Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Bangalore ನಲ್ಲಿ ಸಿರಿಧಾನ್ಯ ಹಬ್” ನಿರ್ಮಾಣಕ್ಕೆ ಶೀಘ್ರ ಭೂಮಿ ಪೂಜೆ: ಸಚಿವ ಎನ್.ಚಲುವರಾಯಸ್ವಾಮಿ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > Bangalore ನಲ್ಲಿ ಸಿರಿಧಾನ್ಯ ಹಬ್” ನಿರ್ಮಾಣಕ್ಕೆ ಶೀಘ್ರ ಭೂಮಿ ಪೂಜೆ: ಸಚಿವ ಎನ್.ಚಲುವರಾಯಸ್ವಾಮಿ
ಇಂದಿನ ಸುದ್ದಿ

Bangalore ನಲ್ಲಿ ಸಿರಿಧಾನ್ಯ ಹಬ್” ನಿರ್ಮಾಣಕ್ಕೆ ಶೀಘ್ರ ಭೂಮಿ ಪೂಜೆ: ಸಚಿವ ಎನ್.ಚಲುವರಾಯಸ್ವಾಮಿ

Editor Nammajana
Last updated: 18 January 2025 05:28
By Editor Nammajana 5 Min Read
Share
SHARE

Chitradurga news|Nammajana.com|18-1-2025

ನಮ್ಮಜನ.ಕಾಂ, ಹೊಸದುರ್ಗ: ಸಿರಿಧಾನ್ಯ ಉತ್ಪಾದಕರು, ಮಾರುಕಟ್ಟೆದಾರರು, ಗ್ರಾಹಕರ ನಡುವೆ ಸಂಪರ್ಕ ಕಲ್ಪಿಸುವ ಹಾಗೂ ಮಾರುಕಟ್ಟೆ ವಿಸ್ತರಿಸುವ ಉದ್ದೇಶದಿಂದ (Bangalore) ಬೆಂಗಳೂರಿನಲ್ಲಿ “ಸಿರಿಧಾನ್ಯ ಹಬ್” ನಿರ್ಮಾಣಕ್ಕೆ ಶೀಘ್ರ ಭೂಮಿ ಪೂಜೆ ನೆರವೇರಿಸಲಾಗುವುದು ಎಂದು ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ಹೇಳಿದರು.

ಹೊಸದುರ್ಗ ತಾಲ್ಲೂಕಿನ ಶ್ರೀರಾಂಪುರ ದುರ್ಗದ ಸಿರಿ ರೈತ ಉತ್ಪಾದಕ ಕಂಪನಿ ಆವರಣದಲ್ಲಿ ಶುಕ್ರವಾರ ನಡೆದ ಸಿರಿಧಾನ್ಯ ಬೆಳೆಗಾರರೊಂದಿಗೆ ಸಂವಾದ ನಡೆಸಿ ಅವರು ಮಾತನಾಡಿದರು.

ಬೆಂಗಳೂರಿನಲ್ಲಿ ಸಿರಿಧಾನ್ಯ ಹಬ್ ನಿರ್ಮಾಣಕ್ಕೆ ಶೀಘ್ರದಲ್ಲಿ ಮುಖ್ಯಮಂತ್ರಿಗಳು ಭೂಮಿ ಪೂಜೆ ನೆರವೇರಿಸಲಿದ್ದು, ಮುಂದಿನ ಒಂದು ವರ್ಷದೊಳಗೆ ಸಿರಿಧಾನ್ಯ ಹಬ್ ನಿರ್ಮಿಸಲಾಗುವುದು. ಹಾಗಾಗಿ ಸಿರಿಧಾನ್ಯ ಹಬ್‍ನಲ್ಲಿ ಹೆಸರು ನೋಂದಣಿ ಮಾಡಿದರೆ ರಾಷ್ಟ್ರ, ಅಂತರ ರಾಷ್ಟ್ರೀಯ ಮಾರುಕಟ್ಟೆಗೆ ವೇದಿಕೆ ಸಿಗಲಿದ್ದು, (Bangalore) ಉತ್ತಮ ಮಾರುಕಟ್ಟೆ ವ್ಯವಸ್ಥೆಗೆ ಅನುಕೂಲವಾಗಲಿದೆ ಎಂದು ಹೇಳಿದರು.

