Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: BN Chandrappa: ಮತದಾರರ ತೀರ್ಪಿಗೆ ತಲೆಬಾಗುವೆ | ಬಿ.ಎನ್.ಚಂದ್ರಪ್ಪ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ರಾಜಕೀಯ > BN Chandrappa: ಮತದಾರರ ತೀರ್ಪಿಗೆ ತಲೆಬಾಗುವೆ | ಬಿ.ಎನ್.ಚಂದ್ರಪ್ಪ
ರಾಜಕೀಯ

BN Chandrappa: ಮತದಾರರ ತೀರ್ಪಿಗೆ ತಲೆಬಾಗುವೆ | ಬಿ.ಎನ್.ಚಂದ್ರಪ್ಪ

Editor Nammajana
Last updated: 5 June 2024 11:07 AM
By Editor Nammajana 3 Min Read
Share
SHARE
Telegram Group Join Now
WhatsApp Group Join Now

Chitradurga news |nammajana.com|5-6-2024

ನಮ್ಮಜನ.ಕಾಂ, ಚಿತ್ರದುರ್ಗ: ಉತ್ತಮ ಆಡಳಿತ ನೀಡಿದರೂ ಸೋಲು, ಮತ್ತೊಂದು ಕಡೆ ಸುಳ್ಳನ್ನೇ ಸತ್ಯ ಎಂದು ಬಿಂಬಿಸುವ ವರ್ಗಕ್ಕೆ ಜಯ. ಇದೊಂದು ಸಂದಿಗ್ಧ ಪರಿಸ್ಥಿತಿ ಎಂದು ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ  ‌‌(BN Chandrappa) ತಮ್ಮ ಸೋಲನ್ನು ವಿಮರ್ಶಿಸಿದ್ದಾರೆ.

ಮಂಗಳವಾರ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಫಲಿತಾಂಶ ಪ್ರಕಟ ಬಳಿಕ ಪತ್ರಿಕಾ ಹೇಳಿಕೆ ನೀಡಿರುವ ಅವರು, ಜನ ನೀಡಿರುವ ತೀರ್ಪಿಗೆ ತಲೆಬಾಗುವೆ ಎಂದು ಹೇಳಿದ್ದಾರೆ.

೨೦೧೯ರ ಚುನಾವಣೆಯಲ್ಲಿ ಸೋಲು ಬಳಿಕ ಕ್ಷೇತ್ರದ ಜನರೊಂದಿಗೆ ಸದಾ ಸಂಪರ್ಕ ಹೊಂದಿದ್ದೇ. ಪಕ್ಷದ ಕಾರ್ಯಕರ್ತರು, ಕ್ಷೇತ್ರದ ಜನರ ಎಲ್ಲ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದೇ. ಚಿತ್ರದುರ್ಗ ಕ್ಷೇತ್ರವನ್ನೇ (BN Chandrappa) ತನ್ನ ಕರ್ಮಭೂಮಿ ಎಂದು ಭಾವಿಸಿ, ಜನರೊಂದಿಗೆ ನಾನು ಒಬ್ಬನಾಗಿ ಕ್ಷೇತ್ರದಾದ್ಯಂತ ಕಾಲಿಗೆ ಚಕ್ರ ಕಟ್ಟಿಕೊಂಡವನಂತೆ ಓಡಾಡಿದೆ. ಜನರು ಕೂಡ ಪ್ರೀತಿ ತೋರಿದ್ದರು. ಆದರೆ, ಜನರ ಪ್ರೀತಿ-ಅಭಿಮಾನ ಗೆಲುವಾಗಿ ಪರಿವರ್ತನೆ ಆಗಿಲ್ಲ. ಈ ನೋವು ನನ್ನಲ್ಲಿದೆ. ಹಾಗೇಂದು ನಾನು ಧೃತಿಗೆಡುವುದಿಲ್ಲ. ಆರು ಲಕ್ಷಕ್ಕಿಂತಲೂ ಹೆಚ್ಚು ಜನ ನನಗೆ ಮತ ಹಾಕಿರುವುದು, ಅವರಿಗೆ ಋಣಿ ಆಗಿರುವುದು ನನ್ನ ಕರ್ತವ್ಯ ಎಂದು ತಿಳಿಸಿದ್ದಾರೆ.

