Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Challakere ನಗರಸಭೆ ನೂತನ ಅಧ್ಯಕ್ಷೆಯಾಗಿ ಮಂಜುಳಾ ಅವಿರೋಧ ಆಯ್ಕೆ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ರಾಜಕೀಯ > Challakere ನಗರಸಭೆ ನೂತನ ಅಧ್ಯಕ್ಷೆಯಾಗಿ ಮಂಜುಳಾ ಅವಿರೋಧ ಆಯ್ಕೆ
ರಾಜಕೀಯ

Challakere ನಗರಸಭೆ ನೂತನ ಅಧ್ಯಕ್ಷೆಯಾಗಿ ಮಂಜುಳಾ ಅವಿರೋಧ ಆಯ್ಕೆ

Editor Nammajana
Last updated: 27 March 2025 02:55
By Editor Nammajana 1 Min Read
Share
SHARE

Chitradurga news|nammajana.com|27-03-2025

ನಮ್ಮಜನ.ಕಾಂ, ಚಳ್ಳಕೆರೆ: ನಗರಸಭೆಯ ನೂತನ (Challakere) ಅಧ್ಯಕ್ಷೆಯಾಗಿ ೨೪ನೇ ವಾರ್ಡ್ನ ಸದಸ್ಯೆ, ಮಾಜಿ ಉಪಾಧ್ಯಕ್ಷೆ ಆರ್.ಮಂಜುಳಾಪ್ರಸನ್ನಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ಧಾರೆಂದು ಚುನಾವಣಾಧಿಕಾರಿ, ಉಪವಿಭಾಗದ ಅಧಿಕಾರಿ ಮೆಹಬೂಬ್‌ಜಿಲಾನ್ ತಿಳಿಸಿದ್ಧಾರೆ.

ಬುಧವಾರ ನಡೆದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆಯಲ್ಲಿ (Challakere) ಆರ್.ಮಂಜುಳಾಪ್ರಸನ್ನಕುಮಾರ್ ಮಾತ್ರ ಅಧ್ಯಕ್ಷಸ್ಥಾನಕ್ಕೆ ಏಕೈಕ ನಾಮಪತ್ರ ಸಲ್ಲಿಸಿದ್ದರು. ಬೇರೆಯಾರೂ ನಾಮಪತ್ರ ಸಲ್ಲಿಸದ ಕಾರಣ ನೂತನ ಅಧ್ಯಕ್ಷರಾಗಿ ಆರ್.ಮಂಜುಳಾಪ್ರಸನ್ನಕುಮಾರ್ ಅವಿರೋಧವಾಗಿ ಆಯ್ಕೆಯಾದರು.

ಆಯ್ಕೆಯನ್ನು ಪ್ರಕಟಿಸಿದ ಕೂಡಲೇ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಮುಖಂಡರು ಸಂತೋಷ ವ್ಯಕ್ತಪಡಿಸಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಚುನಾವಣಾ ಆಯ್ಕೆ ಪ್ರಕ್ರಿಯೆ ಮುಗಿದ ಕೆಲಹೊತ್ತಿನಲ್ಲಿ ನಗರಸಭೆಗೆ ಆಗಮಿಸಿದ ಕ್ಷೇತ್ರದ ಶಾಸಕ, ಸಣ್ಣಕೈಗಾರಿಕೆ ಅಭಿವೃದ್ದಿ ಮಂಡಳಿ ಅಧ್ಯಕ್ಷ ಟಿ.ರಘುಮೂರ್ತಿ ನೂತನ ಅಧ್ಯಕ್ಷರನ್ನು ಅಭಿನಂದಿಸಿದರು.

ಚಳ್ಳಕೆರೆ ನಗರಸಭೆ ವ್ಯಾಪ್ತಿಯ ಅಭಿವೃದ್ದಿಪರ ಚಿಂತನೆಗಳಿಗೆ ನೂತನ ಅಧ್ಯಕ್ಷರು ಹೆಚ್ಚು ಒತ್ತು ನೀಡುತ್ತಾರೆಂಬ ವಿಶ್ವಾಸ ನನಗಿದೆ. ನಗರಸಭೆಯ ಸದಸ್ಯೆಯಾಗಿ, ಉಪಾಧ್ಯಕ್ಷರಾಗಿ ಎಂಟು ವರ್ಷಗಳಿಂದ ಕಾರ್ಯನಿರ್ವಹಿಸಿದ್ಧಾರೆ. ವಿಶೇಷವಾಗಿ ಅವರು ಪ್ರತಿನಿಧಿಸುವ 23 ನೇ ವಾರ್ಡ್ನಲ್ಲಿ ಯಾವುದೇ ಸಮಸ್ಯೆಗಳು ಎದುರಾಗದಂತೆ ಜಾಗ್ರತೆ ವಹಿಸಿದ್ದಾರೆ.

