Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಸಿಎಂ ಸಿದ್ದರಾಮಯ್ಯ ದಲಿತ ವಿರೋಧಿ: ಎನ್.ರವಿಕುಮಾರ್ ಕಿಡಿ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ರಾಜಕೀಯ > ಸಿಎಂ ಸಿದ್ದರಾಮಯ್ಯ ದಲಿತ ವಿರೋಧಿ: ಎನ್.ರವಿಕುಮಾರ್ ಕಿಡಿ
ರಾಜಕೀಯ

ಸಿಎಂ ಸಿದ್ದರಾಮಯ್ಯ ದಲಿತ ವಿರೋಧಿ: ಎನ್.ರವಿಕುಮಾರ್ ಕಿಡಿ

nammajana.com
Last updated: 14 April 2024 12:17 PM
By nammajana.com 2 Min Read
Share
N Ravikumar BJP in Chitradurga
SHARE
Telegram Group Join Now
WhatsApp Group Join Now

ನಮ್ಮಜನ.ಕಾಂ ಚಿತ್ರದುರ್ಗ ಏ.14 : ಅಂಬೇಡ್ಕರ್ ಕೊನೆಯುಸಿರೆಳೆದ ದಿನದಂದು ಅವರ ಸಂಸ್ಕಾರಕ್ಕೆ ದೆಹಲಿಯಲ್ಲಿ 6-3 ಅಡಿ ಜಾಗವನ್ನು ಕಾಂಗ್ರೆಸ್ ಸರ್ಕಾರ ನೀಡಲಿಲ್ಲ. ಆದರೆ ನೆಹರುರವರಿಗೆ 52.6 ಎಕರೆ, ಇಂದಿರಾಗಾಂಧಿಯವರಿಗೆ 45 ಎಕರೆ ಹಾಗೂ ರಾಜೀವ್ ಗಾಂಧಿಯವರಿಗೆ 15 ಎಕರೆ ಒಟ್ಟಾರೆ ನೆಹರು ಕುಟುಂಬಕ್ಕೆ 110 ಎಕರೆಗೂ ಹೆಚ್ಚು ಜಾಗ ನೀಡಿದರು. ಅಂಬೇಡ್ಕರ್ ಮೃತದೇಹವನ್ನು ತೆಗೆದುಕೊಂಡು ಹೋಗಲು ಟ್ರಾನ್ಸ್ ಪೋರ್ಟ್ ವ್ಯವಸ್ಥೆ ಸಹ ನೀಡಲಿಲ್ಲ. ಇದು ಕೇವಲ ದಲಿತರಿಗೆ ಮಾಡಿದ ಅಪಮಾನವಲ್ಲ. ಇದು ರಾಷ್ಟ್ರಕ್ಕೆ ಮಾಡಿದ ಅಪಮಾನ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.

ಚಿತ್ರದುರ್ಗ ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅಂಬೇಡ್ಕರ್ ಅಂತಹ ಮಹಾನ್ ವ್ಯಕ್ತಿಯನ್ನು ಕಾಂಗ್ರೆಸ್ ಪಕ್ಷ ನಮ್ಮ ರಾಷ್ಟ್ರದ ಪ್ರಧಾನಮಂತ್ರಿಯಾಗಿ ಮಾಡಬಹುದಿತ್ತು. ಪ್ರಧಾನಮಂತ್ರಿ ಮಾತು ದೂರ ಉಳಿಯಿತು.. ಕೊನೆಗೆ ಸಂಸದರಾಗಿ ಮಾಡಲು ಅವಕಾಶವಿತ್ತು. ಕಾಂಗ್ರೆಸ್ ಮಾತ್ರ ಅತ್ಯಂತ ಅವಮಾನೀಯವಾಗಿ ಚುನಾವಣೆಯಲ್ಲಿ ಸೋಲಿಸುವ ಕೆಲಸ ಮಾಡಿತು. ಅಂಬೇಡ್ಕರ್ ಅವರನ್ನು ಸೋಲಿಸಿದ ನಾರಾಯಣ ಸದೋಬ ಕಜ್ರೋಲ್ಕರ್ ರವರಿಗೆ ಕಾಂಗ್ರೆಸ್ ಪಕ್ಷ ಪದ್ಮ ವಿಭೂಷಣ ಪ್ರಶಸ್ತಿ ಕೊಟ್ಟು ಗೌರವಿಸುತ್ತೆ. ಅಂಬೇಡ್ಕರ್ ಅಂತ್ಯದವರೆಗೂ ಕಾಂಗ್ರೆಸ್ ಪಕ್ಷ ಭಾರತರತ್ನ ಪ್ರಶಸ್ತಿ ಕೊಡಲಿಲ್ಲ.. ಅಂಬೇಡ್ಕರ್ ರವರಿಗೆ ಭಾರತ ರತ್ನ ಪ್ರಶಸ್ತಿ ನೀಡಿದ್ದು ಅಟಲ್ ಬಿಹಾರಿ ವಾಜಪೇಯಿ ಅವರ ಸರ್ಕಾರದಲ್ಲಿ ಎಂದು ತಾವು ‌ಎಂದು ಮರೆಯಬಾರದು.