ಸಮೀಕ್ಷೆಗಳನ್ನು ಸುಳ್ಳಾಗಿಸಿ ದೇಶದಲ್ಲಿ ಇಂಡಿಯಾ ಒಕ್ಕೂಟ ಹೆಚ್ಚು ಸ್ಥಾನ ಪಡೆದಿದ್ದು, ಅಧಿಕಾರದ ಹೊಸ್ತಲಲ್ಲಿ ಇದೆ. ಜೊತೆಗೆ ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಇದೆ. ಇದನ್ನು ಬಳಸಿಕೊಂಡು ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುವೆ ಎಂದಿದ್ದಾರೆ.

ಸೋಲಿಗೆ ಅಂಜದೇ ಕ್ಷೇತ್ರದ ಜನರೊಂದಿಗೆ ಹೆಜ್ಜೆ ಹಾಕುವೆ. ಭದ್ರಾ ಮೇಲ್ದಂಡೆ, ನೇರ ರೈಲು ಮಾರ್ಗ, ಸರ್ಕಾರಿ ಮೆಡಿಕಲ್ ಕಾಲೇಜು ಹೀಗೆ ಅನೇಕ ಯೋಜನೆಗಳು ನನ್ನ ಅಧಿಕಾರವಧಿಯಲ್ಲಿ ಹೆಚ್ಚು ವೇಗ ಪಡೆದಿದ್ದು, ಅವುಗಳನ್ನು ಈ ಬಾರಿ ಸಂಸದನಾಗಿ ಪೂರ್ಣಗೊಳಿಸುವ ಮಹಾದಾಸೆ ನನ್ನದಾಗಿತ್ತು. ಆದರೆ, ಜನರ ತೀರ್ಪು ವ್ಯತಿರಿಕ್ತವಾಗಿ ಬಂದಿದೆ. ಅದನ್ನು ಸ್ವೀಕರಿಸುವ ಜೊತೆಗೆ ಈ ಯೋಜನೆಗಳನ್ನು ಪೂರ್ಣಗೊಳಿಸುವ ಜೊತೆಗೆ ಶಿಕ್ಷಣ, ಕೈಗಾರಿಕೆ, ದುಡಿಯುವ ಜನರ ಕೈಗೆ ಕೆಲಸ ದೊರೆಯುವ ರೀತಿ ರಾಜ್ಯ ಸರ್ಕಾರದ ಜೊತೆಗೂಡಿ ಕೇಂದ್ರದ ಮೇಲೆ ಒತ್ತಡ ತಂದು ಯೋಜನೆಗಳನ್ನು ತರುವ ಪ್ರಯತ್ನ ಮಾಡುವೆ ಎಂದು ಹೇಳಿದ್ದಾರೆ.

