Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Chitradurga | ನಿಜಲಿಂಗಪ್ಪನವರ ನಿವಾಸ “ವಿನಯ” ಜಿಲ್ಲಾಡಳಿತಕ್ಕೆ ಹಸ್ತಾಂತರ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > Blog > Chitradurga | ನಿಜಲಿಂಗಪ್ಪನವರ ನಿವಾಸ “ವಿನಯ” ಜಿಲ್ಲಾಡಳಿತಕ್ಕೆ ಹಸ್ತಾಂತರ
Blog

Chitradurga | ನಿಜಲಿಂಗಪ್ಪನವರ ನಿವಾಸ “ವಿನಯ” ಜಿಲ್ಲಾಡಳಿತಕ್ಕೆ ಹಸ್ತಾಂತರ

Editor Nammajana
Last updated: 16 December 2024 17:20
By Editor Nammajana 2 Min Read
Share
SHARE

Chitradurga news |nammajana.com| 16-12-2024 

ನಮ್ಮಜನ.ಕಾಂ, ಚಿತ್ರದುರ್ಗ: ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ನಾಡೋಜ ದಿ.ಎಸ್.ನಿಜಲಿಂಗಪ್ಪ ಅವರ (Chitradurga) ನಿವಾಸದ ಕೀಯನ್ನು ಸೋಮವಾರ ನಿಜಲಿಂಗಪ್ಪ ಸ್ಮಾರಕ ಟ್ರಸ್ಟಿ ಕೆಇಬಿ ಷಣ್ಮುಖಪ್ಪ ಅವರು ಜಿಲ್ಲಾಡಳಿತಕ್ಕೆ ಹಸ್ತಾಂತರಿಸಿದರು.

ಚಿತ್ರದುರ್ಗ ನಗರದ ವಿ.ಪಿ.ಬಡಾವಣೆಯಲ್ಲಿರುವ ದಿ.ಎಸ್.ನಿಜಲಿಂಗಪನವರು ವಾಸವಿದ್ದ ಮನೆಯನ್ನು ಸರ್ಕಾರ ವತಿಯಿಂದ ಖರೀದಿ ಮಾಡಲಾಗಿದ್ದು, ಈ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಾಗೂ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅವರು ನಿಜಲಿಂಗಪ್ಪ ಅವರ ನಿವಾಸದ ಕಟ್ಟಡದ ಸುಸ್ಥಿತಿಯನ್ನು ಪರಿಶೀಲನೆ ನಡೆಸಿದರು.

ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಮಾಜಿ ಮುಖ್ಯಮಂತ್ರಿಗಳಾದ ದಿ. ಎಸ್.ನಿಜಲಿಂಗಪ್ಪ ಅವರ ವಾಸವಿದ್ದ ಮನೆಯನ್ನು ಸರ್ಕಾರದಿಂದ ಖರೀದಿ ಮಾಡಿ ಸಂರಕ್ಷಣೆ ಮಾಡಿ, ಸ್ಮಾರಕ ಮಾಡಬೇಕು ಎಂಬ ಬೇಡಿಕೆ ಹಿನ್ನಲೆಯಲ್ಲಿ ಸರ್ಕಾರದ (Chitradurga) ನಿರ್ದೇಶನದಂತೆ ಕಳೆದ ವಾರ ಸರ್ಕಾರ ವತಿಯಿಂದ ಖರೀದಿ ಮಾಡಲಾಗಿದ್ದು, ಪುನರುಜ್ಜೀವನ ಮಾಡುವ ಉದ್ದೇಶದಿಂದ ಎಸ್.ನಿಜಲಿಂಗಪ್ಪ ಅವರ ಮನೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಲಾಗುತ್ತಿದೆ ಎಂದು ಹೇಳಿದರು.

ನಿಜಲಿಂಗಪ್ಪ ಅವರ ಮನೆಯನ್ನು ಸ್ಮಾರಕವನ್ನಾಗಿ ಮಾಡುವ ನಿಟ್ಟಿನಲ್ಲಿ ಇಂಜಿನಿಯರ್‍ಗಳೊಂದಿಗೆ ಚರ್ಚಿಸಿ, ಮೊಟ್ಟ ಮೊದಲನೇಯದಾಗಿ ಸಿವಿಲ್ ಕಾಮಗಾರಿಗಳನ್ನು ದುರಸ್ಥಿ ಪಡಿಸಿ, ನಂತರ ಸರ್ಕಾರದೊಂದಿಗೆ ಚರ್ಚಿಸಿ, ಮುಂದಿನ ಕಾರ್ಯಗಳನ್ನು ಕೈಗೊಳ್ಳಲಾಗುವುದು. ಸ್ಮಾರಕ ಮಾಡುವ ನಿಟ್ಟಿನಲ್ಲಿ ತುರ್ತಾಗಿ ಎಸ್ಟಿಮೆಟ್ ಮಾಡಲು ಇಂಜಿನಿಯರ್‍ಗಳಿಗೆ ಸೂಚಿಸಲಾಗಿದ್ದು, ತಕ್ಷಣದಿಂದಲೇ ಪರಿಶೀಲನೆ ನಡೆಸಿ, ದುರಸ್ಥಿ ಕಾರ್ಯ ಕೈಗೊಳ್ಳುವರು ಎಂದು ಹೇಳಿದರು.

