Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಸತತ ಮೂರು ಗಂಟೆ ಚಳ್ಳಕೆರೆ ನಗರಸಭೆ ಅಧಿಕಾರಿಗಳಿಗೆ ಶಾಸಕ ಟಿ.ರಘುಮೂರ್ತಿ ಅಭಿವೃದ್ದಿ ಡ್ರಿಲ್ | Challakere Municipality
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಸತತ ಮೂರು ಗಂಟೆ ಚಳ್ಳಕೆರೆ ನಗರಸಭೆ ಅಧಿಕಾರಿಗಳಿಗೆ ಶಾಸಕ ಟಿ.ರಘುಮೂರ್ತಿ ಅಭಿವೃದ್ದಿ ಡ್ರಿಲ್ | Challakere Municipality
ಇಂದಿನ ಸುದ್ದಿ

ಸತತ ಮೂರು ಗಂಟೆ ಚಳ್ಳಕೆರೆ ನಗರಸಭೆ ಅಧಿಕಾರಿಗಳಿಗೆ ಶಾಸಕ ಟಿ.ರಘುಮೂರ್ತಿ ಅಭಿವೃದ್ದಿ ಡ್ರಿಲ್ | Challakere Municipality

Editor Nammajana
Last updated: 5 December 2024 13:44
By Editor Nammajana 3 Min Read
Share
SHARE

Chitradurga news|nammajana.com|5-12-2024 

ನಮ್ಮಜನ.ಕಾಂ, ಚಳ್ಳಕೆರೆ: ಇಲ್ಲಿನ ನಗರಸಭೆಯ ಪ್ರಗತಿಪರಿಶೀಲನಾ ಜೊತೆಗೆ ಸಾರ್ವಜನಿಕರ ಕುಂದುಕೊರತೆಗಳ ಬಗ್ಗೆ ಚರ್ಚೆ ನಡೆಸುವ ಸಲುವಾಗಿ ಕ್ಷೇತ್ರದ ಶಾಸಕ, ಸಣ್ಣಕೈಗಾರಿಕೆ ಅಭಿವೃದ್ದಿ ನಿಗಮದ ಅಧ್ಯಕ್ಷ ಟಿ.ರಘುಮೂರ್ತಿ ಸಭೆ ನಡೆಸಿದ್ದು ಸುಮಾರು ಮೂರು ಗಂಟೆಗಳ ಕಾಲ ಅಧಿಕಾರಿಗಳು, ಸಿಬ್ಬಂಇರುವ Challakere Municipality) ಜೊತೆಗೆ ಸಭೆ ನಡೆಸಿ ನಗರಸಭೆ ಆಡಳಿತದ ಮೇಲೆ ಲಗಾಮು ಹಾಕುವಲ್ಲಿ ಶಾಸಕರು ಸ್ವಲ್ಪಮಟ್ಟಿನ ಯಶಕಂಡಿದ್ಧಾರೆ.

ವಿಶೇಷವೆಂದರೆ ನಗರಸಭೆ ಆಡಳಿತ ಆಡಳಿತ ಪಕ್ಷ ಕಾಂಗ್ರೆಸ್ ಪಕ್ಷದ ವಶದಲ್ಲಿದ್ದರೂ ಸಹ ಅಧಿಕಾರಿ ಹಾಗೂ ಸಿಬ್ಬಂದಿ ನಡುವೆ ಸೌಹಾರ್ಧಿತ ಕೊರತೆಯ ಹಿನ್ನೆಲೆಯಲ್ಲಿ ಸಾರ್ವಜನಿಕರ ಸಮಸ್ಯೆಗಳಿಗೆ ಸಕಾಲದಲ್ಲಿ ಸ್ಪಂದಿಸಿ ಸಮಸ್ಯೆ ಪರಿಹಾರಕ್ಕೆ ಯಾವುದೇ ಪ್ರಯತ್ನ ನಡೆದಿಲ್ಲ.

ಕಳೆದ ನಾಲ್ಕು ತಿಂಗಳ ಹಿಂದೆ ಪೌರಾಯುಕ್ತರಾಗಿ ಅಧಿಕಾರ ವಹಿಸಿಕೊಂಡ ಜಿ.ಎಚ್.ಜಗರೆಡ್ಡಿ ಸಹ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗವನ್ನು ಆಡಳಿತ ದೃಷ್ಠಿಯಿಂದ ನಿಯಂತ್ರಿಸುವಲ್ಲಿ ಸಾಧ್ಯವಾಗಿಲ್ಲ.

