
Chitradurga news | nammajana.com |3-9-2024
ನಮ್ಮಜನ.ಕಾಂ, ಚಿತ್ರದುರ್ಗ: ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ಆಯೋಜಿಸಲಾದ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Chitradurga)ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಚಿವರ ಸಭೆಗೆ ಅಧಿಕಾರಿಗಳು ಗೈರು
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಚಿತ್ರದುರ್ಗ ಜಿಲ್ಲಾ ಪಂಚಾಯತ ಸಭೆಗೆ ಸೋಮವಾರ ಆಗಮಿಸಿದ್ದರು ಆದರೆ ಉತ್ತರ ಕೊಡಬೇಕಾದ ಅಧಿಕಾರಿಗಳು ಮಾತ್ರ ಗೈರು (Chitradurga) ಹಾಜರಾಗಿದ್ದರಿಂದ ಸಚಿವರು ಕಿಡಿಕಾರಿದರು. ಅಧಿಕಾರಿಗಳು ಬೇಜಾವ್ದಾರಿ ಪದರ್ಶನ ಮಾಡಿದ್ದು ಸಚಿವ ಸಿಟ್ಟಿಗೆ ಕಾರಣವಾಗಿದ್ದು ಸಿಎಂ ಗಮನಕ್ಕೆ ತರುತ್ತೇನೆ ಎಂದು ಸಿಡಿಮಿಡಿಗೊಂಡರು.

ಅಂಗನವಾಡಿಗಳ ಪ್ರಗತಿ ಪರಿಶೀಲನೆ
ಅಂಗನವಾಡಿ ಕಟ್ಟಡಗಳ ನಿರ್ಮಾಣ ಪ್ರಗತಿ ಪರಿಶೀಲನೆ ವೇಳೆ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ (Chitradurga) ಕಾರ್ಯಪಾಲಕ ಇಂಜಿನಿಯರ್ ಸಭೆಗೆ ಗೈರಾಗಿ, ಅವರ ಬದಲು ಸಹಾಯಕ ಇಂಜಿನಿಯರ್ ಸಭೆಗೆ ಆಗಮಿಸಿದ್ದನ್ನು ಗಮನಿಸಿದ ಸಚಿವೆ ಲಕ್ಷ್ಮಿ ಆರ್ ಹೆಬ್ಬಾಳ್ಕರ್ ತೀವ್ರ ಅಸಮಾಧಾನ ಹೊಂದಿ ಸಿಟ್ಟಾದ ಪ್ರಸಂಗ ಸಭೆಯಲ್ಲಿ ನಡೆಯಿತು.
ಅಂಗನವಾಡಿಗಳಿಗೆ ಬಡವರ ಮಕ್ಕಳು ಬರುತ್ತಾರೆ. ಇಲಾಖೆಯ ಅಂಗನವಾಡಿ ಕಟ್ಟಡ ನಿರ್ಮಾಣದ ಪ್ರಮುಖ ಹೊಣೆ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ್ದಾಗಿದೆ. ಇದುವರೆಗೂ ಜಿ.ಪಂ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆಯೇ? ಪಿಆರ್ಇಡಿ, ಆರೋಗ್ಯ, ಜಿ.ಪಂ. ಸೇರಿದಂತೆ ಪ್ರಮುಖ ಅಧಿಕಾರಿಗಳು ಸಭೆಗೆ ಗೈರು ಹಾಜರಿಯಾದರೆ ಹೇಗೆ? ಎಂದು ಸಚಿವೆ ಆಕ್ರೋಶ ವ್ಯಕ್ತಪಡಿಸಿದರು.
ಹೊಣೆ ಹೊತ್ತ ಇಲಾಖೆಯವರು ಗೈರು
ಜಿಲ್ಲೆಯ ಬಹುಪಾಲು ಜನಸಂಖ್ಯೆ ಕಲ್ಯಾಣ ಹೊಣೆ ಇಲಾಖೆ ಹೊತ್ತಿದೆ. ಖುದ್ದು ಸಚಿವೆ ಆಗಮಿಸಿ ಪರಿಶೀಲನೆ ನಡೆಸುವ ಸಭೆ ಸಂಬಂಧಪಟ್ಟ ಅಧಿಕಾರಿಗಳು ಗೈರು ಹಾಜರಾಗಿದ್ದನ್ನು (Chitradurga) ಮುಖ್ಯಮಂತ್ರಿಗಳ ಗಮನಕ್ಕೆ ತರುತ್ತೇನೆ.