ಲೋಕೋಪಯೋಗಿ ಇಲಾಖೆ ಇಂಜಿನಿಯರ್‍ಗಳು ಅಂದಾಜಿಸಿದಂತೆ ರೂ.4,18,49,016 ಗಳಿಗೆ ಮಾಜಿ ಮುಖ್ಯಮಂತ್ರಿಗಳಾದ ದಿ.ಎಸ್.ನಿಜಲಿಂಗಪ್ಪನವರ ವಾರಸುದಾರರಿಂದ ಮನೆ ಖರೀದಿ ಮಾಡಲಾಗಿದ್ದು,  ಇನ್ನೂ ರೂ.80 ಲಕ್ಷ ಅನುದಾನ ಉಳಿಕೆಯಾಗಿದ್ದು, ಈ ಅನುದಾನದಲ್ಲಿ ಸಿವಿಲ್ ಕಾಮಗಾರಿಗಳನ್ನು ನಿರ್ವಹಣೆ ಮಾಡಲಾಗುವುದು.

ಇನ್ನೂ ಹೆಚ್ಚಿನ ಅನುದಾನದ ಅವಶ್ಯಕತೆ ಇದ್ದರೆ ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದು ತಿಳಿಸಿದ ಅವರು, ನಿಜಲಿಂಗಪ್ಪ ಅವರ ನಿವಾಸದಲ್ಲಿ ನಿಜಲಿಂಗಪ್ಪ ಅವರಿಗೆ ಸಂಬಂಧಪಟ್ಟ ಫೋಟೋಗ್ರಾಫಿ, ಉಡುಗೊರೆಗಳು ಹಾಗೂ ಅವರು ಉಪಯೋಗಿಸುತ್ತಿದ್ದ ವಸ್ತುಗಳು ಇದ್ದು, ಅವುಗಳನ್ನು ಯಥಾವತ್ತಾಗಿ ಪ್ರಾಚ್ಯ ವಸ್ತು ಸಂಗ್ರಾಲಯದ (Chitradurga) ಸಹಯೋಗದೊಂದಿಗೆ ಸಂರಕ್ಷಣೆ ಮಾಡಿ, ಸ್ಮಾರಕ ಹಾಗೂ ವಸ್ತು ಸಂಗ್ರಹಾಲಯವನ್ನಾಗಿ ಪರಿವರ್ತಿಸಿ, ಸಾರ್ವಜನಿಕರ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಹೇಳಿದರು.

ಇದನ್ನೂ ಓದಿ: Adike rate drop: ಅಡಿಕೆ ರೇಟ್ ಇಳಿಕೆ | 16 ಡಿಸೆಂಬರ್ 2024 | ಎಷ್ಟಿದೆ ಇಂದಿನ ಅಡಿಕೆ ಧಾರಣೆ

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ನಿಜಲಿಂಗಪ್ಪ ಸ್ಮಾರಕ ಟ್ರಸ್ಟಿ ಕೆಇಬಿ ಷಣ್ಮುಖಪ್ಪ ಇದ್ದರು.

You Might Also Like

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

TAGGED:ChitradurgaChitradurga District CollectorChitradurga NewsGovernment of KarnatakaHouse PurchaseKannada Newskannada suddiNammajana.comNijalingappaVinaya House Handoverಕನ್ನಡ ನ್ಯೂಸ್ಕನ್ನಡ ಸುದ್ದಿಕರ್ನಾಟಕ ಸರ್ಕಾರಚಿತ್ರದುರ್ಗಚಿತ್ರದುರ್ಗ ಜಿಲ್ಲಾಧಿಕಾರಿಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂನಿಜಲಿಂಗಪ್ಪಮನೆ ಖರೀದಿವಿನಯ ಮನೆ ಹಸ್ತಾಂತರ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Adike rate drop: ಅಡಿಕೆ ರೇಟ್ ಇಳಿಕೆ | 16 ಡಿಸೆಂಬರ್ 2024 | ಎಷ್ಟಿದೆ ಇಂದಿನ ಅಡಿಕೆ ಧಾರಣೆ
Next Article Power Cut | ವಿದ್ಯುತ್ ವ್ಯತ್ಯಯ | ಈ ಏರಿಯಾಗಳಲ್ಲಿ ಬೆಳಗ್ಗೆ 10 ರಿಂದ ಸಂಜೆವರೆಗೆ ಕರೆಂಟ್ ಇರಲ್ಲ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?