ಪ್ರಸ್ತುತ ನಗರಸಭೆ ಅಧ್ಯಕ್ಷೆಯಾಗಿ ಅಧಿಕಾರಿವಹಿಸಿಕೊಂಡು ಇವರ ಅವಧಿಯಲ್ಲಿ ಚಳ್ಳಕೆರೆ ನಗರ ಹೆಚ್ಚು ಅಭಿವೃದ್ದಿಯನ್ನು ಪಡೆಯಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ನೂತನ ಅಧ್ಯಕ್ಷೆಯಾಗಿ ಆಯ್ಕೆಯಾದ ಆರ್.ಮಂಜುಳಾಪ್ರಸನ್ನಕುಮಾರ್ ಮಾತನಾಡಿ, ನಾನು ಅಧ್ಯಕ್ಷ ಸ್ಥಾನ ವಹಿಸಲು ಎಲ್ಲಾ ರೀತಿಯ ಸಹಕಾರ ನೀಡಿದ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಹಾಗೂ ಎಲ್ಲಾ ಸದಸ್ಯರನ್ನು (Challakere) ಅಭಿನಂದಿಸುವುದಾಗಿ ತಿಳಿಸಿದರು. ಮೊಟ್ಟ ಮೊದಲಬಾರಿಗೆ ಶಾಸಕರು ವಿಶ್ವಕರ್ಮ ಸಮಾಜದ ಮಹಿಳೆಗೆ ಅವಕಾಶ ಮಾಡಿಕೊಟ್ಟಿದ್ಧಾರೆ. ಅವರ ವಿಶ್ವಾಸಕ್ಕೆ ಯಾವುದೇ ದಕ್ಕೆಯಾಗದಂತೆ ಕಾರ್ಯನಿರ್ವಹಿಸುವ ಭರವಸೆ ನೀಡಿದರು.

ಇದನ್ನೂ ಓದಿ: ದಿನ ಭವಿಷ್ಯ, ಯಾವ್ಯಾವ ರಾಶಿಗೆ ಇವತ್ತು ಹೇಗಿದೆ ದಿನ | Dina Bhavishya

ಅಧ್ಯಕ್ಷರಾಗಿ ಆಯ್ಕೆಯಾದ ನಂತರ ನಗರದ ಪ್ರಮುಖ ರಸ್ತೆಯಲ್ಲಿ ಮೆರವಣಿಗೆ ನಡೆಸಲಾಯಿತು, ಉಪಾಧ್ಯಕ್ಷೆ ಸುಮ, ಸುಜಾತ, ಶಿಲ್ಪ, ಜೈತುಂಬಿ, ಸುಮಕ್ಕ, ಚಳ್ಳಕೆರೆಯಪ್ಪ, ಪ್ರಶಾಂತ್‌ಕುಮಾರ್, ಎಂ.ಜೆ.ರಾಘವೇಂದ್ರ, ಬಿ.ಟಿ.ರಮೇಶ್‌ಗೌಡ, ಆರ್.ವೀರಭದ್ರಪ್ಪ, ವೈ.ಪ್ರಕಾಶ್, ಹೊಯ್ಸಳಗೋವಿಂದ, ಕಾಂಗ್ರೆಸ್ ಹಿರಿಯ ಮುಖಂಡ ಟಿ.ಪ್ರಭುದೇವ್, ಎನ್.ಮಂಜುನಾಥ ಮುಂತಾದವರು ಉಪಸ್ಥಿತರಿದ್ದರು.

You Might Also Like

Challakere | ತಳಕಿನ ಸೂಲಗಿತ್ತಿ ತಿಮ್ಮಕ್ಕ ಗೆ ಮನೆ ಕಟ್ಟಿಸುವ ಅಭಯ ನೀಡಿದ ಶಾಸಕ ಟಿ.ರಘುಮೂರ್ತಿ

Challakere ಇಂಜಿನಿಯರಿಂಗ್ ಕಾಲೇಜು ಪ್ರಾರಂಭಿಸಿ ಮಧ್ಯಕರ್ನಾಟಕದ ಬಡ ವಿದ್ಯಾರ್ಥಿಗಳ ಬದುಕಿಗೆ ಶಕ್ತಿ ತುಂಬಿದ ಶಾಸಕ ಟಿ.ರಘುಮೂರ್ತಿ

Challakere crime | ನವವಿವಾಹಿತೆ ಆತ್ಮಹತ್ಯೆ, ಇಬ್ಬರ ಮೇಲೆ FIR ದಾಖಲು

Challakere | ಶ್ರಮಜೀವಿ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರ ಬದ್ದ: ಟಿ.ರಘುಮೂರ್ತಿ

Challakere | ಹೋಳಿಗೆ ಊಟ ಮಾಡಿದ 40 ಜ‌ನರಿಗೆ ವಾಂತಿ, ಬೇದಿ

TAGGED:ChallakereManjula ElectionMunicipal Council ElectionPresident ElectionUnopposed Electionಅಧ್ಯಕ್ಷರ ಚುನಾವಣೆಅವಿರೋಧ ಆಯ್ಕೆಚಳ್ಳಕೆರೆನಗರಸಭೆ ಚುನಾವಣೆಮಂಜುಳಾ ಆಯ್ಕೆ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ದಿನ ಭವಿಷ್ಯ, ಯಾವ್ಯಾವ ರಾಶಿಗೆ ಇವತ್ತು ಹೇಗಿದೆ ದಿನ | Dina Bhavishya
Next Article Adike rate Hike | ಅಡಿಕೆ ಬೆಲೆಯಲ್ಲಿ ಭರ್ಜರಿ ಏರಿಕೆ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Dina Bhavishya | ದಿನ ಭವಿಷ್ಯ , ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ
Gold Rate | ಬಂಗಾರದ ಬೆಲೆಯಲ್ಲಿ ಇಂದು ಭರ್ಜರಿ ಇಳಿಕೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ
Adike rate | ಚನ್ನಗಿರಿ ಅಡಿಕೆ ರೇಟ್ | 06-06-2025
ಅಡಿಕೆ ಧಾರಣೆ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?