Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಭದ್ರಾ ಮೇಲ್ದಂಡೆ ಯೋಜನೆ: 2028ರ ಮಾರ್ಚ್ ಅಂತ್ಯಕ್ಕೆ ಪೂರ್ಣ | ಟಿ.ರಘುಮೂರ್ತಿ ಪ್ರಶ್ನೆಗೆ ಡಿಸಿಎಂ ಉತ್ತರ | ಅವರBhadra Upper Bank Project
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > Blog > ಭದ್ರಾ ಮೇಲ್ದಂಡೆ ಯೋಜನೆ: 2028ರ ಮಾರ್ಚ್ ಅಂತ್ಯಕ್ಕೆ ಪೂರ್ಣ | ಟಿ.ರಘುಮೂರ್ತಿ ಪ್ರಶ್ನೆಗೆ ಡಿಸಿಎಂ ಉತ್ತರ | ಅವರBhadra Upper Bank Project
Blog

ಭದ್ರಾ ಮೇಲ್ದಂಡೆ ಯೋಜನೆ: 2028ರ ಮಾರ್ಚ್ ಅಂತ್ಯಕ್ಕೆ ಪೂರ್ಣ | ಟಿ.ರಘುಮೂರ್ತಿ ಪ್ರಶ್ನೆಗೆ ಡಿಸಿಎಂ ಉತ್ತರ | ಅವರBhadra Upper Bank Project

Editor Nammajana
Last updated: 18 December 2024 15:37
By Editor Nammajana 3 Min Read
Share
SHARE

Chitradurga news|nammajana.com|18-12-2024

ನಮ್ಮಜನ.ಕಾಂ, ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಯನ್ನು ಮಾರ್ಚ್-2028ರ ಅಂತ್ಯಕ್ಕೆ ಅನುದಾನದ ಲಭ್ಯತೆಗೆ ಅನುಗುಣವಾಗಿ ಪೂರ್ಣಗೊಳಿಸಲು (Bhadra Upper Bank Project) ಉದ್ದೇಶಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನಸಭೆಯ ಚಳಿಗಾಲದ ಅಧಿವೇಶನದಲ್ಲಿ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಅವರ ಕೇಳಿದ ಭದ್ರಾ ಮೇಲ್ದಂಡೆ (Bhadra Upper Bank Project) ಯೋಜನೆಯ ಕಾಮಗಾರಿಯ ಪ್ರಗತಿಯ ಕುರಿತು ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ್ದಾರೆ.

ಭದ್ರಾ ಮೇಲ್ದಂಡೆ ಯೋಜನೆಯನ್ನು ಮಧ್ಯ ಕರ್ನಾಟಕದ ಬರಪೀಡಿತ ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು ಹಾಗೂ ದಾವಣಗೆರೆ ಜಿಲ್ಲೆಗಳಲ್ಲಿನ 2,25,515 ಹೆಕ್ಟೇರ್ (5,57,022 ಎಕರೆ) ಭೂ ಪ್ರದೇಶಕ್ಕೆ ಸೂಕ್ಷ್ಮ ನೀರಾವರಿ ಪದ್ಧತಿಯಲ್ಲಿ ನೀರಾವರಿ ಸೌಲಭ್ಯ ಕಲ್ಪಿಸಲು ಹಾಗೂ 367 ಕೆರೆಗಳಿಗೆ ಅವುಗಳ ಸಾಮಾಥ್ರ್ಯದ ಶೇ.50ರಷ್ಟು ನೀರನ್ನು ತುಂಬಿಸಲು ಉದ್ದೇಶಿಸಿ ರೂಪಿಸಲಾಗಿದೆ.

ಈ ಯೋಜನೆಗೆ 29.90 ಟಿಎಂಸಿ ನೀರನ್ನು (ಸೂಕ್ಷ್ಮ ನೀರಾವರಿ ಸೌಲಭ್ಯ ಕಲ್ಪಿಸಲು 21.90 ಟಿಎಂಸಿ, ಕೆರೆ ತುಂಬಿಸಲು 6 ಟಿಎಂಸಿ, ವಾಣಿ ವಿಲಾಸ ಸಾಗರಕ್ಕೆ 2 ಟಿಎಂಸಿ) ಹಂಚಿಕೆ ಮಾಡಲಾಗಿದೆ. ಈ ಯೋಜನೆಯ ರೂ.21,473.67 ಕೋಟಿ ಮೊತ್ತದ ಸಮಗ್ರ ಪುನರ್ ಪರಿಷ್ಕøತ ಯೋಜನಾ ವರಿಗೆ (Bhadra Upper Bank Project) 2020ರ ಡಿಸೆಂಬರ್ 16ರಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಭದ್ರಾ ಮೇಲ್ದಂಡೆ ಯೋಜನೆಯ ಕಾಮಗಾರಿಗಳಿಗೆ ಅವಶ್ಯವಿರುವ ಜಮೀನಿನ ಭೂಸ್ವಾಧೀನದ ಪ್ರಕ್ರಿಯೆಯನ್ನು ಚುರುಕುಗೊಳಿಸಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಕ್ರಮವಹಿಸಲಾಗಿದೆ ಎಂದು ತಿಳಿಸಿದ್ದಾರೆ.

