Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ರಕ್ತದ ಮಡುವಿನಲ್ಲಿದ್ದ ಯುವಕರ ಪ್ರಾಣ ಉಳಿಸಿದ ರಿಯಲ್ ಹೀರೋ PSI ಮಹೇಶ್ ಹೊಸಪೇಟೆ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಕ್ರೈಂ ಸುದ್ದಿ > ರಕ್ತದ ಮಡುವಿನಲ್ಲಿದ್ದ ಯುವಕರ ಪ್ರಾಣ ಉಳಿಸಿದ ರಿಯಲ್ ಹೀರೋ PSI ಮಹೇಶ್ ಹೊಸಪೇಟೆ
ಕ್ರೈಂ ಸುದ್ದಿ

ರಕ್ತದ ಮಡುವಿನಲ್ಲಿದ್ದ ಯುವಕರ ಪ್ರಾಣ ಉಳಿಸಿದ ರಿಯಲ್ ಹೀರೋ PSI ಮಹೇಶ್ ಹೊಸಪೇಟೆ

Editor Nammajana
Last updated: 8 May 2024 7:35 AM
By Editor Nammajana 1 Min Read
Share
SHARE
Telegram Group Join Now
WhatsApp Group Join Now

Chitradurga News | Nammajana.com | 8-5-2024

ನಮ್ಮಜನ.ಕಾಂ.ಮೊಳಕಾಲ್ಮುರು:-ಅಪಘಾತವಾಗಿ ರಕ್ತ ಮಡುವಿನಲ್ಲಿ ಬಿದ್ದು ಜೀವನ್ಮರಣ ಹೋರಾಟ ನಡೆಸುತ್ತಿದ್ದ ಯುವಕರನ್ನು ಆಸ್ಪತ್ರೆಗೆ ಸೇರಿಸುವ ಮೂಲಕ ರಾಂಪುರ ಪೊಲೀಸ್ ಠಾಣೆಯ ಪಿಎಸ್ ಐ ಮಹೇಶ್ ಹೊಸಪೇಟೆ ಮಾನವೀಯತೆ ಮೆರೆದಿದ್ದಾರೆ.

ರಾಷ್ಟೀಯ ಹೆದ್ದಾರಿಯ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮುರು ತಾಲೂಕಿನ ಹಾನಗಲ್ ಗ್ರಾಮದ ರೈಸ್ ಮಿಲ್ ಬಳಿಯಲ್ಲಿ ಮಂಗಳವಾರ ಸಂಜೆ ಬೈಕ್ ಅಪಘಾತವಾಗಿ,ಇಬ್ಬರು ಯುವಕರು ರಕ್ತ ಮಡುವಿನಲ್ಲಿ ಬಿದ್ದು ಜೀವನ್ಮರಣ ಹೋರಾಟ ನಡೆಸುತ್ತಿದ್ದರು.

ಈ ಘಟನೆಯನ್ನು ನೋಡುತ್ತಾ ಕೆಲವರು ವಿಡಿಯೋ ಮಾಡುತ್ತಿದ್ದರೆ, ಇನ್ನೂ ಕೆಲವರು ಆಂಬುಲೆನ್ಸ್ ಗೆ ಫೋನ್ ಮಾಡಿ ಅಪಘಾತವಾಗಿರುವ ಮಾಹಿತಿಯನ್ನು ಹೇಳಿದರು ಸಹ ಅರ್ಧ ಗಂಟೆಗೂ ಹೆಚ್ಚು ಕಾಲ ಕಾದರೂ ಸಕಾಲದಲ್ಲಿ ಯಾವುದೇ ಆಂಬುಲೆನ್ಸ್ ಸ್ಥಳಕ್ಕೆ ಬರಲಿಲ್ಲ.

ಅದಾಗಲೇ ಅಪಘಾತದಲ್ಲಿ ಓರ್ವ ಯುವಕನು ಗಂಭೀರವಾಗಿ ಗಾಯಗೊಂಡ ಕಾರಣ ರಸ್ತೆಯಲ್ಲಿಯೇ ಯುವಕರು ನರಳುತ್ತಿದ್ದನು.

ಇನ್ನೂ ಈ ವೇಳೆ ಇದೇ ದಾರಿಯಲ್ಲಿ ಪೋಲಿಸ್ ವಾಹನದಲ್ಲಿ ತೆರಳುತ್ತಿದ್ದ ರಾಂಪುರ ಪಿಎಸ್ಐ ಮಹೇಶ್ ಹೊಸಪೇಟೆ ಅಪಘಾತವಾಗಿರುವುದನ್ನು ಕಂಡು ಕೂಡಲೇ ಸ್ಥಳದಲ್ಲಿ ಗಾಯಾಳುಗಳನ್ನು ಉಪಚರಿಸಿ ತಕ್ಷಣವೇ ಪೊಲೀಸ್ ವಾಹನದಲ್ಲಿಯೇ ಗಾಯಳುಗಳನ್ನು ಕರೆದೋಯ್ದು ಮೊಳಕಾಲ್ಮುರು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಸೇರಿಸಿದ್ದಾರೆ.

ಅಪಘಾತದಲ್ಲಿ ಗಾಯಗೊಂಡವರ ಪೈಕಿ ತಿಪ್ಪೇಶ್ ಎಂಬುವ ಯುವಕನ್ನು ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗೆ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ಕಳುಹಿಸಲಾಗಿದ್ದು, ಇನ್ನೊರ್ವ ಯುವಕನಿಗೆ ಸಾಧಾರಣ ಗಾಯಗಳಾಗಿವೆ. ಈ ಇಬ್ಬರು ಯುವಕರು ಗಡ್ಡದಬೋರಯ್ಯನಹಟ್ಟಿ ಗ್ರಾಮದವರು ಆಗಿದ್ದಾರೆ.

