Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Chitradurga | ಚಿತ್ರದುರ್ಗದ ಬಿಸಿಲಿಗೆ ತತ್ತರಿಸಿದ ಜನ, ಆರೋಗ್ಯ ಇಲಾಖೆ ಮಾರ್ಗಸೂಚಿ ಪಾಲಿಸಿ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > Chitradurga | ಚಿತ್ರದುರ್ಗದ ಬಿಸಿಲಿಗೆ ತತ್ತರಿಸಿದ ಜನ, ಆರೋಗ್ಯ ಇಲಾಖೆ ಮಾರ್ಗಸೂಚಿ ಪಾಲಿಸಿ
ಇಂದಿನ ಸುದ್ದಿ

Chitradurga | ಚಿತ್ರದುರ್ಗದ ಬಿಸಿಲಿಗೆ ತತ್ತರಿಸಿದ ಜನ, ಆರೋಗ್ಯ ಇಲಾಖೆ ಮಾರ್ಗಸೂಚಿ ಪಾಲಿಸಿ

Editor Nammajana
Last updated: 14 March 2025 1:55 PM
By Editor Nammajana 2 Min Read
Share
SHARE
Telegram Group Join Now
WhatsApp Group Join Now

Chitradurga news|nammajana.com|14-03-2025

ನಮ್ಮಜನ.ಕಾಂ, ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯಲ್ಲಿ ಅಧಿಕ ಉಷ್ಣಾಂಶ ದಾಖಲಾಗಿದೆ.ಹವಾಮಾನ ಇಲಾಖೆ ಹಾಗೂ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಜಿಲ್ಲೆಗೆ ಬಿಸಿಗಾಳಿ ಎಚ್ಚರಿಕೆ (ಹೀಟ್ ವೇವ್) ನೀಡಿದೆ. ಹೀಟ್ ವೇವ್ ಸ್ಟ್ರೋಕ್ (Chitradurga) (ಶಾಖದ ಅಲೆ) ನಿಂದಾಗಿ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇರುತ್ತದೆ.

ahobala tvs ದಸರಾ ಹಾಗು ದೀಪಾವಳಿ ಹಬ್ಬದ ವಿಶೇಷ ಕೊಡುಗೆಗಳು 2

ಈ ಹಿನ್ನಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಾರ್ವಜನಿಕರ ಹಿತದೃಷ್ಟಿಯಿಂದ ಮನ್ನೆಚ್ಚರಿಕೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

ಹೀಟ್ ವೇವ್ ಸ್ಟ್ರೋಕ್ ತಪ್ಪಿಸಲು ಅನುಸರಿಸಬೇಕಾದ ಕ್ರಮಗಳು:

ಸಾರ್ವಜನಿಕರು ಹೀಟ್ ವೇವ್ ಕುರಿತು ಸದಾ ಎಚ್ಚರಿಕೆಯಿಂದ ಇರಬೇಕು. ರೇಡಿಯೋ,ಟಿವಿ,ದಿನ ಪತ್ರಿಕೆಗಳಲ್ಲಿ ಬರುವ ಮುನ್ಸೂಚನೆಗಳನ್ನು ತಿಳಿದುಕೊಂಡು ಅವುಗಳನ್ನು ಪಾಲಿಸಬೇಕು.

ಬಾಯಾರಿಕೆಯಿಲ್ಲದಿದ್ದರೂ ಹೆಚ್ಚಾಗಿ ನೀರನ್ನು ಕುಡಿಯುಬೇಕು. ಹಗುರ, ತಿಳಿ-ಬಣ್ಣದ, ಸಡಿಲವಾದ ಮತ್ತು ರಂಧ್ರವುಳ್ಳ ಹತ್ತಿ ಬಟ್ಟೆಗಳನ್ನು ರಕ್ಷಣಾತ್ಮಕ ಕನ್ನಡಕಗಳು, ಛತ್ರಿ,ಟೋಪಿ, (Chitradurga) ಬೂಟುಗಳು ಅಥವಾ ಚಪ್ಪಲಿಗಳನ್ನು ಧರಿಸಿಬೇಕು. ರಾತ್ರಿ ವೇಳೆ ಬಸ್ಸಿನಲ್ಲಿ ದೂರದ ಪ್ರಯಾಣ ಉತ್ತಮ, ಒಂದು ವೇಳೆ ಹಗಲಿನಲ್ಲಿ ಪ್ರಯಾಣ ಮಾಡುವ ಸಂದರ್ಭ ಬಂದರೆ, ನಿಮ್ಮೊಂದಿಗೆ ನೀರನ್ನು ತೆಗೆದುಕೊಂಡು ಹೋಗಿ ಕುಡಿಯಬೇಕು. ಬಿಸಿನಲ್ಲಿ ಹೊರಗೆ ಕೆಲಸ ಮಾಡುವವರು, ಟೋಪಿ ಧರಿಸಬೇಕು. ತಲೆ, ಕುತ್ತಿಗೆ, ಮುಖ ಮತ್ತು ಕೈಕಾಲುಗಳ ಮೇಲೆ ಒದ್ದೆಯಾದ ಬಟ್ಟೆಯನ್ನು ಬಳಸಬೇಕು. ದೇಹವನ್ನು ತಂಪಾಗಿಡಲು ಮನೆಯಲ್ಲಿ ತಯಾರಿಸಿದ ಪಾನೀಯಗಳಾದ ಲಸ್ಸಿ, ಶರಬತ್, ನಿಂಬೆ ನೀರು, ಮಜ್ಜಿಗೆ ಇತ್ಯಾದಿಗಳನ್ನು ಸೇವನೆ ಮಾಡಬೇಕು. ಸಾಕು ಪ್ರಾಣಿ, ಪಕ್ಷಿಗಳನ್ನು ನೆರಳಿನಲ್ಲಿ ಇರಿಸಿ ಸಾಕಷ್ಟು ಕುಡಿಯಲು ಸಾಕಷ್ಟು ನೀರು ಕೊಡಬೇಕು. ಫ್ಯಾನ್ ಗಳನ್ನು ಬಳಸಿ, ತಣ್ಣೀರಿನಲ್ಲಿ ಸ್ನಾನ ಮಾಡಿ, ಒದ್ದೆಯಾದ ಬಟ್ಟೆಗಳನ್ನು ಬಳಸಬೇಕು. ತಂಪಾದ ಸಮಯ ಹಾಗೂ ಸ್ಥಳದಲ್ಲಿ ಕೆಲಸ ನಿರ್ವಹಿಸಬೇಕು.

