Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಸಚಿವರು ಹಾಜರ್; ಅಧಿಕಾರಿಗಳು ಚಕ್ಕರ್ | ಲಕ್ಷ್ಮಿ ಹೆಬ್ಬಾಳ್ಕರ್ ಅಕ್ರೋಶ | Chitradurga
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಸಚಿವರು ಹಾಜರ್; ಅಧಿಕಾರಿಗಳು ಚಕ್ಕರ್ | ಲಕ್ಷ್ಮಿ ಹೆಬ್ಬಾಳ್ಕರ್ ಅಕ್ರೋಶ | Chitradurga
ಇಂದಿನ ಸುದ್ದಿ

ಸಚಿವರು ಹಾಜರ್; ಅಧಿಕಾರಿಗಳು ಚಕ್ಕರ್ | ಲಕ್ಷ್ಮಿ ಹೆಬ್ಬಾಳ್ಕರ್ ಅಕ್ರೋಶ | Chitradurga

Editor Nammajana
Last updated: 3 September 2024 07:43
By Editor Nammajana 2 Min Read
Share
SHARE

Chitradurga news | nammajana.com |3-9-2024

ನಮ್ಮಜನ.ಕಾಂ, ಚಿತ್ರದುರ್ಗ: ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ಆಯೋಜಿಸಲಾದ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Chitradurga)ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಚಿವರ ಸಭೆಗೆ ಅಧಿಕಾರಿಗಳು ಗೈರು

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಚಿತ್ರದುರ್ಗ ಜಿಲ್ಲಾ ಪಂಚಾಯತ ಸಭೆಗೆ ಸೋಮವಾರ ಆಗಮಿಸಿದ್ದರು ಆದರೆ ಉತ್ತರ ಕೊಡಬೇಕಾದ ಅಧಿಕಾರಿಗಳು ಮಾತ್ರ ಗೈರು (Chitradurga) ಹಾಜರಾಗಿದ್ದರಿಂದ ಸಚಿವರು ಕಿಡಿಕಾರಿದರು. ಅಧಿಕಾರಿಗಳು ಬೇಜಾವ್ದಾರಿ ಪದರ್ಶನ ಮಾಡಿದ್ದು ಸಚಿವ ಸಿಟ್ಟಿಗೆ ಕಾರಣವಾಗಿದ್ದು ಸಿಎಂ ಗಮನಕ್ಕೆ ತರುತ್ತೇನೆ ಎಂದು ಸಿಡಿಮಿಡಿಗೊಂಡರು.

ಅಂಗನವಾಡಿಗಳ ಪ್ರಗತಿ ಪರಿಶೀಲನೆ

ಅಂಗನವಾಡಿ ಕಟ್ಟಡಗಳ ನಿರ್ಮಾಣ ಪ್ರಗತಿ ಪರಿಶೀಲನೆ ವೇಳೆ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ (Chitradurga) ಕಾರ್ಯಪಾಲಕ ಇಂಜಿನಿಯರ್ ಸಭೆಗೆ ಗೈರಾಗಿ, ಅವರ ಬದಲು ಸಹಾಯಕ ಇಂಜಿನಿಯರ್ ಸಭೆಗೆ ಆಗಮಿಸಿದ್ದನ್ನು ಗಮನಿಸಿದ ಸಚಿವೆ ಲಕ್ಷ್ಮಿ ಆರ್ ಹೆಬ್ಬಾಳ್ಕರ್ ತೀವ್ರ ಅಸಮಾಧಾನ ಹೊಂದಿ ಸಿಟ್ಟಾದ ಪ್ರಸಂಗ ಸಭೆಯಲ್ಲಿ ನಡೆಯಿತು.

ಅಂಗನವಾಡಿಗಳಿಗೆ ಬಡವರ ಮಕ್ಕಳು ಬರುತ್ತಾರೆ. ಇಲಾಖೆಯ ಅಂಗನವಾಡಿ ಕಟ್ಟಡ ನಿರ್ಮಾಣದ ಪ್ರಮುಖ ಹೊಣೆ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ್ದಾಗಿದೆ. ಇದುವರೆಗೂ ಜಿ.ಪಂ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆಯೇ? ಪಿಆರ್‍ಇಡಿ, ಆರೋಗ್ಯ, ಜಿ.ಪಂ. ಸೇರಿದಂತೆ ಪ್ರಮುಖ ಅಧಿಕಾರಿಗಳು ಸಭೆಗೆ ಗೈರು ಹಾಜರಿಯಾದರೆ ಹೇಗೆ? ಎಂದು ಸಚಿವೆ ಆಕ್ರೋಶ ವ್ಯಕ್ತಪಡಿಸಿದರು.

