Chitradurga news|nammajana.com|28-02-2025
ನಮ್ಮಜನ.ಕಾಂ, ಚಿತ್ರದುರ್ಗ: ಹೊಳಲ್ಕೆರೆಯಲ್ಲಿ ಜರುಗಲಿರುವ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ (chitradurga) ಪ್ರೊ.ಜಿ.ಪರಮೇಶ್ವರಪ್ಪ ಅವರನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಆಯ್ಕೆ ಮಾಡಿದೆ.
ಜಿಲ್ಲೆಯಲ್ಲಿ ಹಳೆಗನ್ನಡ ಸಾಹಿತಿಯಾಗಿರುವ ಪ್ರೊ .ಪರಮೇಶ್ವರಪ್ಪನವರು ಹಲವಾರು ಕೃತಿಗಳನ್ನು ರಚಿಸಿದ್ದು, ಬುಡಕಟ್ಟು ಸಮುದಾಯಗಳ ಬಗ್ಗೆ ವಿಶೇಷ ಒಲವು ಹೊಂದಿದ್ದಾರೆ.

ಇದನ್ನೂ ಓದಿ: Dina Bhavishya | ದಿನ ಭವಿಷ್ಯ, ಉದ್ಯೋಗದಲ್ಲಿ ಒತ್ತಡ, ಆರೋಗ್ಯದಲ್ಲಿ ಏರುಪೇರು
ಮಾ.9 ಭಾನುವಾರ ಮತ್ತು 10 ರ ಸೋಮವಾರ ಹೊಳಲ್ಕೆರೆಯಲ್ಲಿ 17 ನೇ ಕನ್ನಡ ಸಾಹಿತ್ಯ ಸಮ್ಮೇಳನ ಳನ ಜರುಗಲಿದೆ. ಈಗಾಗಲೇ ಸಮ್ಮೇಳನದ ಲಾಂಛನವನ್ನು ಉಸ್ತುವಾರಿ ಸಚಿವ ಡಿ.ಸುಧಾಕರ್, ಪ್ರಚಾರ ಪೋಸ್ಟರ್ಗಳನ್ನು ಸ್ವಾಗತ ಸಮಿತಿ ಅಧ್ಯಕ್ಷಶಾಸಕರ ಎಂ.ಚಂದ್ರಪ್ಪ ಬಿಡುಗಡೆಗೊಳಿಸಿದ್ದಾರೆ. ಹಿರಿಯೂರು ತಾಲೂಕು (chitradurga) ಹರ್ತಿಕೋಟೆಯ ಪರಮೇಶ್ವರಪ್ಪ, ಮೈಸೂರು ವಿವಿಯಲ್ಲಿ ಕನ್ನಡ ವಿಷಯದಲ್ಲಿ ಎಂಎ ಪದವಿ ಪಡೆದಿದ್ದಾರೆ. ಬೀದರ್, ಮಾಯಕೊಂಡ, ಬೆಳಗಾವಿ ಜಿಲ್ಲೆಯ ಅಥಣಿ, ಚಳ್ಳಕೆರೆ ಮತ್ತು ಚಿತ್ರದುರ್ಗದ ಕಲಾ ಕಾಲೇಜಿನಲ್ಲಿ ಪ್ರಾಚಾರ್ಯರಾಗಿ ನಿವೃತ್ತರಾಗಿದ್ದಾರೆ. ಕಲಾಸಿರಿ, ಸಾಹಿತ್ಯ ಸಂಶೋಧನೆ, ಮನಸ್ವಿ, ಬುಡಕಟ್ಟು ಕಥನಗಳು, ವದ್ದೀಕೆರೆ ಸಿದ್ದೇಶ್ವರ ಚರಿತೆ, ವೀರಕರಿಯಣ್ಣ ಪ್ರಮುಖ ಕೃತಿಗಳಾಗಿವೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252