Chitradurga News | Nammajana.com | 20-08-2025
ನಮ್ಮಜನ ನ್ಯೂಸ್ ಕಾಂ,ಚಳ್ಳಕೆರೆ: ಬೆಂಗಳೂರು(power cut) ವಿದ್ಯುತ್ ಸರಬರಾಜು ಕಂಪನಿ ಚಳ್ಳಕೆರೆ ಉಪವಿಭಾಗ ವ್ಯಾಪ್ತಿಯ 11 ಕೆ.ವಿ. ಸ್ಟೇಷನ್ನಲ್ಲಿ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಪರಶುರಾಮಪುರ ವ್ಯಾಪ್ತಿಯಲ್ಲಿ ಆ.20ರ ಬುಧವಾರ ಬೆಳಗ್ಗೆ 10ರಿಂದ ಸಂಜೆ 5ರ ತನಕ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು ಎಂದು ಎಇಇಜೆ ಶಿವಪ್ರಸಾದ್ ತಿಳಿಸಿದ್ದಾರೆ.

ಇದನ್ನೂ ಓದಿ: ಒಳಮೀಸಲಾತಿಗೆ ಸಚಿವ ಸಂಪುಟ ಒಪ್ಪಿಗೆ | ಎಡಗೈಗೆ 6 ಬಲಗೈಗೆ 6 ಉಳಿದವರಿಗೆ 5 | ಇಲ್ಲಿದೆ ಸಂಪೂರ್ಣ ಡಿಟೈಲ್
ಜಾಜೂರು, ಪಗಡಲಬಂಡೆ, ಸಿದ್ದೇಶ್ವರನದುರ್ಗ, ಪರಶುರಾಮಪುರ, ದೊಡ್ಡಚೆಲ್ಲೂರು, ಟಿ.ಎನ್.ಕೋಟೆ, ಚೌಳೂರು, ದೊಡ್ಡಬೀರನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳು ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದ್ದು ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದ್ದಾರೆ.