ಇದೇ ಜ.23 ರಿಂದ 25 ರವರೆಗೆ ಬೆಂಗಳೂರಿನಲ್ಲಿ ಸಾವಯವ ಸಿರಿಧಾನ್ಯ ಅಂತರ ರಾಷ್ಟ್ರೀಯ ಮೇಳ ಹಮ್ಮಿಕೊಳ್ಳಲಾಗಿದ್ದು, ರಾಜ್ಯ, ರಾಷ್ಟ್ರ ಹಾಗೂ ಅಂತರ ರಾಷ್ಟ್ರೀಯ ಮಟ್ಟದಲ್ಲಿ ದಿನೇ ದಿನೇ ಬೇಡಿಕೆ ಹೆಚ್ಚಾಗುತ್ತಿದೆ. ಸಿರಿಧಾನ್ಯದ ಮಹತ್ವ ಎಲ್ಲರಿಗೂ ಪರಿಚಯಿಸಬೇಕು ಎಂಬುದು ಸಿರಿಧಾನ್ಯ ಮೇಳದ ಉದ್ದೇಶ ಎಂದು ಹೇಳಿದರು.

ರಾಜ್ಯದಲ್ಲಿಯೇ ಅತಿ ಹೆಚ್ಚು ಸಿರಿಧಾನ್ಯ ಬೆಳೆಯುವಲ್ಲಿ ಹೊಸದುರ್ಗ ತಾಲ್ಲೂಕು ಮುಂಚೂಣಿಯಲ್ಲಿದೆ. ಹೊಸದುರ್ಗ ತಾಲ್ಲೂಕಿನಲ್ಲಿ ಶೇ.90ರಷ್ಟು ಸಿರಿಧಾನ್ಯ ಬೆಳೆಯಲಾಗುತ್ತದೆ.

ಹೊಸದುರ್ಗ ತಾಲ್ಲೂಕಿಗೆ ಇಲ್ಲಿಯವರೆಗೂ ಸಿರಿಧಾನ್ಯ ಬೆಳೆಗೆ ಸಿರಿಯೋಜನೆಯಡಿ ರೂ.33.96 ಕೋಟಿ ಸಹಾಯಧನ (Bangalore) ನೀಡಲಾಗಿದ್ದು, ಕಳೆದ ವರ್ಷ ರೂ.15 ಕೋಟಿ ಸಹಾಯಧನ ಹೊಸದುರ್ಗ ತಾಲ್ಲೂಕಿಗೆ ನೀಡಿದೆ. ಈ ಯೋಜನೆಯಡಿ ರಾಜ್ಯದ 45 ಸಾವಿರ ಫಲಾನುಭವಿಗಳ ಪೈಕಿ ಹೊಸದುರ್ಗ ತಾಲ್ಲೂಕಿನಲ್ಲಿಯೇ 35 ಸಾವಿರ ಫಲಾನುಭವಿಗಳು ಇರುವುದು ಹೆಮ್ಮೆಯ ಸಂಗತಿ. ಹಾಗಾಗಿ ಶಾಸಕ ಗೋವಿಂದಪ್ಪನವರಿಗೆ ಇಲ್ಲಿನ ರೈತರ ಪರವಾಗಿ ಅಂತರ ರಾಷ್ಟ್ರೀಯ  ಸಿರಿಧಾನ್ಯ ಮೇಳದಲ್ಲಿ ಸನ್ಮಾನಿಸಲಾಗುವುದು ಎಂದರು.

