Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಚಿತ್ರದುರ್ಗದ ಕೋಟೆ ಮತ್ತು ಚಂದ್ರವಳ್ಳಿ ಅಭಿವೃದ್ದಿಗೆ 28.40 ಕೋಟಿ ಪ್ರಸ್ತಾವನೆ | Chitradurga Fort
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಚಿತ್ರದುರ್ಗದ ಕೋಟೆ ಮತ್ತು ಚಂದ್ರವಳ್ಳಿ ಅಭಿವೃದ್ದಿಗೆ 28.40 ಕೋಟಿ ಪ್ರಸ್ತಾವನೆ | Chitradurga Fort
ಇಂದಿನ ಸುದ್ದಿ

ಚಿತ್ರದುರ್ಗದ ಕೋಟೆ ಮತ್ತು ಚಂದ್ರವಳ್ಳಿ ಅಭಿವೃದ್ದಿಗೆ 28.40 ಕೋಟಿ ಪ್ರಸ್ತಾವನೆ | Chitradurga Fort

Editor Nammajana
Last updated: 4 July 2024 15:50
By Editor Nammajana 3 Min Read
Share
SHARE

Chitradurga news|nammajana.com|4-7-2024

ನಮ್ಮಜನ.ಕಾಂ, ಚಿತ್ರದುರ್ಗ: ಕೆ.ಎಂ.ಇ.ಆರ್.ಸಿ (ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮ)ಯ ಸಿ.ಇ.ಪಿ.ಎಂ.ಐ.ಝಡ್ (ಗಣಿಬಾಧಿತ ವಲಯದ ಸಮಗ್ರ ಪರಿಸರ ಅಭಿವೃದ್ಧಿ ಯೋಜನೆ) ಯೋಜನೆಯಡಿ ನಗರದ ಐತಿಹಾಸಿಕ ಕೋಟೆ (Chitradurga Fort) ಹಾಗೂ ಚಂದ್ರವಳ್ಳಿ ಪ್ರದೇಶದಲ್ಲಿ ಒಟ್ಟು ರೂ.28.40 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಪ್ರಸ್ತಾವನೆ ಸಿದ್ದಪಡಿಸಲಾಗಿದೆ.

ಮುಖ್ಯವಾಗಿ ರೂ.11.50 ಕೋಟಿ ವೆಚ್ಚದಲ್ಲಿ ಐತಿಹಾಸಿಕ ಕೋಟೆಯ (Chitradurga Fort) ನಾಲ್ಕು ಪ್ರಮುಖ ಸ್ಥಳಗಳಲ್ಲಿ ಧ್ವನಿ ಬೆಳಕು ವ್ಯವಸ್ಥೆಯನ್ನು ಅಳವಡಿಸಲಾಗುವುದು. ಈ ಯೋಜನೆ ಅನುಷ್ಠಾನಕ್ಕೆ ಭಾರತೀಯ ಪುರಾತತ್ವ ಇಲಾಖೆ ಅನುಮತಿಯನ್ನು ಶೀಘ್ರ ಪಡೆದುಕೊಳ್ಳುವಂತೆ ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಜರುಗಿದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಚಿತ್ರದುರ್ಗ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣವಾಗಿರುವ ಕೋಟೆಗೆ ಪ್ರತಿ ತಿಂಗಳು 35 ಸಾವಿರ ಪ್ರವಾಸಿಗರು ಭೇಟಿ (Chitradurga Fort) ನೀಡುತ್ತಾರೆ. ಇನ್ನೂ ಹೆಚ್ಚಿನ ರೀತಿಯಲ್ಲಿ ಕೋಟೆಯನ್ನು ಅಭಿವೃದ್ಧಿ ಪಡಿಸಲು ಯೋಜನೆ ರೂಪಿಸಲಾಗಿದೆ. ಇದರ ಅಡಿ, ರೂ.75 ಲಕ್ಷದಲ್ಲಿ ಮಕ್ಕಳ ಉದ್ಯಾನವನ, ರೂ.1 ಕೋಟಿ ವೆಚ್ಚದಲ್ಲಿ ಅಕ್ಕ ತಂಗಿಯರ ಹೊಂಡದ ಬಳಿ ನೀರಿನ ಕಾರಂಜಿಗಳನ್ನು ನಿರ್ಮಿಸಲಾಗುವುದು. ಇದರ ಜೊತೆಗೆ ಕೋಟೆಯ ಒನಕೆ ಓಬವ್ವ ಕಿಂಡಿಯ ಬಳಿಯ ಹನುಮಾನ ದ್ವಾರದಿಂದ ಚಂದ್ರವಳ್ಳಿ ತೋಟಕ್ಕೆ ತೆರಳಲು 3 ಮೀಟರ್ ಅಗಲದ ಹಾಗೂ 1.5 ಕಿ.ಮೀ ಉದ್ದದ ನೂತನ ಕಾಲುದಾರಿ ಮಾಡಲಾಗುವುದು.

