Chitradurga news|Nammajana.com|11-06-2025
ನಮ್ಮಜನ.ಕಾಂ, ಚಿತ್ರದುರ್ಗ: ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯ ಬಿಜೆಪಿ ಪಕ್ಷದ ಜಿಲ್ಲಾಧ್ಯಕ್ಷ ಸ್ಥಾನ ಯಾರು (Chitradurga BJP) ಅಧ್ಯಕ್ಷರಾಗುತ್ತಾರೆ ಎಂಬುದು ಎಲ್ಲಾರಿಗೂ ಕೂತುಹಲ ಮೂಡಿಸಿತ್ತು ಆದರೆ ಅಚ್ಚರಿ ಬೆಳವಣಿಗೆಯಲ್ಲಿ ಪ್ರಥಮ ಬಾರಿಗೆ ನಾಯಕ ಸಮಾಜದ ಮಾಜಿ ಸಚಿವ ತಿಪ್ಪೇಸ್ವಾಮಿ ಪುತ್ರ ಕೆ.ಟಿ.ಕುಮಾರಸ್ವಾಮಿ ಅವರಿಗೆ ಜಿಲ್ಲಾ ಬಿಜೆಪಿ ಸಾರಥಿಯಾಗಿ ನೇಮಕ ಮಾಡಿ ಪಕ್ಷ ಆದೇಶ ಹೊರಡಿಸುವ ಮೂಲಕ ಬಿಜೆಪಿ ಎಸ್ಟಿ ಸಮಾಜದ ಮನ ಗೆಲ್ಲಲು ಮುಂದಾಗಿದೆ.

ಇದನ್ನೂ ಓದಿ: Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ
ದೇಶದಾದ್ಯಂತ ಪಕ್ಷದ ಸಂಘಟನಾ ಪರ್ವ 2024-25 ನಡೆಯುತ್ತಿದ್ದು, ಇದರ ಅಂಗವಾಗಿ ರಾಜ್ಯದಲ್ಲಿ ಎರಡನೇ ಹಂತದಲ್ಲಿ ಉಳಿದಿರುವ 10 ಸಂಘಟನಾತ್ಮಕ ಜಿಲ್ಲಾ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯನ್ನು ಮುಗಿಸಲಾಗಿದ್ದು ಇದರಲ್ಲಿ ಚಿತ್ರದುರ್ಗ ನಾಯಕ ಸಮಾಜದಲ್ಲಿ ಗುರುತಿಸಿಕೊಂಡು ನಾಯಕ ಸಮಾಜದ ವೋಟ್ ಬ್ಯಾಂಕ್ ಭದ್ರಪಡಿಸಿಕೊಳ್ಳುವ ದೃಷ್ಟಿಯಿಂದ (Chitradurga BJP) ಕೆ.ಟಿ.ಕುಮಾರಸ್ವಾಮಿ ಆಯ್ಕೆ ಮಾಡಿ ಹಿಂದುಳಿದ ವರ್ಗಕ್ಕೆ ಮತ್ತೊಮ್ಮೆ ಬಿಜೆಪಿ ಅವಕಾಶ ಕಲ್ಪಿಸಿಕೊಟ್ಟಿದೆ.
ಈ ಕೆಳಕಂಡ ಜಿಲ್ಲಾ ಅಧ್ಯಕ್ಷರ ನೇಮಕ
