Chitradurga news|nammajana.com|15-11-2024
ನಮ್ಮಜನ.ಕಾಂ, ಚಳ್ಳಕೆರೆ: ನಗರದ ಬಳ್ಳಾರಿ ರಸ್ತೆಯ ಎಸ್.ಆರ್.ವೇ ಬ್ರಿಡ್ಜ್ ಇಂಜಿನಿಯರಿಂಗ್ ಕಾಲೇಜು (Assault)ಕಮಾನ್ ಮುಂಭಾಗದಲ್ಲಿ ಮಾತನಾಡುತ್ತಾ ಕುಳಿತಿದ್ದ ಮೂವರು ವ್ಯಕ್ತಿಗಳನ್ನು ಕುಡಿಯಲು ಹಣ ಕೇಳಿ ನಿರಾಕರಿಸಿದ ಹಿನ್ನೆಲೆಯಲ್ಲಿ ಅವರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ, ಪ್ರಾಣಭಯ ಉಂಟು ಮಾಡಿದ ಪ್ರಕರಣ ನಡೆದಿದೆ.
ವೃತ್ತಿಯಲ್ಲಿ ಲಾರಿಚಾಲಕ ಕಾಟಪ್ಪನಹಟ್ಟಿಯ ರವಿ, ಗಾಂಧಿನಗರದ ಶ್ರೀನಿವಾಸ್, ವೀರೇಶ್ ಮತ್ತು ಚಿತ್ತಯ್ಯ (Assault) ಬುಧವಾರ ಸಂಜೆ ಮಾತನಾಡುತ್ತಾ ಕುಳಿತಿರುವಾಗ ಅಲ್ಲಿಗೆ ಬಂದ ಚಕ್ರವರ್ತಿ ಎಂಬ ಯುವಕ ನನಗೆ ಕುಡಿಯಲು ಹಣಕೊಡಿ ಎಂದು ಕೇಳಿದ್ಧಾನೆ.

ನಮ್ಮಲ್ಲಿ ಹಣವಿಲ್ಲವೆಂದು ಹೇಳಿದ ಕೂಡಲೇ ಕೆರಳಿದ ಚಕ್ರವರ್ತಿ ಶ್ರೀನಿವಾಸ, ವೀರೇಶ್ ಮತ್ತು ಚಿತ್ತಯ್ಯ ಎಂಬುವವರ ಮೇಲೆ ಏಕಾಏಕಿ ಚಾಕುವಿನಿಂದ ಹಲ್ಲೆ ನಡೆಸಿ ಪ್ರಾಣಬೆದರಿಕೆ (Assault) ಹಾಕಿದ್ದಾನೆ. ಕೂಡಲೇ ರವಿ ಅವರನ್ನು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಗಾಯಾಳು ಶ್ರೀನಿವಾಸ್ನನ್ನು ಚಿತ್ರದುರ್ಗ ಜಿಲ್ಲಾಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮೂವರ ಮೇಲೆ ಹಲ್ಲೆ ನಡೆಸಿದ ಚಕ್ರವರ್ತಿಯನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.
ಇದನ್ನೂ ಓದಿ: ವಾಣಿ ವಿಲಾಸ ಸಾಗರಕ್ಕೆ 924 ಕ್ಯೂಸೆಕ್ಸ್ ನೀರು, ಇಂದಿನ ನೀರಿನ ಮಟ್ಟ ಎಷ್ಟಿದೆ | Vani Vilasa Sagara DamDam
ಡಿವೈಎಸ್ಪಿ ಟಿ.ಬಿ.ರಾಜಣ್ಣ, ಠಾಣಾ ಇನ್ಸ್ಪೆಕ್ಟರ್ (Assault) ರಾಜಫಕೃದ್ದೀನ್ದೇಸಾಯಿ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದರು. ಪಿಎಸ್ಐ ಕೆ.ಸತೀಶ್ನಾಯ್ಕ ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ್ಧಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252