Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಕರ್ನಾಟಕ ಐತಿಹಾಸಿಕ ಬಸವ ತತ್ವದ ತವರು: ಎಂ.ಬಿ.ಪಾಟೀಲ್ | ಕೋಟೆ ನಾಡಲ್ಲಿ ಟಿಬೆಟ್ ಬೌದ್ಧ ಗುರು ದಲೈ ಲಾಮಾ ಜನ್ಮದಿನ ಆಚರಣೆ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಕರ್ನಾಟಕ ಐತಿಹಾಸಿಕ ಬಸವ ತತ್ವದ ತವರು: ಎಂ.ಬಿ.ಪಾಟೀಲ್ | ಕೋಟೆ ನಾಡಲ್ಲಿ ಟಿಬೆಟ್ ಬೌದ್ಧ ಗುರು ದಲೈ ಲಾಮಾ ಜನ್ಮದಿನ ಆಚರಣೆ
ಇಂದಿನ ಸುದ್ದಿ

ಕರ್ನಾಟಕ ಐತಿಹಾಸಿಕ ಬಸವ ತತ್ವದ ತವರು: ಎಂ.ಬಿ.ಪಾಟೀಲ್ | ಕೋಟೆ ನಾಡಲ್ಲಿ ಟಿಬೆಟ್ ಬೌದ್ಧ ಗುರು ದಲೈ ಲಾಮಾ ಜನ್ಮದಿನ ಆಚರಣೆ

Editor Nammajana
Last updated: 10 August 2025 10:39 PM
By Editor Nammajana 3 Min Read
Share
SHARE

Chitradurga news|Nammajana.com|10-8-2025

ನಮ್ಮಜನ.ಕಾಂ, ಚಿತ್ರದುರ್ಗ: ಭಾರತ ಐತಿಹಾಸಿಕವಾಗಿ ಬೌದ್ಧ ಧರ್ಮ, ಕರ್ನಾಟಕ ಐತಿಹಾಸಿಕ ಬಸವ ತತ್ವದ ತವರಾಗಿದೆ. ಇವೆರಡು ಮಹಾಸಾದ್ವಿಕ ಧರ್ಮಗಳಾಗಿವೆ. ಇಬ್ಬರು ಮಹನೀಯರ ಕೊಡುಗೆ ಬಹುದೊಡ್ಡದಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಲಭ್ಯಗಳ ಇಲಾಖೆಯ ಸಚಿವರಾದ ಎಂ.ಬಿ. ಪಾಟೀಲ್ ತಿಳಿಸಿದರು.

ಚಿತ್ರದುರ್ಗ ನಗರದ ಬೃಹನ್ಮಠದ ಆವರಣದಲ್ಲಿನ ಅನುಭವ ಮಂಟಪದಲ್ಲಿ ಭಾನುವಾರ ಬಸವ ನಾಡಿನಲ್ಲಿ ಬುದ್ದ ಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಸಚಿವ ಎಂ.ಬಿ.ಪಾಟೀಲ್ ಮಾತುಗಳು

ಬಸವಣ್ಣನ ನಾಡಿನಲ್ಲಿ ಬುದ್ಧನ ಸ್ಮರಣೆ ಅವಿಸ್ಮರಣೀಯ, ಐತಿಹಾಸಿಕ ಕಾರ್ಯಕ್ರಮ. ಚಿತ್ರದುರ್ಗದ ಪರಿಸರವೂ ಬೌದ್ಧ ಧರ್ಮ ಮಾರ್ಗದಲ್ಲಿ ನಡೆದಿದೆ. ಅದಕ್ಕೆ ನಿದರ್ಶನವೆಂಬಂತೆ ಅಶೋಕನ ಕಾಲದ ಅನೇಕ ಶಾಸನಗಳು ಇಲ್ಲಿವೆ.