ಕೇಂದ್ರ ಸರ್ಕಾರದಿಂದ 2023-24ನೇ ಸಾಲಿನ ಅಯವ್ಯಯದಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ರೂ.5,300 ಕೋಟಿಗಳ ಅನುದಾನ ಘೋಷಣೆ ಮಾಡಲಾಗಿರುತ್ತದೆ. ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸುವ ಪ್ರಕ್ರಿಯೆ ವಿಳಂಬವಾಗುತ್ತಿದ್ದು, ಯೋಜನೆಯನ್ನು ಅತೀ ಶೀಘ್ರವಾಗಿ ಪೂರ್ಣಗೊಳಿಸುವ ಉದ್ದೇಶದಿಂದ ರೂ.5,300 ಕೋಟಿಗಳ ಧನ ಸಹಾಯವನ್ನು ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ-ವೇಗವರ್ಧಿತ ನೀರಾವರಿ ಪ್ರಯೋಜನ ಕಾರ್ಯಕ್ರಮ ಯೋಜನೆ/ರಾಷ್ಟ್ರೀಯ ಯೋಜನೆಯಡಿ ಅಡಿ ಬಿಡುಗಡೆಗೊಳಿಸಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಅನುಮೋದನೆ ನಿರೀಕ್ಷಿಸಲಾಗಿದೆ.

ಭದ್ರ ಮೇಲ್ದಂಡೆ ಯೋಜನೆಗಾಗಿ 2024-25ನೇ ಸಾಲಿನಲ್ಲಿ ರೂ.1430 ಕೋಟಿಗಳ ಅನುದಾನ ಹಂಚಿಕೆಯಾಗಿದ್ದು, 2024ರ ಅಕ್ಟೋಬರ್ ಅಂತ್ಯಕ್ಕೆ ಒಟ್ಟಾರೆ ಸಂಚಿತ (Bhadra Upper Bank Project) ರೂ.10,115.13 ಕೋಟಿಗಳ ಆರ್ಥಿಕ ಪ್ರಗತಿ ಸಾಧಿಸಲಾಗಿದೆ.

ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಲು ಕೇಂದ್ರಕ್ಕೆ ಶಿಫಾರಸ್ಸು: ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಲು ಕೇಂದ್ರ ಸಚಿವ ಸಂಪುಟ ಸಭೆಗೆ ಅನುಮೋದನೆಗಾಗಿ ಶಿಫಾರಸ್ಸು ಮಾಡಲಾಗಿದೆ. ಭದ್ರಾ ಮೇಲ್ದಂಡೆ ಯೋಜನೆಯು ತಾಂತ್ರಿಕವಾಗಿ ಹಾಗೂ ಆರ್ಥಿಕವಾಗಿ ಕಾರ್ಯಸಾಧ್ಯತೆಯ ಬಗ್ಗೆ ಕೇಂದ್ರ ಸರ್ಕಾರದ ಜಲಶಕ್ತಿ ಮಂತ್ರಾಲಯದ ತಾಂತ್ರಿಕ ಸಲಹಾ ಸಮಿತಿಯು ತೀರುವಳಿ ನೀಡಿರುತ್ತದೆ.

ಕೇಂದ್ರದ ಇನ್‍ವೆಸ್ಟ್‍ಮೆಂಟ್ ಕ್ಲಿಯರೆನ್ಸ್ ಸಮಿತಿಯು ರೂ.16,125.48 ಕೋಟಿಗಳ ಯೋಜನಾ ಮೊತ್ತಕ್ಕೆ ಸ್ಥಿರೀಕರಿಸಿ ಅನುಮೋದನೆ ನೀಡಿದೆ. 2022ರ ಫೆ.15ರ ಕೇಂದ್ರದ ಹೈ ಪವರ್ಡ್ ಸ್ಟ್ರೀಂಗ್ ಕಮಿಟಿಯ 14ನೇ ಸಭೆಯು ಮಾಡಿದ ಶಿಫಾರಸ್ಸಿನಂತೆ ಕೇಂದ್ರ ಹಣಕಾಸು ಸಚಿವಾಲಯದ ಪಬ್ಲಿಕ್ ಇನ್‍ವೆಸ್ಟ್‍ಮೆಂಟ್ ಬೋರ್ಡ್ ಮಂಡಳಿಯು ಪ್ರಸ್ತಾವನೆ ಅಂಗೀಕರಿಸಿ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಲು ಕೇಂದ್ರ ಸಚಿವ ಸಂಪುಟ ಸಭೆಗೆ ಅನುಮೋದನೆಗೆ ಶಿಫಾರಸ್ಸು ಮಾಡಿದೆ.