ಕೆಲಸ ನಿರ್ವಹಿಸುವ ಗರ್ಭಿಣಿ ಮಹಿಳೆಯರು ಮತ್ತು ಅನಾರೋಗ್ಯದಲ್ಲಿರುವ ಕಾರ್ಮಿಕರಿಗೆ ಆರೋಗ್ಯದ ಕಡೆ ಹೆಚ್ಚಿನ ಗಮನಹರಿಸಬೇಕು. ಕಲ್ಲಂಗಡಿ, ಕರಬೂಜ, ಕಿತ್ತಳೆ, ದ್ರಾಕ್ಷಿ, ಅನಾನಸ್, ಸೌತೆಕಾಯಿ, ಎಳನೀರನ್ನು ಹೆಚ್ಚಾಗಿ ಸೇವಿಸಬೇಕು. ನವಜಾತ ಶಿಶುಗಳು ಹಾಗೂ ಚಿಕ್ಕ ಮಕ್ಕಳು, ಗರ್ಭಿಣಿಯರು, ಹೊರಾಂಗಣದಲ್ಲಿ ಕೆಲಸ ನಿರ್ವಹಿಸುವವರು, ಮಾನಸಿಕ (Chitradurga) ಸಮಸ್ಯೆಗಳಿಂದ ಬಳಲುತ್ತಿರುವವರು ಹಾಗೂ ಇತರ ಆರೋಗ್ಯ ಸಮಸ್ಯೆಗಳಿರುವವರು, ಅದರಲ್ಲೂ ವಿಶೇಷವಾಗಿ ಹೃದ್ರೋಗ ಹಾಗೂ ರಕ್ತದ ಒತ್ತಡದಿಂದ ಬಳಲುತ್ತಿರುವವರು ಹೆಚ್ಚು ಜಾಗರೂಕತೆ ವಹಿಸಬೇಕು.

ಇವುಗಳನ್ನು ಮಾಡಬೇಡಿ :

ಮಕ್ಕಳು ಸಾಕು ಪ್ರಾಣಿಗಳನ್ನು ಬಿಸಿಲಿನಲ್ಲಿ ನಿಲ್ಲಿಸಿದ ವಾಹನಗಳ ಹತ್ತಿರ ಬಿಡಬೇಡಿ. ವಾಹನಗಳ ಒಳಗಡೆ ತಾಪಮಾನವು ಹೆಚ್ಚಿ ಮಕ್ಕಳಿಗೆ ಅಪಾಯಕಾರಿಯಾಗಬಹುದು. ಕಪ್ಪುಬಟ್ಟೆ ಅಥವಾ ಬಿಗಿಯಾದ ಬಟ್ಟೆಗಳನ್ನು ಧರಿಸಬಾರದು. ಮಧ್ಯಾಹ್ನ 12 ರಿಂದ 3 ರವರೆಗೆ ಹೊರಗೆ ಕೆಲಸ ಹಾಗೂ ಶ್ರಮದಾಯಕ ಚಟುವಟಿಕೆಗಳನ್ನು ಮಾಡಬಾರದು.