ಜಿಲ್ಲಾಧಿಕಾರಿಗಳು ಸಹ ಅಧಿಕಾರಿಗಳಿಗೆ ನೋಟಿಸ್ ನೀಡಿ. ಇಂದಿನ ಕಾರ್ಯಕ್ರಮಗಳನ್ನು ಮುಗಿಸಿ ಚಿತ್ರದುರ್ಗ ನಗರ ತೊರೆಯುವ ಮುನ್ನವೇ ಖುದ್ದು ನನ್ನ ಬಳಿ ಆಗಮಿಸಿ ಈ ಕುರಿತು ವಿವರಣೆ ನೀಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರಿಗೆ ಸಚಿವರು ಸೂಚಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಸಹ ಅಧಿಕಾರಿಗಳ ಧೋರಣೆಗೆ ಅಸಮಧಾನ ವ್ಯಕ್ತಪಡಿಸಿ, ಸಚಿವರು ಬಂದರೂ ಸಂಬಂಧಪಟ್ಟ ಇಲಾಖಾ ಅಧಿಕಾರಗಳು ಇಲ್ಲ ಎಂದರೆ ಹೇಗೆ? ಯಾರಿಗೆ ತಿಳಿಸಿ ಅಧಿಕಾರಿಗಳು ಸಭೆಗೆ ಗೈರಾಗಿದ್ದಾರೆ. (Chitradurga) ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆಯುವುದಾಗಿ ಹೇಳಿದರು.
ಅಂಗನವಾಡಿ ಕಟ್ಟಡ ಕಾಮಗಾರಿ ಮಾಹಿತಿ
ಪಂಚಾಯತ್ ರಾಜ್ ಇಂಜಿನಿಯರ್ ವಿಭಾಗ 192 ಅಂಗನವಾಡಿ ಕಟ್ಟಡ ಪೈಕಿ 100 ಕಟ್ಟಡ ನಿರ್ಮಾಣ ಪೂರ್ಣಗೊಳಿಸಲಾಗಿದೆ. 34 ಕಟ್ಟಡ ಪ್ರಗತಿಯಲ್ಲಿವೆ. 62 ಕಟ್ಟಡ ನಿರ್ಮಾಣ ಪ್ರಾರಂಭಿಸುವುದು ಬಾಕಿಯಿದೆ. ಕೆ.ಆರ್.ಐ.ಡಿ.ಎಲ್ ವತಿಯಿಂದ 72 ಅಂಗನಾಡಿ ಕಟ್ಟಡಗಳ ಪೈಕಿ 52 (Chitradurga) ಪೂರ್ಣಗೊಂಡಿವೆ. 1 ಕಟ್ಟಡ ಪಗ್ರತಿಯಲಿದ್ದು, 17 ಕಟ್ಟಡ ನಿರ್ಮಾಣ ಪ್ರಾರಂಭವಾಗಿಲ್ಲ.
ಇದನ್ನೂ ಓದಿ: ಐದು ದಿನಗಳಲ್ಲಿ ಗೃಹಲಕ್ಷ್ಮಿ ಹಣ ಜಮಾ | Lakshmi Hebbalkar
ನಿರ್ಮಿತಿ ಕೇಂದ್ರದಿಂದ 69 ಕಟ್ಟಡಗಳ ಪೈಕಿ 34 ಪೂರ್ಣಗೊಂಡಿದ್ದು 29 ಪ್ರಗತಿಯಲ್ಲಿದೆ, 6 ಕಟ್ಟಡ ನಿರ್ಮಾಣ ಕಾಮಗಾರಿ ಪ್ರಾರಂಭಿಸಬೇಕಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ಇದಕ್ಕೆ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಅವರು ಅಂಗನವಾಡಿ ಕಟ್ಟಡ ನಿರ್ಮಾಣ ಕಾಮಗಾರಿ (Chitradurga) ತ್ವರಿತವಾಗಿ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.