ಒಂದು ಹಂತದಲ್ಲಿ ಪೌರಾಯುಕ್ತರೇ ಶಾಸಕರೆದುರು ಸಿಬ್ಬಂದಿ ನನ್ನ ಮಾತು ಕೇಳುತ್ತಿಲ್ಲವೆಂದು ಅಸಹಾಯಕತೆ (Challakere Municipality) ತೋಡಿಕೊಂಡರು. ಕಂದಾಯಾಧಿಕಾರಿ ಸತೀಶ್ ಸಹ ಇ-ಸ್ವತ್ತು ದಾಖಲಾತಿ ವಿಲೇಯಲ್ಲಿ ವಿಳಂಬದ ಬಗ್ಗೆ ಪ್ರಶ್ನಿಸಿದಾ ಅವರೂ ಸಹ ತಮ್ಮ ಸಿಬ್ಬಂದಿ ಕಡೆ ಬೊಟ್ಟುಮಾಡಿತೋರಿಸಿದರು. ಬಾಕಿ ಉಳಿದಿರುವ ಎಲ್ಲಾ ಇ-ಸ್ವತ್ತುಗಳ ದಾಖಲಾತಿಯನ್ನು 15 ದಿನಗಳ ಒಳಗೆ ಸಂಬಂಧಪಟ್ಟವರಿಗೆ ನೀಡಬೇಕೆಂದು ಸೂಚಿಸಿದರು.

ವಿಧಾನಸಭಾ ಕ್ಷೇತ್ರ ವ್ಯಾಪ್ತಿ ಪರಿಶಿಷ್ಟ ಪಂಗಡ ವ್ಯಾಪ್ತಿಯಲ್ಲಿದ್ದು, ಪರಿಶಿಷ್ಟ ಜಾತಿ, ಪಂಗಡ ವಿದ್ಯಾರ್ಥಿಗಳಿಗೆ 2021 ರಿಂದ 24 ರವರೆಗೂ ಒಟ್ಟು 140 ಲಕ್ಷ ವಿದ್ಯಾರ್ಥಿವೇತನ ವಿತರಣೆ ಯಾಗಬೇಕಿದ್ದು, ಕೇವಲ 30 ಲಕ್ಷ ವೆಚ್ಚ ಮಾಡಿ ಉಳಿದ ಹಣವನ್ನು ಹಾಗೇ ಇಡಲಾಗಿದೆ.

ಮೂರು ವರ್ಷಗಳಿಂದ ವಿದ್ಯಾರ್ಥಿವೇತನ ನೀಡದ ಬಗ್ಗೆ ಖಾರವಾಗಿ ಪ್ರಶ್ನಿಸಿದ ಶಾಸಕರು ಸಂಬಂಧಪಟ್ಟ ಸಿಬ್ಬಂದಿ ಗುರುಪ್ರಸಾದ್‌ನನ್ನು ತರಾಟೆಗೆ ತೆಗೆದುಕೊಂಡರು. ನಂತರ ಸಮುದಾಯ ಅಧಿಕಾರಿ ಭೂತಣ್ಣನವರಿಗೆ 15 ದಿನಗಳಲ್ಲಿ ವಿದ್ಯಾರ್ಥಿಗಳಿಗೆ ವೇತನ ಹಣ ಪಾವತಿಸುವ ವ್ಯವಸ್ಥೆ ಮಾಡಿ ಎಂದರು.

ನಗರದ ಖಾಸಗಿ ಬಸ್ಟಾಂಡ್ ಪೂರ್ಣಗೊಳಿಸಲು ಸರ್ಕಾರದಿಂದ ಅನುದಾನ ಬಾಕಿ ಇದ್ದು ಪ್ರಸ್ತುತ ಈಗ ಅನುದಾನದಲ್ಲಿ ಮೇಲ್ಭಾಗದಲ್ಲಿ ಹೋಟೆಲ್, ಮೂರನೇ ಹಂತದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ ಮಾಡಿ ವ್ಯವಸ್ಥೆ ಕಲ್ಪಿಸುವಂತೆ ಪೌರಾಯುಕ್ತರಿಗೆ ಸೂಚಿಸಿದರು. ನಗರಸಭೆ ಹಳೇ ಕಟ್ಟಡ ರಿಪೇರಿಗೆ ಇರುವ ಹಣವನ್ನು ವೆಚ್ಚಮಾಡಿ ಕಟ್ಟಡವನ್ನು ಪೂರ್ಣಗೊಳಿಸಬೇಕೆಂದು ಎಇಇ ವಿನಯ್‌ಗೆ ಸೂಚಿಸಿದರು.