ಈ ನಾಡಿನ ಸಾಂಸ್ಕೃತಿಕ ನಾಯಕ ಬಸವಣ್ಣನ ಸಂಸ್ಕೃತಿಯನ್ನು ಕೂಡ ನಾವಿಲ್ಲಿ ಕಾಣಬಹುದು. ಬುದ್ಧ ಮತ್ತು ಬಸವ ಭಾರತ ಕಂಡ ಅತ್ಯಂತ ಶ್ರೇಷ್ಠ ಸುಧಾರಕರು. ಭಿನ್ನ ದಾರಿಯಲ್ಲಿ ನಡೆದು ತಮ್ಮ ಕಾಲಘಟ್ಟದಲ್ಲಿ ಶೋಷಿತರ, ದೀನದಲಿತರ, ನೊಂದವರ ಪರವಾಗಿ ಧ್ವನಿ ಎತ್ತಿದವರು. ಅಹಿಂಸೆ, ಸಮಾನತೆ, ಮಾನವೀಯತೆ, ಕಾರುಣ್ಯ ಪ್ರಮುಖ ತತ್ವಗಳಾಗಿವೆ. ಭಾರತ ಐತಿಹಾಸಿಕವಾಗಿ ಬೌದ್ಧ ಧರ್ಮ, ಕರ್ನಾಟಕ ಐತಿಹಾಸಿಕ ಬಸವ ತತ್ವದ ತವರಾಗಿದೆ. ಇವೆರಡು ಮಹಾಸಾದ್ವಿಕ ಧರ್ಮಗಳಾಗಿವೆ. ಇಬ್ಬರು ಮಹನೀಯರ ಕೊಡುಗೆ ಬಹುದೊಡ್ಡದಿದೆ. ಟಿಬೆಟ್ ಏಳನೇ ಶತಮಾನದಲ್ಲಿ ಬೌದ್ಧ ಧರ್ಮ ಸ್ವೀಕರಿಸಿದೆ ಎಂದರು.

ವಿಶ್ವದ ಹಲವು ರಾಷ್ಟ್ರಗಳು ಅನುಸರಿಸುತ್ತಿವೆ. 1950 ರಲ್ಲಿ 3,500 ಕಿ.ಮೀ ಗಡಿ ಹೊಂದಿತ್ತು. ನಮ್ಮೊಂದಿಗೆ ಉತ್ತಮ ಬಾಂಧವ್ಯವಿದೆ. ಅಂದಿನ ಪ್ರಧಾನಿಯಾಗಿದ್ದ ನೆಹರೂ ಭಾರತದಲ್ಲಿ, ಸಿಎಂಗಳಾಗಿದ್ದ ರಾಷ್ಟ್ರನಾಯಕ ನಿಜಲಿಂಗಪ್ಪ, ವೀರೇಂದ್ರ ಪಾಟೀಲ್ ಅವರು ಕರ್ನಾಟಕದಲ್ಲಿ ಟಿಬೆಟಿಯನ್ನರಿಗೆ ಆಶ್ರಯ ಕಲ್ಪಿಸಿದರು.

ರಾಜ್ಯದಲ್ಲೂ ಅವರ ಸಂಖ್ಯೆ ಹೆಚ್ಚಿದೆ. ಸೌಹಾರ್ದಯುತ ಸಂಬಂಧವಿದೆ. ಹೀಗಾಗಿ ಭಾರತೀಯ ಸಮಾಜ ವೈವಿಧ್ಯತೆಗೆ ಸಾಕ್ಷಿಯಾಗಿದೆ. ಬಸವಣ್ಣ ಎಲ್ಲ ವರ್ಗದವರನ್ನು ಕೂಡಿಸಿ, ಕಾಯಕ ಮತ್ತು ದಾಸೋಹ ಸಂಸ್ಕೃತಿ ಬೆಳೆಸಿದರು. ಅಸ್ಪಶ್ಯತೆ ವಿರುದ್ಧ ಹೋರಾಡಿದರು. ಬಸವ ಧರ್ಮ ಜಾತ್ಯತೀತ ಧರ್ಮ. ಬಸವಾದಿ ಶರಣರ ಚಿಂತನೆ, ಆಶಯ ಈಡೇರಿಸುವ ನಿಟ್ಟಿನಲ್ಲಿ ನಾವೆಲ್ಲರೂ ವಿಫಲರಾಗಿದ್ದೇವೆ. ಹೀಗಾಗಿ ಹರಿದು ಹಂಚಿ ಹೋಗಿದೆ. ಒಗ್ಗೂಡಿಸುವ ಕೆಲಸ ಆಗಬೇಕಿದೆ. ವಿಶ್ವ 3ನೇ ಮಹಾಯುದ್ಧದ ಹಂತದಲ್ಲಿದೆ. ಇದರ ಹಿಂದಿನ ಹಿತಾಸಕ್ತಿಯನ್ನು ಬುದ್ಧ, ಬಸವನ ಅನುಯಾಯಿಗಳು ಅರ್ಥ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಸಚಿವ ಕೆ.ಹೆಚ್.ಮುನಿಯಪ್ಪ ಮಾತುಗಳು 

ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಸಚಿವರಾದ ಕೆ.ಎಚ್. ಮುನಿಯಪ್ಪಮಾತನಾಡಿ, ಬೌದ್ಧ ಧರ್ಮವೂ ಅತ್ಯಂತ ಪುರಾತನವಾದುದು. ದಕ್ಷಿಣ ಭಾರತದಲ್ಲಿ 4-5ನೇ ಶತಮಾನದಲ್ಲಿದ್ದ ಕುರುಹುಗಳನ್ನು ಪತ್ತೆ ಹಚ್ಚಿ ಪುನರುಜ್ಜೀವನಗೊಳಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದ ಅವರು. ಬೌದ್ಧ, ಬಸವ, ಜೈನ ಧರ್ಮ ಶಾಂತಿ ಮಂತ್ರ ಪಠಿಸಿದೆ. ಜಗತ್ತಿಗೆ ಧರ್ಮ ಬೋಧನೆ ಮಾಡುವಲ್ಲೂ ಶ್ರಮಿಸಿವೆ. 12ನೇ ಶತಮಾನದ ಬಸವಣ್ಣನ ತತ್ವಾದರ್ಶ, ಬುದ್ಧನ ಅಷ್ಠಾಂಗ ಮಾರ್ಗಸಮರ್ಪಕವಾಗಿ ಸಾರಿದ್ದರೆ, ವಿಶ್ವಶಾಂತಿಗೆ ಮನ್ನಣೆ ದೊರೆಯುತ್ತಿತ್ತು ಎಂದು ಅಭಿಪ್ರಾಯಪಟ್ಟರು.

ಮಾರಸಂದ್ರ ಮುನಿಯಪ್ಪ ಮಾತನಾಡಿ, ಬುದ್ಧ ನೊಂದವರಿಗಾಗಿ ರಾಜ ಮನೆತನ ಬಿಟ್ಟರು. ಮಾನವತಾ ಧರ್ಮ ಪ್ರತಿಪಾದಿಸಿದರು. ಬಸವಣ್ಣ ಸ್ಥಾಪಿಸಿದ್ದು, ಜಾತಿಯಲ್ಲ. ಅದೊಂದು ಪವಿತ್ರವಾದ ಧರ್ಮ. ಇಬ್ಬರೂ ಮಹನೀಯರು ವಿಶ್ವ ಸಂತರು ಎಂದು ಬಣ್ಣಿಸಿ ಅಂಬೇಡ್ಕರ್ ಅವರು ಮತದಾನದ ಹಕ್ಕು ನೀಡಿದ್ದರಿಂದಾಗಿ ಶೋಷಿತ, ದಲಿತ, ಹಿಂದುಳಿದವರು ಜನಪ್ರತಿನಿಧಿಯಾಗಲು ಸಹಕಾರಿಯಾಗಿದೆ. ಬುದ್ಧ, ಬಸವ, ಅಶೋಕ ಚಕ್ರವರ್ತಿ, ಅಂಬೇಡ್ಕರ್ ಇವರೆಲ್ಲರೂ ನಮ್ಮ ತಾತಂದಿರು ಎಂಬುದನ್ನು ಮರೆಯಬಾರದು ಎಂದರು.