ಬಿಸಿಲಿನ ಸಮಯದಲ್ಲಿ ಅಡುಗೆ ಮಾಡಬಾರದು. ಅಡಿಗೆ ಮಾಡುವ ಸ್ಥಳದಲ್ಲಿ ಸಮರ್ಪಕವಾಗಿ ಗಾಳಿಯಾಡಲು ಬಾಗಿಲು ಮತ್ತು ಕಿಟಕಿಗಳನ್ನು ತೆರೆದಿಡಬೇಕು. ದೇಹವನ್ನು (Chitradurga) ನಿರ್ಜಲೀಕರಣಗೊಳಿಸುವ ಆಲ್ಕೋಹಾಲ್, ಚಹಾ, ಕಾಫಿ ಮತ್ತು ಹಾನಿಕಾರಕ ತಂಪು ಪಾನೀಯಗಳನ್ನು ಸೇವಿಸಬೇಡಿ. ಇವು ಹೊಟ್ಟೆ ನೋವನ್ನು ಉಂಟು ಮಾಡುತ್ತವೆ.

ಇದನ್ನೂ ಓದಿ: Malabar Gold and Diamonds | ಚಿತ್ರದುರ್ಗದಲ್ಲಿ ಮಾರ್ಚ್ 16 ಕ್ಕೆಮಲಬಾರ್ ಗೋಲ್ಡ್ & ಡೈಮಂಡ್ಸ್ ಉದ್ಘಾಟನೆ

ಆಹಾರ ಮತ್ತು ಹಳಸಿದ ಆಹಾರವನ್ನು ಸೇವಿಸಬೇಡಿ. ಚಪ್ಪಲಿ ಧರಿಸದೆ ಹೊರಗಡೆ ಹೋಗಬಾರದು. ಜಿಲ್ಲಾ ವಿಪತ್ತು ನಿರ್ವಹಣೆ ಪ್ರಾಧಿಕಾರ ನೀಡಿರುವ ಈ ಸೂಚನೆಗಳನ್ನು ತಪ್ಪದೇ ಪಾಲಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸಾರ್ವಜನಿಕರಲ್ಲಿ ಕೋರಿದ್ದಾರೆ.

Telegram Group Join Now
WhatsApp Group Join Now

You Might Also Like

Gold price | ಬಂಗಾರದ ಬೆಲೆಯಲ್ಲಿ ಇಳಿಕೆ

ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಮನೆ ಮೇಲೆ ಮತ್ತೆ ಇಡಿ ದಾಳಿ | ED Raid challakere

Challakere Rain | ಹಸ್ತ ಮಳೆಗೆ ಮುಳುಗಿದ ಲಾರಿ, ಕಾರು, ಮನೆಗಳು

Gold price rise | ಬಂಗಾರದ ಓಟಕ್ಕೆ ಬ್ರೇಕ್ ಹಾಕೋರಿಲ್ಲ, ಎಷ್ಟಿದೆ ಇಂದಿನ ಬೆಲೆ

V V Sagara Dam | ವಾಣಿ ವಿಲಾಸ ಸಾಗರ ಡ್ಯಾಂ ಲೇವೆಲ್ ಎಷ್ಟು | ಇಲ್ಲಿದೆ ಮಾಹಿತಿ

TAGGED:Chitradurgaguidelineshealth departmentscorching heatSevere heatಆರೋಗ್ಯ ಇಲಾಖೆಚಿತ್ರದುರ್ಗಬಿರು ಬಿಸಿಲುಭಾರೀ ಬಿಸಿಲುಮಾರ್ಗಸೂಚಿ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Malabar Gold and Diamonds | ಚಿತ್ರದುರ್ಗದಲ್ಲಿ ಮಾರ್ಚ್ 16 ಕ್ಕೆಮಲಬಾರ್ ಗೋಲ್ಡ್ & ಡೈಮಂಡ್ಸ್ ಉದ್ಘಾಟನೆ
Next Article Chitradurga | ವಿಧಾನಸಭೆ ಉಪಸಭಾಪತಿಗೆ ಸ್ಕೂಟರ್ ಡಿಕ್ಕಿ, ಸ್ಥಿತಿ ಗಂಭೀರ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Today Adike Rate | ಇಂದಿನ‌ ಅಡಕೆ ರೇಟ್
ಅಡಿಕೆ ಧಾರಣೆ
Astrology | ಇಂದಿನ‌ ರಾಶಿ ಭವಿಷ್ಯ, ಯಾರಿಗೆಲ್ಲ ಶುಭ, ಅಶುಭ
ದಿನ ಭವಿಷ್ಯ
ದಿನ ಭವಿಷ್ಯ | 09-10-2025 | Dina Bhavishya
ದಿನ ಭವಿಷ್ಯ
Astrology | ದಿನ ಭವಿಷ್ಯ, ಇವತ್ತು ಹೇಗಿದೆ ರಾಶಿ ಭವಿಷ್ಯ
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

More

  • About Us!
  • Blog
  • Contact Us
  • Customize Interests
  • Disclaimer
  • Kannada News- NammaJana
  • My Bookmarks
  • ಶ್ರೀ ಅಹೋಬಲ ಟಿವಿಎಸ್

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?