ಚಂದ್ರವಳ್ಳಿ ಕೆರೆಯ ಸುತ್ತ ರೂ.3.75 ಕೋಟಿ ವೆಚ್ಚದಲ್ಲಿ (Chitradurga Fort) ವಾಕಿಂಗ್ ಟ್ರಾಕ್, ಬೀದಿ ದೀಪಗಳನ್ನು ಅಳವಡಿಸಲಾಗುವುದು. ರೂ.15 ಲಕ್ಷದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ, ರೂ.75 ಲಕ್ಷದಲ್ಲಿ ವಾಹನ ನಿಲುಗಡೆ, ರೂ.1 ಕೋಟಿ ವೆಚ್ಚದಲ್ಲಿ ಚಂದ್ರವಳ್ಳಿ ಗುಹೆಗೆ ವಿದ್ಯುತ್ ದೀಪಗಳ ಅಳವಡಿಕೆ, ರೂ.6 ಕೋಟಿ ವೆಚ್ಚದಲ್ಲಿ ಮಕ್ಕಳ ಆಟಿಕೆ ಟ್ರೈನ್, ರೂ.1.25 ಕೋಟೆ ವೆಚ್ಚದಲ್ಲಿ ಚಂದ್ರವಳ್ಳಿ ಸಂಪರ್ಕಿಸುವ ರಸ್ತೆ ಬೀದಿ ದೀಪ ಅಳವಡಿಸಲಾಗುವುದು. ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳು ಶೀಘ್ರವೇ ಪುರಾತತ್ವ ಇಲಾಖೆಯಿಂದ ಕಾಮಗಾರಿಗಳನ್ನು ಕೈಗೊಳ್ಳಲು ಅನುಮತಿ ಪಡೆದುಕೊಳ್ಳುವಂತೆ ಹೇಳಿದರು.

ಇದನ್ನೂ ಓದಿ: ಡಾ.ಡಿ.ಎಂ.ಅಭಿನವ್‍ಗೆ ರಾಜ್ಯಮಟ್ಟದ ಶ್ರೇಷ್ಠ ಆರ್‍ಸಿಹೆಚ್ ಅಧಿಕಾರಿ ಪ್ರಶಸ್ತಿ | State level excellence RCH award

ಕೆ.ಎಂ.ಇ.ಆರ್.ಸಿ ಅನುದಾನದ ಅಡಿಯಲ್ಲಿಯೇ ಹೊಸದುರ್ಗ ತಾಲ್ಲೂಕಿನ ಹಾಲು ರಾಮೇಶ್ವರದಲ್ಲಿ ಧರ್ಮಛತ್ರ, ಪಾರ್ಕಿಂಗ್, ಸಾರ್ವಜನಿಕ ಶೌಚಾಲಯ, ಹೈಮಾಸ್ಟ್ ದೀಪಗಳನ್ನು (Chitradurga Fort) ಅಳವಡಿಸಲಾಗುವುದು. ಹೊಳಲ್ಕೆರೆ ತಾಲ್ಲೂಕಿನ ದೊಡ್ಡಹೊಟ್ಟೆ ರಂಗನಾಥ ಸ್ವಾಮಿ ಬೆಟ್ಟಕ್ಕೆ ಮೆಟ್ಟಿಲುಗಳ ನಿರ್ಮಾಣ, ಬೆಟ್ಟದಲ್ಲಿ ಕಲ್ಯಾಣಿಯ ಪುನರುಜ್ಜೀವನ, ಧರ್ಮಛತ್ರ, ಪಾರ್ಕಿಂಗ್, ಸಾರ್ವಜನಿಕ ಶೌಚಾಲಯ, ಹೈಮಾಸ್ಟ್ ದೀಪಗಳನ್ನು ಅಳವಡಿಸಲಾಗುವುದು.

