Chitradurga news|nammajana.com|21-2-2025
ನಮ್ಮಜನ.ಕಾಂ, ಚಿತ್ರದುರ್ಗ: ಅಧಿಕಾರ ವ್ಯಾಪ್ತಿ ಮೀರಿ ಕಬ್ಬಿಣದ ಅದಿರು ತುಂಬಿದ ಲಾರಿಗಳನ್ನು ವಶಪಡಿಸಿಕೊಂಡು ಪ್ರಕರಣ (Suspend) ದಾಖಲು ಮಾಡಿದ ಆರೋಪದ ಮೇಲೆ ಅರಣ್ಯ ಇಲಾಖೆ (RFO) ಚಿತ್ರದುರ್ಗದ ವಿಭಾಗದ ವಲಯ ಅರಣ್ಯಾಧಿಕಾರಿ ವಸಂತಕುಮಾರ್ ಅವರನ್ನು ಅಮಾನತುಗೊಳಿಸಲಾಗಿದೆ.
ಹೊಳಲ್ಕೆರೆ ತಾಲ್ಲೂಕು ದಿಂಡದಹಳ್ಳಿ ಸರ್ವೆ ನಂಬರ್ 38ರಲ್ಲಿ ದಾಸ್ತಾನಾಗಿದ್ದ ಕಬ್ಬಿಣದ ಅದಿರಿನ ಮೇಲಿನ ಮರ ಕಡಿಯುವಂತಿಲ್ಲ ಎಂಬ ಷರತ್ತು ವಿಧಿಸಿ ಸಾಯಿ ಬಾಲಾಜಿ ಸ್ಪಾಂಜ್ ಐರನ್ ಇಂಡಿಯಾ ಕಂಪನಿಗೆ ಅನುಮತಿ (RFO) ನೀಡಲಾಗಿತ್ತು. ಆದರೆ ಗಣಿ ಕಂಪನಿಯವರು ಮರ ಕಡಿದು ಕಬ್ಬಿಣ ಅದಿರು ಸಾಗಿಸಿದ್ದರು. ಅದಿರು ತುಂಬಿದ್ದ 5 ಲಾರಿಗಳನ್ನು ವಸಂತಕುಮಾರ್ ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದರು.

ಇದನ್ನೂ ಓದಿ: Sadhguru Ayurveda | ನಾಗತೀಹಳ್ಳಿ ಸರ್ಕಾರಿ ಶಾಲೆ ದತ್ತು ಪಡೆದ ಸದ್ಗುರು ಆಯುರ್ವೇದ ಸಂಸ್ಥೆ ಡಿ.ಎಸ್.ಪ್ರದೀಪ್
ಕಬ್ಬಿಣದ ಅದಿರು ದಾಸ್ತಾನು ಪ್ರದೇಶ ಹೊಳಲ್ಕೆರೆ ತಾಲ್ಲೂಕು ಕಾರ್ಯ ವ್ಯಾಪ್ತಿಗೆ ಬರುವ ಕ್ಷೇತ್ರವಾಗಿದೆ. ಆದರೆ ಚಿತ್ರದುರ್ಗ ವ್ಯಾಪ್ತಿಯ ಆರ್ಎಫ್ಒ ವಸಂತಕುಮಾರ್ ಪ್ರಕರಣ ದಾಖಲು ಮಾಡಿರುವುದು ಕರ್ತವ್ಯ ಲೋಪವಾಗಿದೆ ಎಂದು ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ವರದಿ ನೀಡಿದ್ದರು. ಈ ವರದಿ ಆಧರಿಸಿ (RFO) ಇಲಾಖಾ ತನಿಖೆಯನ್ನು ಕಾಯ್ದಿರಿಸಿ ಅರಣ್ಯ, ಜೀವಿ ಪರಿಸ್ಥಿತಿ ಮತ್ತು ಪರಿಸರ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಗೀತಾ ಎಂ ಪಾಟೀಲ ಅವರು ವಸಂತ್ ಕುಮಾರ್ ಅವರನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252