Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಉದ್ಯೋಗ ಖಾತರಿ ಯೋಜನೆ ಕಾಮಗಾರಿ ವೀಕ್ಷಿಸಿದ ಜಿ.ಪಂ. CEO Dr.S.Akash
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಉದ್ಯೋಗ ಖಾತರಿ ಯೋಜನೆ ಕಾಮಗಾರಿ ವೀಕ್ಷಿಸಿದ ಜಿ.ಪಂ. CEO Dr.S.Akash
ಇಂದಿನ ಸುದ್ದಿ

ಉದ್ಯೋಗ ಖಾತರಿ ಯೋಜನೆ ಕಾಮಗಾರಿ ವೀಕ್ಷಿಸಿದ ಜಿ.ಪಂ. CEO Dr.S.Akash

Nammajana Sub Editor
Last updated: 13 August 2025 10:03 PM
By Nammajana Sub Editor 1 Min Read
Share
SHARE

Chitradurga News | Nammajana.com | 13-08-2025

ನಮ್ಮಜನ.ಕಾಂ, ಚಳ್ಳಕೆರೆ: ಗ್ರಾಮೀಣ ಭಾಗದ ಕೂಲಿಕಾರ್ಮಿಕರಿಗೆ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಉದ್ಯೋಗವನ್ನು ಒದಗಿಸಿದ ಅವರ ಬದುಕಿಗೆ ನೆರವಾಗಬೇಕು. ಸರ್ಕಾರದ ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ಲೋಪವಾಗದಂತೆ ಎಚ್ಚರಿಕೆ ವಹಿಸಬೇಕಲ್ಲದೆ, ಯಂತ್ರದ ಬಳಕೆಯನ್ನು ಸಂಪೂರ್ಣವಾಗಿ ನಿಯಂತ್ರಿಸಬೇಕೆಂದು ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ.ಎಸ್‌.ಆಕಾಶ್‌ ತಿಳಿಸಿದರು.

ಇದನ್ನೂ ಓದಿ: ಧರಣಿ ಸತ್ಯಾಗ್ರಹ ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ : ಹಂತ ಹಂತವಾಗಿ ಬೇಡಿಕೆ ಈಡೇರಿಸುವ ಭರವಸೆ

ಅವರು, ತಾಲ್ಲೂಕಿನ ಹಿರೇಹಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಮಹಾತ್ಮಗಾಂಧಿ ಉದ್ಯೋಗ ಖಾತರಿ ಯೋಜನೆಯ ನರೇಗಾದಡಿ ಕೈಗೊಂಡ ಚೆಕ್‌ ಡ್ಯಾಂ ನಿರ್ಮಾಣ, ಕರೆ ಹೂಳೆತ್ತುವುದು, ಗೊಕಟ್ಟೆ ಮುಂತಾದ ಕಾಮಗಾರಿಗಳು ಅನುಷ್ಠಾನದಲ್ಲಿದ್ದು ಅವುಗಳನ್ನು ವೀಕ್ಷಿಸಿ ಕೂಲಿಕಾರ್ಮಿಕರೊಂದಿಗೆ ವಾಸ್ತವ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಕೂಲಿಕಾರ್ಮಿಕರು ಸರ್ಕಾರ ನಮಗೆ ಉದ್ಯೋಗ ಒದಗಿಸುತ್ತಿರುವ ಬಗ್ಗೆ ಸಂತಸ ವ್ಯಕ್ತಪಡಿಸಿದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಚ್‌.ಶಶಿಧರ ಮಾತನಾಡಿ, ಸರ್ಕಾರ ಗ್ರಾಮೀಣ ಭಾಗದ ಕೂಲಿಕಾರ್ಮಿಕರಿಗೆ ಕೂಲಿ ಜೊತೆಗೆ ಕೆಲಸವನ್ನು ನೀಡಿ ಅವರ ಬದುಕಿಗೆ ಸಹಕಾರ ನೀಡುತ್ತಲ್ಲದೆ, ಗ್ರಾಮೀಣ ಭಾಗದ ಕೂಲಿಕಾರ್ಮಿಕರು ವಲಸೆ ಹೋಗುವುದನ್ನು ನಿಯಂತ್ರಿಸಲು ಈ ಯೋಜನೆ ಸಹಕಾರಿಯಾಗಿದೆ. ಸರ್ಕಾರದಿಂದ ಬರುವ ಎಲ್ಲಾ ಕಾಮಗಾರಿಗಳನ್ನು ಕೂಲಿಕಾರ್ಮಿಕರ ಮೂಲಕ ಕೈಗೊಳ್ಳಲಾಗುತ್ತದೆ ಎಂದರು.

ಶಾಲೆಗೆ ಭೇಟಿ ನೀಡಿದ ಸಿಇಒ 

ನರೇಗಾ ಕಾಮಗಾರಿ ವೀಕ್ಷಿಸಿದ ಸಿಇಒ ಡಾ.ಎಸ್‌.ಆಕಾಶ್‌ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಮಕ್ಕಳ ಕಲಿಕೆ, ಸೌಲಭ್ಯ, ಬಿಸಿಯೂಟ, ಪೌಷ್ಠಿಕ ಆಹಾರ ನೀಡಿಕೆ ಬಗ್ಗೆ ಮಕ್ಕಳಿಂದ ಮಾಹಿತಿ ಪಡೆದರು. ಇದೇ ಸಂದರ್ಭದಲ್ಲಿ ಶಿಕ್ಷಕರಿಗೆ ಪ್ರತಿಯೊಬ್ಬ ವಿದ್ಯಾರ್ಥಿಯ ಶೈಕ್ಷಣಿಕ ಪ್ರಗತಿಯ ಬಗ್ಗೆ ಶಿಕ್ಷಕರು ಗಮನಿಸಬೇಕು.