ಸಾವಯವ ಗೊಬ್ಬರ ಬಳಸಿದಲ್ಲಿ ಸಿರಿಧಾನ್ಯದ ಇಳುವರಿ ಹೆಚ್ಚಾಗುತ್ತದೆ. ರಸಗೊಬ್ಬರ ಕಡಿಮೆ ಮಾಡಿದಷ್ಟು ಭೂಮಿಯ ಫಲವತ್ತತೆ ಹೆಚ್ಚಾಗುತ್ತದೆ. ಸಿರಿಧಾನ್ಯ ರೋಗ ನಿರೋಧಕ ಶಕ್ತಿ ಇರುವ ಆಹಾರ. ಈ ಆಹಾರ ಸೇವನೆಯಿಂದ ಹೆಚ್ಚು ಕಾಲ ಆರೋಗ್ಯವಂತರಾಗಿ ಇರಲಿಕ್ಕೆ ಸಹಕಾರಿ ಆಗಲಿದೆ ಎಂದರು.

ಕೆಲವೇ ತಾಲೂಕುಗಳಿಗೆ ಮೀಸಲಾಗಿದ್ದ ಕೃಷಿಹೊಂಡ ನಿರ್ಮಾಣ ಸೌಲಭ್ಯವನ್ನು ರಾಜ್ಯದ ಎಲ್ಲ ತಾಲ್ಲೂಕುಗಳಿಗೂ ವಿಸ್ತರಿಸಲಾಗಿದೆ ಎಂದು ತಿಳಿಸಿದ ಅವರು, ಪಂಚ ಗ್ಯಾರಂಟಿ ಜೊತೆಗೆ ಅಭಿವೃದ್ಧಿ ಕೆಲಸಕ್ಕೂ ಒತ್ತು ನೀಡಲಾಗಿದೆ. ನಿರಂತರವಾಗಿ ರೈತಪರವಾಗಿರುವ ಸರ್ಕಾರ ನಮ್ಮದು ಎಂದರು.
ಕೃಷಿಯನ್ನು ಖುಷಿಯಿಂದ ಮಾಡಿದಲ್ಲಿ ಮಾತ್ರ ರೈತರು ಅಭಿವೃದ್ಧಿ ಕಾಣಲು ಸಾಧ್ಯ. ಸಮಗ್ರ ಕೃಷಿಪದ್ಧತಿ ಅಳವಡಿಸಿಕೊಂಡಲ್ಲಿ ಮಾತ್ರ ಅಭಿವೃದ್ಧಿ ಸಾಧ್ಯ. ರೈತರು ಕೃಷಿ ವಿಶ್ವವಿದ್ಯಾನಿಲಯ, ತಜ್ಞರು ಹಾಗೂ ಅಧಿಕಾರಿಗಳ ಸಲಹೆ, ಮಾರ್ಗದರ್ಶನ ಪಡೆದು ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಳ್ಳಬೇಕು.

ವಾತಾವರಣಕ್ಕೆ ಹೊಂದಿಕೊಳ್ಳುವ ಬೆಳೆ ಬೆಳೆಯಬೇಕು. ರೈತರು ಬೆಳೆದಲ್ಲಿ ದೇಶ ಸುಭಿಕ್ಷತೆಯಿಂದಿರಲು ಸಾಧ್ಯ. ಯಾವ ಕಂಪನಿಗಳಿಂದಲ್ಲ ಎಂದು ಅಭಿಪ್ರಾಯಪಟ್ಟರು ಅವರು, ಸಿರಿಧಾನ್ಯ ನಾಡಾಗಿರುವ ಹೊಸದುರ್ಗ ತಾಲ್ಲೂಕಿಗೆ ಸಿರಿಧಾನ್ಯ ಬೆಳೆ ಪ್ರೋತ್ಸಾಹಕ್ಕಾಗಿ ಇಲಾಖೆಯಿಂದ ಹೆಚ್ಚಿನ ಸಹಕಾರ ನೀಡಲಾಗುವುದು ಎಂದು ಭರವಸೆ ನೀಡಿದರು.

