
Chitradurga news|nammajana.com|25-11-2024
ನಮ್ಮಜನ.ಕಾಂ, ಚಳ್ಳಕೆರೆ: ನಗರದ ರಾಷ್ಟೀಯ ಹೆದ್ದಾರಿ ವೀರದಿಮ್ಮನಹಳ್ಳಿ ಬಳಿ ಬೈಕ್ಗೆ ಡಿಕ್ಕಿ ತಪ್ಪಿಸಲು ಹೋಗಿ ಬೈಕ್ಗೆ ತಾಗಿ ಕಾರುಪಲ್ಟಿಯಾಗಿ ಕಾರಿನಲ್ಲಿದ್ದ ಒಟ್ಟು ನಾಲ್ವರು (Accident) ಗಾಯಗೊಂಡು ೧೧ ವರ್ಷದ ಮಗುವೊಂದು ಮೃತಪಟ್ಟ ಘಟನೆ ವರದಿಯಾಗಿದೆ.
ಮೊಳಕಾಲ್ಮೂರು ತಾಲ್ಲೂಕಿನ ರಾಂಪುರ ಗ್ರಾಮದ ಸಂಬAಧಿಕರ ಮದುವೆಗೆ ಗೌರಿಬಿದನೂರಿನ ಕುಟುಂಬವೊAದು ತೆರಳಿ ಮದುವೆ ಮುಗಿಸಿಕೊಂಡು ಸೋಮವಾರ ವಾಪಾಸ್ ಬರುವ ಸಂದರ್ಭದಲ್ಲಿ ಮಧ್ಯಾಹ್ನ ಈ ಘಟನೆ ಸಂಭವಿಸಿದೆ. ಕಾರುಚಾಲಕ ವೈ.ಗಿರಿಧರ ವೀರದಿಮ್ಮನಹಳ್ಳಿ ಕ್ರಾಸ್ಬಳಿ ಅಡ್ಡಬಂದ ಬೈಕಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಪ್ರಯತ್ನಿಸಿದ್ದು, ಕಾರುಬೈಕ್ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಬೈಕ್ ಸವಾರ ಸಹ ಬೈಕ್ ಸಹಿತ ರಸ್ತೆ ಮೇಲೆ ಬಿದ್ದಿದ್ದಾನೆ. ಕೂಡಲೇ ಸ್ಥಳೀಯರು ಗಾಯಗೊಂಡ ಚಾಲಕ ವೈ.ಗಿರಿಧರ(೩೭), ಜಾನಕಮ್ಮ(೫೫), ವೈ.ವಿದ್ಯಾಧರ(೩೪) ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದು, ಗಿರಿಧರ ಪುತ್ರ ಮೋನಿಷ್(೧೧) ಅಪಘಾತದ ರಭಸಕ್ಕೆ ಕಾರಿನಿಂದ ಹೊರಗೆ ಬಿದಿದ್ದು, ಕೂಡಲೇ ಮಗುವನ್ನು ಆಸ್ಪತ್ರೆಗೆ ದಾಖಲಿಸಿದಾಗ (Accident) ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಪಿಎಸ್ಐ ಕೆ.ಸತೀಶ್ನಾಯ್ಕ ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ್ಧಾರೆ.

ಇದನ್ನೂ ಓದಿ: Today Adike Rate | 25 ನವೆಂಬರ್ 2024 | ಚನ್ನಗಿರಿ, ಭೀಮಸಮುದ್ರ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಏರಿಕೆ
ಇತ್ತೀಚೆಗೆ ತಾನೇ ವೀರದಿಮ್ಮನಹಳ್ಳಿ ಬಳಿ ನಿರ್ಮಾಣಗೊಂಡ ಹೊಸ ಬೈಪಾಸ್ನಲ್ಲಿ ಸೂಕ್ತ ನಾಮಫಲಕವಿಲ್ಲದೆ ಅಪಘಾತಗಳು ನಿರಂತರ ಜರುಗುತ್ತಿದ್ದು, ಈ ಬಗ್ಗೆ ಜಿಲ್ಲಾಡಳಿತ ಹಾಗೂ ರಾಷ್ಟೀಯ ಹೆದ್ದಾರಿ ಪ್ರಾಧಿಕಾರ ಸಾರ್ವಜನಿಕರ ಹಿತದೃಷ್ಠಿಯಿಂದ ಮೇಲುಸೇತುವೆ ನಿರ್ಮಿಸುವಂತೆ ಸ್ಥಳದಲ್ಲಿದ್ದ ಪ್ರತ್ಯಕ್ಷದರ್ಶಿ ಕರೀಕೆರೆ ನಾಗರಾಜು ಸರ್ಕಾರವನ್ನು ಒತ್ತಾಯಿಸಿದ್ಧಾರೆ