ಯಾವುದೇ ಕಾರಣಕ್ಕೂ ಸೋಲನ್ನು ಮುಂದಿಟ್ಟುಕೊಂಡು ಹೊಣೆಗಾರಿಕೆಯಿಂದ ನುಣಚಿಕೊಳ್ಳುವ ಸಣ್ಣ ಪ್ರಯತ್ನವನ್ನು ಮಾಡುವುದಿಲ್ಲ. ಅದು ನನ್ನ ಗುಣವೂ ಅಲ್ಲ. ಸೋಲು-ಗೆಲುವು ಮತ್ತು ಸಾಮಾಜಿಕ ಕಾರ್ಯಕ್ಕೂ ಸಂಬಂಧವಿಲ್ಲ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ, ದೇಶದ ಯಾವುದೇ ರಾಜ್ಯದಲ್ಲಿ ಮಾಡದ ಜನಪರ ಕಾರ್ಯಗಳನ್ನು ಮಾಡಿದೆ. ಅದರಲ್ಲೂ ಪಂಚ ಗ್ಯಾರಂಟಿಗಳು ಜನರ ಮನಸ್ಸನ್ನು ಗೆದ್ದಿದ್ದು, ಕೋಟ್ಯಂತರ ಜನ ಫಲಾನುಭವಿ ಆಗಿದ್ದಾರೆ. ಸಹಜವಾಗಿ ಮಾಡಿದ ಕೆಲಸಕ್ಕೆ ಕಾಂಗ್ರೆಸ್ ಪಕ್ಷ ಕೂಲಿ ಕೇಳುವುದು, ಫಲಾನುಭವಿಗಳಾದ ಜನರು ಕೂಡ ಮತದಾನದ ಮೂಲಕ ಕೂಲಿ ಕೊಡುವುದು ಪದ್ಧತಿ. ಆದರೆ, ಈ ವಿಷಯದಲ್ಲಿ ಲೋಪವಾಗಿರುವುದು ವಿಮರ್ಶೆಗೊಳಪಡಿಸಬೇಕಾದ ಸಂದರ್ಭ ಎದುರಾಗಿದೆ ಎಂದಿದ್ದಾರೆ.

ಸಮಾಜದಲ್ಲಿ ಧ್ವನಿಯಿಲ್ಲದ ಕೋಟ್ಯಂತರ ಬಡವರು, ನೊಂದ ಜನರ ಪರ ಯೋಜನೆ ರೂಪಿಸಿದಾಗ, ಬೆರಳೆಣಿಕೆ ಸಂಖ್ಯೆಯಲ್ಲಿರುವ ಉಳ್ಳವರು ಅಸೂಯೆ ಪಟ್ಟು, ಯೋಜನೆ ರೂಪಿಸಿದವರ ವಿರುದ್ಧವೇ ಎಲ್ಲ ಕ್ಷೇತ್ರಗಳ ಜನರನ್ನು ಎತ್ತಿಕಟ್ಟುವುದು ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ. ಈಗ ಆಗಿರುವುದು ಕೂಡ ಅದೇ ರೀತಿ ಎಂದು ಹೇಳಿದ್ದಾರೆ.

ಶತಮಾನಗಳ ಹಿಂದಿನಿAದಲೂ ಯಾರೂ ತಮ್ಮ ಪರ ಹೋರಾಟ ನಡೆಸುತ್ತಾರೆ ಅಂತಹವರ ಪರ ಜನ ಹೆಚ್ಚು ಪ್ರೀತಿ-ಅಭಿಮಾನ ಹೊಂದಿರುತ್ತಾರೆ. ಆದರೆ, ಪಟ್ಟಭದ್ರರ ಆರ್ಭಟಕ್ಕೆ ಭೀತಿಗೊಂಡು ಹೊರಬರುವುದಿಲ್ಲ. ಬಹಿರಂಗವಾಗಿ ಬೆಂಬಲಕ್ಕೆ ನಿಲ್ಲುವುದಿಲ್ಲ. ಇದೇ ಕಾರಣಕ್ಕೆ ಬಹಳಷ್ಟು ಜನಪರ ಚಿಂತಕರು, ಉತ್ತಮ ಆಡಳಿತಗಾರರು ಸೋಲುಂಡ ಕಹಿನೆನಪು ಇತಿಹಾಸದಲ್ಲಿ ದಾಖಲಾಗಿದೆ. ಅಂತಹ ದಿಗ್ಗಜರ ಇತಿಹಾಸದ ಅರಿವು ನನಗಿರುವ ಕಾರಣಕ್ಕೆ ಈ ಸೋಲು ನನ್ನನ್ನು ಸಣ್ಣದಾಗಿಯೂ ಧೃತಿಗೆಡಿಸುವುದಿಲ್ಲ ಎಂದು ಹೇಳಿದ್ದಾರೆ.