ಹೊಸದುರ್ಗ ಶಾಸಕ ಬಿ.ಜಿ.ಗೋವಿಂದಪ್ಪ ಮಾತನಾಡಿ, ರೈತರಿಗೆ ಸಿರಿಧಾನ್ಯ ಬೆಳೆಯಲು ಉತ್ತೇಜಿಸುವ ಉದ್ದೇಶದಿಂದ ಇದೇ ಜನವರಿ 23 ರಿಂದ ಸಿರಿಧಾನ್ಯ ಮೇಳ ಆಯೋಜಿಸಲಾಗಿದೆ. ಸಿರಿಧಾನ್ಯ ಬೆಳೆಯನ್ನು ಪರಿಶೀಲನೆ ಮಾಡಲು ಸಚಿವರು ಹಾಗೂ ಅಧಿಕಾರಿಗಳ ತಂಡ ಹೊಸದುರ್ಗದ ಮಲ್ಲಿಹಳ್ಳಿಗೆ ಭೇಟಿ ನೀಡಿದ್ದು, ಸಚಿವರು ಉತ್ಸುಕತೆಯಿಂದ ಆಗಮಿಸಿ, ರೈತರೊಂದಿಗೆ ಸಮಗ್ರ ಚರ್ಚೆ ನಡೆಸಿದರು. ದುರ್ಗದ ಸಿರಿ ರೈತ ಉತ್ಪಾದನಾ ಕಂಪನಿ ರೈತರಿಗೆ ಸಹಾಯ ಮಾಡುತ್ತಿದೆ. ಸರ್ಕಾರ ರೈತರಿಗೆ ಹೆಚ್ಚು ಒತ್ತು ನೀಡುತ್ತಿದೆ. ಸಚಿವರು ಸಮಗ್ರವಾಗಿ ಕೃಷಿ ಬಗ್ಗೆ ತಿಳಿದಿದ್ದು, ಅಷ್ಟೆ ಆಸಕ್ತಿವಹಿಸಿ, ಕೃಷಿಕರಿಗೆ ಹಲವು ಸೌಲಭ್ಯಗಳನ್ನು ಕಲ್ಪಿಸಲು ಆಸಕ್ತರಾಗಿದ್ದಾರೆ.

ತಾಲ್ಲೂಕಿನ ರೈತರು ಸಿರಿಧಾನ್ಯ ಬೆಳೆಗೆ ದೇಶಾದ್ಯಂತ ಹೆಸರುವಾಸಿಯಾಗಿದೆ. ಮಲ್ಲಿಹಳ್ಳಿ ಸರ್ಕಾರ ಹಾಗೂ ವಿಶ್ವ ವಿದ್ಯಾಲಯಗಳ ಸಲಹೆ ಸೌಲಭ್ಯ ಪಡೆದು, ಸಾವಯವ ಕೃಷಿ, ರೇಷ್ಮೆ ಸಾಕಾಣಿಕೆ, ಹಸು ಸಾಕಾಣಿಕೆ ಮೂಲಕ ಮಿಶ್ರ ಕೃಷಿ ಅವಲಂಬಿಸಿ, ಆರ್ಥಿಕವಾಗಿ ಸಫಲರಾಗಿದ್ದಾರೆ.

ಕೃಷಿಯನ್ನು ಖುಷಿಯಿಂದ ಮಾಡಬೇಕು. ಹಿಂದೆ ಸಿರಿಧಾನ್ಯ ಬಡವರ ಆಹಾರವಾಗಿತ್ತು. ಈಗ ಸಿರಿವಂತರ ಆಹಾರವಾಗಿದೆ. ಹೆಚ್ಚು ಸಿರಿಧಾನ್ಯ ಬೆಳೆದು, ಸೇವಿಸಿ, ಉತ್ತಮ ಆರೋಗ್ಯ ಕಾಪಾಡಿಕೊಳ್ಳಿ ಎಂದು ಶಾಸಕರು ಸಲಹೆ ನೀಡಿದರು.

ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ್ ಮಾತನಾಡಿ,  ‘ಕೃಷಿಯಲ್ಲಿ ಆಧುನಿಕತೆ ಬೆಳೆದಂತೆಲ್ಲಾ ಸಿರಿಧಾನ್ಯ ವಿಸ್ತೀರ್ಣ, ಉತ್ಪಾದನೆ ಕಡಿಮೆಯಾಯಿತು. ಸಕ್ಕರೆ, ಮೈದಾ, ರಿಫೈನ್ಡ್ ಆಯಿಲ್ ಬಳಕೆ ಹೆಚ್ಚಾಯಿತು ಪರಿಣಾಮ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿತು ಎಂದು ಹೇಳಿದರು.
ಸಾವೆ, ನವಣೆ, ರಾಗಿ ಸೇರಿದಂತೆ ಹಲವು ಬೆಳೆಗಳು ತೃಣ ಅಥವಾ ಕಿರುಧಾನ್ಯವಲ್ಲ ಇಂದು ಸಿರಿಧಾನ್ಯಗಳಾಗಿವೆ. ಹೊಸದುರ್ಗ ತಾಲ್ಲೂಕಿನಲ್ಲಿ 28 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಸಿರಿಧಾನ್ಯ ಬೆಳೆ ಬೆಳೆಯಲಾಗುತ್ತಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 30 ಸಾವಿರ ಹೆಕ್ಟೇರ ಪ್ರದೇಶಕ್ಕೂ ಹೆಚ್ಚು ಸಿರಿಧಾನ್ಯ ಬೆಳೆ ಬೆಳೆಯುವ ಮೂಲಕ ಸುಮಾರು 3 ಸಾವಿರ ಟನ್‍ಗಿಂತಲೂ ಹೆಚ್ಚು ಸಿರಿಧಾನ್ಯ ಬೆಳೆಯಲಾಗುತ್ತದೆ ಎಂದು ಹೇಳಿದರು.

ಸಿರಿಧಾನ್ಯ ಮೇಳಗಳು ಜಾಗೃತಿ ಮೂಡಿಸುವ ಮೇಳಗಳಾಗಿವೆ. ಬೆಂಗಳೂರಿನಲ್ಲಿ ನಡೆಯುವ ಅಂತರ ರಾಷ್ಟ್ರೀಯ ಸಿರಿಧಾನ್ಯ  ಮೇಳಕ್ಕೆ ಈಗಾಗಲೇ 20 ವಿದೇಶಗಳು, 20 ಕ್ಕೂ ಅಧಿಕ ರಾಜ್ಯಗಳು ಭಾಗವಹಿಸಲಿಕ್ಕೆ ನೋಂದಣಿ ಮಾಡಿಸಲಾಗಿದೆ. ಸರ್ಕಾರವೂ ರೈತರ ಅಭಿವೃದ್ಧಿಗೆ ಶ್ರಮಿಸುತ್ತಿದೆ.