ವಿ.ವಿ.ಸಾಗರ ಜಲಾಶಯದ ಹಿನ್ನೀರಿನಲ್ಲಿ ಸಾಹಸಮಯ ಜಲಕ್ರೀಡೆ ಆರಂಭಿಸಲು ಸಹ ಯೋಜನೆ ರೂಪಿಸಲಾಗಿದೆ. ಒಂದು ಜಿಲ್ಲೆ ಒಂದು ತಾಣ ಯೋಜನೆಯಡಿ ವಾಣಿ ವಿಲಾಸ ಸಾಗರವನ್ನು ಸಂಪೂರ್ಣವಾಗಿ ಅಭಿವೃದ್ಧಿ ಪಡಿಸಲು ಯೋಜನೆ ರೂಪಿಸಿ, ಇದರೊಂದಿಗೆ ಚಂದ್ರವಳ್ಳಿ ಕೆರೆಯಲ್ಲಿ ಜಲಕ್ರೀಡೆ ಹಾಗೂ ದೋಣಿ ವಿಹಾರಕ್ಕೂ ಯೋಜನೆ ಪ್ರಸ್ತಾವನೆ (Chitradurga Fort) ಸಲ್ಲಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರಿಗಳಿಗೆ ಸೂಚಿಸಿದರು.

ಕರ್ನಾಟಕ ಪ್ರವಾಸೋದ್ಯಮ ವ್ಯಾಪಾರ (ಸೌಲಭ್ಯ ಮತ್ತು ನಿಯಂತ್ರಣ) ಕಾಯ್ದೆ 2015 ಅಡಿ ಜಿಲ್ಲೆಯ ಪ್ರಮುಖ ಹೋಟೆಲ್‍ಗಳ ನೊಂದಣಿ ಕಡ್ಡಾಯವಾಗಿ ಮಾಡಬೇಕು. ಇದರಿಂದ ಜಿಲ್ಲೆಗೆ ಭೇಟಿ ನೀಡಿದ ಹೊರ ದೇಶ ಹಾಗೂ ಹೊರ ರಾಜ್ಯದ ಪ್ರವಾಸಿಗರ ಮಾಹಿತಿ ಲಭ್ಯವಾಗುತ್ತಿದೆ. ಜಿಲ್ಲೆಯ ಎಲ್ಲಾ ಪ್ರವಾಸಿ ತಾಣಗಳಲ್ಲಿಯೂ ಮೂಲಭೂತ ಸೌಕರ್ಯ ಕಲ್ಪಿಸುವಂತೆ ನಿರ್ದೇಶನ ನೀಡಿದರು.

ಪ್ರವಾಸೋದ್ಯಮ ಇಲಾಖೆಯಿಂದ ಕೈಗೊಳ್ಳುತ್ತಿರುವ ಕಾಮಗಾರಿಗಳನ್ನು ಶೀಘ್ರವೇ (Chitradurga Fort) ಪೂರ್ಣಗೊಳಿಸಬೇಕು. ಯಾತ್ರಿ ನಿವಾಸಗಳು ಸಾರ್ವಜನಿಕರ ಬಳಕೆ ಒದಗುವಂತಾಗಬೇಕು. ಪ್ರಮುಖ ಧಾರ್ಮಿಕ ಕ್ಷೇತ್ರಗಳಲ್ಲಿ ನಿರ್ಮಿಸಿರುವ ಯಾತ್ರಿ ನಿವಾಸಗಳನ್ನು ಗ್ರಾಮ ಪಂಚಾಯಿತಿಗಳಿಗೆ ಹಸ್ತಾಂತರಿಸಿ, ನಿರ್ವಹಣೆ ಜವಬ್ದಾರಿ ವಹಿಸುವಂತೆ ಹೇಳಿದರು.

ಜಿಲ್ಲೆಯ ಪ್ರವಾಸಿ ತಾಣಗಳ ಕುರಿತು ಕಿರುಹೊತ್ತಿಗೆ (Chitradurga Fort) ಮುದ್ರಿಸಬೇಕು. ಇದರಲ್ಲಿ ಕೇಂದ್ರ, ರಾಜ್ಯ ಹಾಗೂ ಪ್ರವಾಸೊದ್ಯಮ ಇಲಾಖೆಯಿಂದ ನಿರ್ವಹಿಸುತ್ತಿರುವ ಪ್ರವಾಸಿ ತಾಣಗಳ ಸಂಪೂರ್ಣ ಮಾಹಿತಿ ಇರಬೇಕು ಎಂದರು.

