Chitradurga news|Nammajana.com|20-8-2025
ನಮ್ಮಜನ.ಕಾಂ, ಚಿತ್ರದುರ್ಗ: ರಾಷ್ಟ್ರೀಯ ಹೆದ್ದಾರಿ 48ರ ಬಳಿ (Chitradurga) ಪತ್ತೆಯಾದ ಅಪ್ರಾಪ್ತ ಯುವತಿ ಶವ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಕ್ಯಾನ್ಸರ್ ಥರ್ಡ್ ಸ್ಟೇಜ್ನಲ್ಲಿರುವ ಆರೋಪಿ ಚೇತನ್ ಎಂಬಾತನೇ ಕೊಲೆ ಮಾಡಿದ್ದು, ಸದ್ಯ ಪೊಲೀಸರು ಬಂಧಿಸಿದ್ದಾರೆ.

ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೇರಹಟ್ಟಿ ಗ್ರಾಮದ ಕೋವೇರಹಟ್ಟಿ ಮೂಲದ ವರ್ಷಿತಾ(19) ಬರ್ಬರವಾಗಿ (Chitradurga) ಹತ್ಯೆಗೊಳಗಾಗಿದ್ದ ಯುವತಿ,ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೇರೊಬ್ಬನ ಜೊತೆ ಸಂಬಂಧ
ಕ್ಯಾನ್ಸರ್ ಮೂರನೇ ಹಂತದಲ್ಲಿರುವ ಯುವಕ ಚೇತನ್ ವರ್ಷಿತಾ ಜತೆ ಸಂಪರ್ಕದಲ್ಲಿದ್ದ. ಹೀಗಾಗಿ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ವಿಚಾರಣೆ ಮಾಡಿದ್ದು, ಈ ವೇಳೆ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ.
ಬೇರೊಬ್ಬನ ಜೊತೆ ವರ್ಷಿತಾ ಸಂಬಂಧ ಹಿನ್ನೆಲೆ ಕೊಲೆ ಮಾಡಿದ್ದೇನೆ ಎಂದಿರುವ ಚೇತನ್, ಗೋನೂರು ಬಳಿ (Chitradurga) ಕರೆದೊಯ್ದು ಹೊಡೆದಾಗ ನೆಲಕ್ಕೆ ಬಿದ್ದು ಸಾವನ್ನಪ್ಪಿದಳು. ಬಳಿಕ ಪೆಟ್ರೋಲ್ ಸುರಿದು ಸುಟ್ಟು ಹಾಕಿರುವುದಾಗಿ ಪೊಲೀಸ್ ಮೂಲಗಳಿಂದ ಮಾಹಿತಿ ತಿಳಿದುಬಂದಿದೆ.
ಈ ಪ್ರಕರಣದಲ್ಲಿ ನಡೆದದ್ದೇನು?
ಸರ್ಕಾರಿ ಪದವಿ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿನಿ ಆಗಿದ್ದ ವರ್ಷಿತಾಳ ಶವ ಚಿತ್ರದುರ್ಗದ ರಾಷ್ಟ್ರೀಯ ಹೆದ್ದಾರೆ 48ರ ಬಳಿ ಪತ್ತೆ ಆಗಿತ್ತು. ಅತ್ಯಾಚಾರ ಎಸಗಿ ಕೊಲೆಗೈದು ಬೆಂಕಿ ಹಚ್ಚಿರುವುದಾಗಿ ಶಂಕಿಸಲಾಗಿತ್ತು.
ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿದ್ಯಾರ್ಥಿ ನಿಲಯದಲ್ಲಿ ಯುವತಿ ವರ್ಷಿತಾ ಇರುತ್ತಿದ್ದಳು. ಆಗಸ್ಟ್ 14ರಂದು ಊರಿಗೆ ಹೋಗಲು ರಜೆ ಕೋರಿ ಹಾಸ್ಟೆಲ್ ವಾರ್ಡನ್ಗೆ ಲಿವ್ ಲೆಟರ್ ನೀಡಿದ್ದಳು. ಅದೇ ದಿನ ಹಾಸ್ಟೆಲ್ನಿಂದ ವರ್ಷಿತಾ ತನ್ನ ಫೋನ್ನಲ್ಲಿ ಮಾತನಾಡುತ್ತಾ ಕಾಲೇಜು ಯೂನಿಫಾರ್ಮ್ನಲ್ಲಿ (Chitradurga) ಸಹಪಾಠಿ ಜತೆ ತೆರಳಿದ್ದಳು.
ಇದನ್ನೂ ಓದಿ: CM Siddaramaiah ಗೆ ಖುದ್ದು ಕೃತಜ್ಞತೆ ಸಲ್ಲಿಸಿದ ಮಾದಿಗರು : ಅಲೆಮಾರಿಗಳನ್ನು ಕೈಬಿಡದಂತೆ ಆಂಜನೇಯ ಆಗ್ರಹ
ಇನ್ನು ವಿದ್ಯಾರ್ಥಿನಿ ವರ್ಷಿತಾಳನ್ನು ಕಳೆದುಕೊಂಡ ಪೋಷಕರು ಕಣ್ಣೀರು ಹಾಕಿದ್ದಾರೆ. ವರ್ಷಿತಾ ಸಾವಿಗೆ ನ್ಯಾಯ ಕೊಡಿಸುವಂತೆ ಜಿಲ್ಲಾಸ್ಪತ್ರೆಯ ಶವಾಗಾರ ಬಳಿ ಆಕ್ರಂದಿಸಿದರು. ಚಿತ್ರದುರ್ಗದ ಚೇತನ್ ನಮ್ಮ ಪುತ್ರಿಯನ್ನು ಕೊಲೆ ಮಾಡಿದ್ದಾನೆ ಎಂದು (Chitradurga) ಪೋಷಕರು ಆರೋಪಿಸಿದರು.