ರಾಣಿ ಕೆರೆಗೆ ವೇದಾವತಿ ನದಿ ನೀರು

ಚಳ್ಳಕೆರೆ ತಾಲ್ಲೂಕಿನ ರಾಣಿಕೆರೆಗೆ ವೇದಾವತಿ ನದಿಯ ನೀರನ್ನು 39 ಕಿ.ಮೀ ನಾಲೆಯ ಮುಖಾಂತರ ಹರಿಸುವ ಯೋಜನೆಯನ್ನು ಕರ್ನಾಟಕ ನೀರಾವರಿ ನಿಗಮದಿಂದ ವಿಶ್ವೇಶ್ವರಯ್ಯ (Bhadra Upper Bank Project) ಜಲನಿಗಮಕ್ಕೆ ಅನುದಾನ ಸಹಿತ ಹಸ್ತಾಂತರಿಸುವ ಪ್ರಸ್ತಾವನೆಯು ಪರಿಶೀಲನೆಯಲ್ಲಿದೆ.

ಇದನ್ನೂ ಓದಿ: ಜಿಲ್ಲಾ ಉಸ್ತುವಾರಿ ಸಚಿವರ ತವರಲ್ಲಿ ವಿದ್ಯಾರ್ಥಿಗಳಿಗೆ ಬಸ್ ಪ್ರಾಬ್ಲಂ | Bus problem

ಚಳ್ಳಕೆರೆ ಮತ್ತು ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರಗಳಿಗೆ ಸೇರಿರುವ 23,888 ಹೆಕ್ಟೇರ್ ಪ್ರದೇಶಕ್ಕೆ ಸೂಕ್ಷ್ಮ ನೀರಾವರಿ ವ್ಯವಸ್ಥೆ ಕಲ್ಪಿಸುವ ಚಿತ್ರದುರ್ಗ ಶಾಖಾ ಕಾಲುವೆ (ಬ್ಲಾಕ್-9) ಮತ್ತು (ಬ್ಲಾಕ್-11) ಕಾಮಗಾರಿಗಳ ಅಂದಾಜು ಪಟ್ಟಿಗಳು (Bhadra Upper Bank Project) ವಿಶ್ವೇಶ್ವರಯ್ಯ ಜಲನಿಗಮದ ಹಂತದಲ್ಲಿ ಪರಿಶೀಲನೆಯಲ್ಲಿದೆ. ಭದ್ರಾ ಮೇಲ್ದಂಡೆ ಯೋಜನೆಯಡಿಯಲ್ಲಿನ ಸೂಕ್ಷ್ಮ ನೀರಾವರಿ ಕಲ್ಪಿಸುವ ಕಾಮಗಾರಿಗಳು ವಿವಿಧ ಹಂತದಲ್ಲಿ ಪ್ರಗತಿಯಲ್ಲಿವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

You Might Also Like

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

TAGGED:Belgaum SessionBhadra Upper Bank ProjectCentral Government 5300 CroreChitradurgaChitradurga NewsDCMDKshi AnswerDotted Question AnswerFullKannada Newskannada suddiMarch 2028 ProjectMLANammajana.comProposalT. Raghumurthy QuestionWater Resources Departmentಕನ್ನಡ ನ್ಯೂಸ್ಕನ್ನಡ ಸುದ್ದಿಕೇಂದ್ರ ಸರ್ಕಾರ 5300 ಕೋಟಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಚುಕ್ಕೆ ಪ್ರಶ್ನೆಗೆ ಉತ್ತರಜಲ ಸಂಪನ್ಮೂಲ ಇಲಾಖೆಟಿ.ರಘುಮೂರ್ತಿ ಪ್ರಶ್ನೆಡಿಕೆಶಿ ಉತ್ತರಡಿಸಿಎಂನಮ್ಮಜನ.ಕಾಂಪೂರ್ಣಪ್ರಸ್ತಾವನೆಬೆಳಗಾವಿ ಅಧಿವೇಶನಭದ್ರಾ ಮೇಲ್ದಂಡೆ ಯೋಜನೆಮಾರ್ಚ್ 2028 ಯೋಜನೆಶಾಸಕ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ಜಿಲ್ಲಾ ಉಸ್ತುವಾರಿ ಸಚಿವರ ತವರಲ್ಲಿ ವಿದ್ಯಾರ್ಥಿಗಳಿಗೆ ಬಸ್ ಪ್ರಾಬ್ಲಂ | Bus problem
Next Article ಪ್ರವಾಸೋದ್ಯಮ ಇಲಾಖೆ | ವಿವಿಧ ತರಬೇತಿಗೆ ಅರ್ಜಿ ಆಹ್ವಾನ | Tourism
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?