ದಲಿತರ ಬದುಕಿಗೆ ಸೂರ್ಯನಂತೆ ಕೆಲಸ ಮಾಡಿದ ಈ ದೇಶದ ಬೆಳಕು ಅಂಬೇಡ್ಕರ್ ಜಯಂತಿಯನ್ನು ಬಿಜೆಪಿ ಇಂದು ಆಚರಣೆ ಮಾಡುತ್ತಿದೆ.ಹಿಂದೂ ಸಮಾಜದ ಪುನರುತ್ಥಾನದ ಚೇತನ ಅಂಬೇಡ್ಕರ್ ರವರು… ದಲಿತರನ್ನು.. ಅಸ್ಪೃಶ್ಯರನ್ನು.ಮನುಷ್ಯರಂತೆ ಕಾಣಬೇಕೆಂದು ವಾದಿಸಿದ ಮಹಾನ್ ಮಾನವತವಾದಿ.ನವೆಂಬರ್-26 ಸಂವಿಧಾನವನ್ನು ಜಾರಿಯಾದ ದಿನವನ್ನು ಸಂವಿಧಾನ ಸಂಸ್ಥಾಪನಾ ದಿನವನ್ನಾಗಿ ಮಾಡಿದ್ದು ಬಿಜೆಪಿ ಸರ್ಕಾರ. ಕಾಂಗ್ರೆಸ್ ಪಕ್ಷ ದಲಿತರನ್ನು ಕೇವಲ ಮತ ಬ್ಯಾಂಕ್‍ನ್ನಾಗಿ ಮಾಡಿಕೊಂಡಿದೆ… ಕಾಂಗ್ರೆಸ್ ನವರು ಸಂವಿಧಾನವನ್ನು ಸರಿಯಾದ ರೀತಿಯಲ್ಲಿ ಜಾರಿ ಮಾಡಲಿಲ್ಲ. ಅಂಬೇಡ್ಕರ್ ರವರ ಜನ್ಮಭೂಮಿಯನ್ನು ಬಿಜೆಪಿ ಪಕ್ಷ ಅಭಿವೃದ್ಧಿಪಡಿಸಿದೆ.. ಅಂಬೇಡ್ಕರ್ ರವರು ಲಂಡನ್ ನಲ್ಲಿ ಓದಿದ ಜಾಗವನ್ನು ಮ್ಯೂಸಿಯಂ ಮಾಡಲಾಗಿದೆ.

ದೇಶದಲ್ಲಿ ಕೋಮುಗಲಭೆ ಹೆಚ್ಚಾಗಲು ಕಾರಣ ಕಾಂಗ್ರೆಸ್ ಪಕ್ಷ. ವಿಧಾನಸೌಧದಲ್ಲಿ ನಿಂತುಕೊಂಡು ಪಾಕಿಸ್ತಾನ ಜಿಂದಾಬಾದ್ ಕೂಗಿದವರನ್ನು ರಕ್ಷಣೆ ಮಾಡುವ ಪಕ್ಷ ಕಾಂಗ್ರೆಸ್ ಪಕ್ಷ. ಅಂಬೇಡ್ಕರ್ ಗೆ ಅಪಮಾನ ಮಾಡಿದ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸಬೇಕು. ಸ್ವತಃ ಅಂಬೇಡ್ಕರ್ ರವರೇ ಹೇಳಿದ್ದರು ಕಾಂಗ್ರೆಸ್ ಪಕ್ಷ ಎನ್ನುವುದು ಒಂದು ಉರಿಯುವ ಮನೆ… ಆ ಪಕ್ಷಕ್ಕೆ ನಾನು ಎಂದು ಕಾಲಿಡಲ್ಲ ಅಂತ ಹೇಳಿದ್ದರು. ಕಾಂಗ್ರೆಸ್ ಪಕ್ಷವನ್ನು ಸೋಲಿಸುವುದೇ ಅಂಬೇಡ್ಕರ್ ಅವರಿಗೆ ಮಾಡುವ ಸನ್ಮಾನ. ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಬಹಳ ದಿನ ಇರಲ್ಲ… ನಾವು ಯಾವುದೇ ಆಪರೇಷನ್ ಮಾಡಲ್ಲ… ಅವರೇ ಮಾಡಿದಂತ ಕುತಂತ್ರ ಕೆಲಸಗಳಿಂದ ಸರ್ಕಾರ ಬಿದ್ದು ಹೋಗುತ್ತೆ ರವಿಕುಮಾರ್ ಭವಿಷ್ಯ ನುಡಿದರು.