ಸಂಸದನಾಗಿದ್ದಾಗ ಅನುದಾನವನ್ನು ಜಾತ್ಯತೀತವಾಗಿ, ಸಣ್ಣ ಭ್ರಷ್ಟಾಚಾರ ಹತ್ತಿರ ಸುಳಿಯದಂತೆ ಹಂಚಿಕೆ ಮಾಡಿದ್ದೇನೆ. ಜೊತೆಗೆ ಸೋತ ಬಳಿಕ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷನಾಗಿದ್ದ ಸಂದರ್ಭ ನನ್ನ ಹುಟ್ಟುಗುಣ ಸಜ್ಜನಿಕೆ, ಸೌಜನ್ಯ, ಸರಳತೆಗೆ ಧಕ್ಕೆ ಬಾರದ ರೀತಿ ನಡೆದುಕೊಂಡಿದ್ದೆನೆ. ಇಂತಹ ಸಂದರ್ಭ ಸೋಲು ಆಗಿರುವುದು ರಾಜಕಾರಣದ ಮರುವಿಮರ್ಶೆ ಮಾಡುವ ಚಿಂತನೆಗ ಎಡೆಮಾಡಿಕೊಟ್ಟಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Dina Bhavishya: ಇಂದಿನ ದಿನ ಭವಿಷ್ಯ 5-6-2024

ಕ್ಷೇತ್ರದಲ್ಲಿನ ಪಕ್ಷದ ಕಾರ್ಯಕರ್ತರು, ಶಾಸಕರು, ಸಚಿವರು, ಮುಖಂಡರು ನನ್ನ ಗೆಲುವಿಗೆ ಟೊಂಕ ಕಟ್ಟಿ ಶ್ರಮಿಸಿದ್ದಾರೆ. ಅವರುಗಳು ಯಾವುದೇ ಕಾರಣಕ್ಕೂ ನೊಂದುಕೊಳ್ಳಬೇಕಿಲ್ಲ. ಕ್ಷೇತ್ರದಲ್ಲಿದ್ದು ನೊಂದ ಜನರ ಹಾಗೂ ಕ್ಷೇತ್ರದ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ರಾಜಕಾರಣದಲ್ಲಿ ಸಂತೃಪ್ತಿ ಕಾಣುವ ಮನೋಭಾವ ಹೆಚ್ಚಿಸಿಕೊಳ್ಳಬೇಕು, ಜನರಿಗೆ ಒಳಿತು ಮಾಡುವ ಮೂಲಕ ಕಹಿ ಘಟನೆಗಳನ್ನು ಮರೆಯಬೇಕು ಎಂಬುದು ನನ್ನಾಸೆ. ಆದ್ದರಿಂದ ಫಲಿತಾಂಶವನ್ನು ಮರೆತು ಪಕ್ಷ ಸಂಘಟನೆ ಮತ್ತು ಕ್ಷೇತ್ರದ ಅಭಿವೃದ್ಧಿಗೆ ನಾವೆಲ್ಲರೂ ಶ್ರಮಿಸೋಣೋ. ಈ ವಿಷಯದಲ್ಲಿ ಕಾರ್ಯಕರ್ತರು, ಮುಖಂಡರು, ಕ್ಷೇತ್ರದ ಜನರೊಂದಿಗೆ ನಾನು ಸದಾ ಇರುವೆ ಎಂದು ಚಂದ್ರಪ್ಪ (BN Chandrappa) ಹೇಳಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ನಮ್ಮಜನ.ಕಾಂ gmail:  nammajananews@gmail.com