ಕಾರ್ಯಕ್ರಮದ ಸಾನಿಧ್ಯವಹಿಸಿದ್ದ ಮದಾರ ಗುರು ಪೀಠದ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಮಾತನಾಡಿ, ಟಿಬೆಟ್ ಬೌದ್ಧ ಗುರು ದಲೈ ಲಾಮಾ ಅವರು ಅನಾರೋಗ್ಯ ಕಾರಣಕ್ಕೆ ಪ್ರತಿನಿಧಿಗಳನ್ನು ಕಾರ್ಯಕ್ರಮಕ್ಕೆ ಕಳುಹಿಸಿದ್ದಾರೆ. ಅದಕ್ಕಾಗಿ ನೇರ ಪ್ರಸಾರದ ಮೂಲಕ ವೀಕ್ಷಿಸಲು ಅನುವು ಮಾಡಿಕೊಡಲಾಗಿದೆ ಎಂದರು.

ದಲೈ ಲಾಮಾ ಅವರ ಸಂದೇಶವನ್ನು ಓದಿದ ಗೋಪಿನಾಥ್ ಕರುಣೆ ಮತ್ತು ಮೈತ್ರಿಯ ಬದುಕು ಅತ್ಯಂತ ಶ್ರೇಷ್ಠವಾದುದು. ನಿಜಲಿಂಗಪ್ಪ ಅವರು ನನಗೆ ತುಂಬಾ ಆತ್ಮೀಯ ಗೆಳೆಯರಾಗಿದ್ದರು. ಕಠಿಣ ದಿನಗಳಲ್ಲಿ ಸಹಕಾರ ನೀಡಿದರು.

ಹೀಗಾಗಿ ಕರ್ನಾಟಕದಲ್ಲಿ ಬೌದ್ಧಿಕ, ಸಾಂಸ್ಕೃತಿಕವಾಗಿ ಧರ್ಮ ಸ್ಥಾಪನೆಗೆ ಕಾರಣವಾಯಿತು. ಸತ್ಯ, ಅಹಿಂಸೆಗೆ ಆದ್ಯತೆ ನೀಡಿರುವ ಭಾರತದ ಕುರಿತು ನಮಗೆ ಹೆಚ್ಚಿನ ಗೌರವವಿದೆ. ಇಲ್ಲಿನ ಪುರಾತನ ಸಂಸ್ಕೃತಿ, ಮೌಲ್ಯಗಳು ಜಾಗೃತಿ ಮೂಡಿಸುವಲ್ಲೂ ಮುಂಚೂಣಿಯಲ್ಲಿವೆ ಎಂದು ವಿವರಿಸಿದರು.

ಇದನ್ನೂ ಓದಿ: Adike Rate: ಅಡಕೆ ಧಾರಣೆ | 10 ಆಗಸ್ಟ್‌ 2025 | ಭೀಮಸಮುದ್ರ ಅಡಿಕೆ ರೇಟ್ ಎಷ್ಟಿದೆ 

ಕಾರ್ಯಕ್ರಮದಲ್ಲಿ ಶಿವಲಿಂಗಾನಂದ ಸ್ವಾಮೀಜಿ, ವಚನಾನಂದ ಸ್ವಾಮೀಜಿ, ಪ್ರಸನ್ನಾನಂದಪುರಿ ಸ್ವಾಮೀಜಿ, ಡಾ. ಬಸವಕುಮಾರ ಸ್ವಾಮೀಜಿ, ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಕಾರ್ಮಿಕ ಸಚಿವ ಸಂತೋಷ್ ಲಾಡ್,ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್, ರಾಜ್ಯಸಭಾ ಮಾಜಿ ಸದಸ್ಯ ಎಚ್. ಹನುಮಂತಪ್ಪ, ಮಾಜಿ ಸಂಸದ ಬಿ.ಎನ್. ಚಂದ್ರಪ್ಪ, ಶಾಸಕರಾದ ಕೆ.ಸಿ. ವೀರೇಂದ್ರ ಪಪ್ಪಿ, ಟಿ. ರಘುಮೂರ್ತಿ ಇತರರಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ನಮ್ಮಜನ.ಕಾಂ gmail:  nammajananews@gmail.com