ಕೆ.ಹೆಚ್ ಮುನಿಯಪ್ಪ , ಪರಮೇಶ್ವರ್ ಅವರನ್ನು ಸೋಲಿಸಿ ಮುಖ್ಯಮಂತ್ರಿ ಹಾದಿ ಸುಗಮ ಮಾಡಿಕೊಂಡಿರುವ ಸಿದ್ದರಾಮಯ್ಯ ಸೋಲಿಸಿ ದಲಿತ ವಿರೋಧಿಯಾಗಿದ್ದಾರೆ..ಮುಖ್ಯಮಂತ್ರಿ ಸ್ಥಾನಕ್ಕೆ ಸ್ಪರ್ಧಿಯಾಗಿದ್ದ ಮಲ್ಲಿಕಾರ್ಜುನ ಖರ್ಗೆ ತಂತ್ರ- ಕುತಂತ್ರದಿಂದ ದೆಹಲಿಗೆ ಕಳಿಸಿದ್ದಾರೆ. ದಲಿತರ ಹಣವನ್ನು ಬೇರೆಡೆ ಇಲಾಖೆಗೆ ವರ್ಗಾವಣೆ ಮಾಡಿರುತ್ತಾರೆ ಎಂದು ಆರೋಪಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರುಳಿ, ಪ್ರಧಾನ ಕಾರ್ಯದರ್ಶಿ ಸಂಪತ್, ಪಕ್ಷದ ಮುಖಂಡರಾದ ನಾಗರಾಜ್ ಬೇಂದ್ರೆ, ದಗ್ಗೆ ಶಿವಪ್ರಕಾಶ್ ಇದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ನಮ್ಮಜನ.ಕಾಂ gmail:  nammajananews@gmail.com

» Whatsapp Number-9686622252

You Might Also Like

ಗಣಿಬಾಧಿತ ಹಳ್ಳಿಗಳಲ್ಲಿ ವಸತಿ, ನಿವೇಶನ ರಹಿತ ಫಲಾನುಭವಿಗಳ ಆಯ್ಕೆ : ಗ್ರಾಮ ಸಭೆ ನಡೆಸಲು ದಿನಾಂಕ ನಿಗದಿ | HOLALKERE

HIRIYUR | ಕುಡಿಯುವ ನೀರಿಗಾಗಿ ಶಾಲಾ ಮಕ್ಕಳು ಪ್ರತಿಭಟನೆ

Dina Bhavishya | ದಿನ ಭವಿಷ್ಯ | ಇಂದು ಯಾವ ರಾಶಿಗೆ ಶುಭಯೋಗ

internal reservation: ಒಳಮೀಸಲಾತಿ ಜಾರಿ ಖಚಿತ : ಮಾಜಿ ಸಚಿವ ಎಚ್.ಆಂಜನೇಯ

creative activities: ಪಠ್ಯದ ಜತೆಗೆ ಸೃಜನಶೀಲ ಚಟುವಟಿಕೆಗಳಲ್ಲಿಯೂ ಪಾಲ್ಗೊಳ್ಳಿ: ಬಿ.ವಿ.ತುಕಾರಾಂರಾವ್

TAGGED:Anti-DaliBJPBN ChandrappaChitradurga Lok Sabha Election 2024Chitradurga NewsChitradurga Political NewsCM SiddaramaiahCongressGovinda KarjolaHolalkere ConstituencyKannada NewsLok Sabha Election 2024Lokfight 2024N. RavikumarNammajana.com
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article former-minister-tippeswamys-son-kt-kumaraswamy-joins-bjp ಮಾಜಿ ಸಚಿವ ತಿಪ್ಪೇಸ್ವಾಮಿ ಪುತ್ರ ಕೆ.ಟಿ.ಕುಮಾರಸ್ವಾಮಿ ಬಿಜೆಪಿ ಸೇರ್ಪಡೆ
Next Article Challaere MLA T Raghumurthy ಚಳ್ಳಕೆರೆಯಲ್ಲಿ ಪಕ್ಷಾಂತರ ಪರ್ವ ಜೋರು: ಜೆಡಿಎಸ್ ಗೆ ಶಾಕ್ ನೀಡುತ್ತಿರುವ ಶಾಸಕ ಟಿ.ರಘುಮೂರ್ತಿ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Akka Cafe: ಜಿಲ್ಲಾ ಪಂಚಾಯತ್ ಆವರಣದಲ್ಲಿ ಅಕ್ಕ ಕೆಫೆ ಪ್ರಾರಂಭ
ಇಂದಿನ ಸುದ್ದಿ
mining: ಗಣಿ ಮಾಫಿಯ ನಿಲ್ಲಿಸಿ ಪರಿಸರ ರಕ್ಷಿಸಿ | ಆ.16ರಂದು ಬಳ್ಳಾರಿಯಲ್ಲಿ ರಾಜ್ಯ ಸಮಾವೇಶ
ಇಂದಿನ ಸುದ್ದಿ
ಆಗಸ್ಟ್ 1 ರಿಂದ ಹೊಸ UPI ನಿಯಮಗಳು ಜಾರಿ | ಏನೆಲ್ಲ ರೂಲ್ಸ್ ಇವೆ?
ವಿಶೇಷ ಸುದ್ದಿ
FIR ದಾಖಲು ಮಾಡಿದರು ತೆಂಗಿನ ಸಸಿ ನಾಟಿ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?