
Chitradurga news|nammajana.com|12-02-2025
ನಮ್ಮಜನ. ಕಾಂ, ಚಳ್ಳಕೆರೆ: ಸರ್ಕಾರಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ಕೃಷಿ ಸಚಿವ ಚಲುವರಾಯಸ್ವಾಮಿಗೆ (Dodduullarti) ಪ್ರವಾಸಿಮಂದಿರದಲ್ಲಿ ರೈತ ಸಂಘದ ಕಾರ್ಯಕರ್ತರು ಮನವಿ ನೀಡಿ, ಕೃಷಿ ಇಲಾಖೆ ಮೂಲಕ ಪರಿಶಿಷ್ಟ ಜಾತಿ, ವರ್ಗ ಮತ್ತು ಹಿಂದುಳಿದ ವರ್ಗಗಳಿಗೆ ಕೃಷಿ ಪರಿಕರಗಳನ್ನು ಸಬ್ಸಿಡಿ ದರದಲ್ಲಿ ನೀಡುತ್ತಿದ್ದು, ಎಲ್ಲಾ ರೈತರಿಗೂ ಈ ಸೌಲಭ್ಯ ನೀಡುವಂತೆ ಜಿಲ್ಲಾ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಓ.ಟಿ.ತಿಪ್ಪೇಸ್ವಾಮಿ ಮನವಿ ನೀಡಿದರು.
ಮನವಿ ಸ್ವೀಕರಿಸಿ ಮಾತನಾಡಿದ ಕೃಷಿ ಸಚಿವ ಚಲುವರಾಯಸ್ವಾಮಿ, ಎಸ್ಸಿ, ಎಸ್ಟಿ, ಬಿಸಿಎಂ ಹೊರತು ಪಡಿಸಿ ಎಲ್ಲಾ ಸಮುದಾಯದ ರೈತರಿಗೆ ಸಬ್ಸಿಡಿ ದರದಲ್ಲಿ ಕೃಷಿ ಪರಿಕರ, ಬೀಜ, ಗೊಬ್ಬರ ವಿತರಣೆ ಸಬ್ಸಿಡಿ ಸೌಲಭ್ಯ ಎಲ್ಲಾ ರೈತರಿಗೆ ಸಿಗುವಂತಾಗಲಿ ಎಂದು ಮನವಿ ನೀಡಿದ್ದು, ನಿಮ್ಮ ಮನವಿಯನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರುವ ಭರವಸೆ ನೀಡಿದರು.

ರೇಣುಕಾಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಅಮೃತಮಹಲ್ ಕಾವಲು ಹೋರಾಟ ಸಮಿತಿ ಅಧ್ಯಕ್ಷ ದೊಡ್ಡ ಉಳ್ಳಾರ್ತಿ ಕರಿಯಣ್ಣ ಮತ್ತು ಸಿಬ್ಬಂದಿ ವರ್ಗ ದೊಡ್ಡ ಉಳ್ಳಾರ್ತಿಯನ್ನು ಹೋಬಳಿ ಕೇಂದ್ರವನ್ನಾಗಿ ಪರಿವರ್ತಿಸುವಂತೆ ಮನವಿ ನೀಡಿದರು.
ಓಬಳಾಪುರ, ರೇಣುಕಾಪುರ, ಮೈಲನಹಳ್ಳಿ, ಕಾಲುವೇಹಳ್ಳಿ, ಘಟಪರ್ತಿ ಸೇರಿದ ಒಟ್ಟು 35 ಕ್ಕೂ ಹೆಚ್ಚು ಗ್ರಾಮಗಳಿಗೆ ಇದರಿಂದ ಹೆಚ್ಚು ಅನುಕೂಲವಾಗಲಿದೆ ಎಂದು ಮನವಿ (Dodduullarti) ನೀಡಿದರು. ಮನವಿ ಸ್ವೀಕರಿಸಿದ ಕೃಷಿ ಸಚಿವರು ಪರಿಶೀಲಿಸುವ ಭರವಸೆ ನೀಡಿದರು.
ಇದನ್ನೂ ಓದಿ: Dairy farming | “ಹೈನುಗಾರಿಕೆ” ಕೃಷಿಯಲ್ಲಿ ಬಹಳ ಮುಖ್ಯ: ಎನ್.ಚಲುವರಾಯಸ್ವಾಮಿ
ಈ ಸಂದರ್ಭದಲ್ಲಿ ಶಾಸಕ, ಸಣ್ಣಕೈಗಾರಿಕೆ ಅಭಿವೃದ್ದಿಮಂಡಳಿ ಅಧ್ಯಕ್ಷ ಟಿ.ರಘುಮೂರ್ತಿ, ನಗರಸಭೆ ಅಧ್ಯಕ್ಷೆ ಜೈತುಂಬಿ, ಉಪಾಧ್ಯಕ್ಷ, ಸುಮ, ಸದಸ್ಯರಾದ ಬಿ.ಟಿ.ರಮೇಶ್ಗೌಡ, ಎಂ.ಜೆ.ರಾಘವೇಂದ್ರ, ಕೆ.ವೀರಭದ್ರಪ್ಪ, ಯುವಘಟಕದ ಅಧ್ಯಕ್ಷ ಯಲಗಟ್ಟೆವೀರೇಶ್, ಸಿ.ಟಿ.ಶ್ರೀನಿವಾಸ್, ಅನ್ವರ್ಮಾಸ್ಟರ್ ಮುಂತಾದವರು ಉಪಸ್ಥಿತರಿದ್ದರು