ಅಪಘಾತವಾದಾಗ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡಿದರೆ ವ್ಯಕ್ತಿ ಬದುಕುಳಿಯಬಲ್ಲ ಎಂಬುವ ಘಟನೆಗೆ ಇದು ಸಾಕ್ಷಿಯಾಗಿದ್ದು, ಪಿಎಸ್ಐ ಮಹೇಶ ಹೊಸಪೇಟೆಯವರ ಕಾರ್ಯಕ್ಕೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗುತ್ತಿದೆ.

ಇದನ್ನೂ ಓದಿ: ಚಿತ್ರದುರ್ಗದಲ್ಲಿ ಇವತ್ತು ಎಷ್ಟಿರುತ್ತೆ ತಾಪಮಾನ? ಇಲ್ಲಿದೆ ಇಡೀ ದಿನದ ಹವಾಮಾನ ವರದಿ

ಪೊಲೀಸರು ಎಲ್ಲಾ ಮುಗಿದ ಮೇಲೆಯೇ ಬರುವುದು ಎಂದು ಆಡಿಕೊಳ್ಳುವವರ ಮಧ್ಯೆದಲ್ಲಿ ಪಿಎಸ್ ಐ ಮಹೇಶ್ ಹೊಸಪೇಟೆ ಇದಕ್ಕೆ ಆಸ್ಪದ ನೀಡದೇ ಜೀವನ್ಮರಣ ಹೋರಾಟ ನಡೆಸುತ್ತಿದ್ದ ಯುವಕರ ಪ್ರಾಣವನ್ನು ಉಳಿಸಿ ಮಾದರಿಯಾಗಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ನಮ್ಮಜನ.ಕಾಂ gmail:  nammajananews@gmail.com

» Whatsapp Number-9686622252

You Might Also Like

ಗಣಿಬಾಧಿತ ಹಳ್ಳಿಗಳಲ್ಲಿ ವಸತಿ, ನಿವೇಶನ ರಹಿತ ಫಲಾನುಭವಿಗಳ ಆಯ್ಕೆ : ಗ್ರಾಮ ಸಭೆ ನಡೆಸಲು ದಿನಾಂಕ ನಿಗದಿ | HOLALKERE

HIRIYUR | ಕುಡಿಯುವ ನೀರಿಗಾಗಿ ಶಾಲಾ ಮಕ್ಕಳು ಪ್ರತಿಭಟನೆ

Dina Bhavishya | ದಿನ ಭವಿಷ್ಯ | ಇಂದು ಯಾವ ರಾಶಿಗೆ ಶುಭಯೋಗ

internal reservation: ಒಳಮೀಸಲಾತಿ ಜಾರಿ ಖಚಿತ : ಮಾಜಿ ಸಚಿವ ಎಚ್.ಆಂಜನೇಯ

creative activities: ಪಠ್ಯದ ಜತೆಗೆ ಸೃಜನಶೀಲ ಚಟುವಟಿಕೆಗಳಲ್ಲಿಯೂ ಪಾಲ್ಗೊಳ್ಳಿ: ಬಿ.ವಿ.ತುಕಾರಾಂರಾವ್

TAGGED:accidentChitradurga NewsKannada Newskannada suddiMahesh HosapeteMahesh HospetMolakalmuruNammajana.comPSIyouthಅಪಘಾತಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂಪಿಎಸ್ಐಮಹೇಶ್ ಹೊಸಪೇಟೆಮೊಳಕಾಲ್ಮುರುಯುವಕ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy2
Sleepy0
Angry0
Dead0
Wink0
Previous Article ಚಿತ್ರದುರ್ಗದಲ್ಲಿ ಇವತ್ತು ಎಷ್ಟಿರುತ್ತೆ ತಾಪಮಾನ? ಇಲ್ಲಿದೆ ಇಡೀ ದಿನದ ಹವಾಮಾನ ವರದಿ
Next Article SSLC ಪರೀಕ್ಷೆ ಫಲಿತಾಂಶ ನಾಳೆ ಪ್ರಕಟ, ಎಷ್ಟೊತ್ತಿಗೆ? ಯಾವ ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದು?
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Akka Cafe: ಜಿಲ್ಲಾ ಪಂಚಾಯತ್ ಆವರಣದಲ್ಲಿ ಅಕ್ಕ ಕೆಫೆ ಪ್ರಾರಂಭ
ಇಂದಿನ ಸುದ್ದಿ
mining: ಗಣಿ ಮಾಫಿಯ ನಿಲ್ಲಿಸಿ ಪರಿಸರ ರಕ್ಷಿಸಿ | ಆ.16ರಂದು ಬಳ್ಳಾರಿಯಲ್ಲಿ ರಾಜ್ಯ ಸಮಾವೇಶ
ಇಂದಿನ ಸುದ್ದಿ
ಆಗಸ್ಟ್ 1 ರಿಂದ ಹೊಸ UPI ನಿಯಮಗಳು ಜಾರಿ | ಏನೆಲ್ಲ ರೂಲ್ಸ್ ಇವೆ?
ವಿಶೇಷ ಸುದ್ದಿ
FIR ದಾಖಲು ಮಾಡಿದರು ತೆಂಗಿನ ಸಸಿ ನಾಟಿ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?