Chitradurga news|nammajana.com|30-6-2024
ನಮ್ಮಜನ.ಕಾಂ, ಹಿರಿಯೂರು: ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸುತ್ತಿಲ್ಲ ಎಂದು ಆರೋಪಿಸಿ ಗ್ರಾಮ ಪಂಚಾಯಿತಿ ಪಿಡಿಒ ಮೇಲೆ ನಾಲ್ವರು ವ್ಯಕ್ತಿಗಳು ಹಲ್ಲೆ (Attack on PDO) ನಡೆಸಿದ್ದು ಹಿರಿಯೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಲ್ಲೂಕಿನ ಹೊಸಯಳನಾಡು ಗ್ರಾಮ ಪಂಚಾಯಿತಿ ಪಿಡಿಒ ಎಂ. ವಿವೇಕ್ ತೇಜಸ್ವಿ ನೀಡಿರುವ ದೂರಿನಲ್ಲಿ ‘ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲೂರು ಗ್ರಾಮದ ಬಾಲರಾಮಯ್ಯ, ಅಜ್ಜಯ್ಯ, ಸಿದ್ದರಾಮೇಶ್ವರ ಹಾಗೂ ಬೋರ್ವೆಲ್ ರಾಮಚಂದ್ರಪ್ಪ ಎಂಬುವರು ಶನಿವಾರ ಏಕಾಏಕಿ ಗ್ರಾಮ ಪಂಚಾಯಿತಿಗೆ ನುಗ್ಗಿ, ಅವಾಚ್ಯ ಶಬ್ದಗಳಿಂದ (Attack on PDO) ನಿಂದಿಸಿದರು.

ಇದನ್ನೂ ಓದಿ: ಕಚೇರಿ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ | District Bal Bhavan
ಅಲೂರು ಗ್ರಾಮದಲ್ಲಿ ನೀರಿನ ಸಮಸ್ಯೆ ಬಗೆಹರಿಯುತ್ತಿಲ್ಲ ಎಂದು ಆರೋಪಿಸಿ ಕಚೇರಿಯಿಂದ ಹೊರಗೆಳೆದು ಹಲ್ಲೆ (Attack on PDO) ಮಾಡಿದರು ಎಂದು ಆರೋಪಿಸಿದ್ದಾರೆ. ನಾಲ್ವರು ಆರೋಪಿಗಳ ವಿರುದ್ಧ ಎಸ್ಸಿ, ಎಸ್ಪಿ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252