» Whatsapp Number-9686622252

You Might Also Like

Today Gold Rate | ಚಿನ್ನದ ಬೆಲೆಯಲ್ಲಿ ಏರಿಕೆ

ಗೌರಿ – ಗಣೇಶ ಹಬ್ಬ, ಚಿತ್ರದುರ್ಗ ಜಿಲ್ಲಾಧಿಕಾರಿಯಿಂದ 13 ಪಾಯಿಂಟ್‌ನ ಪ್ರಮುಖ ಆದೇಶ, ಏನೇನದು? | Gauri Ganesha

Power cut : ಇಂದು ವಿದ್ಯುತ್‌ ವ್ಯತ್ಯಯ | ಎಲ್ಲೆಲ್ಲಿ ಕರೆಂಟ್ ಇರಲ್ಲ?

Dina Bhavishya | ದಿನ ಭವಿಷ್ಯ | 21 ಆಗಸ್ಟ್ 2025 | ರಾಶಿಗಳ ಯೋಗ ಹೇಗಿದೆ

Chitradurga ವರ್ಷಿತಾ ಮರ್ಡರ್ | ಆರೋಪಿ ಚೇತನ್ ವರ್ಷಿತಾ ಕೊಲೆಗೆ ಕಾರಣ ಕೊಟ್ಟಿದ್ದೇನು? ಕೇಳಿದರೆ ನೀವು ಶಾಕ್

TAGGED:Basavamurthy Madara Channaiah SwamijiBasavannaBirthdayBuddha RemembranceChitradurgaNammajana.comTibetan Buddhist Guru Dalai Lamaಚಿತ್ರದುರ್ಗಟಿಬೆಟ್ ಬೌದ್ಧ ಗುರು ದಲೈ ಲಾಮಾನಮ್ಮಜನ.ಕಾಂಬಸವಣ್ಣಬಸವಮೂರ್ತಿ ಮಾದಾರ ಚನ್ನಯ್ಯ ಶ್ರೀNammajana.comಬುದ್ದ ಸ್ಮರಣೆಹುಟ್ಟು ಹಬ್ಬ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Adike Rate: ಅಡಕೆ ಧಾರಣೆ | 10 ಆಗಸ್ಟ್‌ 2025 | ಭೀಮಸಮುದ್ರ ಅಡಿಕೆ ರೇಟ್ ಎಷ್ಟಿದೆ
Next Article ದಿನ ಭವಿಷ್ಯ | 11-8-2025 | Dina Bhavishya
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

CM Siddaramaiah ಗೆ ಖುದ್ದು ಕೃತಜ್ಞತೆ ಸಲ್ಲಿಸಿದ ಮಾದಿಗರು : ಅಲೆಮಾರಿಗಳನ್ನು ಕೈಬಿಡದಂತೆ ಆಂಜನೇಯ ಆಗ್ರಹ
Blog ಇಂದಿನ ಸುದ್ದಿ
ಚಿತ್ರದುರ್ಗ | ವರ್ಷಿತಾ ಅಮ್ಮನ‌ ಬಳಿ ಮಾತಾಡಿದ್ದು ಕೊನೆಯಾದಾಗಿ ಯಾವಾಗ? ತಾಯಿ ಏನ್ ಹೇಳಿದರು | Varshita Murder Case
ಕ್ರೈಂ ಸುದ್ದಿ
ಚಿತ್ರದುರ್ಗ Varshita murder | ವರ್ಷಿತಾಳ ಕೊಲೆ ಕೇಸ್, ಸಚಿವ ಡಿ.ಸುಧಾಕರ್ ಹೇಳಿದ್ದೇನು | 5 ಲಕ್ಷ ಪರಿಹಾರ ಘೋಷಣೆ
ಇಂದಿನ ಸುದ್ದಿ
today Adike Rate : ಅಡಕೆ ಧಾರಣೆ | 20 ಆಗಸ್ಟ್‌ 2025 | ಚನ್ನಗಿರಿ, ಶಿವಮೊಗ್ಗ ಮಾರುಕಟ್ಟೆಯಲ್ಲಿ 61 ಸಾವಿರ ದಾಟಿದ ಅಡಿಕೆ
ಅಡಿಕೆ ಧಾರಣೆ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?