Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಅಯೋಧ್ಯೆಯಲ್ಲಿ ವಾಲ್ಮೀಕಿ ಮಂದಿರ ನಿರ್ಮಿಸಿ : ವಾಲ್ಮೀಕಿ ಶ್ರೀ ಆಗ್ರಹ: Ayodhya
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಅಯೋಧ್ಯೆಯಲ್ಲಿ ವಾಲ್ಮೀಕಿ ಮಂದಿರ ನಿರ್ಮಿಸಿ : ವಾಲ್ಮೀಕಿ ಶ್ರೀ ಆಗ್ರಹ: Ayodhya
ಇಂದಿನ ಸುದ್ದಿ

ಅಯೋಧ್ಯೆಯಲ್ಲಿ ವಾಲ್ಮೀಕಿ ಮಂದಿರ ನಿರ್ಮಿಸಿ : ವಾಲ್ಮೀಕಿ ಶ್ರೀ ಆಗ್ರಹ: Ayodhya

Nammajana Sub Editor
Last updated: 18 August 2025 9:38 AM
By Nammajana Sub Editor 2 Min Read
Share
SHARE

Chitradurga News | Nammajana.com | 18-08-2025

ನಮ್ಮಜನ ನ್ಯೂಸ್ ಕಾಂ,ಹೊಸದುರ್ಗ: ರಾಮಾಯಣದ (Ayodhya) ಮೂಲಕ ಜಗತ್ತಿಗೆ ರಾಮನನ್ನು ಪರಿಚಯಿಸಿದ್ದು ವಾಲ್ಮೀಕಿ ಮಹರ್ಷಿಗಳು, ರಾಮನಿಗೆ ಮಂದಿರ ಕಟ್ಟಲಾಗಿದೆ ಆದರೆ ರಾಮನನ್ನೇ ಪರಿಚಯಿಸಿ ಕೊಟ್ಟ ವಾಲ್ಮೀಕಿ ಮಹರ್ಷಿಗಳನ್ನು ತಿರಸ್ಕಾರ ಮಾಡುವುದು ಸರಿಯಲ್ಲ ಶೀಘ್ರವೇ ಅಯೋಧ್ಯೆಯಲ್ಲಿ ವಾಲ್ಮೀಕಿ ಮಂದಿರ ನಿರ್ಮಾಣವಾಗಬೇಕೆಂದು ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಸ್ವಾಮೀಜಿ ಹೇಳಿದರು.

ಇದನ್ನೂ ಓದಿ: ಗುಂಡಿ ಬಿದ್ದು ಹದಗೆಟ್ಟ ರಸ್ತೆ : ವಾಹನ ಸವಾರರ ಪರದಾಟ

ಪಟ್ಟಣದ ರಾಧಾಕೃಷ್ಣ ಕಲ್ಯಾಣ ಮಂಟಪದಲ್ಲಿ ತಾಲೂಕು ವಾಲ್ಮೀಕಿ ನಾಯಕ ನೌಕರರ ಸಂಘ ನಾಯಕ ಸಮಾಜ ಮತ್ತು ವಾಲ್ಮೀಕಿ ಯುವಸೇನಾ ಪಡೆ ವತಿಯಿಂದ ಭಾನುವಾರ ನಡೆದ ವಾಲ್ಮೀಕಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದರು.

ನಮ್ಮನ್ನಾಳುವ ರಾಜಕೀಯ ಪಕ್ಷಗಳು ಚುನಾವಣೆಯ ಸಂದರ್ಭದಲ್ಲಿ ನಮ್ಮಿಂದ ಮತ ಹಾಕಿಸಿಕೊಂಡು ಅಧಿಕಾರಕ್ಕೆ ಬಂದ ತಕ್ಷಣ ಮರೆತು ಬಿಡುತ್ತಾರೆ. ಈ ಹಿನ್ನೆಲೆಯಲ್ಲಿ ನಾವು ಜಾಗೃತರಾಗಿ ರಾಜಕೀಯ ವಾಗಿ ಸಂಘಟನೆಗೊಳ್ಳುವ ಅನಿವಾರ್ಯತೆಯಿದೆ ಎಂದು ಸಲಹೆ ನೀಡಿದರು.

ಕಾರ್ಯಕ್ರಮ ಉದ್ಘಾಟಿಸಿದ ಶಾಸಕ(Ayodhya) ಬಿ.ಜಿ.ಗೋವಿಂದಪ್ಪ ಮಾತನಾಡಿ, ಪೋಷಕರು ಮಕ್ಕಳಿಗೆ ಪ್ರೇರಕ ಶಕ್ತಿಯಾಗಿರಬೇಕು. ಶಿಕ್ಷಣಕ್ಕೆ ಅನುಕೂಲಕರ ವಾಗುವಂತಹ ವಾತಾವರಣ ನಿರ್ಮಾಣ ಮಾಡಿ. ಮೊಬೈಲ್ ಹುಚ್ಚು ಬಿಡಿಸಿ, ಸಂಸ್ಕಾರ ಕಲಿಸಿ. ಸಮುದಾ ಯಕ್ಕೆ ತನ್ನದೇ ಆದ ಇತಿಹಾಸವಿದ್ದು ಆದರ್ಶ ಪುರುಷ ರನ್ನು ಪ್ರೇರಣೆಯಾಗಿ ತೆಗೆದುಕೊಂಡು ಸಾಧಕರಾಗಿ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಇದನ್ನೂ ಓದಿ: ನಾಯಕನಹಟ್ಟಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಮಠಕ್ಕೆ ಸಚಿವ ಡಿ.ಸುಧಾಕರ್ ಭೇಟಿ