» Whatsapp Number-9686622252

You Might Also Like

ಒಳ ಮೀಸಲಾತಿ ವಿಳಂಬ, ರಾಜ್ಯ ಸರ್ಕಾರದ ವಿರುದ್ದ ರಾಜ್ಯ ಬಂದ್ ಕರೆ: ಮಾಜಿ ಸಂಸದ ಎ.ನಾರಾಯಣಸ್ವಾಮಿ ಎಚ್ಚರಿಕೆ | A. Narayanaswamy

ಹಿರಿಯೂರು ನಗರಸಭೆ ಅಧ್ಯಕ್ಷರಾಗಿ ಬಾಲಕೃಷ್ಣ ಆಯ್ಕೆ | ಗೆಲ್ಲಲು ಬಿಜೆಪಿ ಬಲ, ಅಧ್ಯಕ್ಷಗಿರಿಗೆ ಕಾಂಗ್ರೆಸ್ ಬಲ

Molakalmuru ಕೈ ಶಾಸಕ-ನಿಗಮ ಮಂಡಳಿ ಅಧ್ಯಕ್ಷನ ಫ್ಲೆಕ್ಸ್ ವಾರ್ | ಮೊಳಕಾಲ್ಮುರು ಕಾಂಗ್ರೆಸ್ ನಲ್ಲಿ ಬಣ ಬಡಿದಾಟ

Chitradurga ನಗರಸಭೆ ಉಪಾಧ್ಯಕ್ಷೆ ವಿರುದ್ಧ ಅವಿಶ್ವಾಸ ಮಂಡನೆ | ಅವಿಶ್ವಾಸ ಪರ ನಿಂತ ನಗರಸಭೆ ಸದಸ್ಯರೆಷ್ಟು?

Municipal Council | ನಗರಸಭೆ ಉಪಾಧ್ಯಕ್ಷೆ ರಾಜೀನಾಮೆ

TAGGED:Chitradurga Lok Sabha Election 2024Lok Sabha ConstituencyLok Sabha Election 2024Lok Sabha Election 2024 Lokfight 2024Loka Sabha ElectionsLokfightLokfight 2024ಚಿತ್ರದುರ್ಗ ಲೋಕಸಭಾ ಚುನಾವಣೆ 2024ಲೋಕಫೈಟ್ಲೋಕಫೈಟ್ 2024ಲೋಕಸಭಾ ಚುನಾವಣೆಲೋಕಸಭಾ ಚುನಾವಣೆ 2024
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy1
Sleepy0
Angry0
Dead0
Wink0
Previous Article Dina Bhavishya: ಇಂದಿನ ದಿನ ಭವಿಷ್ಯ 5-6-2024
Next Article Chitradurga: ಪ್ರತಿ ತಾಲ್ಲೂಕಿನಲ್ಲಿ 10 ಸಾವಿರ ಗಿಡ ನೆಡಲು ಯೋಜನೆ: ನ್ಯಾಯಾಧೀಶ ಎಂ.ವಿಜಯ್
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

ಗಣಿಬಾಧಿತ ಹಳ್ಳಿಗಳಲ್ಲಿ ವಸತಿ, ನಿವೇಶನ ರಹಿತ ಫಲಾನುಭವಿಗಳ ಆಯ್ಕೆ : ಗ್ರಾಮ ಸಭೆ ನಡೆಸಲು ದಿನಾಂಕ ನಿಗದಿ | HOLALKERE
ಇಂದಿನ ಸುದ್ದಿ
HIRIYUR | ಕುಡಿಯುವ ನೀರಿಗಾಗಿ ಶಾಲಾ ಮಕ್ಕಳು ಪ್ರತಿಭಟನೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ | ಇಂದು ಯಾವ ರಾಶಿಗೆ ಶುಭಯೋಗ
ದಿನ ಭವಿಷ್ಯ
internal reservation: ಒಳಮೀಸಲಾತಿ ಜಾರಿ ಖಚಿತ : ಮಾಜಿ ಸಚಿವ ಎಚ್.ಆಂಜನೇಯ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?