ಹೊಣೆ ಹೊತ್ತ ಇಲಾಖೆಯವರು ಗೈರು

ಜಿಲ್ಲೆಯ ಬಹುಪಾಲು ಜನಸಂಖ್ಯೆ ಕಲ್ಯಾಣ ಹೊಣೆ ಇಲಾಖೆ ಹೊತ್ತಿದೆ. ಖುದ್ದು ಸಚಿವೆ ಆಗಮಿಸಿ ಪರಿಶೀಲನೆ ನಡೆಸುವ ಸಭೆ ಸಂಬಂಧಪಟ್ಟ ಅಧಿಕಾರಿಗಳು ಗೈರು ಹಾಜರಾಗಿದ್ದನ್ನು (Chitradurga) ಮುಖ್ಯಮಂತ್ರಿಗಳ ಗಮನಕ್ಕೆ ತರುತ್ತೇನೆ.

ಜಿಲ್ಲಾಧಿಕಾರಿಗಳು ಸಹ ಅಧಿಕಾರಿಗಳಿಗೆ ನೋಟಿಸ್ ನೀಡಿ. ಇಂದಿನ ಕಾರ್ಯಕ್ರಮಗಳನ್ನು ಮುಗಿಸಿ ಚಿತ್ರದುರ್ಗ ನಗರ ತೊರೆಯುವ ಮುನ್ನವೇ ಖುದ್ದು ನನ್ನ ಬಳಿ ಆಗಮಿಸಿ ಈ ಕುರಿತು ವಿವರಣೆ ನೀಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರಿಗೆ ಸಚಿವರು ಸೂಚಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಸಹ ಅಧಿಕಾರಿಗಳ ಧೋರಣೆಗೆ ಅಸಮಧಾನ ವ್ಯಕ್ತಪಡಿಸಿ, ಸಚಿವರು ಬಂದರೂ ಸಂಬಂಧಪಟ್ಟ ಇಲಾಖಾ ಅಧಿಕಾರಗಳು ಇಲ್ಲ ಎಂದರೆ ಹೇಗೆ? ಯಾರಿಗೆ ತಿಳಿಸಿ ಅಧಿಕಾರಿಗಳು ಸಭೆಗೆ ಗೈರಾಗಿದ್ದಾರೆ. (Chitradurga) ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆಯುವುದಾಗಿ ಹೇಳಿದರು.

ಅಂಗನವಾಡಿ ಕಟ್ಟಡ ಕಾಮಗಾರಿ ಮಾಹಿತಿ

ಪಂಚಾಯತ್ ರಾಜ್ ಇಂಜಿನಿಯರ್ ವಿಭಾಗ 192 ಅಂಗನವಾಡಿ ಕಟ್ಟಡ ಪೈಕಿ 100 ಕಟ್ಟಡ ನಿರ್ಮಾಣ ಪೂರ್ಣಗೊಳಿಸಲಾಗಿದೆ. 34 ಕಟ್ಟಡ ಪ್ರಗತಿಯಲ್ಲಿವೆ. 62 ಕಟ್ಟಡ ನಿರ್ಮಾಣ ಪ್ರಾರಂಭಿಸುವುದು ಬಾಕಿಯಿದೆ. ಕೆ.ಆರ್.ಐ.ಡಿ.ಎಲ್ ವತಿಯಿಂದ 72 ಅಂಗನಾಡಿ ಕಟ್ಟಡಗಳ ಪೈಕಿ 52 (Chitradurga) ಪೂರ್ಣಗೊಂಡಿವೆ. 1 ಕಟ್ಟಡ ಪಗ್ರತಿಯಲಿದ್ದು, 17 ಕಟ್ಟಡ ನಿರ್ಮಾಣ ಪ್ರಾರಂಭವಾಗಿಲ್ಲ.

ಇದನ್ನೂ ಓದಿ: ಐದು ದಿನಗಳಲ್ಲಿ ಗೃಹಲಕ್ಷ್ಮಿ ಹಣ ಜಮಾ | Lakshmi Hebbalkar

ನಿರ್ಮಿತಿ ಕೇಂದ್ರದಿಂದ 69 ಕಟ್ಟಡಗಳ ಪೈಕಿ 34 ಪೂರ್ಣಗೊಂಡಿದ್ದು 29 ಪ್ರಗತಿಯಲ್ಲಿದೆ, 6 ಕಟ್ಟಡ ನಿರ್ಮಾಣ ಕಾಮಗಾರಿ ಪ್ರಾರಂಭಿಸಬೇಕಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ಇದಕ್ಕೆ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಅವರು ಅಂಗನವಾಡಿ ಕಟ್ಟಡ ನಿರ್ಮಾಣ ಕಾಮಗಾರಿ (Chitradurga) ತ್ವರಿತವಾಗಿ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.

You Might Also Like

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ

Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ

Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ಐದು ದಿನಗಳಲ್ಲಿ ಗೃಹಲಕ್ಷ್ಮಿ ಹಣ ಜಮಾ | Lakshmi Hebbalkar
Next Article ಮದಕರಿಪುರದಲ್ಲಿ ಸಿಲಿಂಡರ್ ಬ್ಲಾಸ್ಟ್ | Cylinder blast
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ
ದಿನ ಭವಿಷ್ಯ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?
ದಿನ ಭವಿಷ್ಯ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?