ನಾಯಕ ಸಮುದಾಯದ ಮುಖಂಡರ ಸಭೆ ಕರೆದು ನಿಮ್ಮ ಬೇಡಿಕೆಗಳನ್ನು ಈಡೇರಿಸುವ ಪ್ರಯತ್ನ ಮಾಡುತ್ತೇನೆ. ನಿರಂತರತೆ, ಕಠಿಣ ಪರಿಶ್ರಮ, ತಾಳ್ಮೆಯಿದ್ದರೆ ಜೀವನದಲ್ಲಿ ಮುಂದೆ ಬರಲು ಸಾಧ್ಯ. ವಾಲ್ಮೀಕಿ ನಾಯಕ ನೌಕರರ ಸಂಘದ ಕಾರ್ಯದರ್ಶಿ ಮೈಲಾರಪ್ಪ ಪ್ರಾಸ್ತಾವಿಕವಾಗಿ ಮಾತನಾಡಿ, ಶಾಸಕರು ಮದಕರಿ ನಾಯಕರ ಪುತ್ತಳಿ ಮತ್ತು ಇತರ ಪ್ರಗತಿ ಕಾರ್ಯಗಳಿಗೆ ಸಹಕರಿಸಿದ್ದಾರೆ.

ಅದರಂತೆಯೇ ಹೊಸದುರ್ಗ ಪಟ್ಟಣದ ನ್ಯೂ ಬನಶಂಕರಿ ಬಡಾವಣೆಯಲ್ಲಿರುವ ವಾಲ್ಮೀಕಿ ಸಮುದಾಯ ಭವನಕ್ಕೆ ರಸ್ತೆ ಮಾಡಿಸಬೇಕು. ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ಪ್ರತ್ಯೇಕ ಹಾಸ್ಟೆಲ್ ಮಾಡಲು 4 ಎಕರೆ ಜಮೀನನ್ನು ನೀಡಬೇಕೆಂದು ಮನವಿ ಮಾಡಿದರು.

ಈ ವೇಳೆ ಸಹಾಯಕ ಪ್ರಾಧ್ಯಾಪಕ ಷಣ್ಮುಖಪ್ಪ ಉಪನ್ಯಾಸ ನೀಡಿದರು. ತಹಸೀಲ್ದಾರ್‌ತಿರುಪತಿ ಪಾಟೀಲ್ ಮಾತನಾಡಿದರು. ವಾಲ್ಮೀಕಿ ನಾಯಕ ನೌಕರರ ಸಂಘದ ಅಧ್ಯಕ್ಷ ಜಯಪ್ರಕಾಶ್ ಅಧ್ಯಕ್ಷತೆ ವಹಿಸಿದ್ದರು.

ಇದನ್ನೂ ಓದಿ: ಟೈಮ್ ವೆಸ್ಟ್ ಮಾಡಬೇಡಿ ಸ್ವಾಮಿ, ಒಳ‌ ಮೀಸಲಾತಿ ಜಾರಿ ಮಾಡಿ: ಮೋಹನ್ ಆಗ್ರಹ

ಕಾರ್ಯಕ್ರಮದಲ್ಲಿ ಮುಖ್ಯ ಭಾಗವಾಗಿ(Ayodhya) ಎಸ್ ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಪಡೆದ ವಿದ್ಯಾ ವಿದ್ಯಾರ್ಥಿಗಳಿಗೆ ಪುರಸ್ಕರಿಸಲಾಯಿತು. ನಿವೃತ್ತ ನೌಕರರಿಗೆ, ಮುಖಂಡರಿಗೆ ಸನ್ಮಾನಿಸಿ ಗೌರವಿಸಲಾಯಿತು.

ತಾಲೂಕು ನಾಯಕ ಸಮಾಜದ ಅಧ್ಯಕ್ಷ ಎನ್.ತಿಪ್ಪೇಸ್ವಾಮಿ, ಮಾಜಿ ಅಧ್ಯಕ್ಷ ನಾಗರಾಜ್, ತಿಪ್ಪೇಸ್ವಾಮಿ, ತುಂಬಿನಕೆರೆ ಬಸವರಾಜ್, ಕಾರ್ಯದರ್ಶಿ ರಂಗನಾಥ, ಸಹ ಕಾರ್ಯದರ್ಶಿ ರಂಗನಾಥ್, ಉಪಾಧ್ಯಕ್ಷ ಶೇಖರಪ್ಪ, ಗೌರವ್ಯಾಧ್ಯಕ್ಷ ನಾಗರಾಜ್, ಕ್ಷೇತ್ರ ಸಮನ್ವಯಾಧಿಕಾರಿ ಶ್ರೀನಿವಾಸ್, ವಿನಯ್, ಸಹಾಯಕ ಲೆಕ್ಕಾಧಿಕಾರಿ ಆಂಜಿನಪ್ಪ, ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಶಾಂತಪ್ಪ, ಮುಖಂಡರಾದ ಅರುಣ್ ಗಂಗಾಧರಪ್ಪ ಮತ್ತು ನಾಗರಾಜ್ ಸೇರಿದಂತೆ ಇನ್ನಿತರ ಮುಖಂಡರು ಹಾಗೂ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ನಮ್ಮಜನ.ಕಾಂ gmail:  nammajananews@gmail.com