ಇಂದಿರಾ ಶಾಪಿಂಕ್ ಕಾಂಪ್ಲೆಕ್ಸ್ ಬಹುತೇಕ ಮಳಿಗೆಗಳು ಶಿಥಿಲಗೊಂಡಿದ್ದು ಯಾವುದೇ ಸಂದರ್ಭದಲ್ಲೂ ಬೀಳುವ ಸಂಭವವಿದೆ. ಇತ್ತೀಚೆಗೆ ಮಳೆ ಹೆಚ್ಚಾಗಿ ಇನ್ನೂ ಕೆಲವು ಕೊಠಡಿಗಳು ಹಾಳಾಗಿದ್ದು, ಈಗ ಹಾಲಿ ಕಟ್ಟಡದಲ್ಲಿರುವ ಬಾಡಿಗೆದಾರರನ್ನು ಬಿಡಿಸಿ ಮಳಿಗಳನ್ನು ತುರ್ತು ರಿಪೇರಿಗೊಳಿಸುವಂತೆ ಸೂಚಿಸಿದರು.

ನಗರಸಭೆ ಆಡಳಿತ ಕೆಲವೊಂದು ಅಭಿವೃದ್ದಿ ಕಾರ್ಯಗಳನ್ನು ಕೈಗೊಳ್ಳುವ ಸಂದರ್ಭದಲ್ಲಿ ಎಲ್ಲಾ ಚುನಾಯಿತ ಸದಸ್ಯರು ಪಕ್ಷಬೇದ ಮರೆತು ಅಧಿಕಾರಿಗಳಿಗೆ ಸಹಕಾರ ನೀಡುವಂತೆ ತಿಳಿಸಿದರು.

ನಗರ ಪ್ರದೇಶದ ದಿನದಿಂದ ದಿನಕ್ಕೆ ಅಭಿವೃದ್ದಿಯಾಗುತ್ತಿದೆ. ಈಗ ಹಾಲಿ ಇರುವ 97 ಪೌರಕಾರ್ಮಿಕರ ಜೊತೆಗೆ ಹೆಚ್ಚುವರಿಯಾಗಿ 22 ಪೌರಕಾರ್ಮಿಕರನ್ನು ತಾತ್ಕಾಲಿಕವಾಗಿ ನೇಮಿಸಿಕೊಳ್ಳುವಂತೆ ನೈರ್ಮಲ್ಯ ಇಂಜಿನಿಯರ್ ನರೇಂದ್ರಬಾಬುಗೆ ಸೂಚಿಸಿದರು.

ಅನೇಕ ಸದಸ್ಯರು ಕಳೆದ ಆರು ತಿಂಗಳಿನಿಂದ ಚರಂಡಿಗಳಿಗೆ ಬ್ಲಿಚಿಂಗ್ ಪೌಂಡರ್ ಸಿಂಪಡಿಸಿವೆಂದು ಆರೋಪಿಸಿದಾಗ ಖರೀದಿಸಿ ಎಲ್ಲಾ ಚರಂಡಿಗಳಿಗೆ ಬ್ಲಿಚಿಂಗ್ ಪೌಂಡರ್ ಸಿಂಪಡೆ ಮಾಡುವಂತೆ ಸೂಚಿಸಿದರು. ನಗರಸಭೆಯಲ್ಲಿ ಗುತ್ತಿಗೆ (Challakere Municipality) ಆಧಾರದಲ್ಲಿ ಕಾರ್ಯನಿರ್ವಹಿಸುವ ಪೌರಕಾರ್ಮಿಕರಿಗೆ ಗುತ್ತಿಗೆದಾರರು ಅನಗತ್ಯವಾಗಿ ಹಣವನ್ನು ನೀಡದೇ ಇರುವ ಬಗ್ಗೆ ಪ್ರಶ್ನಿಸಿದ ಶಾಸಕರು, ಪೌರಕಾರ್ಮಿಕರ ವೇತನದಲ್ಲಿ ಕಡಿತಗೊಂಡ ಹಣ ವಾಪಸ್ ಪೌರಕಾರ್ಮಿಕರಿಗೆ ಕೊಡಿಸುವಂತೆ ನಿರ್ದೇಶನ ನೀಡಿದರು.

