Chitradurga news | nammajana.com | 03-08-2025
ನಮ್ಮಜನ.ಕಾಂ, ಹೊಳಲ್ಕೆರೆ: ಇನ್ನು ಎರಡು(Bhadra) ತಿಂಗಳೊಳಗೆ ಹೊಳಲ್ಕೆರೆ ತಾಲ್ಲೂಕು ಹಾಗೂ ಚಿತ್ರದುರ್ಗ ಜಿಲ್ಲೆಗೆ ಅಪ್ಪರ್ಭದ್ರಾದಿಂದ ನೀರು ಹರಿಯುವುದರಲ್ಲಿ ಸಂಶಯವಿಲ್ಲವೆಂದು ಹೊಳಲ್ಕೆರೆ ಶಾಸಕ ಡಾ.ಎಂ.ಚoದ್ರಪ್ಪ ಭರವಸೆ ನೀಡಿದರು.
ಇದನ್ನೂ ಓದಿ: ಗಣಿಬಾಧಿತ ಹಳ್ಳಿಗಳಲ್ಲಿ ವಸತಿ, ನಿವೇಶನ ರಹಿತ ಫಲಾನುಭವಿಗಳ ಆಯ್ಕೆ : ಗ್ರಾಮ ಸಭೆ ನಡೆಸಲು ದಿನಾಂಕ ನಿಗದಿ

ಚಿಕ್ಕಮಗಳೂರು ಜಿಲ್ಲೆ ಲಕ್ಕವಳ್ಳಿ ಬಳಿ ಭದ್ರಾ ಜಲಾಶಯಕ್ಕೆ ರೈತರು ಮತ್ತು ಅಪಾರ ಕಾರ್ಯಕರ್ತರೊಂದಿಗೆ ತೆರಳಿ ಭಾನುವಾರ ಬಾಗಿನ ಸಮರ್ಪಿಸಿ ಮಾತನಾಡಿದರು.
ಹೊಳಲ್ಕೆರೆ ತಾಲ್ಲೂಕಿನ 37 ಕೆರೆಗಳಿಗೆ ಹಾಗೂ(Bhadra) ಚಿತ್ರದುರ್ಗ ಜಿಲ್ಲೆಗೆ ಇಲ್ಲಿಂದ ನೀರು ಹರಿಯಲಿದೆ. ಇದರಿಂದ ರೈತರ ಬಹುದಿನಗಳ ಕನಸು ನನಸಾಗಲಿದೆ. ರಾಜ್ಯದ ಹದಿಮೂರು ಜಿಲ್ಲೆಗಳಲ್ಲಿ ಬರಗಾಲವಿದೆ. ಇನ್ನು 120 ಮೀಟರ್ ಕಾಲುವೆ ಕಾಮಗಾರಿ ಪೂರ್ಣಗೊಂಡರೆ ಹೊಳಲ್ಕೆರೆ ಲೆಫ್ಟ್ ಕೆನಾಲ್ಗೆ ನೀರು ಬರುತ್ತದೆ. ಮುಂದೆ ಪಾವಗಡದವರೆಗೂ ನೀರು ಹರಿಯುತ್ತದೆ ಎಂದು ಹೇಳಿದರು.
ಎರಡು ತಿಂಗಳೊಳಗೆ ಹೊಳಲ್ಕೆರೆ ತಾಲ್ಲೂಕು ಹಾಗೂ ಚಿತ್ರದುರ್ಗ ಜಿಲ್ಲೆಗೆ ಅಪ್ಪರ್ಭದ್ರಾದಿಂದ ನೀರು ಹರಿಯುವುದರಲ್ಲಿ ಸಂಶಯವಿಲ್ಲ. -ಡಾ. ಎಂ.ಚಂದ್ರಪ್ಪ, ಹೊಳಲ್ಕೆರೆ ಶಾಸಕ
ಚಿಕ್ಕಮಗಳೂರು ಭಾಗದ ರೈತರು ಅಡ್ಡಿಪಡಿಸುತ್ತಿರುವ ಪರಿಣಾಮವಾಗಿ ಕಾಮಗಾರಿಯಲ್ಲಿ ಸ್ವಲ್ಪ ತಡವಾಗಿದೆ. ಕೋರ್ಟ್ನಲ್ಲಿ ಕೇಸಿದೆ. ಎಲ್ಲವನ್ನು ಕಾನೂನಾತ್ಮಕವಾಗಿ ಬಗೆಹರಿಸಿಕೊಳ್ಳೋಣ ಎಂದು ತರಿಕೆರೆ ಶಾಸಕ ಶ್ರೀನಿವಾಸ್ ಮಾತು ಕೊಟ್ಟಿದ್ದಾರೆ.