ಇದನ್ನೂ ಓದಿ: ದಿನ ಭವಿಷ್ಯ | 18 ಜನವರಿ 2024 | Dina Bhavishya

ಸಿರಿಧಾನ್ಯ ಬೆಳೆಯ ಜೊತೆಗೆ ಸಂಸ್ಕರಣಾ ಕಾರ್ಯವೂ ನಡೆಯಬೇಕು. ಈ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ 37 ರೈತ ಉತ್ಪಾದಕ ಕಂಪನಿಗಳು ಸಕ್ರಿಯವಾಗಿದ್ದು, ಇವುಗಳ ಉತ್ತೇಜನಕ್ಕೆ. ಸಿರಿಧಾನ್ಯಗಳ ಮೌಲ್ಯವರ್ಧನೆಗೆ ರೂ.10 ರಿಂದ 20 ಲಕ್ಷ ಸಹಾಯಧನ, ಮೇಲ್ದರ್ಜೆಗೇರಿಸಲು ರೂ.6 ಲಕ್ಷ ಸಹಾಯಧನ ಸೇರಿದಂತೆ ಹಲವು ಸೌಲಭ್ಯಗಳನ್ನು ಕಲ್ಪಿಸಿದೆ. ಭದ್ರಾ ಮೇಲ್ದಂಡೆ ಯೋಜನೆ, ಚೆಕ್ ಡ್ಯಾಂ ನಿರ್ಮಾಣ, ಬ್ರಿಡ್ಜ್ ಕಂ ಬ್ಯಾರೇಜ್ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ರೂಪಿಸಿ ಶಾಸಕರು ಹೊಸದುರ್ಗವನ್ನು ನೀರಾವರಿ ಕ್ಷೇತ್ರ ಮಾಡುವ ಮೂಲಕ ರೈತರ ಏಳಿಗೆಗೆ ಶ್ರಮಿಸುತ್ತಿದ್ದಾರೆ ಎಂದರು.

ಇದನ್ನೂ ಓದಿ: VV Sagar | ಸಚಿವ ಮತ್ತು ಶಾಸಕರ ನಡುವೆ ಶಮನವಾಗದ ಮುನಿಸು! ವಿವಿ ಸಾಗರ ಬಾಗಿನ ಮುಂದಕ್ಕೆ? |

ಇದೇ ಸಂದರ್ಭದಲ್ಲಿ ಸಿರಿಧಾನ್ಯಗಳ ಸಿರಿ ಎಂಬ ಕರಪತ್ರ ಕರಪತ್ರಗಳನ್ನು ಕೃಷಿ ಸಚಿವ ಚೆಲುವರಾಯಸ್ವಾಮಿ ಬಿಡುಗಡೆಗೊಳಿಸಿದರು.

ಕಾರ್ಯಕ್ರಮದಲ್ಲಿ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ, ಕೃಷಿಕ ಸಮಾಜದ ಅಧ್ಯಕ್ಷ ರಾಗಿಶಿವಮೂರ್ತಿ, ಸಾವಯವ ಕೃಷಿ ಮಿಷನ್ ಮಾಜಿ ಅಧ್ಯಕ್ಷ ಸೋಮಶೇಖರ್, ಕೃಷಿ ಇಲಾಖೆ ಉಪನಿರ್ದೇಶಕ ಶಿವಕುಮಾರ್, ನಬಾರ್ಡ್‍ನ ಕವಿತಾ, ತಹಶೀಲ್ದಾರ್ ತಿರುಪತಿ ಪಾಟೀಲ್, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಸಿ.ಎಸ್.ಈಶ ಸೇರಿದಂತೆ ಕೃಷಿ ಅಧಿಕಾರಿಗಳು, ರೈತರು ಇದ್ದರು.

You Might Also Like

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

TAGGED:BangaloreChitradurga NewsHosadurgaHub EstablishmentKannada Newskannada suddiMinisterN. CheluvarayaswamyNammajana.comSiridhanyaಎನ್.ಚೆಲುವರಾಯಸ್ವಾಮಿಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂಬೆಂಗಳೂರುಸಚಿವಸಿರಿಧಾನ್ಯಹಬ್ ಸ್ಥಾಪನೆಹೊಸದುರ್ಗ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink1
Previous Article VV Sagar | ಸಚಿವ ಮತ್ತು ಶಾಸಕರ ನಡುವೆ ಶಮನವಾಗದ ಮುನಿಸು! ವಿವಿ ಸಾಗರ ಬಾಗಿನ ಮುಂದಕ್ಕೆ? |
Next Article Chitradurga ಜಿಲ್ಲಾ ಆಸ್ಪತ್ರೆಯಲ್ಲೇ ಕೃತಕ ಕೀಲು ಬದಲಾವಣೆ ಶಸ್ತ್ರ ಚಿಕಿತ್ಸೆ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?