗೌಡ

TAGGED:53 petitions53 ಅರ್ಜಿChitradurga NewsChitradurga visitJusticeK.N PhanindraKannada Newskannada suddiLokayuktaNammajana.comsettlement on the spotUpalokayuktaಉಪಲೋಕಾಯುಕ್ತಕನ್ನಡ ನ್ಯೂಸ್ಕನ್ನಡ ಸುದ್ದಿಕೆ.ಎನ್ ಫಣೀಂದ್ರಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಭೇಟಿಚಿತ್ರದುರ್ಗ ಸುದ್ದಿನಮ್ಮಜನ.ಕಾಂನ್ಯಾಯಮೂರ್ತಿಲೋಕಾಯುಕ್ತಸ್ಥಳದಲೇ ಇತ್ಯರ್ಥ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ಭದ್ರಾ ಮೇಲ್ದಂಡೆ ಕಾಮಗಾರಿಗಳು ಸ್ಥಗಿತವಾಗಿಲ್ಲ: ಸಿಎಂ ಸಿದ್ದರಾಮಯ್ಯ | Upper bank of Bhadra
Next Article Dina Bhavishya | ದಿನ ಭವಿಷ್ಯ | ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Today Dina Bhavishya | ದಿನ ಭವಿಷ್ಯ | ಆಗಸ್ಟ್ 04
ದಿನ ಭವಿಷ್ಯ
Bhadra: ಭದ್ರಾ ಜಲಾಶಯಕ್ಕೆ ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ಬಾಗಿನ ಸಮರ್ಪಣೆ
ಇಂದಿನ ಸುದ್ದಿ
Nikhil Kumaswamy: ಮಾಜಿ ಸಂಸದ ಪ್ರಜ್ವಲ್ ಜೀವಾವಧಿ ಶಿಕ್ಷೆ ಬಗ್ಗೆ ನಿಖಿಲ್ ಕುಮಾರಸ್ವಾಮಿ ಹೇಳಿದ್ದೇನು?
ರಾಜಕೀಯ
ಗಣಿಬಾಧಿತ ಹಳ್ಳಿಗಳಲ್ಲಿ ವಸತಿ, ನಿವೇಶನ ರಹಿತ ಫಲಾನುಭವಿಗಳ ಆಯ್ಕೆ : ಗ್ರಾಮ ಸಭೆ ನಡೆಸಲು ದಿನಾಂಕ ನಿಗದಿ | HOLALKERE
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?