ಇದನ್ನೂ ಓದಿ: ಕುಡಿಯುವ ನೀರಿಗಾಗಿ ಶಾಲಾ ಮಕ್ಕಳು ಪ್ರತಿಭಟನೆ
ಹಾಗಾಗಿ ರೈತರು ನಿರಾಸೆಯಾಗುವುದು ಬೇಡ. ವಿಧಾನಸಭೆ ಅಧಿವೇಶನದಲ್ಲಿ ಚರ್ಚಿಸಿ ರಾಜ್ಯದ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಗಮನಕ್ಕೆ ತರುತ್ತೇನೆ. ಕಳೆದ ವಿಧಾನಸಭೆ ಅಧಿವೇಶನದಲ್ಲಿಯೂ ನಮ್ಮ ಜಿಲ್ಲೆಯ ರೈತರು ಸಂಕಷ್ಟದಲ್ಲಿದ್ದಾರೆಂದಿದ್ದಕ್ಕೆ ರಾಜ್ಯ ಸರ್ಕಾರ ಸ್ಪಂದಿಸಿದೆ. ರೈತರ ಪರವಾಗಿರುವ ಈ ಯೋಜನೆ ಯಾವುದೇ ಕಾರಣಕ್ಕೂ ನಿಲ್ಲಬಾರದು. ಹಣ ನೀಡಿ ಚಿನ್ನ ಖರೀಧಿಸಬಹುದು. ಆದರೆ ನೀರು ಸಿಗುವುದು ಕಷ್ಟವಾಗಿದೆ.
ಯಾವಾಗ ನೀರು ಬರುತ್ತದೋ ಎಂದು(Bhadra) ರೈತರು ಕಾಯುತ್ತಿದ್ದಾರೆ. 120 ಮೀಟರ್ ಚಾನಲ್ ಆದರೆ ಗಂಗಸಮುದ್ರ ಕೆರೆಗೆ ನೀರು ಬರುತ್ತದೆ. ಅಲ್ಲಿಂದ ಹೊಳಲ್ಕೆರೆ ತಾಲ್ಲೂಕಿನ 37 ಕೆರೆಗಳಿಗೂ ನೀರು ಸೇರುತ್ತದೆ ಎಂದರು.
ಇದನ್ನೂ ಓದಿ: ಒಳಮೀಸಲಾತಿ ಜಾರಿ ಖಚಿತ : ಮಾಜಿ ಸಚಿವ ಎಚ್.ಆಂಜನೇಯ
ಹೊಳಲ್ಕೆರೆ ಬಿಜೆಪಿ ಮಂಡಲ ಅಧ್ಯಕ್ಷ ನಾರದಮುನಿ ವಸಂತಕುಮಾರ್, ರೈತ ಮುಖಂಡರುಗಳಾದ ಬಸ್ತಿಹಳ್ಳಿ ಸುರೇಶ್ಬಾಬು, ಮಂಜುನಾಥ್, ಚಿತ್ರಹಳ್ಳಿ ಲವಕುಮಾರ್, ನಾಗರಾಜ್, ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ, ಶಿವಕುಮಾರ್, ಯಶವಂತ್ಕುಮಾರ್, ಮಾರುತೇಶ್, ಶ್ರೀನಿವಾಸ್, ಮಹೇಶಣ್ಣ, ಕುಮಾರಣ್ಣ, ರೂಪ ಸುರೇಶ್, ನಾಗರಾಜ್ಬೇದ್ರೆ, ಭದ್ರಾಮೇಲ್ದಂಡೆ ಮುಖ್ಯ ಇಂಜಿನಿಯರ್ಗಳಾದ ಎಫ್.ಹೆಚ್.ಲಮಾಣಿ, ಕವಿತಾ, ಬಾರಿಕರ್ ಚಂದ್ರಪ್ಪ,ನಾಗರಾಜ್ ಇವರುಗಳು ಈ ಸಂದರ್ಭದಲ್ಲಿ ಹಾಜರಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252