Chitradurga news|Nammajana.com|5-8-2025
ನಮ್ಮಜನ.ಕಾಂ, ಚಿತ್ರದುರ್ಗ: ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜಂಟಿ ಕ್ರಿಯಾ ಸಮಿತಿ ಇಂದಿನಿಂದ ರಾಜ್ಯವ್ಯಾಪಿ ಸಾರಿಗೆ ನೌಕರರ ಮುಷ್ಕರಕ್ಕೆ ಕರೆ ನೀಡಿದೆ. ಬೆಳಗ್ಗೆ 5 ಗಂಟೆಗೆ ಈ ಸುದ್ದಿ ಪ್ರಕಟವಾಗುವ ಹೊತ್ತಿಗೆ ಚಿತ್ರದುರ್ಗದಲ್ಲಿ KSRTC ಬಸ್ಸುಗಳ ಸಂಚಾರದಲ್ಲಿ ವ್ಯತ್ಯಸವಾಗಿದ್ದು ಬೆಳಗ್ಗೆ 7-30 ಗಂಟೆವರೆ ಚಿತ್ರದುರ್ಗ ಡಿಪೋ ದಿಂದ ಒಂದು ಬಸ್ ಸಹ ರಸ್ತೆಗೆ ಇಳಿದಿಲ್ಲ.
ಬೆಳಗ್ಗೆ 6 ಗಂಟೆಯಿಂದಲೆ ಮುಷ್ಕರ ನಡೆಸುವುದಾಗಿ ಜಂಟಿ ಕ್ರಿಯಾ ಸಮಿತಿ ಮತ್ತು ಎಐಟಿಯುಸಿ ಮುಖಂಡರು ತಿಳಿಸಿದ್ದರು. ಆದರೆ

ಸದ್ಯ ಹೇಗಿದೆ ಚಿತ್ರದುರ್ಗ ಬಸ್ ನಿಲ್ದಾಣದ ಸ್ಥಿತಿ?
- ಬೆಂಗಳೂರು, ಹುಬ್ಬಳ್ಳಿ ಸೇರಿದಂತೆ ವಿವಿಧ ಊರುಗಳಿಂದ ಕೆಎಸ್ಆರ್ಟಿಸಿ ಬಸ್ಸುಗಳು ಚಿತ್ರದುರ್ಗ ನಿಲ್ದಾಣಕ್ಕೆ ಆಗಮಿಸುತ್ತಿವೆ.
- ಚಿತ್ರದುರ್ಗ ಬಸ್ ನಿಲ್ದಾಣದಿಂದ ವಿವಿಧ ಊರುಗಳಿಗೆ ಬಸ್ಸುಗಳು ಪ್ಲಾಟ್ಫಾರಂಗಳಲ್ಲಿ ಒಂದು ಬಸ್ ಸಹ ನಿಂತಿಲ್ಲ.
- ಬಸ್ ನಿಲ್ದಾಣಕ್ಕೆ ಬೆಳಗ್ಗೆಯಿಂದಲೇ ಪ್ರಯಾಣಿಕರು ಆಗಮಿಸುತ್ತಿದ್ದು ಬಸ್ ಇಲ್ಲದೇ ಪ್ರಯಾಣಿಕರಿಗೆ ಪರದಾಟ ಶುರುವಾಗಿದೆ.
- ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆ ಚಿತ್ರದುರ್ಗ ನಿಲ್ದಾಣದ ಬಳಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.
- ನಿತ್ಯ1300 ಸಾರಿಗೆ ನೌಕರರು ಕಾರ್ಯ ನಿರ್ವಹಿಸುತ್ತಿದ್ದು ಯಾರು ಸಹ ಆಗಮಿಸಿಲ್ಲ.
ಇದನ್ನೂ ಓದಿ: ಚಿತ್ರದುರ್ಗ Ksrtc ನೌಕರ ಮುಷ್ಕರ, ರಸ್ತೆ ಬಂದಿಲ್ಲ ಬಸ್, ಜನರಿಗೆ ಪರದಾಟ ಗ್ಯಾರೆಂಟಿ | KSRTC bus shutdown
ಚಿತ್ರದುರ್ಗ ಬಸ್ ನಿಲ್ದಾಣಕ್ಕೆ ನಿತ್ಯ 329 ಕೆಎಸ್ಆರ್ಟಿಸಿ ಬಸ್ಸುಗಳು ಬಂದು ಹೋಗುತ್ತವೆ. ನಿತ್ಯ 10 ರಿಂದ 15 ಸಾವಿರಕ್ಕು ಹೆಚ್ಚು ಪ್ರಯಾಣಿಕರು ಬಂದು ಹೋಗುತ್ತಾರೆ. ಮುಷ್ಕರದ ಹಿನ್ನೆಲೆ ಪ್ರಯಾಣಿಕರು ಆತಂಕಕ್ಕೀಡಾಗಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252