» Whatsapp Number-9686622252

You Might Also Like

ಗೌರಿ – ಗಣೇಶ ಹಬ್ಬ, ಚಿತ್ರದುರ್ಗ ಜಿಲ್ಲಾಧಿಕಾರಿಯಿಂದ 13 ಪಾಯಿಂಟ್‌ನ ಪ್ರಮುಖ ಆದೇಶ, ಏನೇನದು? | Gauri Ganesha

Power cut : ಇಂದು ವಿದ್ಯುತ್‌ ವ್ಯತ್ಯಯ | ಎಲ್ಲೆಲ್ಲಿ ಕರೆಂಟ್ ಇರಲ್ಲ?

Dina Bhavishya | ದಿನ ಭವಿಷ್ಯ | 21 ಆಗಸ್ಟ್ 2025 | ರಾಶಿಗಳ ಯೋಗ ಹೇಗಿದೆ

Chitradurga ವರ್ಷಿತಾ ಮರ್ಡರ್ | ಆರೋಪಿ ಚೇತನ್ ವರ್ಷಿತಾ ಕೊಲೆಗೆ ಕಾರಣ ಕೊಟ್ಟಿದ್ದೇನು? ಕೇಳಿದರೆ ನೀವು ಶಾಕ್

CM Siddaramaiah ಗೆ ಖುದ್ದು ಕೃತಜ್ಞತೆ ಸಲ್ಲಿಸಿದ ಮಾದಿಗರು : ಅಲೆಮಾರಿಗಳನ್ನು ಕೈಬಿಡದಂತೆ ಆಂಜನೇಯ ಆಗ್ರಹ

TAGGED:AyodhyaChitradurgaChitradurga NewsHosadurgaKannada NewsNammajana.comPratibha PuraskarSri Prasannananda SwamijiValmiki Templeಅಯೋಧ್ಯಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ನಮ್ಮಜನ.ಕಾಂಪ್ರತಿಭಾ ಪುರಸ್ಕಾರವಾಲ್ಮೀಕಿ ಮಂದಿರಶ್ರೀ ಪ್ರಸನ್ನಾನಂದ ಸ್ವಾಮೀಜಿಹೊಸದುರ್ಗ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Chitradurga Rain | ಚಿತ್ರದುರ್ಗ ಜಿಲ್ಲೆಯಲ್ಲಿ ಜಿಟಿಜಿಟಿ ಮಳೆ | ಇಂದು ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ
Next Article VaniVilasa Sagara | ವಿ.ವಿ.ಸಾಗರ ಭರ್ತಿಗೆ 5 ಅಡಿ ಮಾತ್ರ ಬಾಕಿ | ಎಷ್ಟಿದೆ ಇಂದಿನ ನೀರಿನ ಮಟ್ಟ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

ಚಿತ್ರದುರ್ಗ | ವರ್ಷಿತಾ ಅಮ್ಮನ‌ ಬಳಿ ಮಾತಾಡಿದ್ದು ಕೊನೆಯಾದಾಗಿ ಯಾವಾಗ? ತಾಯಿ ಏನ್ ಹೇಳಿದರು | Varshita Murder Case
ಕ್ರೈಂ ಸುದ್ದಿ
ಚಿತ್ರದುರ್ಗ Varshita murder | ವರ್ಷಿತಾಳ ಕೊಲೆ ಕೇಸ್, ಸಚಿವ ಡಿ.ಸುಧಾಕರ್ ಹೇಳಿದ್ದೇನು | 5 ಲಕ್ಷ ಪರಿಹಾರ ಘೋಷಣೆ
ಇಂದಿನ ಸುದ್ದಿ
today Adike Rate : ಅಡಕೆ ಧಾರಣೆ | 20 ಆಗಸ್ಟ್‌ 2025 | ಚನ್ನಗಿರಿ, ಶಿವಮೊಗ್ಗ ಮಾರುಕಟ್ಟೆಯಲ್ಲಿ 61 ಸಾವಿರ ದಾಟಿದ ಅಡಿಕೆ
ಅಡಿಕೆ ಧಾರಣೆ
ಒಳ‌ ಮೀಸಲಾತಿಗೆ ಸರ್ಕಾರ ಅಧಿಕೃತ ಮುದ್ರೆ | ಸಿಎಂ ವಿಧಾನ ಸಭೆಯಲ್ಲಿ ಏನೆಲ್ಲ‌ ಹೇಳಿದರು? Internal Reservation Karnataka |
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?