ಇದನ್ನೂ ಓದಿ: ವಾಣಿ ವಿಲಾಸ ಸಾಗರದ ಇಂದಿನ ನೀರಿನ ಮಟ್ಟ |Vani Vilasa Sagara Dam

ನಗರ ಪ್ರದೇಶದಲ್ಲಿ ಸ್ಮಶಾನ ಒತ್ತುವರಿ ಮಾಡಿಕೊಂಡ ಬಗ್ಗೆ ಆರೋಪಿಸಿದಾಗ, ಕೂಡಲೇ ಸರ್ವೆ ಅಧಿಕಾರಿ ಬಾಬುರೆಡ್ಡಿಗೆ ಸೂಚಿಸಿದ ಶಾಸಕರು ಸರ್ವೆ ಮಾಡಿ ಒತ್ತುವರಿಯನ್ನು ಗುರುತಿಸುವಂತೆ ನಿರ್ದೇಶನ ನೀಡಿದರು. ನಗರ ಪ್ರದೇಶದ (Challakere Municipality) ಸ್ಮಶಾನಗಳಲ್ಲಿ ಜಾಲಿ, ಗಿಡಗಂಟೆಗಳು ಬೆಳೆದಿದ್ದು ಅವುಗಳನ್ನು ತೆಗೆಸಬೇಕೆಂದರು. ನಗರದ ಕೆಲವು ಪ್ರದೇಶಗಳಲ್ಲಿ ಬೀದಿನಾಯಿ ಮತ್ತು ಬೀಡಾಡಿದನಗಳ ಕಾಟ ಹೆಚ್ಚಾಗಿದ್ದು ನಿಯಂತ್ರಿಸುವAತೆ ಸೂಚಿಸಿದರು.

ಇದನ್ನೂ ಓದಿ: ಚಿತ್ರದುರ್ಗ | ನಗರಸಭೆ ಆಸ್ತಿ ಒತ್ತುವರಿಗೆ ಪೌರಯುಕ್ತರು ಬೆಂಬಲ: ನಗರಸಭೆ ಸದಸ್ಯ ದೀಪು ಆರೋಪ | Chitradurga Municipality

ಅಧ್ಯಕ್ಷೆ ಜೈತುಂಬಿ, ಉಪಾಧ್ಯಕ್ಷೆ ಸುಜಾತ, ಸದಸ್ಯರಾದ ಟಿ.ಮಲ್ಲಿಕಾರ್ಜುನ್, ಕವಿತಾಬೋರಯ್ಯ, ಟಿ.ಶಿವಕುಮಾರ್, ಪ್ರಮೋದ್, ಸುಮಾ, ಜಿ.ಗೋವಿಂದ, ಎಂ.ನಾಗಮಣಿ, ಸುಮಕ್ಕ, ನಿರ್ಮಲ, ಎಂ.ಜೆ.ರಾಘವೇಂದ್ರ, ತಿಪ್ಪಮ್ಮ, ಮಂಜುಳಾ, ಸಿ.ಬಿ.ಜಯಲಕ್ಷ್ಮಿ, ವಿರೂಪಾಕ್ಷಿ, ಚಳ್ಳಕೆರೆಯಪ್ಪ, ಸಿ.ಶ್ರೀನಿವಾಸ್, ಬಿ.ಟಿ.ರಮೇಶ್‌ಗೌಡ, ಕೆ.ವೀರಭದ್ರಯ್ಯ, ಶಿಲ್ಪ, ವ್ಯವಸ್ಥಾಪಕ ಲಿಂಗರಾಜು, ಲೆಕ್ಕಾಧಿಕಾರಿ ಹರೀಶ್, ಆರೋಗ್ಯ ನಿರೀಕ್ಷಕರಾದ ಗಣೇಶ್, ಗೀತಾಕುಮಾರಿ, ಸುನೀಲ್, ರುದ್ರಮುನಿ ಮುಂತಾದವರು ಉಪಸ್ಥಿತರಿದ್ದರು.

You Might Also Like

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ

Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ

Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ಚಿತ್ರದುರ್ಗ | ನಗರಸಭೆ ಆಸ್ತಿ ಒತ್ತುವರಿಗೆ ಪೌರಯುಕ್ತರು ಬೆಂಬಲ: ನಗರಸಭೆ ಸದಸ್ಯ ದೀಪು ಆರೋಪ | Chitradurga Municipality
Next Article ತಾರತಮ್ಯ ಮಾಡಿಲ್ಲ, ಎಲ್ಲಾ ವಾರ್ಡ್ ಗೆ 30.95 ಅನುದಾನ ನೀಡಿದ್ದೇನೆ: ಕೆ.ಸಿ.ವೀರೇಂದ್ರ ಪಪ್ಪಿ |Nagarasabhe
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ
ದಿನ ಭವಿಷ್ಯ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?
ದಿನ ಭವಿಷ್ಯ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?