ಇದನ್ನೂ ಓದಿ: ವಾಣಿವಿಲಾಸ ಸಾಗರ ಇಂದಿನ ನೀರಿನ ಮಟ್ಟ

ಇದರಿಂದ ಮುಂದಿನ ದಿನಗಳಲ್ಲಿ ವಿದ್ಯಾರ್ಥಿಯ ಶೈಕ್ಷಣಿಕ ಬೆಳವಣಿಗೆ ಆಶಾದಾಯಕವಾಗಿರುತ್ತದೆ ಎಂದರು.

ಗ್ರಾಪಂ ಅಧ್ಯಕ್ಷ ರಾಜಣ್ಣ, ಪಿಡಿಒ ನರಸಿಂಹಪ್ಪ, ಸಿಆರ್‌ಪಿ ಎನ್‌.ಮಾರಣ್ಣ, ಪಂಚಾಯಿತಿ ಕಾರ್ಯದರ್ಶಿ ಉಪಸ್ಥಿತರಿದ್ದರು.

 

 

You Might Also Like

Adike Rate : ಅಡಿಕೆ ಧಾರಣೆ | 21 ಆಗಸ್ಟ್ 2025 | ರಾಶಿ ಅಡಿಕೆ ಬೆಲೆ ಎಷ್ಟಿದೆ?

HOSDURGA | ಜಿಲ್ಲಾ ಮಟ್ಟದ ಕವಿಗೋಷ್ಠಿ ಕವನಗಳಿಗೆ ಆಹ್ವಾನ

ಸಚಿವ ಡಿ.ಸುಧಾಕರ್ ಗೆ ಸಹಕಾರ ರತ್ನ ಪ್ರಶಸ್ತಿ ಪ್ರದಾನ | Cooperative Ratna Award

NAYAKANAHATTI ಯಲ್ಲಿ ಕೆರೆ ಗಂಗಮ್ಮ ಸಂಭ್ರಮಾಚರಣೆ | ಸಮೃದ್ಧ ಮಳೆ, ಬೆಳೆಗೆ ಪ್ರಾರ್ಥನೆ

ವಾಣಿವಿಲಾಸ ಸಾಗರ ನೀರಿನ‌ ಮಟ್ಟ ಭರ್ಜರಿ ಏರಿಕೆ | Vani Vilasa Sagara Dam

TAGGED:CEO Dr. S. AkashChallakereChitradurgaChitradurga NewsEmployment Guarantee SchemeKannada NewsNammajana.comWorksಉದ್ಯೋಗ ಖಾತರಿ ಯೋಜನೆಕನ್ನಡ ನ್ಯೂಸ್ಕನ್ನಡ ಸುದ್ದಿಕಾಮಗಾರಿಚಳ್ಳಕೆರೆಚಿತ್ರದುರ್ಗಚಿತ್ರದುರ್ಗ ನ್ಯೂಸ್ನಮ್ಮಜನ.ಕಾಂಸಿಇಓ ಡಾ.ಎಸ್. ಆಕಾಶ್
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry1
Dead0
Wink0
Previous Article ಯಲಗಟ್ಟೆಗೊಲ್ಲರಹಟ್ಟಿ ಪೀಡರ್‌ ಚಾನಲ್‌ ಒಡೆದು ಜಮೀನಿಗೆ ನುಗ್ಗಿದ ನೀರು : Peeder channel broke
Next Article RTI ಮಾಹಿತಿ ನಿರಾಕರಣೆ | ಚಿತ್ರದುರ್ಗ ನಿರ್ಮಿತಿ‌ ಕೇಂದ್ರಕ್ಕೆ 50 ಸಾವಿರ ದಂಡ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

ವಿಧಾನ ಪರಿಷತ್ ನಲ್ಲಿ ಹಾಸ್ಟೆಲ್ ವಿದ್ಯಾರ್ಥಿ ವರ್ಷಿತಾ ಹತ್ಯೆ ಕುರಿತು ಪ್ರತಿಧ್ವನಿ
ಕ್ರೈಂ ಸುದ್ದಿ
EX MLA ಹಿರಿಯೂರು | ಮಾಜಿ ಶಾಸಕ ಆರ್.ರಾಮಯ್ಯ ಇನ್ನಿಲ್ಲ
Blog
ವರ್ಷಿತಾ ಕೊಲೆ | ಹತ್ಯೆಗೂ ಮೊದಲು ಪ್ರಿಯಕರ ಚೇತನ್ ಜೊತೆ ವರ್ಷಿತಾ ಜೊತೆಯಾಗಿದ್ದೇಲಿ, ಚೇತನ್ ಪ್ಲಾನ್ ಹೇಗಿತ್ತು!
ಕ್ರೈಂ ಸುದ್ದಿ
Today Gold Rate | ಚಿನ್ನದ ಬೆಲೆಯಲ್ಲಿ ಏರಿಕೆ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?