
Chitradurga news|nammajana.com|17-8-2024
ನಮ್ಮಜನ.ಕಾಂ, ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಗೆ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ರಂಜಿತ್ ಕುಮಾರ್ ಬಂಡಾರು (Chitradurga New SP) ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದ್ದಾರೆ.
ಮಂಗಳೂರು ದಕ್ಷಿಣ ಎಸಿಪಿ ಮತ್ತು ಬಳ್ಳಾರಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಆಗಿದ್ದ ರಂಜಿತ್ ಕುಮಾರ್ ಬಂಡಾರು ಅವರು ಬಳ್ಳಾರಿ ಜಿಲ್ಲೆಯಲ್ಲಿ ಸೇವೆ ಸಲ್ಲಿಸುವ ಸಂದರ್ಭದಲ್ಲಿ ಸಂಚಾರಿ ನಿಯಮ ಉಲ್ಲಂಘನೆ, ಅಪಘಾತ ನಿಯಂತ್ರಣ ಮತ್ತು (Chitradurga New SP) ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರ ಮೇಲೆ ಕ್ರಮ ಜರುಗಿಸಲು ಆಧುನಿಕ ತಂತ್ರಜ್ಞಾನ ಸಾಧನಗಳನ್ನು ಬಳಸಿ ಯಶಸ್ವಿಯಾಗಿದ್ದರು

ಇದನ್ನೂ ಓದಿ: ಚಿತ್ರದುರ್ಗ: ರಾಜ್ಯಪಾಲರ ವಿರುದ್ದ ಟೈರ್ ಸುಟ್ಟು ಕಾಂಗ್ರೆಸ್ ಪ್ರತಿಭಟನೆ | Congress protest
ಸ್ಪೀಡ್ ಲೇಸರ್ ಗನ್ ಮತ್ತು ಮದ್ಯಪಾನ ಮಾಡಿ ವಾಹನ ಚಲಾಯಿಸುವವರ ವಿರುದ್ಧ ಕ್ರಮ ಕೈಗೊಳ್ಳಲು ಬ್ರೀಥ್ ಅಲ್ಕೋಹಾಲ್ ಅನಲೈಜರ್ ಸಾಧನಗಳು ಸಿಟಿಆರ್ಎಸ್ (Chitradurga New SP) ಕಚೇರಿಯಿಂದ ಸರಬರಾಜು ಆಗಿದ್ದು ಉತ್ತಮ ಸೇವೆ ಸಲ್ಲಿಸಿದ್ದರು.
