
Chitradurga news|nammajana.com|16-03-2025
ನಮ್ಮಜನ.ಕಾಂ, ಚಿತ್ರದುರ್ಗ: ಶುಕ್ರವಾರ ರಾತ್ರಿ ರಸ್ತೆಯಲ್ಲಿ ನಿಂತಿದ್ದನ್ನು ಪ್ರಶ್ನಿಸಿದ (Chitradurga) ವಿಚಾರಕ್ಕೆ ಸಂಬಂಧಿಸಿದಂತೆ ಪಿಎಸ್ಐ (PSI) ಮತ್ತು ಬಿಜೆಪಿ ಮುಖಂಡನ ನಡುವೆ ಗಲಾಟೆಯಾಗಿದ್ದು ಒಬ್ಬರಿಗೊಬ್ಬರು ಬೆಂಬಲ ಡಿಶುಂ ಡಿಶುಂ ಮಾಡಿಕೊಂಡಿರುವ ಘಟನೆ ಚಿತ್ರದುರ್ಗದ ಖಾಸಗಿ ಹೋಟೇಲ್ ಬಳಿ ನಡೆದಿದೆ.
ಚಿತ್ರದುರ್ಗದ ತುರುವನೂರು ರಸ್ತೆಯಲ್ಲಿ ಮಧುಗಿರಿ (Madhugiri) ಬಿಜೆಪಿ ಜಿಲ್ಲಾಧ್ಯಕ್ಷ ಹನುಮಂತೇಗೌಡ ಮತ್ತು ಅವರ ಹುಡುಗರು ತಡರಾತ್ರಿಯಲ್ಲಿ ಹೋಟೆಲ್ ಬಳಿ ನಿಂತಿದ್ದರು. ಆಗ ಇಷ್ಟೊತ್ತಲ್ಲಿ ರಸ್ತೆಯಲ್ಲಿ ಏನು ಮಾಡುತ್ತಿದ್ದೀರಿ ಎಂದು ಪ್ರಶ್ನಿಸಿದ ನಗರ ಠಾಣೆ ಪಿಎಸ್ಐ ಗಾದಿಲಿಂಗಪ್ಪ ಅವರು ಮತ್ತು ಹುನುಮಂತೇಗೌಡ ನಡುವೆ ಮಾತಿ ಮಾತು ಬೆಳೆದು ಪಿಎಸ್ಐ ಗೆ ಅವಾಚ್ಯ ಶಬ್ದದಿಂದ ಬೈದ ಎಂಬ ಕಾರಣಕ್ಕೂ ಪಿಎಸ್ಐ ಹನುಮಂತೇಗೌಡನಿಗೆ (Chitradurga) ಕಾಪಳಕ್ಕ ಬಾರಿಸಿದ್ದಾನೆ. ಕೂಡಲೇ ಪಿಎಸ್ಐ ಗಾದಿಲಿಂಗಪ್ಪ ಮೇಲೆ ಹನುಮಂತೇಗೌಡ ಹಲ್ಲೆ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.
ಈ ಘಟನೆಯಲ್ಲಿ ಹಲ್ಲೆಗೊಳಾಗದ ಪಿಎಸ್ಐ ಗಾದಿಲಿಂಗಪ್ಪ ಮತ್ತು ಹುನುಮಂತೇಗೌಡ ಇಬ್ಬರು ಜಿಲ್ಲಾಸ್ಪತ್ರೆ ಸೇರಿದ್ದಾರೆ. ಪಿಎಸ್ ಐ ಕೈಬೆರಳಿಗೆ ಗಾಯವಾಗಿದೆ ಮತ್ತು ಹನುಮಂತೇಗೌಡನಿಗೆ ಸಹ ಕಿವಿ ನೋವು ಬಿಪಿ ಹೆಚ್ಚಾಗಿದೆ ಎಂದು ಡಾಕ್ಟರ್ ತಿಳಿಸಿದ್ದರು.
ಮಧುಗಿರಿ ಬಿಜೆಪಿ ಜಿಲ್ಲಾಧ್ಯಕ್ಷ ಹನುಮಂತೇಗೌಡರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಈ ವೇಳೆ ಪೊಲೀಸರಿಂದಲೇ ನನ್ನ ಮೇಲೆ ಹಲ್ಲೆ ನಡೆದಿದೆ ಎಂದು ಹನುಮಂತೇಗೌಡ ಪ್ರತ್ಯಾರೋಪ ಮಾಡಿದ್ದಾರೆ. ಈ ಬಗ್ಗೆ ಪ್ರತ್ಯಕ್ಷದರ್ಶಿಯಾದ (Chitradurga) ಹನುಮಂತೇಗೌಡರ ಕಾರಿನ ಚಾಲಕ ರಂಗಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.
ಊಟ ಮುಗಿಸಿ ಹೊರಡುವ ವೇಳೆ ಸ್ಥಳಕ್ಕೆ ಧಾವಿಸಿದ (Chitradurga) ಪೊಲೀಸರು ನಮ್ಮ ಸಾಹೇಬರನ್ನು ಏಕವಚನ ಹಾಗೂ ಅವಾಚ್ಯ ಶಬ್ದದಿಂದ ನಿಂದಿಸಿದರು. ಆಗ ಪಿಎಸ್ಐಗೆ ನಮ್ಮ ಸಾಹೇಬರು ಕೂಡ ನಿಂದಿಸಿದ್ದು, ಪರಸ್ಪರ ಹಲ್ಲೆ ನಡೆಸಿದ ಪರಿಣಾಮ ಘಟನೆ ನಡೆಯಿತೆಂದು ತಿಳಿಸಿದ್ದಾರೆ. ಚಿತ್ರದುರ್ಗ ನಗರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