ಇದನ್ನೂ ಓದಿ: ಅಕ್ರಮ ಮೈನಿಂಗ್ ಮೇಲೆ ದಾಳಿ | ನಾಲ್ಕು ಲಾರಿ, ಒಂದು JCB ವಶ | Attack illegal mining

ಸಭೆಯಲ್ಲಿ ಜಿ.ಪಂ ಸಿಇಓ ಎಸ್.ಜೆ.ಸೋಮಶೇಖರ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜೆ.ಕುಮಾರಸ್ವಾಮಿ, ತಹಶೀಲ್ದಾರರುಗಳಾದ ಡಾ.ನಾಗವೇಣಿ, ಪಾತೀಮ ಬಿಬಿ, ತಿರುಪತಿ ಪಾಟೀಲ್, ಲೋಕೋಪಯೋಗಿ ಕಾರ್ಯಪಾಲಕ ಅಭಿಯಂತರ ಮಲ್ಲಿಕಾರ್ಜುನ್, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಶಶಿಕುಮಾರ್ ಉಪಸ್ಥಿತರಿದ್ದರು.

You Might Also Like

Gold Rate | ಇಂದಿ‌ನ ಬಂಗಾರದ ಬೆಲೆ ಎಷ್ಟಿದೆ?

Dina Bhavishya | ದಿನ ಭವಿಷ್ಯ | 06-06-2025

Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ

Dina Bhavishya | ದಿನ ಭವಿಷ್ಯ, ಇವತ್ತು ಯವ್ಯಾವ ರಾಶಿಗೆ ಶುಭ ಯೋಗ?

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

TAGGED:.MERC.ಎಂ.ಇ.ಆರ್.ಸಿ28.40 Crore28.40 ಕೋಟಿChandravalliChitradurga FortChitradurga NewsDevelopmentEPMIZHalurameshwarKannada Newskannada suddiKarnataka Mines Environment Rehabilitation CorporationMine Affected Zone Integrated Environment Development ProjectNammajana.comProposalV.V. Sagarಅಭಿವೃದ್ದಿಇ.ಪಿ.ಎಂ.ಐ.ಝಡ್ಕನ್ನಡ ನ್ಯೂಸ್ಕನ್ನಡ ಸುದ್ದಿಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮಗಣಿಬಾಧಿತ ವಲಯದ ಸಮಗ್ರ ಪರಿಸರ ಅಭಿವೃದ್ಧಿ ಯೋಜನೆಚಂದ್ರವಳ್ಳಿಚಿತ್ರದುರ್ಗ ಕೋಟೆಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂಪ್ರಸ್ತಾವನೆವಿ.ವಿ.ಸಾಗರಹಾಲುರಾಮೇಶ್ವರ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ಡಾ.ಡಿ.ಎಂ.ಅಭಿನವ್‍ಗೆ ರಾಜ್ಯಮಟ್ಟದ ಶ್ರೇಷ್ಠ ಆರ್‍ಸಿಹೆಚ್ ಅಧಿಕಾರಿ ಪ್ರಶಸ್ತಿ | State level excellence RCH award
Next Article ಜನ ಸ್ಪಂದನ ಸಭೆಯಿಂದ ಜನರ ಸಂಕಷ್ಟಗಳು ದೂರವಾಗಬೇಕು: ಶಾಸಕ ಟಿ.ರಘುಮೂರ್ತಿ | Jana Spandana Sabha Challakere
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Adike rate | ಚನ್ನಗಿರಿ ಅಡಿಕೆ ರೇಟ್ | 06-06-2025
ಅಡಿಕೆ ಧಾರಣೆ
ಇಂದಿನ ಅಡಕೆ ರೇಟ್ | Adike rate
ಅಡಿಕೆ ಧಾರಣೆ
IPL 2025 | RCB ಗೆಲುವಿನ ಸಂಭ್ರಮ, ಇಬ್ಬರು ಅಭಿಮಾನಿಗಳು ಕಾಲ್ತುಳಿತದಿಂದ ಸಾವು
ಕ್ರೀಡೆ
Adike rate | ಇಂದಿನ ಅಡಿಕೆ ರೇಟ್ | 04-06-2025
ಅಡಿಕೆ ಧಾರಣೆ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?